Advertisement

Tag: ಕೆಂಡಸಂಪಿಗೆ

ಅಮ್ಮನ ದ್ಯಾವ್ರು: ಸುಮಾ ಸತೀಶ್ ಸರಣಿ

ಅವು ಈಗಿನ್ ಕಾಲುದ್ ಗುಲಾಬಿ ಅಲ್ಲ್ ಕಣೇಳಿ. ರೋಜಾ ಬಣ್ದವು. ತೆಳ್ಳುಗಿರಾ ರೆಕ್ಕೆಗ್ಳು. ಬಲ್ ನಾಜೂಕು. ಗಟ್ಟಿಯಾಗಿ ಒತ್ತಿದ್ರೆ ಬಾಡೋಗೋಂತವು. ಚಿಕ್ಕದಾದ್ರೆ ಐದು ಪೈಸಾ. ದೊಡ್ಡವು ಹತ್ತು ಪೈಸಾ. ಸ್ಯಾನೇ ದೊಡ್ಡವು ನಾಕಾಣೆ. ಮನ್ಯಾಗೆ ಇರಾ ಚಿಲ್ರೆ ಹುಡುಕೀ ಹುಡುಕೀ ಅಮ್ಮ‌ ರಾತ್ರೀನೇ ರೆಡಿ ಇಕ್ಕಿರ್ತಿತ್ತು. ಮದ್ಲೇ ಗೊತ್ತಿರ್ತಿತ್ತಲ್ಲ. ಆದ್ರೂ ಸತ ಗುಲಾಬಿ ಸ್ಯಾನೆ ಇದ್ರೆ ಆಸೆ. ಅವುನ್ ತಾವ ಕೊಸರಾಡೋದು. ಇನ್ನೊಂದು ಹಾಕು, ಇದು ಚಿಕ್ದು, ಇದು ರೆಕ್ಕೆ ಕಿತ್ತೋಗದೆ, ಬಾಡೋಗದೆ, ಸಿಕ್ಕಾಪಟ್ಟೆ ಕಾಸು ಯೋಳ್ತೀಯಾ. ನಾಳಿಂದ ಬ್ಯಾಡಾಕ್ಕೆ ಬ್ಯಾಡ ಇಂಗೆ ನಮ್ಮಮ್ಮುನ್ ಕೂಗಾಟ. ಅವ್ನೂ ಕಮ್ಮಿ ಇರ್ತಿರ್ಲಿಲ್ಲ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ ಬರಹ ನಿಮ್ಮ ಓದಿಗೆ

Read More

ಅತಿ ವಿನಯಂ ಧೂರ್ತ ಲಕ್ಷಣಂ!!: ಬಸವನಗೌಡ ಹೆಬ್ಬಳಗೆರೆ ಸರಣಿ

ನೇರವಾದಿಯಾಗಿದ್ದರಿಂದ ನನಗೆ ಟಿಸಿಹೆಚ್ ನಲ್ಲಿ ನಮ್ಮಂತಹ ಕೆಲವರನ್ನು ಹತ್ತಿಕ್ಕುವ ಪ್ರಯತ್ನವು ನಡೆಯುತ್ತಿತ್ತೇ ವಿನಃ ಯಾರೂ ನಮಗೆ ಸಪೋರ್ಟ್ ಮಾಡಲಿಲ್ಲ. ಈ ರೀತಿಯ ಸ್ಥಿತಿ ಇದ್ದುದರಿಂದ ನಾವು ಯಾವುದೇ ಅಸೈನ್ ಮೆಂಟ್ ಅನ್ನು ಕಾಲಕಾಲಕ್ಕೆ ಬರೆದು ಕೊಡುತ್ತಿದ್ದೆವು. ಇನ್ನು ಪ್ರಾಕ್ಟೀಸ್ ಟೀಚಿಂಗ್‌ನಲ್ಲಿ ಒಂದು ಸಣ್ಣ ತಪ್ಪಿಗೂ ಅವಕಾಶ ಮಾಡಿಕೊಡ್ತಾ ಇರಲಿಲ್ಲ. ಆಗ ನಾವು ಪ್ರಾಕ್ಟಿಕಲ್ ಕ್ಲಾಸ್ ಕೊಡಬೇಕಾಗಿತ್ತು. ಅದಕ್ಕೆ ಒಂದು ಅವಧಿಯ ಪಾಠಕ್ಕೆ 50 ಅಂಕಗಳು ಇದ್ದವು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೆರಡನೆಯ ಕಂತು ನಿಮ್ಮ ಓದಿಗೆ

Read More

“ಗೇದುಣ್ಣುವವರೇ ಬದುಕದ ಕಾಲದಲ್ಲಿ ಹುಟ್ಟುವ ಕತೆಗಳಾದರೂ ಉಳಿಯುತ್ತವೆ”: ಹೃದಯ ಶಿವ ಕಥಾಸಂಕಲನಕ್ಕೆ ಸ್ವಾಮಿ ಪೊನ್ನಾಚಿ ಬರಹ

ಹೃದಯಶಿವ ಅವರ ಕಥೆಗಳನ್ನು ಓದುವ ಕುತೂಹಲದ ಮಜವೇ ಬೇರೆ. ಕನಕಪುರದ ಕೆಬ್ಬರೆ ಗ್ರಾಮದಲ್ಲಿ ಶುರುವಾದ ಕಥೆ ಬೆಂಗಳೂರಿನ ಸಿನಿಮಾರಂಗದಲ್ಲಿ ಬಂದು ನಿಲ್ಲುತ್ತದೆ. ವೈಯಕ್ತಿಕ ದನಿಯ ಆಚೆಗೆ ಕತೆಗಳು ವಿಸ್ತಾರಗೊಳ್ಳುತ್ತಾ ಸಮಷ್ಟಿಯೆಡೆಗೆ ಹೋಗುತ್ತವೆ. ಬದುಕಿನ ಪರಸ್ಪರ ವೈರುಧ್ಯಗಳೇ ಹೆಚ್ಚು ಕಥೆಗಳಲ್ಲಿ ಕಾಣಿಸಿಕೊಳ್ಳುತ್ತದೆ. ಕಥೆ ಓದುವಾಗ ಶುರುವಾಗುವ ನೆಗೆಟಿವ್ ಕಾಂಪ್ಲೆಕ್ಸ್ ಕೊನೆಯಲ್ಲಿ ಪಾಸಿಟಿವ್ ಆಗಿರುತ್ತದೆ. ಭರವಸೆ, ಆಶಾಭಾವ ಕಥೆಗಳಲ್ಲಿ ವ್ಯಕ್ತವಾಗುತ್ತವೆ.
ಹೃದಯ ಶಿವ ಹೊಸ ಕಥಾಸಂಕಲನ “ಸೂಪರ್ ಗಾಡ್ ಸಣ್ಣಯ್ಯ” ಕೃತಿಗೆ ಸ್ವಾಮಿ ಪೊನ್ನಾಚಿ ಮುನ್ನುಡಿ

Read More

ಧರ್ಮ ಮತ್ತು ಮೃತ್ಯು: ಸುಮಾವೀಣಾ ಸರಣಿ

‘ವಾಲ್ಪರೈ ಅಭಿವೃದ್ಧಿ ತಂದ ದುರಂತ’ ಈ ಬರಹವನ್ನು ಓದಿದಾಗ ದಿಗ್ಭ್ರಾಂತವಾಯಿತು. ಸಿಂಹಬಾಲದ ಕೋತಿಗಳನ್ನು ಮೊದಲುಗೊಂಡಂತೆ ಅನೇಕ ಪಕ್ಷಿ ಪ್ರಭೇದಗಳು ಅಳಿವಿನಂಚಿಗೆ ಸರಿದದ್ದು. ತಮ್ಮದಲ್ಲದ ಜೀವನ ಶೈಲಿಗೆ ಹೊಂದಿಕೊಳ್ಳಹೋಗಿ ಸಿಂಹ ಬಾಲದ ಕೋತಿಗಳು ಶಾಶ್ವತ ಅಂಗವಿಕಲತೆಯನ್ನು ಪಡೆದಿದ್ದವು ಎಂದು ಅವುಗಳ ನರಳಾಟ ನೋಡದೆ ದಯಾಮರಣ ನೀಡುವ ಬಗ್ಗೆ ಮಾತನಾಡಿದರೂ ಸರಕಾರ ಅಳಿವಿನಂಚಿನಲ್ಲಿರುವ ಪ್ರಭೇದ ಎನ್ನುವ ಕಾರಣಕ್ಕೆ. ದಯಾಮೃತ್ಯು ಕೋಟಿ ಗಳಿಸಿದರು ಅಳಿದ ಸಿಂಹಬಾಲದ ಕೋತಿ ಸಂತತಿಯನ್ನು ಗಳಿಸಲಾಗುವುದಿಲ್ಲ ಅಲ್ವೆ! ಈ ದಯಾಮರಣಕ್ಕೂ ಕರ್ನಾಟಕಕ್ಕೂ ಬಿಡದ ನಂಟು ಅನ್ನಿಸುತ್ತದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿಯ ಇಪ್ಪತ್ಮೂರನೆಯ ಬರಹ ನಿಮ್ಮ ಓದಿಗೆ

Read More

ದುಡ್ಡು ಬರ್ಲಿ ಐಸಾ… ಇನ್ನೂ ಕೊಡಿ ಐಸಾ…!: ಎಚ್. ಗೋಪಾಲಕೃಷ್ಣ ಸರಣಿ

ಅದರ ಮಾರನೇ ದಿವಸ ಹೋಗಿ ಭರಮಪ್ಪನ ಎದುರು ನಿಂತೆ. ಒಂದು ಗಂಟೆ ಕಾದೆ. ನನ್ನ ಕಡೆ ತಿರುಗಿ ನೋಡಲು ಸಹ ಅವರಿಗೆ ಪುರುಸೊತ್ತು ಇಲ್ಲರ. ಐದನೇ ದಿವಸವೂ ಇದೇ ರಿಪೀಟ್ ಆಯ್ತು. ಆರನೇ ದಿವಸ ಭಾನುವಾರ. ತೆಪ್ಪಗೆ ಮನೇಲೆ ಇದ್ದು ನನ್ನ ಅದೃಷ್ಟಕ್ಕೆ ಗಂಟೆ ಗಂಟೆಗೂ ಕೋಲಿನಿಂದ ಬಾರಿಸುತ್ತಾ ಕಳೆದೆ. ಸೋಮವಾರ ಬೆಳಿಗ್ಗೆ ಮತ್ತೆ ಕೆಇಬಿ ಆಫೀಸಿಗೆ ದಂಡ ಯಾತ್ರೆ ಮಾಡಿದೆ. ಜಗನ್ನಾಥ, ಅದೇ ಲೈನ್ ಮ್ಯಾನ್ ದಾರೀಲಿ ಸಿಕ್ಕಿದ. ನನ್ನನ್ನು ನೋಡಿ ಅವನ ಲೂನಾ ನಿಲ್ಲಿಸಿದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೈದನೆಯ ಕಂತು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ