Advertisement

Tag: ಕೆಂಡಸಂಪಿಗೆ

ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ ಆರಂಭ

ಮುಂದೆ ಈ ಕುದುರೆ ಗಾಡಿ ಯಾ ಜಟಕಾ ಗಾಡಿ ಪ್ರಸಂಗ ಸಾವಿರಾರು ಸಲ ರಿಪೀಟ್ ಆದವು. ಆಗ ರಾಮಚಂದ್ರಪುರದ ಬಳಿ ಬರುತ್ತಿದ್ದಂತೆ ದೊಡ್ಡ ಇಳಿಜಾರು ಶುರು ಆಗಿ ಸುಮಾರು ನೂರಾ ಐವತ್ತು ಅಡಿ ಆಳಕ್ಕೆ ರಸ್ತೆ ಸರಿದು ನಂತರ ಏರು ಗತಿಯಲ್ಲಿ ಇದು ಮುನ್ನೂರು ಗಜ ದಾಟಿ ರಾಜಾಜಿನಗರ ಎಂಟ್ರೆನ್ಸ್ ತಲುಪುತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ ಹೊಸ ಸರಣಿ “ಹಳೆ ಬೆಂಗಳೂರ ಕಥೆಗಳು” ಇನ್ನು ಹದಿನೈದು ದಿನಗಳಿಗೊಮ್ಮೆ, ಶುಕ್ರವಾರಗಳಂದು ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟವಾಗಲಿದೆ.

Read More

ಹತ್ತನೆ ಶತಮಾನ: ಹಿಂದೂ ಸಂಸ್ಕೃತಿಯ ಮಹತ್ತರ ವಿಸ್ತಾರ

ಸಂಗಂ ಯುಗದಲ್ಲಿ ಅಶೋಕನ ಕಾಲಕ್ಕಿಂತಲೂ ಹೆಚ್ಚಿನ ಪ್ರಗತಿ ಕಲೆಯಲ್ಲುಂಟಾಯಿತು. ಪೂನಾದ ಸಮೀಪ ‘ಬಾಜʼ ಎಂಬಲ್ಲಿ ಕ್ರಿ.ಪೂ. ಇದೇ ಶತಮಾನದಲ್ಲಿ ಒಂದು ‘ವಿಹಾರ’ವನ್ನು ಕಡೆದಿರುವರು. ಈ ಕಲೆಯು ವಾಸ್ತವಿಕತೆಯಿಂದ ಕೂಡಿದೆ. ಮುಂಬಯಿಯ ಕಾರ್ಲೆ ಎಂಬಲ್ಲಿ ಕಲ್ಲಿನಿಂದಲೇ ಮಾಡಿದ ಚೈತ್ಯಾಲಯವು ಉತ್ಕೃಷ್ಟವಾಗಿದೆ. ಜುನಾರ್, ನಾಸಿಕ, ಅಜಂತ ಮುಂತಾದೆಡೆಗಳಲ್ಲಿಯೂ ಉತ್ತಮ ಚೈತ್ಯಾಲಯಗಳಿವೆ. ಕೆತ್ತನೆಯ ಕೆಲಸಗಳಿಂದ ಕೂಡಿದ ಬೃಹತ್ ಸ್ತೂಪದ ಹೆಬ್ಬಾಗಿಲು ಪ್ರಸಿದ್ಧವಾಗಿದೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಕೊನೆಯ ಬರಹ ಇಲ್ಲಿದೆ.

Read More

ಉಳಿದದ್ದೀಗ ನೆನಪುಗಳಷ್ಟೇ….

ಅಡಿಗರ ರಾಮನವಮಿಯ ದಿವಸ ಪದ್ಯದ ಬಗ್ಗೆ ಅವರೊಡನೆ ಚರ್ಚಿಸುತ್ತಿದ್ದ ದಿನಗಳು ನನ್ನ ಬದುಕಿನ ಸುವರ್ಣ ಯುಗ. ಅವ್ರಿಗೆ ತಂತ್ರದ ಬಗ್ಗೆ ವಿಶೇಷ ಆಸಕ್ತಿ ಎಂದಾಗ ಒಪ್ಪಿಕೊಂಡಿದ್ದರು. ಅಡಿಗರ ಕುರಿತ ದೂರುಗಳನ್ನೂ, ಮೆಚ್ಚುಗೆಯನ್ನೂ ಮುಕ್ತವಾಗಿ ಹೇಳುತ್ತಿದ್ದರು. ನೀವೇಕೆ ನಿಮ್ಮ ಬರೆಯುವ ರೀತಿಯನ್ನು ಪದೇ ಪದೇ ಬದಲಾಯಿಸಿದಿರಿ.
ತಮ್ಮ ಗ್ರಹಿಕೆಗೆ ಸಿಕ್ಕ ಕೆ.ವಿ. ತಿರುಮಲೇಶರ ಕುರಿತು ಬರೆದಿದ್ದಾರೆ ಮಾಲಿನಿ ಗುರುಪ್ರಸನ್ನ

Read More

ಇಷ್ಟೊಂದು ನಿಬಿಡತೆಯಲ್ಲು ಯಾಕಿಷ್ಟು ಏಕಾಂತ

ಹೊಸಬರನ್ನು ಮೆಚ್ಚುವ ಜೊತೆಗೆ ಹಳಬರನ್ನು ತುಂಬ ಸಭ್ಯವಾಗಿ ಕ್ರಿಟಿಕಲ್ ಆಗಿ ಚುಚ್ಚುತ್ತಲೂ ಇದ್ದರು. ಹಲವು ಖ್ಯಾತ ಹಿರಿಯ ಕವಿಗಳ ಕವಿತೆಗಳ ಬಗ್ಗೆ ಅವರ ಅನಾಸಕ್ತಿ ಸ್ಪಷ್ಟವಾಗಿ ವ್ಯಕ್ತವಾಗುತ್ತಿತ್ತು. ಆದರೆ ಅದು ಯಾವತ್ತೂ ಅನಾದರ ಆಗಿರಲಿಲ್ಲ. ಒಮ್ಮೆ ಮಾತಿನ ಮಧ್ಯೆ, `ಅವರು ಫೋನ್ ಮಾಡಿದ್ದರು. ಅವರದ್ದು ನೋಡಿ ಜರ್ನಲಿಸ್ಟಿಕ್ ಸಾಹಿತ್ಯ. ಹಾಗೆ ಹೇಳಿದರೆ ಅವರಿಗೆ ಸಿಟ್ಟು ಬರುತ್ತೆ. ಆದರೆ ಸತ್ಯ ಸತ್ಯವೇ ತಾನೆ’ ಎಂದರು.
ಕೆ.ವಿ. ತಿರುಮಲೇಶರೊಟ್ಟಿಗಿನ ಒಡನಾಟ ಹಾಗೂ ಅವರ ಬರಹಗಳ ಕುರಿತು ಬರೆದಿದ್ದಾರೆ ಕಥೆಗಾರ ವಿಕ್ರಂ‌ ಹತ್ವಾರ್

Read More

ನಮಗೇ ಯಾಕೆ ಹೀಗಾಗುತ್ತೆ?

ನಮಗೆ ಯಾಕೆ ಹೀಗಾಗುತ್ತೆ ಅನ್ನುವ ಪ್ರಶ್ನೆಯೇ ಒಂದು ತಾತ್ವಿಕ ಪ್ರಮೇಯವಾಗಿಯೂ, ಮನಸ್ಸು ಕೆಲಸ ಮಾಡುವ ರೀತಿಯ ತಿಳುವಳಿಕೆಯಾಗಿಯೂ ಸರಿಯಲ್ಲವೆಂದು ಕಾಣುತ್ತದೆ. ನಾವು ಜೀವನವನ್ನು, ಮನಷ್ಯರನ್ನು, ಬಂದ ಹಾಗೆ, ಅವರು ಇರುವ ಹಾಗೆ ಒಪ್ಪಿಕೊಳ್ಳುವ ನಮ್ರತೆಯನ್ನು ತೋರಿಸುವುದಿಲ್ಲ. ಎಲ್ಲ ಘಟನೆಗಳ ಮೇಲೂ ನಮ್ಮ ನಿಯಂತ್ರಣವಿರಬೇಕು, ಇರುತ್ತದೆ. ನಾವು ಇಷ್ಟಪಟ್ಟ ಹಾಗೆಯೇ ಜಗತ್ತು ನಡೆಯಬೇಕು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಎಂಟನೆಯ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ