Advertisement

Tag: ಕೆಂಡಸಂಪಿಗೆ

ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ನಾವು ತೋಟದ ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ಬಿರಬಿರನೆ ಹೆಜ್ಜೆ ಹಾಕುತ್ತಿದ್ದೆವು. ಮರಗಿಡಗಳ ನಡುವಿನ ಕಾಲು ಹಾದಿಯಲ್ಲಿ ಸ್ವಲ್ಪ ದೂರ ನಡೆದು ಪಂಪ್ ಹೌಸ್ ಬಳಿ ಅವರು ನಿಂತರು. ಮರಗಿಡಗಳ ನಡುವೆ ಏನೋ ಕಂಡಂತಾಗಿ ನಾನು ನಿಂತೆ. ನಿಧಾನವಾಗಿ ಹೆಜ್ಜೆಯಿಟ್ಟು ಮುಂದೆ ಸರಿದು ನೋಡಿದರೆ ಪ್ರಪಾತದಂತೆ ಆಳ, ಅಗಲ, ವಿಸ್ತಾರವಾದ ತುಂಗಾ ನದಿ. ಅಬ್ಬಾ! ರೋಮಾಂಚನವಾಯಿತು. ನಾವು ನದಿಯ ತಟದಲ್ಲಿ ನಿಂತಿದ್ದೆವು.
ರಂಗಕರ್ಮಿ ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಕೆಲವು ಅಧ್ಯಾಯಗಳು ಪ್ರತಿ ಶನಿವಾರ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟಗೊಳ್ಳಲಿವೆ

Read More

ಕನ್ನಡತನ ಜ್ವಲಿಸುವ ವಿಶೇಷ ತಿಂಗಳು: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಹುಟ್ಟಿ ಬೆಳೆಯುವ ಕನ್ನಡಿಗ ದಂಪತಿಗಳ ಮಕ್ಕಳು ಕನ್ನಡದಲ್ಲಿ ಮಾತನಾಡುವುದು ಕಡಿಮೆ. ಒಂದುವೇಳೆ ಅವರು ಕಷ್ಟಪಟ್ಟು ಪ್ರಯತ್ನಿಸಿದರೂ ಅವರುಗಳು ಪ್ರತಿದಿನವೂ ಮಾತನಾಡುವ ಆಸ್ಟ್ರೇಲಿಯನ್ ಇಂಗ್ಲಿಷ್ ಉಚ್ಚಾರದ ಪ್ರಭಾವದಲ್ಲಿ ತಮ್ಮ ಕನ್ನಡವನ್ನು ಹೊರಡಿಸಿದಾಗ ಮಿಶ್ರಿತ ಭಾವಗಳು ಏಳುತ್ತವೆ. ಕರ್ನಾಟಕದಲ್ಲಿಯೇ ಹುಟ್ಟಿ ಕೆಲವರ್ಷ ಅಪ್ಪಟ ಕನ್ನಡತನದಲ್ಲಿ ಅಲ್ಲಿಯೇ ಬೆಳೆದು ತಮ್ಮ ಬಾಲ್ಯದಲ್ಲಿ ಆಸ್ಟ್ರೇಲಿಯಾಕ್ಕೆ ಬರುವ ಮಕ್ಕಳು ಕೆಲವೇ ವರ್ಷಗಳಲ್ಲಿ ಆಸ್ಟ್ರೇಲಿಯನ್ ಇಂಗ್ಲಿಷ್ – ಕನ್ನಡವನ್ನು ರೂಢಿಸಿಕೊಳ್ಳುತ್ತಾರೆ. ಅಪ್ಪ-ಅಮ್ಮ ಕನ್ನಡದಲ್ಲಿ ಮಾತನಾಡಿಸುವಾಗ ಈ ಮಕ್ಕಳು ಇಂಗ್ಲೀಷಿನಲ್ಲಿ ಉತ್ತರಿಸುವುದು ಸರ್ವೇಸಾಮಾನ್ಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬೆಂಗಳೂರಿನ “ಸ್ಮಶಾನ”ದ ಕತೆಗಳು: ಎಚ್. ಗೋಪಾಲಕೃಷ್ಣ ಸರಣಿ

ಆಗಿನ್ನೂ ಶವ ವಾಹನ ಇರಲಿಲ್ಲ. ಬದಲಿಗೆ ಟ್ರಾಕ್ಟರ್, ಎತ್ತಿನ ಗಾಡಿ ಅಥವಾ ಜಟಕಾ ಗಾಡಿಯನ್ನು ಕೆಲವರು ಉಪಯೋಗಿಸಿದರೆ ಮತ್ತೆ ಸುಮಾರು ಜನ ಹೆಣ ಹೊತ್ತು ಹೋಗುವರು. ನಮ್ಮ ಕಾಲೋನಿಯ ಕೆಲವು ಕಾರ್ಮಿಕರು ಅವರದ್ದೇ ಒಂದು ಗುಂಪು ಮಾಡಿಕೊಂಡು ಯಾವುದಾದರೂ ಸಾವಿನ ಸುದ್ದಿ ಬಂದಕೂಡಲೇ ಶವ ಸಾಗಿಸಲು ಹೆಗಲು ಕೊಡಲು ಸಿದ್ಧರಿರುತ್ತಿದ್ದರು. ಚಟ್ಟ ಕಟ್ಟುವ ಸ್ಪೆಷಲಿಸ್ಟ್‌ಗಳೂ ಸಹ ಇದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ದಸರೆಯ ನಂತರದ ದರ್ಶನ!…: ಸುಮಾವೀಣಾ ಸರಣಿ

ಅದೇ ರಸ್ತೆಯಲ್ಲಿ ಮುಂದೆ ಬಂದರೆ ಸಿಂಧೂರ್ ಮತ್ತು ಶಾಹಿನ್ಸ್ ಬಟ್ಟೆ ಅಂಗಡಿಗಳು… ಅವರು ಗೊಂಬೆಗಳಿಗೆ ಉಡಿಸುತ್ತಿದ್ದ ಸೀರೆಗಳನ್ನು ನೋಡಿದರೂ ನೋಡದ ಹಾಗೆ ಮುಂದೆ ಸಾಗುವ ಕಾರ್ಯಕ್ರಮ. ಅಲ್ಲಿಗೆ ನಗರದ ಹೃದಯ ಭಾಗ ಚೌಕಿಗೆ ಬಂದು ಬಿಡುತ್ತಿದ್ದೆವು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

‘ಹೂವಿನ ಕೊಲ್ಲಿʼ ಅನ್ನುವ ದ್ವೀಪ: ಅಬ್ದುಲ್ ರಶೀದ್ ಕಾದಂಬರಿಗೆ ಬಿ.ವಿ.ರಾಮಪ್ರಸಾದ್ ಪ್ರಸ್ತಾವನೆ

“ಈ ಕಾದಂಬರಿಯ ನಿರೂಪಣೆಯ ವೈಶಿಷ್ಠ್ಯ ಇರುವುದು ಎಲ್ಲಿಯೂ ಪಾತ್ರಗಳ ಮೇಲೆ, ಅವುಗಳ ನಡೆಗಳ ಮೇಲೆ, ನಂಬಿಕೆಗಳ ಮೇಲೆ ‘ನೈತಿಕʼ ಅಥವಾ ‘ವೈಚಾರಿಕʼ ಟಿಪ್ಪಣಿಯನ್ನು ಮಾಡದೇ ಇರುವುದು. ‘ಇವರೆಲ್ಲಾ ಎಂತಾ ಮೂಢನಂಬಿಕೆ ಜನಾರಿʼ ಎಂದೆಲ್ಲಾ ಹೇಳದೇ ಇರುವುದು. ಇಲ್ಲಿ ನಿರೂಪಕ ಇದ್ದು ಕೂಡ ಇಲ್ಲ ಅನ್ನುವ ಹಾಗೆ ಪಾತ್ರಗಳು ತಮ್ಮ ಪಾಡಿಗೆ ತಾವಿದ್ದಾವೆ ಅನಿಸುತ್ತದೆ”
ಕನ್ನಡದ ಕಥೆಗಾರ ಅಬ್ದುಲ್ ರಶೀದ್ ದಶಕಗಳ ಹಿಂದೆ ಬರೆದಿದ್ದ, ಕೆಂಡಸಂಪಿಗೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿದ್ದ ‘ಹೂವಿನಕೊಲ್ಲಿ’ ಕಾದಂಬರಿ ಈಗ ಪರಿಷ್ಕೃತಗೊಂಡು ಮರುಮುದ್ರಣಗೊಳ್ಳುತ್ತಿದೆ. ಪರಿಷ್ಕೃತ ಕಾದಂಬರಿಯಲ್ಲಿ ಪ್ರಕಟವಾಗಿರುವ ಡಾ. ಬಿ.ವಿ.ರಾಮಪ್ರಸಾದ್ ಅವರ ಪ್ರಸ್ತಾವನೆ ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ