Advertisement

Tag: ಕೆಂಡಸಂಪಿಗೆ

ರೂಪಾಂತರದ ಆಯಾಮಗಳು

ಮಾನವರು ಯಕ್ಷರಾಗುವ ಪ್ರಕ್ರಿಯೆ ನಮ್ಮೊಳಗೆ ಅಡಕವಾಗುತ್ತ ನಡೆದಾಗಲೂ ಕೆಲವೊಮ್ಮೆ ಭ್ರಮೆ ಮತ್ತು ವಾಸ್ತವಗಳು ಮನಸ್ಸಿನಲ್ಲಿ ತಾಡಿಸುತ್ತಲೇ ಇರುತ್ತಿದ್ದವು. ದುಃಶ್ಶಾಸನನ ವೇಷ ತೊಟ್ಟ ಅಪ್ಪ, ಭೀಮನಿಂದ ಪೆಟ್ಟುತಿಂದು ಯುದ್ಧರಂಗದಲ್ಲಿ ಓಡುತ್ತಿರುವಾಗ ಅವನೆಲ್ಲಾದರೂ ಅಪ್ಪನನ್ನು ಗದೆಯಿಂದ ಹೊಡೆದು ಕೊಂದಾನೆಂಬ ಭ್ರಮೆಯಲ್ಲಿ ‘ಬೇಡಾ’ ಎಂದು ಕಿರುಚಿದ್ದೂ ಇತ್ತು. ಕೌರವನನ್ನು ಬೆನ್ನಟ್ಟುವ ರೌದ್ರ ಭೀಮನ ಕಣ್ಣಿನ ಕೆಂಪಿಗೆ ಹೆದರಿ, ಅವನೆಲ್ಲಿಯಾದರೂ ಕೌರವನ ವೇಷಧಾರಿಯಾದ ನನ್ನಪ್ಪನ ತೊಡೆಯನ್ನೇ ಮುರಿದಾನೆಂದು ಚಡಪಡಿಸುತ್ತಿದ್ದುದು ಅತ್ತೆಗೆ ಇರಿಸುಮುರಿಸು ಮಾಡುತ್ತಿತ್ತು.
ಮನುಷ್ಯ ಹೊಂದಬಹುದಾದ ರೂಪಾಂತರಗಳ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಕಾಣ್ಕೆ ನೀಡುವ ಕವಿತೆಗಳು…

ಮಗುವಿನ ಮುಗ್ಧತೆಯ ಸಂಪಾದಿಸುವವರೆಗೂ ಈ ಸಾಧನೆಯ ಯಾನ ನಿರಂತರವಾಗಿ ಮುಂದುವರಿಯುತ್ತಿರಬೇಕು. ಲೋಕದ ಉಪಾಧಿಗಳ ಅಂಟಿನಿಂದ ಬಿಡುಗಡೆಯಾಗುವ ಹಾದಿಯಲ್ಲಿ ಈ ಕವಿ ದಿಟ್ಟ ಹೆಜ್ಜೆ ಇರಿಸಿದ್ದಾನೆ ಎಂಬುದು ಖುಷಿಯ ಸಂಗತಿ. ಅಲ್ಲಲ್ಲಿ ಹಳಹಳಿಕೆಯ ಧ್ವನಿಯೂ, ತಿರಸ್ಕಾರ ಭಾವವೂ, ಆಕ್ರೋಶವೂ ವ್ಯಕ್ತವಾಗಿದೆಯಾದರೂ ಅವರ ತಾತ್ವಿಕ ಹಾದಿಗೆ ಅವು ತೊಡಕಾಗಿ ಉಳಿದಿಲ್ಲ. ನಿರ್ವಾಣನಾಗುವುದರಲ್ಲಿ ಅದಮ್ಯ ಸುಖವಿದೆ ಎಂದು ಸಾರುವ ಅವರ ಕವಿತೆಗಳು ಈ ಸಂಕಲನಕ್ಕೆ ಇಟ್ಟ ಹೆಸರಿಗೆ ಅನ್ವರ್ಥವಾಗಿವೆ.
ಜಿ.ಆರ್. ರೇವಣಸಿದ್ದಪ್ಪನವರ ‘ಬಾಳನೌಕೆಗೆ ಬೆಳಕಿನ ದೀಪ’ ಕವನ ಸಂಕಲನಕ್ಕೆ ಡಾ.ಲೋಕೇಶ್ ಅಗಸನಕಟ್ಟೆ ಬರೆದ ಮುನ್ನುಡಿ

Read More

ಎ. ಬಿ. ಪಚ್ಚು ಬರೆದ ಈ ಭಾನುವಾರದ ಕತೆ

ಆ ರಾತ್ರಿ ಯಕ್ಷಗಾನ ಎಲ್ಲಾ ನೋಡಿ ಮುಗಿದು ಬೆಳಿಗ್ಗೆ ಮನೆಗೆ ತಲುಪಿದೆ. ಕಣ್ಣೀರಿನ ಹೊರತು ಆ ದಿನ ಸಮಜಾಯಿಷಿ ಕೊಡಲು ನನ್ನಲ್ಲಿ ಯಾವ ಮಾತುಗಳೂ ಇರಲಿಲ್ಲ. ನಿಜ ನಾನೇನು ತಪ್ಪು ಮಾಡಿರಲಿಲ್ಲ, ಆದರೆ ಯಾಕೋ ನನಗೆ ಅಮ್ಮನನ್ನು ಒಬ್ಬಳನ್ನೇ ಬಿಟ್ಟು ಹೋದ ಆ ತಪ್ಪಿತಸ್ಥ ಭಾವ ಆ ದಿನದಿಂದ ಬಹಳವಾಗಿ ಕಾಡಿತು ಮಹೇಶ. ಆ ನೋವಿನಿಂದಾಗಿ ಆ ದಿನದಿಂದ ನಾನು ಎಂದಿಗೂ ಯಕ್ಷಗಾನದತ್ತ ಕಣ್ಣು ಹಾಯಿಸಲೇ ಇಲ್ಲ.
ಎ.ಬಿ. ಪಚ್ಚು ಬರೆದ ಕತೆ “ಮೈಸಾಸುರ”

Read More

ಸಂಗೀತ ಸಂಜೆಗಳ ಇಬ್ಬಗೆಯ ಸುಧೆ

ಆಸ್ಟ್ರೇಲಿಯಾದ ಎಂದೆಂದಿಗೂ ತಿಳಿಯಾಗಿಲ್ಲದ ಇಬ್ಬಗೆಯೆಂದರೆ ಆಸ್ಟ್ರೇಲಿಯನ್ ಅಬೊರಿಜಿನಲ್ ಜನಜೀವನದ ಮುಖ್ಯಭಾಗವಾದ ಸಂಗೀತ ಮತ್ತು ಆಸ್ಟ್ರೇಲಿಯಕ್ಕೆ ಬರಮಾಡಿಕೊಂಡ ಪಾಶ್ಚಾತ್ಯ ಸಂಗೀತ. ಅಬೊರಿಜಿನಲ್ ಜನರನ್ನು ಸಂಪೂರ್ಣವಾಗಿ ನಿರ್ನಾಮ ಮಾಡಲು ವಸಾಹತುಶಾಹಿಗಳು ಪ್ರಯತ್ನಿಸಿದರೂ ಇಪ್ಪತ್ತನೇ ಶತಮಾನದಲ್ಲಿ ಅಬೊರಿಜಿನಲ್ ಸಂಗೀತ, ನೃತ್ಯ ಮತ್ತು ಚಿತ್ರಕಲೆಗೆ ಗಮನ ಕೊಟ್ಟು, ಅವುಗಳಲ್ಲಿರುವ ವಿಶೇಷಣಗಳನ್ನು ಗುರುತಿಸಿದರು.
ಡಾ. ವಿನತೆ ಶರ್ಮ ಅಂಕಣ

Read More

ಕಾವಿಧಾರಿಗಳೊಂದಿಗೆ ಕಳೆದ ಕಾಲದ ಮೆಲುಕುಗಳು…

ಜಿಪ್ಸಿಯಂತಿದ್ದ ಆತ ಎಲ್ಲರೊಡನೆ ಚಕ್ಕಲ್ಮಟ್ಟ್ಕೆ ಹಾಕಿಕೊಂಡು ಊಟ ಮಾಡುತ್ತಿದ್ದರು. ನನ್ನ ಕ್ಯಾಮೆರ ಲೆನ್ಸ್ ಆತನನ್ನು ನೋಡುತ್ತಿದ್ದದ್ದು ಗಮನಕ್ಕೆ ಬಂದೊಡನೆ ಒಂದು ನಗು ಒಂದು ಜ್ಞಾನ ಮುದ್ರೆಯನ್ನು ನನ್ನೆಡೆಗೆ ಬಿಸ್ಹಾಕಿದರು. ಈ ಮೇಳದ ಜಾಗದಲ್ಲಿ ಸ್ವಲ್ಪ ಹಳೇ ಹುಲಿಯಂತೆಯೇ ಕಂಡರವರು. ಕ್ಯಾಮೆರ ಮತ್ತು ಮೀಡಿಯಾವನ್ನು ಆಕರ್ಷಿಸಲು ಬೇಕಾದ ಹಾವಭಾವ ಅವರಲ್ಲಿತ್ತು ಅನ್ನಿಸಿತು.. ಮಾತು ಬೆಳೀತಾ ಬೆಳೀತಾ ಗೊತ್ತಾಯ್ತು ಆತ ಅಮೆರಿಕೆಯ ಅಲೆಮಾರಿ ಅಂತ. ಹಾಡು ನಟನೆ ಪ್ಯಾಷನ್. ಅದರಲ್ಲೇ ಜೀವನ ಕಂಡುಕೊಳ್ಳಲು ಸಾಕಷ್ಟು ಪರಿಶ್ರಮ ಹಾಕಿದರೂ ಉಹುಂ, ಯಶಸ್ಸು ಒಲ್ಲೆ ಅಂತ ಹಠ ಹಿಡಿದಿತ್ತು. ಅಂಜಲಿ ರಾಮಣ್ಣ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ