Advertisement

Tag: ಕೆಂಡಸಂಪಿಗೆ

ರಂಗದ ನಂಟು ಅಂಟಿದ ಬಗೆ: ಚಿತ್ರಾ ವೆಂಕಟರಾಜು ಸರಣಿ

ನಾಟಕೋತ್ಸವ ಮುಗಿದು ಅವರೆಲ್ಲ ಹೊರಟುಹೋದ ಮೇಲೆ ಮತ್ತೆ ನಮ್ಮ ದಿನಚರಿಗೆ ಹೊಂದಿಕೊಳ್ಳುವುದಕ್ಕೆ ಬಹಳ ಸಂಕಟವಾಗುತ್ತಿತ್ತು. ಕಿಂದರಿಜೋಗಿಯ ಕುಂಟನಂತೆ ‘ಅಯ್ಯೋ ಹೋಯಿತೆ ಆ ನಾಕ, ಅಯ್ಯೋ ಬಂದಿತೆ ಈ ಲೋಕʼ ಎನ್ನುವ ಭಾವನೆ ಬರುತ್ತಿತ್ತು. ಈಗಿನಷ್ಟು ನಾಟಕ ಪ್ರಯೋಗಗಳು ನೋಡಲು ಸಿಗುತ್ತಿರಲಿಲ್ಲವಾದ್ದರಿಂದ ನೀನಾಸಮ್‌ ತಿರುಗಾಟವನ್ನು ನಾವು ಕರೆಸಿದಷ್ಟು ವರ್ಷಗಳೂ ನಾಟಕ ಮಾಡಬೇಕು ಅನ್ನೋ ಆಸೆ ಹೆಚ್ಚಾಗುತ್ತಿತ್ತು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಕ್ವಾಲಿಫಿಕೇಷನ್ ಇದ್ದ ಮಾತ್ರಕ್ಕೆ ವ್ಯಕ್ತಿ ಶ್ರೇಷ್ಠವೆಂದು ಅಲ್ಲ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಹೆಚ್ಚೆಚ್ಚು ಓದಿದಂತೆ ಶಿಕ್ಷಣವು ನಮ್ಮಲ್ಲಿ ಉದಾರತೆಯನ್ನು ಬೆಳೆಸಬೇಕಿತ್ತು. ಹೃದಯ ವೈಶಾಲ್ಯತೆಯನ್ನು ಬೆಳೆಸಬೇಕಿತ್ತು. ಎಲ್ಲರೊಡನೆ ಹೊಂದಿಕೊಂಡು ಹೋಗುವ ಗುಣವನ್ನು ಬೆಳೆಸಬೇಕಿತ್ತು. ಆದರೆ ಕ್ವಾಲಿಫಿಕೇಶನ್ ಅನ್ನುವುದು ನಮ್ಮಲ್ಲಿ ಅಹಂಕಾರವನ್ನು ಬೆಳೆಸುತ್ತಿದೆ. ನಮ್ಮಲ್ಲಿ ಸಂಕುಚಿತತೆಯನ್ನು ಮೂಡಿಸುತ್ತಿದೆ. ಹೊಂದಾಣಿಕೆಯ ಕೊರತೆಯನ್ನು ಮೂಡಿಸುತ್ತಿದೆ. ಕೆಲವರು ಈ ಮನೋಭಾವ ತೋರುವುದಿಲ್ಲವಾದರೂ ಬಹುತೇಕರು ಇದೇ ರೀತಿಯ ಮನೋಭಾವ ತೋರುತ್ತಾರೆಂಬುದು ನನ್ನ ಅನುಭವಕ್ಕೆ ಬಂದಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ಮೂರನೆಯ ಕಂತು ನಿಮ್ಮ ಓದಿಗೆ

Read More

ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು” ಇಂದಿನಿಂದ

ಕೇವಲ ಕೆಲ ಬೇಸಿಗೆ ಶಿಬಿರಗಳು, ಅರೆ ವಾರ್ಷಿಕ ಕೋರ್ಸುಗಳು, ಶಾಲಾ ವಾರ್ಷಿಕೋತ್ಸವದಲ್ಲಿ ಮಕ್ಕಳು ಆಡುವ ನಾಟಕಗಳು ಮಾತ್ರವಿದ್ದರೆ ಸಾಲದು. ಇದನ್ನೂ ಮೀರಿ ಮಕ್ಕಳ ರಂಗಭೂಮಿ ಬೆಳೆಯಬೇಕಿದೆ. ಕೇವಲ ಕಲೆಯ ದೃಷ್ಟಿಯಿಂದ ಮಾತ್ರವಲ್ಲ, ಮಕ್ಕಳೊಳಗಿನ ಆತ್ಮವಿಶ್ವಾಸ ಹೆಚ್ಚಾಗಲು, ಭಾಷಾ ಕಲಿಕೆಗೆ, ಸ್ಪಷ್ಟ ಉಚ್ಚಾರಣೆಗೆ, ಪಾತ್ರಗಳ ಮೂಲಕ ಭಿನ್ನ ವ್ಯಕ್ತಿತ್ವಗಳನ್ನು ಅರಿಯುವುದಕ್ಕೆ, ನಾಲ್ಕು ಜನರೊಂದಿಗೆ ಬೆರೆಯುವುದಕ್ಕೆ, ಆರೋಗ್ಯಕರ ಮನಸ್ಥಿತಿ ಬೆಳೆಸಿಕೊಳ್ಳುವುದಕ್ಕೆ ಮಕ್ಕಳ ರಂಗಭೂಮಿ ಪೂರಕವಾಗಬಲ್ಲದು. ಬಣ್ಣ ಮತ್ತು ಬೆಳಕಿನ ಜೋಡಿಯ ಮೋಡಿ ಸಮಸ್ತ ಪ್ರಜೆಗಳ ಮೇಲಾಗಲಿ.
ಜಯಲಕ್ಷ್ಮಿ ಪಾಟೀಲ್ ಬರೆಯುವ ಹೊಸ ಅಂಕಣ “ಗರ್ದಿ ಗಮ್ಮತ್ತು”

Read More

ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಸಾಂಗತ್ಯ”

ಯಶೋದಳಿಗೆ ಮುಂದೆ ಮಾತನಾಡಲು ಆಗಲಿಲ್ಲ. ಅವಳು ಬಿಕ್ಕಿದಳು. ಅವಳ ಕಣ್ಣಿನಿಂದ ಒಂದೇಸಮನೆ ನೀರು ಇಳಿಯುತ್ತಿತ್ತು. ಅಷ್ಟರಲ್ಲಿ ಮಗುವನ್ನು ಕರೆದುಕೊಂಡು ಮಾದೇವಿ ಬಂದಳು. ಮಗುವನ್ನು ಎತ್ತಿಕೊಂಡ ಯಶೋದ ಮಗುವನ್ನು ಹೆಗಲಿಗೆ ಹಾಕಿಕೊಂಡು ಎದ್ದು ನಿಂತಳು. ಅವಳನ್ನು ಒಳಗೆ ಕರೆದುಕೊಂಡು ಹೋಗುವಂತೆ ಪ್ರಕಾಶ ಮಾದೇವಿಗೆ ಸೂಚಿಸಿದ. ಕೀಕೊಟ್ಟ ಬೊಂಬೆಯಂತೆ ಯಶೋದ ಮಾದೇವಿಯನ್ನು ಅನುಸರಿಸಿದಳು. ಅವಳಿಗೆ ಯಾವುದೋ ಆಘಾತವಾಗಿರಬೇಕು ಎಂದು ಪ್ರಕಾಶ ತರ್ಕಿಸಿದ. ನಿಧಾನವಾಗಿ ಅದನ್ನು ಹೊರತೆಗೆಯಬೇಕು. ಒಂದೆರಡು ದಿನದವರೆಗ ಕಾಯಬೇಕು.
ಚಂದ್ರಮತಿ ಸೋಂದಾ ಬರೆದ ಕತೆ “ಸಾಂಗತ್ಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಹೊಸ ಬದುಕಿಗೆ ಬಿದ್ದ ಬುನಾದಿ: ಜುಲೇಖಾ ಬೇಗಂ ಜೀವನ ವೃತ್ತಾಂತ

ಬಿಡುವಿದ್ದಾಗೆಲ್ಲ ಅವರ ಮನೆಗೆ ಹೋಗುವುದು ಸಾಮಾನ್ಯವಾಯಿತು. ಸುಮ್ಮನಿರುವ ಗೆಜ್ಜೆ ನನ್ನ ಮನಸ್ಸಲ್ಲೇನೊ ಸದ್ದು ಮಾಡಿದರಂತೆ. ‘ನಾನೂ ಗೆಜ್ಜೆ ಕಟ್ಬೇಕು. ಕಟ್ರಿ’ ಎಂದು ಅಲವತ್ತುಕೊಂಡೆ. ‘ಹಾಗೆಲ್ಲ ಕಟ್ಬಾರ್ದವ್ವಾ, ದೇವ್ರಿಗೆ ಪೂಜೆ ಮಾಡಿ ಕಟ್ಟೋದು ಗೊತ್ತೇನು?’ ಎಂದು ಸುಮ್ಮನಿರಿಸಲು ನೋಡಿದರು. ಬಿಡುವವಳಲ್ಲ ನಾನು, ‘ಹಾಂ, ನಾನೂ ಪೂಜೆ ಮಾಡ್ತೇನಿ. ಕಟ್ರಲಾ’ ಎನ್ನುತ್ತಿದ್ದೆ. ನನ್ನ ಚಾಲಾಕಿತನ ಕಂಡು ನಕ್ಕು, ತಲೆ ಬಡಿದುಕೊಂಡು, ‘ನಿಮ್ಮವ್ವ ಬಿಟ್ಟಾಳ ನಮ್ಮನ್ನ, ಕಸಬರಿಕಿ ತಗೊಂಡು ಓಡ್ಸ್ಕೋತಾ ಬರ್ತಾರ’ ಎಂದು ತಮಾಷೆ ಮಾಡಿಬಿಡುತ್ತಿದ್ದರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ