Advertisement

Tag: ಕೆಂಡಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ ಬಚಾವಾಗಿ ಪ್ರೈಮರಿ ಕೊಂಡವನ್ನು ಹಾದು, ಮಿಡ್ಲಿಸ್ಕೂಲ್ ಎಂಬ ಉನ್ನತ ಶಿಕ್ಷಣಕ್ಕೆ ತಿಪಟೂರಿಗೆ ಹೋದದ್ದು, ಊರಿನ ಪುರಾತನ ಬೇರುಗಳನ್ನು ಕಿತ್ತುಕೊಂಡು ಹಾಸ್ಟೆಲ್‌ನಲ್ಲಿ ನೆಲೆಗೊಂಡದ್ದು, ಚಿಕ್ಕಪ್ಪನ ಮತ್ತು ಕುಂದೂರು ತಿಮ್ಮಯ್ಯನವರ ಒತ್ತಾಸೆ ನಿನಗೆ ಸಿಕ್ಕಿದ್ದು ನಿನ್ನಂತ ದಲಿತ ಹುಡುಗರ ಜೀವನದಲ್ಲಿಯ ಬಹುದೊಡ್ಡ ತಿರುವು ಎಂದು ನನಗೆ ಅನಿಸುತ್ತದೆ.
ಗುರುಪ್ರಸಾದ್‌ ಕಂಟಲಗೆರೆ ಅವರ “ಟ್ರಂಕು ತಟ್ಟೆ” ಹಾಸ್ಟೆಲ್‌ ಅನುಭವ ಕಥನದ ಕುರಿತು ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ಬರಹ

Read More

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

Read More

ಸೌರಭಾ ಕಾರಿಂಜೆ ಬರೆದ ಈ ಭಾನುವಾರದ ಕಥೆ

ಬೆಳಿಗ್ಗೆ ತುಂಬಿಸಿಕೊಂಡ ದೋಸೆ ಡಬ್ಬಿ ಹಾಗೇ ಇದೆ ಎಂಬುದು ನೆನಪಾಯಿತು ಅವಳಿಗೆ. ಕೊಟ್ಟು ಬಿಡಲೇ ಅನಿಸಿತು ಒಮ್ಮೆ. ಮನೆಗೆ ಹೋಗಿ ತಿನ್ನಬಹುದು ತಾನು. ಆದರೆ ಇವನಿಗೆ ಬೇಕಾದದ್ದು ದುಡ್ಡು, ಊಟ ಅಲ್ಲ, ಆ ದುಡ್ಡನ್ನು ಕಬಳಿಸಲು ನಮೂನೆ ನಮೂನೆಯ ಪ್ರಯತ್ನ ಅನ್ನಿಸಿ ಮನಸ್ಸೆಲ್ಲಾ ಕಹಿಯಾಯಿತು. ಜೊತೆಗೆ ಬಾಯಿಯೂ ಕಹಿಯಾಯಿತು. ಬಾಯಿಯಲ್ಲಿ ತುಂಬಿಕೊಂಡಿದ್ದ ಎಂಜಲನ್ನು ನುಂಗಲು ಅಸಹ್ಯವಾಗಿ ಉಗುಳುವ ಒತ್ತಡ ಉಂಟಾಯಿತು. ಯಾವತ್ತೂ ರಸ್ತೆಯಲ್ಲಿ ಉಗುಳಿದವಳಲ್ಲ. ಮುಜುಗರ ಒತ್ತಿ ಬಂತು.
ಸೌರಭಾ ಕಾರಿಂಜೆ ಬರೆದ ಕಥೆ “ಹಣಾಹಣಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕ್ಯಾಸೆಟ್ಟಿನೊಳಗೆ ಅಡಗಿ ಕೂತ ನೆನಪುಗಳು: ಮಾಲತಿ ಶಶಿಧರ್‌ ಬರಹ

ಆ ಹಾಡಿನ ಅರ್ಥ ಭಾವ ತಿಳಿಯದ ವಯಸ್ಸಿನಲ್ಲಿ ನಾನು ಆ ಚಿತ್ರದ “ಹಳ್ಳಿ ಮೇಷ್ಟ್ರೇ ಹಳ್ಳಿ ಮೇಷ್ಟ್ರೇ ಪಾಠ ಮಾಡಿ ಬನ್ನಿ” ಎನ್ನುತ್ತಾ ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ ಎಂದು ರಾಗವಾಗಿ ಹೇಳುವಾಗ ಅಕ್ಕಪಕ್ಕದ ಮನೆಯವರೆಲ್ಲಾ ನನ್ನ ನೋಡಿ ನಗುತ್ತಿದ್ದರೆ ನನಗೆ ಇನ್ನಷ್ಟು ಹುಮ್ಮಸ್ಸು ಬಂದು ಮತ್ತಷ್ಟು ಜೋರಾಗಿ ಹಾಡುತ್ತಿದ್ದದ್ದು ಈಗ ನೆನೆಸಿಕೊಂಡರೆ ಮುಖ ಮುಚ್ಚಿಕೊಳ್ಳುವಂತಾಗುತ್ತದೆ.
ಟೇಪ್‌ ರೆಕಾರ್ಡರ್‌ನಲ್ಲಿ ಹಾಡನ್ನು ಕೇಳುತ್ತಿದ್ದ ದಿನಗಳ ಕುರಿತು ಮಾಲತಿ ಶಶಿಧರ್‌ ಬರಹ

Read More

ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ ಆರಂಭ

ಒಂದು ಕಾಲಕ್ಕೆ ಭರ್ಜರಿ ಭತ್ತ ಬೆಳೆಯುತ್ತಿದ್ದ ಗದ್ದೆಗಳು ಈಗ ವಾಸದ ಮನೆಗಳಾಗಿವೆ. ತಿಳಿ ನೀರು ಹರಿಯುತ್ತಿದ್ದ ತೋಡು ಮನುಷ್ಯನ ಕೊಳಕು ಆ ತೋಡನ್ನು ಸೇರಿ ಸೇರಿಸಿಕೊಂಡು ಕಪ್ಪಗೆ ಹರಿಯುತ್ತಿದ್ದರೆ ಇದು ಮನುಷ್ಯನ ನಾಗರೀಕತೆಯ ಹಂಬಲದ ಮುಖವಾಣಿ ಅನ್ನಿಸುತ್ತದೆ. ಒಟ್ಟು ನಮ್ಮೂರು ಮಡಿಕೇರಿ ಅಲ್ಲ ಮಡಿಯಾದಕೇರಿ ಈಗ ನಗರೀಕರಣಕ್ಕೆ ಒಳಗುಗೊಳ್ಳುವ ಹಂಬಲದಲ್ಲಿ ಮೂಲ ಸೌಂದರ್ಯವನ್ನು ಕಳೆದುಕೊಳ್ಳುತ್ತಿದೆ.
ಸುಮಾವೀಣಾ ಬರೆಯುವ ಮಡಿಕೇರಿಯಲ್ಲಿ‌ ಕಳೆದ ಬಾಲ್ಯದ‌ ನೆನಪುಗಳ ಸರಣಿ “ಕೊಡಗಿನ ವರ್ಷಕಾಲ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ