Advertisement

Tag: ಕೆಂಡಸಂಪಿಗೆ

ಉನ್ನತ ವಿಜ್ಞಾನ ಶಿಕ್ಷಣದಲ್ಲಿ ಕನ್ನಡ ಭಾಷೆ: ಡಾ.ಎಲ್.ಜಿ.ಮೀರಾ ಅಂಕಣ

ಮಾತೃ಼ಭಾಷೆ/ಪ್ರಾದೇಶಿಕ ಭಾಷೆಯಲ್ಲಿನ ಶಿಕ್ಷಣಕ್ಕೆ ಒತ್ತು ನೀಡುತ್ತಿರುವ ರಾಷ್ಟ್ರೀಯ ಶಿಕ್ಷಣ ನೀತಿ – 2020 ಈ ವಿಷಯದಲ್ಲಿ ಹೊಸ ಬಾಗಿಲುಗಳನ್ನು ತೆರೆಯುವ ಸಾಧ್ಯತೆಯನ್ನು ತೋರಿಸಿದೆ. ವಿಶ್ವೇಶ್ವರಯ್ಯ ತಂತ್ರಜ್ಞಾನ ವಿಶ್ವವಿದ್ಯಾಲಯ (ವಿಟಿಯು)ದ ಉಪಕುಲಪತಿಗಳಾದ ಡಾ.ಕರಿಸಿದ್ಧಪ್ಪನವರ ಮುಂಚೂಣಿಯಲ್ಲಿ ಯಂತ್ರಜ್ಞಾನಗಳ (ಇಂಜಿನಿಯರಿಂಗ್) ವಿಷಯಗಳಲ್ಲಿ ಕನ್ನಡ ವಿಜ್ಞಾನ ಬೋಧನೆಯ ಪ್ರಯತ್ನಗಳು ಪ್ರಾರಂಭವಾಗಿವೆ. ಇಲ್ಲಿನ ಮೊದಲನೆಯ ವರ್ಷದ ಯಂತ್ರಜ್ಞಾನ ಶಿಕ್ಷಣದ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕಗಳನ್ನು ಮುತುವರ್ಜಿ ವಹಿಸಿ ತಯಾರಿಸುತ್ತಿರುವುದು ಒಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಪಾತ್ರ ಪುರಾಣ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಅಕ್ಷರಶಃ ದೀಪವಾರಿದ ಮೇಲಿ ನಿಂಕ ದೀಪದ ಮಲ್ಲಿಯಾದಳು ಶಕುಂತಲೆ. ಅಷ್ಟು ದುರ್ಬಲವೇ ನಮ್ಮ ಪ್ರೇಮ? ಯಾವುದೋ ವಸ್ತುವಿನ ಅವಶ್ಯಕತೆ ಅನಿವಾರ್ಯ ಆಗುವಷ್ಚು? ದಿಕ್ಕುತಪ್ಪಿದಳು, ಏಕಾಂಗಿಯಾದಳು.ಶಕುಂತಲೆಗೆ ದುಷ್ಯಂತನ ಪರಿಚಯವಿತ್ತು.ಸಂಧಿಸಿದ ಕೂಡಲೇ ತನ್ನ ಗುರುತು ಹಿಡಿಯುವನೆಂಬ ಅಪಾರ ಆತ್ಮವಿಶ್ವಾಸವೂ ಇತ್ತು. ಅದಕ್ಕಾಗಿಯೇ, ಅವಳಿಗೆ ದುಷ್ಯಂತ ಗುರುತಿಗಾಗಿಯೇ ಕೊಟ್ಟಿದ್ದ ಉಂಗುರವನ್ನು ಅವಳು ಅಷ್ಟೊಂದು ಮಹತ್ವದ್ದಾಗಿ ಪರಿಗಣಿಸಲೇ ಇಲ್ಲ.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಆರನೆಯ ಬರಹ

Read More

ಹಕ್ಕಿಗಳ ವಿವಿಧ ಅಂಗಗಳ ವಿಕಾಸ: ಡಾ. ಎಸ್.ವಿ. ನರಸಿಂಹನ್‌‌ ಸರಣಿ

ಇತರ ಪ್ರಾಣಿಗಳಿಗಿರುವಂತೆ ಪಕ್ಷಿಗಳಿಗೆ ಹಲ್ಲುಗಳಿಲ್ಲ. ಮೇಲ್ದವಡೆ-ಕೆಳದವಡೆ ಸೇರಿ ಕೊಕ್ಕಾಗಿದೆ. ಈ ಕೊಕ್ಕು ಬೇಟೆಯನ್ನು ಹಿಡಿಯಲು ಅಥವಾ ಆಹಾರವನ್ನು ಸೇವಿಸಲು ಮತ್ತು ಆತ್ಮರಕ್ಷಣೆಗಾಗಿ ಬಳಸಲ್ಪಡುತ್ತವೆ. ಉದಾಹರಣೆಗೆ, ಹಲವಾರು ಜಾತಿಯ ಹಕ್ಕಿಗಳಿಗೆ ಕೀಟ, ಹುಳಗಳನ್ನು ತಿನ್ನುವ ಸ್ವಭಾವ. ಆದರೆ ಅವುಗಳನ್ನು ಹಿಡಿಯುವ ವಿಧಾನ ಬೇರೆ ಬೇರೆ. ನೊಣಹಿಡುಕ, ಜೇನುಮಗರೆಗಳು ಹಾರುತ್ತಿರುವ ಕೀಟಗಳನ್ನು ಅಟ್ಟಿಸಿಕೊಂಡು ಹೋಗಿ ಹಿಡಿದರೆ, ಮೈನಾ, ಚಂದ್ರಮುಕುಟಗಳು ನೆಲದ ಮೇಲಿಂದ ಹೆಕ್ಕಿ ತಿನ್ನುತ್ತವೆ ಹಾಗೂ ಮರಕುಟ್ಟಿಗಗಳು ಮರದ ತೊಗಟೆಯನ್ನು ಕುಕ್ಕಿ ಅದರೊಳಗಿಂದ ಕೀಟಗಳನ್ನು ಆರಿಸಿಕೊಳ್ಳುತ್ತವೆ.
ಡಾ. ಎಸ್.ವಿ. ನರಸಿಂಹನ್‌ ಬರೆಯುವ “ಹಕ್ಕಿಪಕ್ಷಿ ಚಿತ್ರ ಸಂಪುಟ” ಸರಣಿಯಲ್ಲಿ ಹಕ್ಕಿಗಳ ವಿವಿಧ ಅಂಗಗಳ ವಿಕಾಸದ ಕುರಿತ ಬರಹ

Read More

ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…” ಇಂದಿನಿಂದ

ನಡುನಡುವೆ ನಗುವಿನ ಅಲೆಗಳ ವಿನಿಮಯವಾಗಿದ್ದಷ್ಟೇ ನನಗೆ ಗೊತ್ತು. ಹತ್ತಾರು ಸಿಗಡಿಗಳು, ಸ್ವಲ್ಪ ಸ್ವಲ್ಪವೇ ಪುಡಿ ಮೀನುಗಳೊಂದಿಗೆ ಮರಳುವ ಧಾವಂತದಲ್ಲಿದ್ದರು. ಆದರೂ ನಾಲ್ಕಾರು ಮೀನುಗಳನ್ನೂ ನಮಗೂ ಕಟ್ಟಿಕೊಡಲು ಬಂದರು! ನಾವು ಬೇಡವೆಂದಿದ್ದಕ್ಕೆ ಬೇಸರಿಸಿಕೊಂಡರು. ನಾಲ್ಕಾರು ಸಿಗಡಿಗಳ ತೋರಿಸಿ ಕುಶಿ ಪಟ್ಟ. ಕಡಲ ಕಿನಾರೆಗೆ ಬಡಿದು ಬಡಿದೂ ಸವೆದ ಚಪ್ಪಲಿ ಹಾಕಿ ಹೊರಟಾಗ ಮನದ ಕರಳು ಚುರುಕ್‌ ಎಂದಿತು. ಭೈರವಿ ರಾಗದ ಆಲಾಪದಂತೆ ಭಾಸವಾದ ಅಲೆಗಳು ಅವಳ ಕಾಲಂದುಗೆಗೆ ಮತ್ತೆ ಮತ್ತೆ ಮುತ್ತಿಕ್ಕುತಾ ಖುಷಿಯಲ್ಲಿ ಮರಳುತ್ತಲಿದ್ದವು.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ “ಸಾಗುತ ದೂರ ದೂರ…”

Read More

ಎರಡು-ನಾಲಿಗೆಗಳ ನಡುವೆ ನಾನು!: ಸುಕನ್ಯಾ ಕನಾರಳ್ಳಿ ಅಂಕಣ

ಕರ್ನಾಟಕದಲ್ಲಿ ಕಲಿಯುವ ಮಕ್ಕಳ ಜೊತೆ ಒಂದು ಭಾವನಾತ್ಮಕ ಸಂಬಂಧವನ್ನು ಕಟ್ಟಿಕೊಳ್ಳುವುದಕ್ಕೆ ನನ್ನ ಕನ್ನಡ ಇನ್ನಿಲ್ಲದಂತೆ ಸಹಾಯ ಮಾಡಿದೆ. ಕೆಲವೊಮ್ಮೆ ಪರಿಕಲ್ಪನೆಗಳನ್ನ ಅರ್ಥಮಾಡಿಸುವಾಗ ಬಳಸಿಕೊಳ್ಳುತ್ತಿದ್ದ ದಿನನಿತ್ಯದ ಉದಾಹರಣೆಗಳಿಗೆ ಮತ್ತು ಹಾಸ್ಯಕ್ಕೆ ಕನ್ನಡವೇ ಜೀವವಾಗಿರುತ್ತಿತ್ತು. ಅದನ್ನೇ ಇಂಗ್ಲೀಷಿನಲ್ಲಿ ಹೇಳಿದ್ದಿದ್ದರೆ ಮಕ್ಕಳು ನಗುವುದಿರಲಿ, ನನಗೇ ಅಳು ಬರುತ್ತಿತ್ತೋ ಏನೋ. ಆದರೂ ಹೊರನಾಡಿನಿಂದ ಬಂದಿದ್ದ ಕೆಲವು ಮಕ್ಕಳಿಗೆ ಇಂಗ್ಲೀಷಿನಲ್ಲೂ ಹೇಳುವ ಪ್ರಯತ್ನ ಮಾಡುತ್ತಿದ್ದೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಹನ್ನೊಂದನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ