Advertisement

Tag: ಕೆಂಡಸಂಪಿಗೆ

ಮನೆಯಂಗಳದ ನಾಕವೀ ಹೂವಿನಲೋಕ: ಭವ್ಯ ಟಿ.ಎಸ್. ಸರಣಿ

ಈ ಹೂ ಮುಡಿಯುವ ವಿಷಯದಲ್ಲಿ ಒಂದು ರೀತಿಯ ಸ್ಪರ್ಧೆಯಿದ್ದ ಕಾಲವದು. ತಾವು ಮುಡಿದು, ಗೆಳತಿಯರಿಗೂ ತರುವವರೂ ಇದ್ದರು. ಆದರೆ ನನ್ನ ಜಡೆ ಏರುತ್ತಿದ್ದ ಈ ಸೊಬಗಿನ ಡೇರೆ ಹೂಗಳ ಮೇಲೆ ಗೆಳತಿಯರ ಕಣ್ಣು. ಅವರ ಆಸೆಗೆ ಮಣಿದು ಸಂಜೆಯಾದರೂ ಬಾಡದೇ ನಗುತ್ತಿದ್ದ ಡೇರೆ ಹೂವನ್ನು ಮುಡಿಯಿಂದ ತೆಗೆದು ಕೊಟ್ಟು ಬಂದದ್ದು ಇತ್ತು. ಈ ಡೇರೆಯ ವೈಜ್ಞಾನಿಕ ಹೆಸರು ಡೇಲಿಯಾ. ಇದು ಬೇಸಿಗೆಯಲ್ಲಿ ಬೆಳೆಯಲಾರದು. ಬೇಸಿಗೆಯಲ್ಲಿ ಇದರ ಗೆಡ್ಡೆಗಳನ್ನು ಒಣ ಮಣ್ಣಿನಲ್ಲಿ ಸಂಗ್ರಸಿಟ್ಟು, ಮಳೆ ಬಿದ್ದೊಡನೆ ನೆಲಕ್ಕೆ ಅಥವಾ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಟ್ಟು ಬೆಳೆಯುತ್ತಾರೆ.
ಭವ್ಯ ಟಿ.ಎಸ್. ಬರೆಯುವ “ಮಲೆನಾಡಿನ ಹಾಡು-ಪಾಡು” ಸರಣಿ

Read More

ನಾಟಕಗಳ ನಾಟಕ: ಸುಮಾ ಸತೀಶ್ ಸರಣಿ

ನಮ್ಮಪ್ಪುಂಗೆ ನಾಟಕ ಅಂದ್ರೆ ಹುಚ್ಚು. ನಮ್ಮೂರ್ನಾಗೇನೂ ನಾಟಕದ ಕಂಪನಿ ಇರ್ಲಿಲ್ಲವಲ್ಲ. ವರ್ಸುಕ್ಕೆ ಒಂದೋ ಎಲ್ಡೋ ಆಟೇಯಾ. ಮಾಸ್ಟರ್ ಹಿರಣ್ಣಯ್ಯ ಅವುರ್ದು ಎಲ್ಲಾ ನಾಟಕದ ಕ್ಯಾಸೆಟ್ಟೂ ಇದ್ವು. ಟೇಪ್ ರೆಕಾರ್ಡರ್ ನಾಗೆ ಜಿನಾ ಅದ್ನೇ ಕೇಳೋದು. ಒಂದೊಂದು ನಾಟಕವೂ ನೂರಾರು ಸತಿ ಕೇಳಿದ್ವಿ. ಎಚ್ಚಮ ನಾಯಕ, ಕಪಿಮುಷ್ಟಿ, ಭ್ರಷ್ಟಾಚಾರ, ಲಂಚಾವತಾರ, ಫೋನಾವತಾರ, ದೇವದಾಸಿ, ನಡುಬೀದಿ ನಾರಾಯಣ…ಕೇಳೀ ಕೇಳೀ ನಮ್ಗೆ ಬಾಯಿ ಪಾಟ ಆಗೋಗ್ತಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ತಮ್ಮ ಊರಿನಲ್ಲಿ ನಡೆಯುತ್ತಿದ್ದ ನಾಟಕಗಳ ಕುರಿತು ಬರೆದಿದ್ದಾರೆ

Read More

ತಮ್ಮ ಬೆಂಗಳೂರಿಗೆ ಬಂದ..: ವಿನಾಯಕ ಅರಳಸುರಳಿ ಲಲಿತ ಪ್ರಬಂಧ

ಕೊಂಚ ಸ್ಥಿತಿವಂತರಾಗಿದ್ದ ಪಕ್ಕದ ಮನೆಯ ಅಣ್ಣನ ಮಗನ ಬರ್ತಡೇ ಪಾರ್ಟಿಯಲ್ಲಿ ತಿನ್ನಲು ಸಿಕ್ಕ ಚಿಕ್ಕ ಕೇಕ್‌ನ ತುಣುಕನ್ನೇ ಸ್ವರ್ಗ ಲೋಕದ ತಿನಿಸೆಂಬಂತೆ ಅದೊಂದು ದಿನ ತಿಂದಿದ್ದೆವು. ಇನ್ನೊಂದು ಪೀಸ್ ಬೇಕು ಎಂಬ ಆಸೆಯನ್ನು ಬಾಯಲ್ಲೇ ಇಟ್ಟುಕೊಂಡು ಕೈ ತೊಳೆದಿದ್ದೆವು. ಯಾರೋ ತುಂಡೊಂದನ್ನು ಬೇಡವೆಂದು ತಟ್ಟೆಯಲ್ಲೇ ಬಿಟ್ಟಾಗ ಅದು ನಮಗೆ ಸಿಗುವುದೇನೋ ಎಂದು ಆಸೆಯಿಂದ ಕಾದಿದ್ದೆವು. ಇಂತಿಪ್ಪ ಅಪೂರ್ಣ ಬಯಕೆಗಳ ಬಾಲ್ಯವನ್ನೇ ಕಳೆದ ತಮ್ಮನಿಗೆ ಈಗಲೂ ಈ ಪಟ್ಟಣದ ವಿಶೇಷ ತಿಂಡಿಗಳ ಬಗ್ಗೆ ಆಸೆಯಿದ್ದರೆ ಅದರಲ್ಲಿ ಯಾವ ತಪ್ಪಾಗಲೀ, ಅತಿಯಾಸೆಯಾಗಲೀ ನನಗೆ ಕಾಣಲಿಲ್ಲ.
ವಿನಾಯಕ ಅರಳಸುರಳಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ರಾಜಲಕ್ಷ್ಮಿ ಎನ್. ರಾವ್ ಬರೆದ ಕತೆ “ಸ್ವಾತಂತ್ರ್ಯ ದಿನ”

ಮತ್ತೆ ದೃಷ್ಟಿ ಜನರಿಂದ ದೂರ ಹೋಯಿತು. ಇಬ್ಬನಿಯ ಅವಕುಂಠನವನ್ನು ಕಳೆದುಕೊಂಡು ಹೂಗಳು ಮುಗ್ಧತೆಯನ್ನು ಕಳೆದುಕೊಂಡು ಕಠಿಣರಾದ ನಿರಸನಿಗಳಂತೆ ರಾವು ಬಡಿಯುವ ಬಣ್ಣಗಳನ್ನು ತೋರುತ್ತಿದ್ದವು. ಬಾವುಟ ಬಿಸಿಲಿನ ತೀಕ್ಷ್ಣತೆಗೆ ಸೋತು ಮಲಗಿತ್ತು. ಆಕಾಶದ ಒಂದು ಭಾಗದಲ್ಲಿ ಬೂದು ಬಣ್ಣದ ಮೋಡಗಳು ಇಕ್ಕಟ್ಟಾಗಿ ಮಲಗಿದ್ದವು. ಸ್ಲಮ್ ಪ್ರದೇಶ, ಇಂದೊಂದೇ ದಿನ ಆಕಾಶದಲ್ಲಿ ಈ ಮೋಡಗಳಿಗೆ ಜಾಗ, ಮತ್ತೆ ನಾಳಿನಿಂದ ಆಕಾಶದ ತುಂಬ ಕಾರ್ಖಾನೆ ಹೊಗೆಯ ಮೋಡಗಳು, ನಾಳಿನಿಂದ ಆಕಾಶ ತಿಪ್ಪೆ…
ಹಿರಿಯ ಕತೆಗಾರ್ತಿ ರಾಜಲಕ್ಷ್ಮಿ ಎನ್. ರಾವ್ ಬರೆದ ಸಮಗ್ರ ಕತೆಗಳನ್ನು ಚಂದನ್‌ ಗೌಡ “ಸಂಗಮ” ಎಂಬ ಶೀರ್ಷಿಕೆಯಡಿಯಲ್ಲಿ ಪ್ರಕಟಿಸಿದ್ದು, ಈ ಸಂಕಲನದ “ಸ್ವಾತಂತ್ರ್ಯ ದಿನ” ಕತೆ ನಿಮ್ಮ ಓದಿಗೆ

Read More

ಉಪವಾಸ ವ್ರತದ ಅನುಭವಗಳು: ದರ್ಶನ್‌ ಜಯಣ್ಣ ಸರಣಿ

ನನ್ನ ಹೆಂಡತಿಯನ್ನು ತೋರಿಸಿ “ಆಕೆ ಕ್ಯಾರಿಯಿಂಗ್” ಅಂದೆ. ಆಕೆಯ ಮುಖ ಪೆಚ್ಚಾಯಿತು! ಅವಳ ಸೂಪರ್ವೈಸರ್‌ಗೆ ಫೋನಾಯಿಸಿ ಕೇಳಿದಳು. ಒಂದಷ್ಟು ಮಾತೂ ಕಥೆಯಾದಮೇಲೆ ಕೊಟ್ಟಳು. ನಾನು ಧನ್ಯವಾದ ಹೇಳಿ ಅದನ್ನು ಪಡೆದು ಕ್ಯಾಪ್ ತೆಗೆಯುವಾಗ “ಸರ್ ಮ್ಯಾಡಂ ಪ್ಲೀಸ್ ಅದನ್ನು ಇಲ್ಲಿ ಕುಡಿಯಬೇಡಿ” ಅಂದಳು. ನಾನು “ಇದು ಕ್ಯಾಂಟೀನ್, ಇಲ್ಲಿ ಬೇಡ ಎಂದರೆ ಹೊರಗೆ ಸಾಧ್ಯವೇ ಇಲ್ಲ” ಎಂದು ನನ್ನ ಅಸಹಾಯಕತೆ ತೋರಿದೆ. ಅದಕ್ಕವಳು ನನ್ನ ಹೆಂಡತಿಯನ್ನು ಕುರಿತು “ಮ್ಯಾಡಂ ನೀವು ಅದನ್ನು ನಿಮ್ಮ ವ್ಯಾನಿಟಿ ಬಾಗ್‌ನಲ್ಲಿ ಇಟ್ಟುಕೊಂಡು, ಟಾಯ್ಲೆಟ್‌ನ ಒಳಗೆ ಹೋಗಿ ಕುಡಿದು ಬನ್ನಿ ಪ್ಲೀಸ್!” ಅಂದಳು.
ದರ್ಶನ್‌ ಜಯಣ್ಣ ಬರೆಯುವ “ಸೌದಿ ಡೇಟ್ಸ್”‌ ಸರಣಿಯ ಆರನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ