Advertisement

Tag: ಕೆಂಡಸಂಪಿಗೆ

ಕ್ಯಾತನಮಕ್ಕಿಯ ಕಾಲಮೇಲೆ ಕೂತು ಗಾಳಿಗುಡ್ಡವ ನೆನೆದು

ಕಿಲೋಮೀಟರ್ ದೂರದಲ್ಲಿ ಬೈಕು ನಿಲ್ಲಿಸಿ ನಮ್ಮ ಟ್ರೆಕಿಂಗ್ ಆರಂಭಿಸಿದಾಗ ಇದ್ದ ಉತ್ಸಾಹ, ಕ್ಯಾತನಮಕ್ಕಿಯನ್ನು ಅರ್ಧ ಹತ್ತಿದಾಗಲೇ ಬತ್ತುವುದರಲ್ಲಿತ್ತು. ಒಂಚೂರು ಕುಳಿತು ನೀರು ಕುಡಿದು ಕಚ್ಚಾ ರಸ್ತೆಯಲ್ಲಿ ಬೆವರಿಳಿಸಿ, ತುದಿ ತಲುಪುವಾಗ ಜೀಪಿನಲ್ಲಿ ಬಂದವರ ದರ್ಬಾರಿಗೆ ಮನವೊಮ್ಮೆ ಪಿಚ್ಚೆಂದಿತ್ತು. ಆದರೂ ನಡೆದು ಗಮ್ಯ ತಲುಪುವ ಸಾರ್ಥಕ ಭಾವ ಆರಾಮಾಗಿ ತೇಲಿ ಬಂದವರಿಗೆಲ್ಲಿ ಬರಬೇಕು ಎಂದು ನಮಗೆ ನಾವೇ ಬೆನ್ತಟ್ಟಿಕೊಂಡು ಮುನ್ನಡೆದೆವು.
ಚಿಕ್ಕಮಗಳೂರಿನ ‘ಕ್ಯಾತನಮಕ್ಕಿʼ ಪ್ರವಾಸಿ ತಾಣಕ್ಕೆ ಭೇಟಿ ನೀಡಿದ ಅನುಭವಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ ಶುಭಶ್ರೀ ಭಟ್ಟ

Read More

ನನ್ನ ನಾನಿಯೂ… ಸಕ್ಕರೆ ಪುಟಾಣಿಯೂ….

ಮಸೀದಿಯಲ್ಲಿ ಶುಕ್ರವಾರಕ್ಕೊಮ್ಮೆ ಸಿಗುತ್ತಿದ್ದ ಪುಟಾಣಿ ಸಕ್ಕರೆಯ ರುಚಿ ನನ್ನ ಬೆಂಬಿಡದೆ ಕಾಡತೊಡಗಿ ದಿನವೂ ತಿನ್ನಬೇಕೆನಿಸುತ್ತಿತ್ತು. ಆದರೆ ನನಗೆ ತಿನ್ನಬೇಕೆನಿಸಿದಾಗ ಎಲ್ಲಿಂದ ಪಡೆಯುವುದು? ಶುಕ್ರವಾರ ಬರುವವರೆಗೂ ಕಾದು ಅವರು ಕೊಡುವ ಒಂದು ತುತ್ತಿನಷ್ಟು ಪುಟಾಣಿ ಸಕ್ಕರೆ ನನ್ನ ಹೊಟ್ಟೆಗೆ ಸಾಕಾಗುತ್ತಿರಲಿಲ್ಲ. ತಿಂದರೆ ಹೊಟ್ಟೆ ತುಂಬುವಷ್ಟು ಅದನ್ನೇ ತಿನ್ನಬೇಕೆನ್ನುವ ಆಸೆ. ಅಪ್ಪನ ಹತ್ತಿರನೋ ಅವ್ವನ ಬಳಿಯೋ ರೊಕ್ಕ ಕೇಳಿದರೆ ಆಗ ಎಂಟಾಣೆಯೋ ಒಂದು ರೂಪಾಯಿಯೋ ಸಿಗುತ್ತಿತ್ತಷ್ಟೆ.
ಇಸ್ಮಾಯಿಲ್ ತಳಕಲ್‌ ಬರೆಯುವ “ತಳಕಲ್‌ ಡೈರಿ”ಯಲ್ಲಿ ಹೊಸ ಬರಹ

Read More

ಲಂಡನ್ನಿನಲ್ಲಿ ಹುಟ್ಟಿ ಮದ್ರಾಸಿನಲ್ಲಿ ಮಡಿದ ಸುಧಾರಕಿಯ ವೃತ್ತಾಂತ…

ಸಾಂಪ್ರದಾಯಿಕ ಸಾಂಸಾರಿಕ ಬದುಕಿನಿಂದ ಬೇರೆಯಾದ ಒಂದು ದಶಕದ ನಂತರ ಬೆಸಂಟ್, ಫ್ಯಾಬಿಯನ್ ಸಮಾಜ ಎನ್ನುವ ಸಮಾಜವಾದಿ ಸಂಘಟನೆಯ ಪ್ರಾಥಮಿಕ ಸದಸ್ಯೆ ಆದರು. ಬಿಯಾಟ್ರಿಸ್, ಸಿಡ್ನಿ ವೆಬ್ ಹಾಗು ಜಾರ್ಜ್ ಬರ್ನಾರ್ಡ್ ಷಾ ರಂತಹ ಪ್ರಸಿದ್ಧ ಚಿಂತಕರೂ ಆಗ ಸಂಘಟನೆಯ ಸಹಸದಸ್ಯರು. ಅವರೆಲ್ಲ ಐರಿಶ್ ಹೋಂ ರೂಲ್ ಚಳವಳಿಯನ್ನು ಬೆಂಬಲಿಸಿದವರು. ಬೆಸೆಂಟ್ “ಬ್ಲಡಿ ಸಂಡೆ” ಪ್ರದರ್ಶನದ ಭಾಗವಾದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಅನ್ನಿ ಬೆಸೆಂಟ್‌ ಜೀವನ ವೃತ್ತಾಂತದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

Read More

ಕಥಾ ಬೇಸಾಯವನ್ನು ಬದುವಿನಲ್ಲಿ ನಿಂತು ನೋಡಿ

ಉಳುಮೆ ಅನುಭವದ್ದು. ಒಂದು ಸಾಲಿನ ಉಳುಮೆ ಸಾಕೋ, ಎರಡುಸಾಲು ಹೊಡೆಯಬೇಕೋ, ಮೂರುಸಾಲು ಆಗಬೇಕೋ ಎಂಬುದು ಉಳುಮೆಗಾರನ ವಿವೇಚನೆಯದು. ಹಾಗೆಯೇ ಬಲಸುತ್ತು, ಎಡಸುತ್ತು ಉಳುಮೆಯ ವಿಚಾರವೂ ಸಹ. ಬದುವಿನ ಉಬ್ಬಂಚು ತಗ್ಗಬೇಕಾದರೆ ಎಡಸುತ್ತಿನ ಉಳುಮೆಗೆ ನೇಗಿಲು ಹಿಡಿಯಬೇಕು. ಎದೆಯ ಹೊಲದಲ್ಲಿ ಹುಟ್ಟುವ ಕಥೆ ಬೆಳೆದು ಬೆಳೆಯಾಗವುದು ಇಂತಹ ಹದಗಳಲ್ಲಿಯೇ. ಹೊಲದ ವಿಸ್ತಾರವಿದ್ದಂತೆ ಕಥೆಯ ವಿಸ್ತಾರವೂ ಇರುತ್ತದೆ. ವಿಸ್ತಾರ ದೊಡ್ಡದಿದ್ದರೂ ಉಳುಮೆಯಾದಷ್ಟು ನೆಲದಲ್ಲಷ್ಟೇ ಬೆಳೆ. ಸದಾಶಿವ ಸೊರಟೂರು ಕಥಾಸಂಕಲನ “ಅರ್ಧ ಬಿಸಿಲು ಅರ್ಧ ಮಳೆ”ಗೆ ಸ. ರಘುನಾಥ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ