Advertisement

Tag: ಕೆಂಡಸಂಪಿಗೆ

ಇ.ಆರ್. ರಾಮಚಂದ್ರನ್ ಹೊಸ ಅಂಕಣ “ಕ್ರಿಕೆಟಾಯ ನಮಃ” ಇಂದಿನಿಂದ ಶುರು

‘ನೋಡಿ. ಇಂಗ್ಲೆಂಡಿನಲ್ಲೂ ಇದೆ ಪ್ರಾಬ್ಲಮ್ ಆಗಿತ್ತು. ಅದಕ್ಕೆ ಅಲ್ಲಿ ಸೋತರು. ನನಗೆ ಒಂದು ಐಡಿಯಾ ಹೊಳೆದಿದೆ. ರಾಣಿ ಎಲಿಜಬೆತ್ ಕಾಲವಾದಮೇಲೆ ಬಕಿಂಗ್ಹ್ಯಾಮ್ ಪ್ಯಾಲೇಸ್ ಅರ್ದಕ್ಕರ್ಧ ಖಾಲಿ ಇರುತ್ತೆ. ಮುಂದಿನ ಟೂರ್ನಲ್ಲಿ ನಮ್ಮ ಪ್ಲೇಯರ್ಸ್ ಅಲ್ಲಿ ತಂಗಿದರೆ ಸೇಫ್ ಮತ್ತು ಕಿರಿಕಿರಿ- ಫ್ರಿ. ಅಲ್ಲಿ ಕರೀಪ್ಯಾಂಟು ಕೆಂಪು ಕೋಟು ಮತ್ತು ಮೂತಿ ಮುಚ್ಚಿತೋ ಅನ್ನುವ ಹಾಗೆ ಕರಿ ಟೋಪಿ ಹಾಕಿರುವ ‘ರಾಯಲ್ ಗಾರ್ಡ್ಸ್’ ನ ಸೆಕ್ಯುರಿಟಿಗೆ ಹಾಕಬಹುದು.
ಆಂಗ್ಲ ಭಾಷೆಯ ಹಿರಿಯ ಕ್ರಕೆಟ್ ಅಂಕಣಕಾರ ಇ. ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಲಘು ಬರಹಗಳ ಅಂಕಣ ಇಂದಿನಿಂದ ಹದಿನೈದು ದಿನಗಳಿಗೊಮ್ಮೆ…

Read More

ಲೇಖಕರ ಮತ್ತು ಓದುಗರ ನಡುವಿನ ಕೊಂಡಿ ಹೊಸೆಯುತ್ತಾ…

ಪ್ರಕಾಶಕರು, ಲೇಖಕರ ಮತ್ತು ಓದುಗರ ನಡುವಿನ ಬಹುಮುಖ್ಯ ಕೊಂಡಿ. ಅವರ ಸಹಾಯವಿಲ್ಲದೇ ಯಾವುದೇ ಲೇಖಕರ ಕೃತಿಯು ಓದುಗರನ್ನು ತಲುಪಲು ಸಾಧ್ಯವಿಲ್ಲ. ನಮ್ಮ ಭಾಷೆಯಲ್ಲಿ ಯಾವೆಲ್ಲ ತರಹದ ಸಾಹಿತ್ಯ ಕೃಷಿ ನಡೆಯುತ್ತಿದೆ ಅನ್ನುವುದನ್ನು ಓದಿ, ಓದುಗರ ಮುಂದಿಟ್ಟಾಗಲೇ ಒಬ್ಬ ಓದುಗನಿಂದ ಮತ್ತೊಂದು ಓದುಗ ಹುಟ್ಟಿಕೊಳ್ಳುವುದು. ಅದರ ಜೊತೆಗೇ ಎಂಥ ಪ್ರಕಾರದ ಪುಸ್ತಕವನ್ನು ಓದುಗರ ಕೈಗಿಡಬೇಕು, ಮತ್ತೆ ಓದುಗನಿಗೆ ಪುಸ್ತಕ ತಲುಪಿಸುವ ಮಾರ್ಗಗಳೇನು ಎಂಬುದೂ ಈ ಹೊತ್ತಿನಲ್ಲಿ ಚರ್ಚಿಸಬೇಕಾದ ವಿಷಯ. ರೂಪಶ್ರೀ ಕಲ್ಲಿಗನೂರ್‌ ಬರಹ ಇಲ್ಲಿದೆ

Read More

ದಂಡಕಾರಣ್ಯದ ಆದಿವಾಸಿಗಳ ದೇವ-ದೇವಿಯರು

ಶಿವ ಶಕ್ತಿಯ ಸಂಗಮವು ನಾನಾರೀತಿಯಲ್ಲಿ ನಮ್ಮ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ ಮತ್ತು ವಿಸ್ಮಯವೆನಿಸುವ ರೀತಿಗಳಲ್ಲಿ ಅದು ಅಭಿವ್ಯಕ್ತಿ ಹೊಂದಿದೆ. ಬುಡಕಟ್ಟಿನವರ ದೇವಲೋಕವೂ ಇದಕ್ಕೆ ಹೊರತಾಗಿಲ್ಲ. ನದಿಯ ನಡುವೆ ಒಂದು ಕಲ್ಲಿದೆ. ಅಲ್ಲಿ ತ್ರಿಶೂಲದ ಹಾಗೂ ಒಂದು ಪಾದದ ಗುರುತಿದೆ. ದಂತೇಶ್ವರಿ ಮತ್ತು ಭೈರವರು ಕಣ್ಣಾಮುಚ್ಚಾಲೆ ಆಟ ಆಡುತ್ತಿದ್ದಾಗ ದೇವಿಯು ಶಿವ ಮೋಸ ಮಾಡಿದ ಎಂದು ಕೋಪದಿಂದ ಅವನ ಮೇಲೆ ಎಸೆದ ತ್ರಿಶೂಲ ಅಲ್ಲಿ ಸಿಕ್ಕಿಕೊಂಡಿದೆ ಎನ್ನುವುದು ನಂಬಿಕೆ. ಅದಕ್ಕೇ ತಪ್ಪಿಸಿಕೊಂಡು ಹೋದ ಭೈರವನ ದೇವಾಲಯ ನದಿಯ ಆಚೆ ದಡದಲ್ಲಿದೆ.
ಗಿರಿಜಾ ರೈಕ್ವ ಬರೆಯುವ ಅಂಕಣ ‘ದೇವಸನ್ನಿಧಿ’

Read More

ಆವರ್ತನ…

ಏನೇನೋ ಅನ್ನುವಂಥದ್ದು ನಾನು ಮಾಡಲಿಲ್ಲ. ನಾನೂ ಕೂಡ ಏನೇನೋ ಆಗಲಿಲ್ಲ. ಕಡಿಮೆ ಭ್ರಷ್ಟ ಅನಿಸಿಕೊಳ್ಳಲಿಕ್ಕೆ ಮೇಷ್ಟ್ರಾದೆ. ಮಕ್ಕಳಿಗೆ ಕವಿತೆ ಹೇಳಿಕೊಟ್ಟೆ. ಆದರೆ ಯಾಕೋ ನನ್ನ ಕೈಯಲ್ಲಿ ಬರೆಯಲಾಗಲೇ ಇಲ್ಲ. ನಿತ್ಯದ ಯಾಂತ್ರಿಕತೆ ನುಂಗಿಕೊಂಡುಬಿಟ್ಟಿತು. ನನಗೆ ಗೊತ್ತು. ಈ ಸುದೀರ್ಘ ಸ್ವಗತಗಳನ್ನು ಬರೆಯುವುದರ ಭಯವೆಂದರೆ ಓದುಗ ಒಂದು ಹಂತದ ನಂತರ ಕತೆಗಾರನ ಪ್ರಾಮಾಣಿಕತೆಯನ್ನು ಅನುಮಾನಿಸತೊಡಗುತ್ತಾನೆ. ನಿಜ. ಪ್ರಾಮಾಣಿಕತೆಯನ್ನು ಒಪ್ಪಿಸಲು ನಮ್ಮ ಬಳಿಯಿರುವ ಪರಿಮಾಣಗಳಾದರೂ ಏನು? ಆಣೆ ಹಾಕಬಹುದು. ನಂಬಿ ಎಂದು ಕೈ ಜೋಡಿಸಬಹುದು.
ದಾದಾಪೀರ್‌ ಜೈಮನ್‌ ಬರೆಯುವ ಜಂಕ್ಷನ್‌ ಪಾಯಿಂಟ್‌ ಅಂಕಣ

Read More

ತುಂಟ ಪೊಕ್ಕಣ್ಣ & ಕಡುಮಡಿಯ ಅಜ್ಜಿ

ಈ ಪೊಕ್ಕಣ್ಣ ಶತ ತುಂಟ, ಕಣ್ಣಲ್ಲೇ ಅವನ ತುಂಟತನ ಇಣಕುತ್ತಿತ್ತು. ಒಂದು ಕಿವಿ ನೆಟ್ಟಗೆ ಮಾಡಿ, ಮತ್ತೊಂದನ್ನು ಮಡಿಸಿದ ಅಂದರೆ ಅವನೇನೋ ತರಲೆ ಮಾಡುತ್ತಾನೆಂದು ನಮಗೆ ಖಾತ್ರಿಯಾಗಿತ್ತು. ಮಟ ಮಟ ಮಧ್ಯಾಹ್ನ ಎಣ್ಣೆ ಪಳಚಿಕೊಂಡು ಹಂಡೆತುಂಬಾ ಬೀಸಿನೀರನ್ನು ಸ್ನಾನ ಮಾಡಿ, ಒದ್ದೆ ಸೀರೆಯನ್ನುಟ್ಟು ಬರುವ ಅಜ್ಜಿಗೆ ಅಡ್ಡಲಾಗಿಯೇ ಮಲಗುತ್ತಿದ್ದ ಪೊಕ್ಕಣ್ಣ. ಅವನು ಮಲಗಬಾರದೆಂದು ಕೊಡಪಾನಗಟ್ಟಲೆ ನೀರು ಹೊಯ್ದಿಟ್ಟು ಸ್ನಾನಕ್ಕೆ ಹೋಗುತ್ತಿದ್ದರು. ಆದರೂ ಕಾಲು ಒರೆಸುವ ಗೋಣಿಚೀಲವನ್ನೆಳೆದುಕೊಂಡು ಬೇಕಂತಲೇ ಬಚ್ಚಲಮನೆ ಬುಡದಿ ಮಲಗಿ ಸತಾಯಿಸುತ್ತಿದ್ದ ಅಂವ.
ಶುಭಶ್ರೀ ಭಟ್ಟ ಲಲಿತ ಪ್ರಬಂಧಗಳ ಸಂಕಲನ “ಹಿಂದಿನ ನಿಲ್ದಾಣ” ದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ