Advertisement

Tag: ಕೆಂಡಸಂಪಿಗೆ

ಗಾಂಧೀಜಿ ಬದುಕಿನ ಹರಿವುಗಳ ಒಳಾರ್ಥವನ್ನು ತೆರೆದಿಟ್ಟ ಕೃತಿ

ಗಾಂಧೀಜಿಯವರ ಕುರಿತು ಆಕ್ಷೇಪಗಳು ಬಂದಾಗ ಇದರಲ್ಲಿ ಅವರ ನಡೆ ಆ ಕಾಲದಲ್ಲಿ ಎಷ್ಟು ಸೂಕ್ತವಾಗಿತ್ತು ಎನ್ನುವದನ್ನು ಇಲ್ಲಿ ವಿವರಿಸಲಾಗಿದೆ. ಖಿಲಾಪತ್ ಚಳುವಳಿಯನ್ನು ಗಾಂಧಿ ಸಂಪೂರ್ಣವಾಗಿ ಒಪ್ಪಿಲ್ಲ; ಆದರೆ ಆ ಧರ್ಮದ ಬಗೆಗೆ ಅವರಿಗಿರುವ ಆಳ ದೃಷ್ಟಿಕೋನದಿಂದ ಮುಸಲ್ಮಾನರ ಭಾವನೆಗಳನ್ನು ಗಾಂಧಿ ಅರ್ಥಮಾಡಿಕೊಂಡಿದ್ದರು ಎನ್ನುತ್ತಾರೆ. ಹಾಗೇ ನೋಡಿದರೆ ಖಿಲಾಪತ್ ಚಳುವಳಿಯನ್ನು ಗಾಂಧಿ ಬೆಂಬಲಿಸಿದ ಕಾರಣದಿಂದಲೇ ಗಾಂಧಿ ರಾಷ್ಟ್ರೀಯ ನಾಯಕರಾಗಿ ಹೊಮ್ಮಿದ್ದು ಮತ್ತು 1920ರ ನಾಗಪುರ ಅಧಿವೇಶನದ ನಂತರ ತೀವ್ರವಾದಿಗಳನ್ನು ಬದಿಗೆ ಸರಿಸಿ ಅನಭಿಷಕ್ತ ನಾಯಕರಾಗಿರುವುದು.
ರಾಮಚಂದ್ರ ಹಬ್ಬು ಅನುವಾದಿಸಿರುವ “ಮಹಾತ್ಮ ಗಾಂಧಿ ಜೀವನ ಚರಿತೆ” ಕೃತಿಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಹೃದಯದ ಕಲ್ಲು ಮತ್ತು ನದಿಯೊಂದು ನಿದ್ರಿಸಿದಾಗ

ನಿದ್ರಿಸುವ ನದಿಯೆಡೆಗೆ ಹೋಗುವವರ ಎದೆಯಲ್ಲಿ ಎಳ್ಳಷ್ಟೂ ಭಯ ಇರಬಾರದು. ಅಕಸ್ಮಾತ್ ನಿನ್ನ ಮನಸ್ಸಿನಲ್ಲಿ ಒಂದೇ ಒಂದು ಕ್ಷಣ ಭಯ ಹೊಕ್ಕರೆ ನೀನು ಸತ್ತಂತೆ ಸರಿ, ನಿನ್ನ ಆತ್ಮಕ್ಕೆ ಅವುಗಳನ್ನು ಎದುರಿಸಲು ಆಗುವುದಿಲ್ಲ. ನೀನು ಪಾಪದ ಕೆಲಸ ಮಾಡಿದ್ದರೆ ಆ ಆತ್ಮಗಳು ನಿನ್ನನ್ನು ಸುಲಭವಾಗಿ ಮುಗಿಸಿಬಿಡುತ್ತವೆ. ಭಯಾನಕ ಅಂತ್ಯ ನಿನ್ನದಾಗುತ್ತದೆ. ಶುದ್ಧ ಮನಸ್ಸು ಮತ್ತು ಒಳ್ಳೆಯ ಹೃದಯ ನಿನ್ನ ರಕ್ಷಣೆ, ನಿದ್ರಿಸುವ ನದಿಯೆಡೆಗೆ ಹೋಗುವಾಗ ಯಾರೊಡನೆಯೂ ದ್ವೇಷ ಹೊಂದಿರಬಾರದು. ಮನಸ್ಸಿನಲ್ಲಿ ಕೆಡುಕು, ದುಷ್ಟತನ ಇರಬಾರದು.
ರವಿಕುಮಾರ್ ಹಂಪಿ ಅನುವಾದಿತ “ನದಿಯೊಂದು ನಿದ್ರಿಸಿದಾಗ” ಕಾದಂಬರಿಯ ಕುರಿತು ಸುಮಿತ್‌ ಮೇತ್ರಿ ಬರಹ

Read More

‘ಒಂದು ಅಂಕ ಮುಗಿದು’ ಧ್ಯಾನಿಸುತ್ತಾ….

‘ತುಂಬೆಗಿಡ ಮತ್ತು ಹುಡುಗಿ’ ಸತ್ತು ಮಣ್ಣಾದ ಹುಡುಗಿಯೊಬ್ಬಳ ಸಮಾಧಿಮೇಲೆ ನೆಟ್ಟ ತುಂಬೆ ಗಿಡದ ವಿಷಯವಿರುವ ಕವಿತೆ. ಬದುಕಿನ ಉತ್ತರಗಳ ಹಂಗು ಹುಡುಗಿಗೂ, ತುಂಬೆಗಿಡಕ್ಕೂ ಇಲ್ಲ. ಬದುಕಿನ ನಶ್ವರತೆಗಳು, ಹುಟ್ಟು, ಸಾವಿನ ಕುರಿತು ಏಳುವ ಜಿಜ್ಞಾಸೆಗಳು ಕವಯತ್ರಿಯ ಭಾವಾತ್ಮಕತೆಯ ತೀವ್ರತರ ಹುಡುಕಾಟವನ್ನು ದರ್ಶಿಸುತ್ತವೆ. ‘ನೀನೆ ಒಂದು ಅಪೂರ್ಣ ಚಿತ್ರ’ ಕವಿತೆಯೂ ಬದುಕಿನ ಎಲ್ಲಾ ಕ್ಷಣಗಳಿಗೆ ಮುಖಾಮುಖಿಯಾಗಿ ಮುಪ್ಪಿನಲ್ಲಿ ಹಿಂದಿನ ಪುಟಗಳನ್ನು ತಿರುವಿಹಾಕುವ ವ್ಯಕ್ತಿಯೊಬ್ಬನ ಕುರಿತು ಬರೆದ ಕವಿತೆ.
ಅಭಿಷೇಕ್‌ ವೈ.ಎಸ್. ಬರೆಯುವ ಅಂಕಣ “ಕಾವ್ಯದ ಹೊಸ ಕಾಲ”

Read More

ಆಸ್ಟ್ರೇಲಿಯನ್ ಕ್ಯಾಂಪಿಂಗ್ ಕಥಾನಕಗಳು – ಭಾಗ ಎರಡು

ಹಾಗೆಂದು ನಮ್ಮೆಲ್ಲಾ ಅನುಭವಗಳು ಆನಂದತುಲಿತಮಯ, ಅದ್ಭುತರಮ್ಯ, ಲೋಕಾತೀತವಾದವೇನಲ್ಲ. ಹೆಚ್ಚಿನ ಬಾರಿ ಖುಷಿಖುಷಿಯಿಂದ ಕೂಡಿದ್ದರೂ, ಒಮ್ಮೊಮ್ಮೆ ಗೊಳೋ ಎಂದು ಅತ್ತಿರುವುದೂ ನಿಜ. ಇಂತಹ ಕ್ಯಾಂಪಿಂಗ್ ಸಾಹಸಗಳಲ್ಲಿ ಕೆಲವು ಬಾರಿ ಅಪರಿಚಿತ ದೇಶಗಳಲ್ಲಿ, ಸ್ಥಳಗಳಲ್ಲಿ ಪರಿಸ್ಥಿತಿ ಕೈಕೊಟ್ಟು ಕ್ಯಾಂಪಿಂಗ್ ಪಟು ಜೀಬೀ ಪೇಚಿಗೆ ಸಿಲುಕಿ, ನಾನು ನಮ್ಮ ಮಕ್ಕಳ ಮೈದಡವುತ್ತಾ ಕಂಗಾಲಾಗಿ ಕಣ್ಣೀರಿಟ್ಟಿದ್ದೂ ನಿಜ. ಆದರೂವೆ… ಧೈರ್ಯಗೆಡದೆ ಜರ್ಮನ್ ಪೊಲೀಸರಿಗೆ ಇಂಗ್ಲೀಷಿನಲ್ಲಿ ಉತ್ತರಿಸಿದ್ದಿದೆ.
ಡಾ. ವಿನತೆ ಶರ್ಮ ಬರೆಯವ “ಆಸ್ಟ್ರೇಲಿಯಾ ಪತ್ರ”

Read More

ಅಯ್ಯೋ ಸರ್ ಇಲ್ಲಿ ಹಲ್ಲಿಗಳು ಇವೆ!

ನನ್ನ ಬೆಂಗಳೂರಿನ ತರಬೇತಿಗಳು ಮುಗಿದ ತಕ್ಷಣ ನಾನು ರಾಮ್ ಇಬ್ಬರೂ ಕಾರಿನಲ್ಲಿ ಹಳ್ಳಿಗೆ ಹೊರಟೆವು. ಅದೇ ವಾರಾಂತ್ಯದಲ್ಲಿ ವಿನೋದ ಅವರಿಗೂ ಕೂಡ ಬರಲು ಹೇಳಿದ್ದೆ. ಅವರೂ ಹಳ್ಳಿಯಲ್ಲಿ ನಾವು ಸಧ್ಯ ವಾಸಕ್ಕಿದ್ದ ಹೊಸ ಮನೆಯನ್ನು ಇನ್ನೂ ನೋಡಿರಲಿಲ್ಲ. ಅದೂ ಅಲ್ಲದೆ ರಾಮನನ್ನು ಅವರಿಗೆ ಪರಿಚಯಿಸಿದಂತಾಗುತ್ತದೆ ಎಂಬುದು ನನ್ನ ಯೋಚನೆ. ಬೆಂಗಳೂರಿನಿಂದ ನಮ್ಮ ಹಳ್ಳಿಗೆ ಹೋಗಲು ಹೆಚ್ಚು ಕಡಿಮೆ ಏಳು ಗಂಟೆಗಳು ಬೇಕು. ರಾಮನಿಗೆ ಅದು ಮೊದಲ ಆಘಾತ!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ