Advertisement

Tag: ಕೆಂಡಸಂಪಿಗೆ

ಬರವಣಿಗೆಯ ಶಿಸ್ತನ್ನು ಕಲಿಸಿದ ಸಿಸ್ಟರ್ ಲಾರೆನ್ಸಿಯಾ: ಸುಮಾವೀಣಾ ಸರಣಿ

ಸಿಸ್ಟರ್ ಲಾರೆನ್ಸಿಯ ಅವರಿಗೆ ಗಾರ್ಡೆನಿಂಗ್ ಅಂದರೂ ಇವರಿಗೆ ಬಹಳ ಇಷ್ಟವಿತ್ತು. ನಮ್ಮ ತರಗತಿಯ ಮುಂದೆ ಇದ್ದ ಹೂತೋಟದಲ್ಲಿ ಚಂದದ ಗಿಡಗಳನ್ನು ಬೆಳೆಸಿದ್ದರು. ಅದರಲ್ಲಿ ದಾಳಿಂಬೆ ಬಣ್ಣದ ಪಾಪಿ ಹೂಗಳು ಅರಳುತ್ತಿದ್ದುದನ್ನು ಅದರ ನಯವಾದ ಎಸಳುಗಳನ್ನು ಇವತ್ತಿಗೂ ಮರೆಯಲಾಗುತ್ತಿಲ್ಲ. ತಮ್ಮ ತಲೆಯ ವಸ್ತ್ರವನ್ನು ಸರಿ ಮಾಡಿಕೊಂಡು ಬಗ್ಗಿ ಕೆಲಸ ಮಾಡುತ್ತಿದ್ದರು. “ಮುಂದೆ ಮಿಡ್ಲ್ ಸ್ಕೂಲಿಗೆ ಹೋಗುತ್ತೀರ ಚಂದ ಕಲಿತು ಹೋಗಬೇಕು” ಎಂದು ಪದೇ ಪದೇ ಹೇಳುತ್ತಿದ್ದರು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ನಾಲ್ಕನೆಯ ಬರಹ

Read More

ಸಾವಿರ ಕಥೆಗಳ ಸಂಸಾರ: ಎಸ್‌. ನಾಗಶ್ರೀ ಅಜಯ್‌ ಅಂಕಣ

ಎಷ್ಟೋ ಕಥೆಗಳಲ್ಲಿ ನಾವೇ ಮುಖ್ಯವೋ, ಅಮುಖ್ಯವೋ ಒಂದು ಪಾತ್ರವಾಗಿ ಚಲಿಸುತ್ತಿರುತ್ತೇವೆ. ಅಸಲಿಗೆ ನಮ್ಮ ಸತ್ವಪರೀಕ್ಷೆಯಾಗುವುದು, ಇಂತಹ ದ್ವಂದ್ವಗಳಲ್ಲಿ ತೀರ್ಮಾನ ತೆಗೆದುಕೊಳ್ಳುವ ಜವಾಬ್ದಾರಿ ನಮ್ಮ ಹೆಗಲೇರಿದಾಗ. ಹಾವು ಸಾಯಬಾರದು. ಕೋಲು ಮುರಿಯಬಾರದು ಎನ್ನುವ ನಾಜೂಕಯ್ಯರು ಹೇಗೋ ಬಚಾವಾಗುತ್ತಾರೆ. ಇದ್ದರೆ ಒಂದು ಕಡೆ. ಎರಡು ದೋಣಿಯ ಪಯಣ ನಮಗಲ್ಲ ಎನ್ನುವವರಿಗೆ ಸವಾಲು ಹೆಚ್ಚಿನದು. ಆದರೆ ಬಹಳಷ್ಟು ಸಲ ನಮ್ಮ ಪ್ರಯತ್ನಕ್ಕಿಂತ ಆ ಕ್ಷಣದ ಬಲವೇ ಹೆಚ್ಚಾಗಿ, ತುರ್ತು ಪರಿಸ್ಥಿತಿಯಲ್ಲಿ ಎರಡರಲ್ಲೊಂದು ತೀರ್ಮಾನವಾಗಿಬಿಟ್ಟಿರುತ್ತದೆ.
ಎಸ್‌. ನಾಗಶ್ರೀ ಅಜಯ್‌ ಬರೆಯುವ “ಲೋಕ ಏಕಾಂತ” ಅಂಕಣ

Read More

ಮಳೆಗಾಲದ ಆ ದಿನದ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಬರಗೂರು ತಲುಪುವಷ್ಟರಲ್ಲಿಯೆ ಧಾರಾಕಾರವಾಗಿ ಮಳೆಸುರಿಯಲಾರಂಭಿಸಿತು. ರಾತ್ರಿಯ ಭಯಂಕರವಾದ ಕತ್ತಲೆ ಬಸ್ಸು ಇಳಿಯುವಷ್ಟರಲ್ಲಿ ಸ್ವಲ್ಪ ಮಳೆ ಕಡಿಮೆಯಾಗಿತ್ತು. ಸ್ವಲ್ಪ ದೂರಹೋಗುವಷ್ಟರಲ್ಲಿ ಇನ್ನಷ್ಟು ಮಳೆ ಕಡಿಮೆಯಾಯಿತು. ಎಲೆಯು ನೆನೆಯುವಂತಿರಲಿಲ್ಲ. ಬರಗೂರನ್ನು ಬಿಟ್ಟು ಸ್ವಲ್ಪ ಹತ್ತಾರು ಮಾರು ದೂರ ಹೋಗಿದ್ದೆವು. ಪಶ್ಚಿಮದ ದಿಕ್ಕಿನಿಂದ ಗಾಳಿಯ ಮೋಡಗಳು ದಟ್ಟವಾಗಿ ಬರುತ್ತಿವೆ. ಒಂದಕ್ಕಿಂತ ಒಂದು ಪದರು ಪದರಾಗಿ ಬರುತ್ತಿವೆ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಕಳೆದುಹೋದವರನ್ನು ಹೇಗೆ ಹುಡುಕಲಿ?: ಅಮಿತಾ ರವಿಕಿರಣ್ ಬರಹ

ಇದನ್ನೆಲ್ಲಾ ನಾನೀಗ ಬರೆಯುವಾಗಲೂ ಇದೆಲ್ಲ ಕನಸೇ ಅನಿಸುತ್ತದೆ, ಕಂಡು ಕೇಳರಿಯದ ಊರಿನಿಂದ ಬಂದು, ನನ್ನೂರಿನಿಂದ ಹೋಗುವಾಗ ಅಣ್ಣಂದಿರಾಗಿ ಹೋಗಿದ್ದರು. ಹೋಳಿಗೆ ಬಣ್ಣ ಕಳಿಸುತ್ತಿದ್ದೆ, ದಶರೆಗೆ ಬನ್ನಿ, ರಕ್ಷಾಬಂಧನಕ್ಕೆ ರಾಖಿ, ಸಂಕ್ರಾಂತಿಗೆ ಎಳ್ಳು, ಪತ್ರಗಳಲ್ಲಿ ಒಣಗಿದ ಹೂವು ಎಲೆಗಳು. ಅದೊಂದು ಬೇರೆಯದೇ ಲೋಕವಾಗಿತ್ತು. ಮೂವರಲ್ಲಿ ಜಾಸ್ತಿ ಪತ್ರ ಬರೆಯುತ್ತಿದ್ದುದು ದೆಹಲಿಯ ಅಶೋಕ್ ಕುಮಾರ್ ಮತ್ತು ಅಕ್ಬರ್ ಖಾನ್ ಅವರು. ಜೀತೇಂದ್ರ ಪ್ರಸಾದ್ ಅವರ ಪತ್ರ ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಬರುತ್ತಿತ್ತು. ನಾನು, ತಂಗಿ ಪತ್ರ ಬರೆಯುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಮಂಜುನಾಯಕ ಚಳ್ಳೂರು ಬರೆದ ಕತೆ “ಫೂ….”

ಆ ಹೊತ್ತು ಅವಳು ಹುಚ್ಚಿಯಂತೆ ಕಾಣುತ್ತಿದ್ದಳು ನನಗೆ. ಮುಖದ ತುಂಬ ಕೈಯಾಡಿಸಿದಳು. ತಲೆ ಸವರಿದಳು. ಯಾಕೋ ಎಷ್ಟೊತ್ತಾದರೂ ನನ್ನ ಬಿಡಲೇ ಇಲ್ಲ. ಅವ್ವ ಅಲ್ಲಿಂದಲೇ, `ಸಾಕ್ ಹೋಗು ಚಂದ್ರಪ್ಪಾ. ಬುಟ್ರ ಲಂಗದಾಗ್ ಸುರುಗ್ಸ್ಯಂತಾಳ್ ಈ ಅಡಾವುಡಿ ನಿನ್ನಾ…’ ಎಂದಳು. ಅತ್ತೆ, `ಯೇ ಮಂಗಾ.. ಬಾಯೈತಂತ ಏನೇನರ ಬೊಗಳ್ಬ್ಯಾಡ. ನನ ಹೊಟ್ಯಾಗ್ ಹುಟ್ಬೇಕಾದದ್ ಇದು. ತಪ್ಪಿ ನಿನ್ ಹೊಟ್ಯಾಗ್ ಹುಟ್ಟೇತಿ.’ ಎಂದುತ್ತರಿಸಿದಳು. ಆಗವಳ ಕೈಗಳು ನಡುಗುತ್ತಿದ್ದವು. ಕೆಂಡದಂತೆ ಬೆಚ್ಚಗಾಗಿದ್ದವು.
ಮಂಜುನಾಯಕ ಚಳ್ಳೂರು ಅವರ “ಫೂ..” ಕಥಾಸಂಕಲನದ ಶೀರ್ಷಿಕೆ ಕತೆ ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ