Advertisement

Tag: ಕೆಂಡಸಂಪಿಗೆ

ಹೇಗೆ ಮಾತಾಡಲಿ ನಿನ್ನೊಂದಿಗೆ?: ಮಹಾಲಕ್ಷ್ಮೀ ಕೆ. ಎನ್. ಬರಹ

ಮತ್ತೊಂದು ದಿನ ಕಾಲೇಜಿನ ಎದುರಿಗಿರುವ ಜೆರಾಕ್ಸ್ ಅಂಗಡಿ ಮುಂದೆ ಹೋಗ್ತಿದ್ದ. ಅರೇ,… ಅವನೇ ಅಲ್ವಾ… ಹೀಗೆ ಒಂದೆರಡು ಸಲ ಕಾಲೇಜಿನಲ್ಲಿ ನೋಡಿದ್ದೆ. ಒಂದು ಶನಿವಾರ ಕಾಲೇಜಿನಲ್ಲಿ ರೆಫರೆನ್ಸ್ ರೂಂ ಗೆ ಹೋಗಿ ಕೂತೆ. ನಾನು ಯಾರನ್ನೂ ಗಮನಿಸಿರಲಿಲ್ಲ, ಅಲ್ಲಿ ಯಾರೂ ಇರಲಿಲ್ಲ ಕೂಡ, ಸುಮ್ಮನೆ ಪಕ್ಕಕ್ಕೆ ತಿರುಗಿದೆ. ಅರೇ… ಮತ್ತೆ ಅವನೇ ಅಲ್ವಾ… ಇದ್ದವರಿಬ್ಬರಲ್ಲಿ ನಾನು ಮತ್ತೆ ಆ ಕಡೆ ತುದಿಯಲ್ಲಿ ಅವನು. ನ್ಯೂಸ್ ಪೇಪರ್, ವಿದ್ಯಾರ್ಥಿ ಮಿತ್ರ ಓದ್ತಿದ್ದಿರಬಹುದು. ಅವನನ್ನ ಮಾತನಾಡಿಸುವ ಮನಸ್ಸಿದೆ. ಆದರೆ ಹೇಗೆ ಮಾತು ಪ್ರಾರಂಭಿಸಲಿ? ಗೊತ್ತಾಗ್ತಿಲ್ಲ.
ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಅವರವರ ಭಾವಕ್ಕೆ……: ಚಂದ್ರಮತಿ ಸೋಂದಾ ಸರಣಿ

ಹಬ್ಬಗಳಲ್ಲಿ, ಅದರಲ್ಲಿಯೂ ನವರಾತ್ರಿಯಲ್ಲಿ ಕೊಡುವ ದಕ್ಷಿಣೆ ನಮಗೆ ಪಾಕೆಟ್‌ಮನಿ ತರಹ. ಆಗ ನಮಗೆ ಕೊಡುತ್ತಿದ್ದುದು ಹತ್ತು ನಯಾಪೈಸೆ. ಎಲ್ಲ ಹಬ್ಬಗಳಲ್ಲಿ ಕೊಡುತ್ತಿದ್ದ ದಕ್ಷಿಣೆಯನ್ನು ಜೋಪಾನವಾಗಿ ಕಾಪಿಟ್ಟು ಅದರಿಂದ ಬಣ್ಣದ ದಾರ, ಮಣಿಗಳನ್ನು ತರಿಸಿಕೊಂಡು ಲೇಸು, ಬಾಗಿಲತೋರಣ, ಕಸೂತಿ, ಮಣಿಗಳಿಂದ ಆರತಿ ಕಟ್ಟು ತಯಾರಿಸಿ ನಮ್ಮ ನಮ್ಮ ಕೌಶಲಗಳನ್ನು ಮೆರೆಯಲು ಈ ಹಣ ಸಹಕಾರಿಯಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಒಂಭತ್ತನೆಯ ಕಂತು

Read More

ಸಾಕುಪ್ರಾಣಿಗಳ ಒಡನಾಟದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಒಂದು ಸಾರಿ ಅವರ ಮನೆಗೆ ಹಬ್ಬಕ್ಕೆಂದು ಹೋದಾಗ ಹಠಮಾಡಿ ಎರಡು ಪಾರಿವಾಳವನ್ನು ತಂದೆ. ನಮ್ಮ ಮನೆಯ ಹೊರಭಾಗದಲ್ಲಿ ನಾಲ್ಕು ಗೋಡೆಯನ್ನಷ್ಟೆ ಕಟ್ಟಿ ಬಚ್ಚಲು ಮನೆ ಎಂದು ಕರೆಸಿಕೊಳ್ಳುತ್ತಿದ್ದ ಬಚ್ಚಲು ಮನೆಯ ಮೂಲೆಯಲ್ಲಿ ಕಲ್ಲುಗಳಿಂದಲೆ ಗೂಡೊಂದನ್ನು ಕಟ್ಟಿ ಅದರಲ್ಲಿ ಎರಡು ಪಕ್ಷಿಗಳನ್ನು ಬಿಟ್ಟು ಸಾಕವುದೆಂದು ತೀರ್ಮಾನಿಸಿದೆ. ಆದರೆ ಅವು ಗುಂಪಿನಲ್ಲಿ ವಾಸವಾಗಿದ್ದರಿಂದ ಒಂದು ವಾರದಲ್ಲೆ ಒಂದು ಪಕ್ಷಿ ಸತ್ತೆಹೋಯಿತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹತ್ತೊಂಭತ್ತನೆಯ ಕಂತು

Read More

ಶಾಂತಿ, ಕ್ರಾಂತಿ, ಸ್ವಾತಂತ್ರ್ಯದ ಹಗಲುಗನಸು: ಡಾ. ವಿನತೆ ಶರ್ಮ

ಮೊದಲನೇ ಪ್ರಾಪಂಚಿಕ ಮಹಾಯುದ್ಧದಲ್ಲಿ ಭಾಗವಹಿಸಿದ್ದ ಆಸ್ಟ್ರೇಲಿಯನ್ ಸೈನಿಕರಲ್ಲಿ ಮೂಲನಿವಾಸಿಗಳೂ ಇದ್ದರು. ಆದರೆ ಯುದ್ಧದ ನಂತರ ದೇಶದ ಸರಕಾರಗಳು ಅವರ ಹೆಸರನ್ನು ನೆನಪಿಸಿಕೊಳ್ಳುವ ಪ್ರಯತ್ನವನ್ನು ಮಾಡಲಿಲ್ಲ. ಆಸ್ಟ್ರೇಲಿಯನ್ ಬಿಳಿ ಸೈನಿಕರಿಗೆ ಮತ್ತು ಅವರ ಕುಟುಂಬಗಳಿಗೆ ಎಲ್ಲಾ ರೀತಿಯ ಬಿರುದುಗಳು ಮತ್ತು ಸೌಲಭ್ಯ, ಸೌಕರ್ಯಗಳು ಲಭಿಸಿದವು. ಎರಡನೇ ಮಹಾಯುದ್ಧದ ನಂತರವೂ ಇದೇ ಕತೆಯಾಗಿದ್ದು ಈ ಬಾರಿ ಯುದ್ಧದಲ್ಲಿ ಭಾಗವಹಿಸಿದ್ದ ಮೂಲನಿವಾಸಿಗಳ ಹೆಸರುಗಳನ್ನೂ ಮಾತ್ರ ದಾಖಲಿಸಲಾಗಿತ್ತು.
ಡಾ. ವಿನತೆ ಶರ್ಮ ಹೊಸ ಕೃತಿ “ಅಬೊರಿಜಿನಲ್‌ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್‌”ಯಿಂದ ಒಂದು ಬರಹ ನಿಮ್ಮ ಓದಿಗೆ

Read More

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ