Advertisement

Tag: ಕೆಂಡಸಂಪಿಗೆ

ದೀಪಾವಳಿ ಹಬ್ಬದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಅಂತೂ ಈಡಿಗೆ ಬೆಂಕಿ ತಾಕಿಸಿ ಅದು ಉರಿಯುವುದರೊಳಗೆ ನನ್ನನ್ನು ಅಲ್ಲಿಂದ ಮನೆಗೆ ಕಳಿಸಿದ್ದರು. ಅದಾದ ಮೇಲೆ ಎಂದೂ ನಾನು ಬಾನ ಹೊತ್ತಿದ್ದು ನೆನಪಿಲ್ಲ. ನನಗೆ ದೇವರನ್ನು ಹೊತ್ಕೋಬೇಕು ಅಂತ ಆಸೆ ಇತ್ತು. ಆದರೆ ನಾವು ದೇವರನ್ನು ತಲೆಮೇಲೆ ಹೊರಬಾರ್ದು ಅನ್ನುತ್ತಿದ್ದರು. ಅದಕ್ಕೆ ಅನೇಕ ನಿಯಮಗಳಿರುತ್ತವೆ ಅನ್ನುತ್ತಿದ್ದರು. ನಾವ್ಯಾಕೆ ಹೊತ್ಕೋಬಾರ್ದು ಎಂಬ ಪ್ರಶ್ನೆ ನನ್ನನ್ನು ಕಾಡುತ್ತಲೆ ಇತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತೊಂದನೆಯ ಕಂತು

Read More

ಜೈಲಿಗೆ ಹೋಗಲು ಸಕಲ ತಯಾರಿ!: ಕೆ.‌ ಸತ್ಯನಾರಾಯಣ ಸರಣಿ

ಇಂತಹ ಕೋರಿಕೆ ಇದುವರೆಗೆ ನಮಗೆ ಬಂದಿಲ್ಲ, ಎಲ್ಲೂ ಕೇಳಿಲ್ಲ, ಕಂಡಿಲ್ಲ ಎಂದು ವಾದಿಸಿದರು. ಕೊನೆಗೆ ನನ್ನ ವಯಸ್ಸು, ಹಿರಿತನ, ಕಳಕಳಿಪೂರ್ಣ ಮನವಿಗೆ ಕ್ಷೀಣವಾಗೆಂಬಂತೆ ಸ್ಪಂದಿಸುತ್ತಾ, ಸರಿ, ಎರಡು ನಿಮಿಷ ನೋಡಲು ಬಿಡ್ತೀವಿ, ಕೇಸ್‌ ವಿಷಯ ಮಾತನಾಡಕೂಡದು, ನೀವು ಅವರನ್ನು ಭೇಟಿ ಮಾಡುವಾಗ ನಾವು ಕೂಡ ಒಬ್ಬರು ಜೊತೆಗೇ ಇರ‍್ತೀವಿ ಎಂದರು.
ಕೆ. ಸತ್ಯನಾರಾಯಣ ಬರೆಯುವ “ಜೈಲು ಕತೆಗಳು” ಸರಣಿಯ ಎರಡನೇ ಬರಹ ನಿಮ್ಮ ಓದಿಗೆ

Read More

ಭಾಷೆಯ ಭಾವಯಾನ: ಡಾ. ಚಂದ್ರಮತಿ ಸೋಂದಾ ಸರಣಿ

ನಮಗೆ ಅಗತ್ಯವಿಲ್ಲದ ಪದಗಳ ಬಳಕೆಯ ವಿಷಯದಲ್ಲಿ ಸರಿ. ಆದರೆ ದಿನನಿತ್ಯದ ವ್ಯವಹಾರದಲ್ಲಿ ಬಳಸುವ, ನಾವು ಉಪಯೋಗಿಸುವ ವಸ್ತುಗಳ ವಿಷಯವೇ ಬೇರೆ. ಅನೇಕ ಪದಗಳನ್ನು ಕನ್ನಡದಲ್ಲಿ ಹೇಳಲು ಕಷ್ಟಪಡುತ್ತೇವೆ. ಯಾಕೆಂದರೆ ನಮಗೆ ಅವೆಲ್ಲ ಮರೆತೇ ಹೋಗುತ್ತಿವೆ. ಇಂಗ್ಲಿಷ್‌ ಪದಗಳು ಆ ಸ್ಥಾನವನ್ನು ಆಕ್ರಮಿಸಿವೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತನೆಯ ಕಂತಿನಲ್ಲಿ ದಿನನಿತ್ಯ ಕನ್ನಡ ಭಾಷೆಯ ಬಳಸುವಿಕೆಯ ಕುರಿತ ಬರಹ ನಿಮ್ಮ ಓದಿಗೆ

Read More

ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ನಾವು ತೋಟದ ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ಬಿರಬಿರನೆ ಹೆಜ್ಜೆ ಹಾಕುತ್ತಿದ್ದೆವು. ಮರಗಿಡಗಳ ನಡುವಿನ ಕಾಲು ಹಾದಿಯಲ್ಲಿ ಸ್ವಲ್ಪ ದೂರ ನಡೆದು ಪಂಪ್ ಹೌಸ್ ಬಳಿ ಅವರು ನಿಂತರು. ಮರಗಿಡಗಳ ನಡುವೆ ಏನೋ ಕಂಡಂತಾಗಿ ನಾನು ನಿಂತೆ. ನಿಧಾನವಾಗಿ ಹೆಜ್ಜೆಯಿಟ್ಟು ಮುಂದೆ ಸರಿದು ನೋಡಿದರೆ ಪ್ರಪಾತದಂತೆ ಆಳ, ಅಗಲ, ವಿಸ್ತಾರವಾದ ತುಂಗಾ ನದಿ. ಅಬ್ಬಾ! ರೋಮಾಂಚನವಾಯಿತು. ನಾವು ನದಿಯ ತಟದಲ್ಲಿ ನಿಂತಿದ್ದೆವು.
ರಂಗಕರ್ಮಿ ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಕೆಲವು ಅಧ್ಯಾಯಗಳು ಪ್ರತಿ ಶನಿವಾರ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟಗೊಳ್ಳಲಿವೆ

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ