Advertisement

Tag: ಕೆಂಡಸಂಪಿಗೆ

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ಅನುಬಂಧವೊಂದು ಕೊರಳ ಉರುಳಾಗುವ ಹೊತ್ತು: ಮಾಲತಿ ಶಶಿಧರ್‌ ಅಂಕಣ

ಮಳೆ ನಿಂತ ಮಾರನೇ ದಿನದ ಸ್ವರ್ಗವೀಗ ಅಜ್ಜಿಯ ಕತೆಯಲ್ಲಿ ಬರುತ್ತಿದ್ದ ನರಕದಂತೆ ಭಾಸವಾಗುತ್ತಿದೆ. ಸೂರ್ಯ ಮುಳುಗಿದ ಮೇಲೆ ಹನಿ ಬೀಳುವ ಸದ್ದಿಗೆ ಪುಳಕಗೊಳ್ಳುತ್ತಿದ್ದ ಹೃದಯ ಅಕ್ಕ ಪಕ್ಕದವರಿಗೂ ಕೇಳಿಬಿಡುವಂತೆ ಒಡೆದುಕೊಳ್ಳಲು ಶುರು ಮಾಡಿದೆ. ನಿದ್ದೆಯೇ ಇಲ್ಲದ ಅವಳಿಗೀಗ ಅಲಾರಾಂ ಅವಶ್ಯಕತೆಯಿಲ್ಲ. ಹೊರಗೆ ಕಾಲಿಟ್ಟರೆ ಮುದ ಗೊಳಿಸುತ್ತಿದ್ದ ಚಳಿ ಈಗ ಬೆನ್ನ ಮೂಳೆಯನ್ನು ಕೊರೆಯುತ್ತದೆ.
ಮಾಲತಿ ಶಶಿಧರ್ ಬರೆಯುವ ಅಂಕಣ “ಹೊಳೆವ ನದಿ”ಯಲ್ಲಿ ಹೊಸ ಬರಹ

Read More

ಮನೆ ಮತ್ತು ಮನದ ಕವಿತೆಗಳು: ಎಸ್.‌ ಜಯಶ್ರೀನಿವಾಸ ರಾವ್ ಸರಣಿ

ಇಲ್ಲಿ ಕನ್ನಡಕ್ಕೆ ಅನುವಾದಿಸಿರುವ ದಿತಿ ರೋನೆನ್‌ರ ಕವನಗಳಲ್ಲಿ ಅವರ ಎಲ್ಲಾ ಆಸ್ಥೆಗಳ, ನಂಬಿಕೆಗಳ, ಕಾಳಜಿಗಳ ಉದಾಹರಣೆಗಳನ್ನು ಕಾಣಬಹುದು. ಹಿಟ್ಲರ್‌ನ ಕಾಲದ ಜರ್ಮನಿ ಯಹೂದಿಗಳ ವಿರುದ್ಧ ನಡೆಸಿದ ಹತ್ಯಾಕಾಂಡದ ನೆನಪುಗಳು ಗಾಯಗಳು ಎಂದೂ ಮರೆಯಾಗಲ್ಲ. ಈ ಹತ್ಯಾಕಾಂಡದಿಂದ ಬದುಕುಳಿದವರ ಮಗಳಾಗಿ ದಿತಿ ರೋನೆನ್‌ ಅವರು ಇದರ ಬಗ್ಗೆ ಬಹು ಮಾರ್ಮಿಕವಾಗಿ ಬರೆಯುತ್ತಾರೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಚೈತ್ರ ಬರೆದ ಈ ಭಾನುವಾರದ ಕಥೆ

ಸಮುದ್ರ ತೀರದಲ್ಲಿ ಗಾಳಿ. ಜನರೆಲ್ಲ ವಾಕಿಂಗ್‌ ಮಾಡಲು ಬಂದಿದ್ದಾರೆ. ಕರ್ಚೀಫುಗಳನ್ನು ಬೀಸುತ್ತಿದ್ದಾರೆ. ನಾಚಿಕೆಯಿಲ್ಲದ ಜನ. ಅವರನ್ನು ನೋಡುವುದು ನನ್ನ ಕೆಲಸ. ನಾಯಿಗಳೂ ಓಡಾಡುತ್ತಿವೆ. ಶಂಖಗಳನ್ನು ಮೂಸುತ್ತಿವೆ. ಸಮುದ್ರದ ಗಾಳಿ ಮೂಗನ್ನು ಹೊಗುತ್ತಿತ್ತು. ಸಮುದ್ರ ಕಳೆ ನೀರಿನಲ್ಲಿ ತೇಲಾಡುತ್ತಿತ್ತು. ತಿಮಿಂಗಲವೊಂದು ಮೇಲೆ ಬಂಬಂದು ತಿರುಗಿ ಮರಳಿ ಹೋಗುತ್ತಿತ್ತು. ಪಕ್ಕದ ಗುಡ್ಡದ ಮೇಲೆ ಗಾಳಿಗೆ ಮರಗಳು ಓಲಾಡುತ್ತಿದ್ದವು. ಸೂರ್ಯ ಮುಳಗುತ್ತಿದ್ದ. ಬೇಡ ಎಂದರೆ ಜನ ಮನೆಯಲ್ಲಿ ಕೂತಾರೆಯೆ? ಯಾರೋ ಬಲೂನು ಮಾರುತ್ತಿದ್ದಾರೆ.
ಚೈತ್ರ ಬರೆದ ಕತೆ “ಭಾಗ್ಯ…” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಉಕದ ಹಾಗಿದ್ದ ನಾನು, ದಕದ ಹಾಗಿದ್ದ ಅವನು: ನಾಗಶ್ರೀ ಶ್ರೀರಕ್ಷ ಬರಹ

ಇರುಳ ಬೆಳಕಲ್ಲಿ ನಾವು ಅದೆಷ್ಟೋ ಗುಟ್ಟಿನ ಕತೆಗಳನ್ನು ಹೇಳಿಕೊಳ್ಳುತ್ತಿದ್ದೆವು. ಬೆಳಕೆಂದರೆ ಅದು ಒಂದಷ್ಟು ನಕ್ಷತ್ರಗಳನ್ನು ಕಟ್ಟಿಕೊಂಡು ಚಂದ್ರನು ರಾಜನಂತೆ ಬೆಳಗುತ್ತಿದ್ದ, ಇರುಳೆಂದರೆ ಅವನನ್ನೂ ಮೀರಿ ತೂರುವ ಹಾಗೆ ಇರುವ ಮಯಮಯ ಮುಗ್ದ ಇರುಳು. ನಾವೆಂದರೆ ಅಲ್ಲಿ ಗಂಡು ಹೆಣ್ಣು ಇದಾವುದೂ ಆಗಿರಲಿಲ್ಲ.
ಬರಹಗಾರ್ತಿ ನಾಗಶ್ರೀ ಶ್ರೀರಕ್ಷ ತೀರಿಕೊಂಡು ಇಂದಿಗೆ ಐದು ವರ್ಷಗಳು ಕಳೆದವು. ಕೆಂಡಸಂಪಿಗೆಯ ಸಹಾಯಕ ಸಂಪಾದಕಿಯೂ ಆಗಿದ್ದ ಅವರ ನೆನಪಿನಲ್ಲಿ ಅವರದ್ದೊಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ