ಹಿನ್ನೀರಿನಲ್ಲೊಂದು ಮುಂಜಾನೆ: ವಿನಾಯಕ ಅರಳಸುರಳಿ ಅಂಕಣ
ಇದೇ ಅಲೆಯ ಬುಡದಲ್ಲಿ ಒಂದು ಕಾಲದಲ್ಲಿ ಹಳ್ಳಿಯಿತ್ತು. ಗದ್ದೆಯಿತ್ತು. ಮನೆಯಿತ್ತು. ದನಕರುಗಳು ಓಡಾಡುತ್ತಿದ್ದವು. ಮನುಷ್ಯ ವಾಸವಾಗಿದ್ದ. ಅಲ್ಲೆಲ್ಲೋ ದೂರದಲ್ಲಿ ನದಿಯೊಂದರ ದಾರಿಯ ತಡೆದ ಕಾರಣಕ್ಕೆ ಇಲ್ಲಿ ಇವೆಲ್ಲವೂ ಮುಳುಗಿದವು. ಈ ನೀರಡಿಗೀಗ ಏನೇನಿರಬಹುದು? ಮುಳುಗಡೆಯಾಗುವ ಹೊತ್ತಿಗೆ ಎದ್ದು ಹೋದ ಮಗುವೊಂದು ಅರ್ಧಕ್ಕೇ ಆಡಿ ಬಿಟ್ಟ ಆಟಿಕೆಯಿರಬಹುದೇ? ರೈತನೊಬ್ಬ ನೂರಾರು ಕಟ್ಟು ಹುಲ್ಲು ಕೊಯ್ದಿರುವ ಕತ್ತಿಯಿರಬಹುದೇ? ಅಮ್ಮ ಒಬ್ಬಳು ನೂರಾರು ಬಾರಿ ಗಂಜಿ ಕಾಯಿಸಿರುವ ಪಾತ್ರೆಯಿರಬಹುದೇ? ಹಲವು ದೇವಸ್ಥಾನಗಳೂ ಇಲ್ಲಿ ಮುಳುಗಿ ಹೋಗಿವೆಯಂತೆ… ಇನ್ನಾದರೂ ಅಲ್ಲಿ ದೇವರಿರಬಹುದೇ?
ವಿನಾಯಕ ಅರಳಸುರಳಿ ಬರೆಯುವ ಅಂಕಣ “ಆಕಾಶ ಕಿಟಕಿ”ಯ ಬರಹ ನಿಮ್ಮ ಓದಿಗೆ

