Advertisement

Tag: ಕೆಂಡಸಂಪಿಗೆ

ಜಗತ್ತಿನ ಅತ್ಯಂತ ಸುಂದರ ಫೋಟೋ(2):ಶೇಷಾದ್ರಿ ಗಂಜೂರು ಸರಣಿ

ಈ ಆಲೋಚನೆ ಹೊಳೆದ ರಾತ್ರಿ ಅವನಿಗೆ ನಿದ್ದೆಯೇ ಬರಲಿಲ್ಲ. ಕಾಲೇಜಿನ ಇನ್ನೊಬ್ಬ ಪ್ರೊಫೆಸರ್ ಕೊಟ್ಟಿದ್ದ ಹೋಂ ವರ್ಕ್ ಮಾಡಲೂ ಸಹ ಮನಸು ಬರಲಿಲ್ಲ. ಬದಲಿಗೆ, ಹಾಸಿಗೆಯಿಂದೆದ್ದು, ಇಲ್ಲಿಯವರೆಗೆ ಕಲೆ ಹಾಕಿದ್ದ ಅಂಕಿ-ಸಂಖ್ಯೆಗಳು-ಮಾಹಿತಿಗಳನ್ನೆಲ್ಲಾ ಮತ್ತೆ-ಮತ್ತೆ ನೋಡಿ, ಸಣ್ಣ ಕಾಗದದ ಮೇಲೊಂದು ದಾರದಂತೆ ಗೆರೆಯೊಂದನ್ನು ಎಳೆದು ಅದರ ಮೇಲೆ, ತನ್ನ ಲೆಕ್ಕಾಚಾರ ಬಳಸಿ ಬಿಳಿಗಣ್ಣು, ಹಳದಿ ಬಣ್ಣ, ಕಿರು ರೆಕ್ಕೆ, ಹಾರೆಗಣ್ಣು ಇತ್ಯಾದಿ ಜೀನುಗಳನ್ನು ಮಾರ್ಕ್ ಮಾಡಿದ. ವಂಶವಾಹಿ ಗುಣಗಳು ಒಂದು ಪೀಳಿಗೆಯಿಂದ ಇನ್ನೊಂದಕ್ಕೆ ಹೇಗೆ ಸಂವಹಿಸುತ್ತದೆ ಎಂದು ತೋರುವ “ಜೀನ್ ಮ್ಯಾಪ್” ಒಂದು ಹೀಗೆ ಮಾನವ ಇತಿಹಾಸದಲ್ಲೇ ಮೊದಲ ಬಾರಿಗೆ ಸಿದ್ಧವಾಯಿತು.
ಶೇಷಾದ್ರಿ ಗಂಜೂರು ಬರೆಯುವ ವಿಜ್ಞಾನ ಸರಣಿ “ವಿಜ್ಞಾನದ ಕಥಾ ಪ್ರಸಂಗಗಳು”

Read More

ಮಳೆ, ನೆನಪು ಮತ್ತು ಸಂಬಂಧ: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಯಾವುದೂ ಕಳೆದು ಹೋಗದ ಹೊರತಾಗಿ ಅದರ ಮೌಲ್ಯ ನಮಗೆ ಗೊತ್ತಾಗುವುದಿಲ್ಲ ಅನ್ನುವುದೇ ಈ ಬದುಕಿನ ಅತಿದೊಡ್ಡ ವಿಪರ್ಯಾಸ. ಪ್ರತೀ ಕ್ಷಣವನ್ನೂ ಉತ್ಕಟವಾಗಿ ಜೀವಿಸಬೇಕು ಅಂದುಕೊಳ್ಳುವ ಒಂದು ಫಿಲಾಸಫಿ ಶುರು ಆಗುವುದೇ ಈ ಕಳೆದುಹೋದ ಫೀಲ್ ಬಂದ ನಂತರವೇ. ಅಷ್ಟರಲ್ಲಾಗಲೇ ನಮ್ಮ ಅರ್ಧ ಆಯುಷ್ಯ ಮುಗಿದುಹೋಗಿರುತ್ತದೆ. ಇನ್ನು ದಿನಗಳು ಕಮ್ಮಿ ಅನ್ನುವ ಅರಿವಾಗುವಾಗ ಈ ಪ್ರತೀಕ್ಷಣವನ್ನೂ ಉತ್ಕಟವಾಗಿ ಬದುಕುವ ಆಸೆಯೊಂದು ಹುಟ್ಟಿಕೊಳ್ಳುತ್ತದೆ. ಆದರೆ ಹಾಗೆ ಬದುಕುತ್ತೇವಾ? ಹೇರಿಕೊಂಡ ಜವಾಬ್ದಾರಿಯ ಮೂಟೆಗಳನ್ನು ಇಳಿಸಿ ಹಗುರ ಆಗುವುದು ಸಾಧ್ಯನಾ?
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಮೂರನೆಯ ಬರಹ

Read More

ನಮಗೊಂದು ಸೊಸೆ ಬೇಕು: ಕೆ. ಸತ್ಯನಾರಾಯಣ ಹೊಸ ಕಾದಂಬರಿಯ ಆಯ್ದ ಭಾಗ

ಸತೀಶ ದುರ್ದಾನ ತೆಗೆದುಕೊಂಡವನಂತೆ ರೂಮಿಗೆ ಹೋಗಿ ಬಾಗಿಲನ್ನು ಪಟಾರನೆ ಹಾಕಿಕೊಂಡ. ಹಾಲ್‌ನಲ್ಲೇ ಉಳಿದಿದ್ದ ಮೂರ್ತಿ-ಅನಿತಾ ಕೂಡ ಕಾಲೆಳೆದುಕೊಂಡು ರೂಮಿಗೆ ಹೋದರು. ಇಬ್ಬರೂ ಮಂಚದ ಮೇಲೆ ನೀಟಾಗಿ ಹಾಸಿದ್ದ ಹಾಸಿಗೆಯ ಮೇಲೆ ಕುಳಿತುಕೊಂಡು ಒಬ್ಬರನ್ನೊಬ್ಬರು ನೋಡುತ್ತಲೇ ಇದ್ದರು. ಮಾತೇ ಹೊರಡಲಿಲ್ಲ. ಅನಿತಾ ಹತ್ತು ಸಲ ಬಚ್ಚಲು ಮನೆಗೆ ಹೋಗಿ ಬಂದರು. ಮೂರ್ತಿ ಒಂದಿಪ್ಪತ್ತು ಸಲ ಕೂದಲನ್ನು ಕಿತ್ತು ಹಾಕಿದರು. ಬಲಗೈ ಮಧ್ಯ ಬೆರಳಿನ ಉಗುರನ್ನು ಕಡಿಯುತ್ತಲೇ ಇದ್ದರು. ದೀಪ ಆರಿಸಿ ಮಲಗಲು ಇಬ್ಬರಿಗೂ ಭಯವಾಯಿತು. ಬಲ್ಬ್‌ ಪ್ರತಿದಿವಸವೂ ಹೊರಡಿಸುವುದಕ್ಕಿಂತ ಹೆಚ್ಚಿನ ಕಾಂತಿಯನ್ನು ಹೊರಡಿಸುತ್ತಿದೆ ಅನಿಸಿತು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ನಮಗೊಂದು ಸೊಸೆ ಬೇಕು” ಕೃತಿಯ ಆಯ್ದ ಭಾಗ

Read More

ರಂಗದ ಮೇಲಿನ  ದೃಶ್ಯಕಾವ್ಯ  ‘ಚಿತ್ರಾಂಗದಾ’: ಚಿತ್ರಾ ವೆಂಕಟರಾಜು ಸರಣಿ

ಕೊನೆಗೂ ಯಾಕೆ ಈ ನಾಟಕವನ್ನು ಮಾಡಬೇಕು, ಯಾಕೆ ಈ ನಾಟಕವನ್ನು ನೋಡಬೇಕು ಎನ್ನುವುದು ಪ್ರತಿಯೊಬ್ಬ ಕಲಾವಿದನ, ಪ್ರೇಕ್ಷಕನ ಮೂಲಭೂತ ಪ್ರಶ್ನೆ. ಇಲ್ಲಿ ಇದು ಚಿತ್ರಾಂಗದಾ ಮತ್ತು ಅರ್ಜುನನ ಕತೆಯಾದರೂ ಅದರ ನೆಪದಲ್ಲಿ ನಡೆಯುವುದು ಗಂಡು ಹೆಣ್ಣು ಮತ್ತು ಅವರಿಬ್ಬರ ಸಂಬಂಧದ ಸಂಕೀರ್ಣತೆಯ ಬಗ್ಗೆ. ಹೆಣ್ಣಾದರೂ ಗಂಡಿನಂತೆ ವನದಲ್ಲಿರುವ ಚಿತ್ರಾಂಗದೆ ಅರ್ಜುನನನ್ನು ನೋಡಿದ್ದೆ ಮತ್ತೆ ‘ಹೆಣ್ತನ’ ಕ್ಕೆ ಹಾತೊರೆಯುತ್ತಾಳೆ. ಅವಳೊಳಗಿನ ಹೆಣ್ಣನ್ನು ನೋಡಿದ ಅರ್ಜುನ ತನ್ನ ಬ್ರಹ್ಮಚರ್ಯದ ನಿಯಮವನ್ನು ಮುರಿಯುತ್ತಾನೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿಯಲ್ಲಿ ‘ಚಿತ್ರಾಂಗದಾ’ ನಾಟಕದ ಕುರಿತ ಬರಹ

Read More

ದೇವರನ್ನು‌ ಕುರಿತು ಒಂದಿಷ್ಟು….: ಬಸವನಗೌಡ ಹೆಬ್ಬಳಗೆರೆ ಸರಣಿ

ಇತ್ತೀಚೆಗಂತೂ ದೇವರ ಆರಾಧನೆಯ ಜೊತೆ ಜೊತೆಗೆ ಪುರುಷ ಪ್ರಯತ್ನಕ್ಕೂ ಹೆಚ್ಚು ಒತ್ತು ಕೊಡಬೇಕು ಎಂದು ಕಲಿತಿದ್ದೇನೆ. ದೇವರು ಒಂಥರಾ ರಾಸಾಯನಿಕ ಕ್ರಿಯೆಯ ‘ಕ್ರಿಯಾವರ್ಧಕ’ (ಕ್ಯಾಟಲಿಸ್ಟ್) ಇದ್ದ ಹಾಗೆ ಎಂದು ನಂಬಿದ್ದೇನೆ. ವ್ಯಕ್ತಿ ತಾನು ಮಾಡುವ ಕಾರ್ಯಗಳಿಂದ ದೇವರ ಸ್ಥಾನಕ್ಕೆ ಏರಬಹುದು ಎಂದು ಹಲವು ಮಹಾನುಭಾವರ ಜೀವನದಿಂದ ತಿಳಿದುಕೊಂಡಿದ್ದೇನೆ. ಆದರೂ ಹಲವರು ದೇವರ ಹೆಸರಲ್ಲಿ ಜಗಳವಾಡುವುದನ್ನು ನೋಡಿ ವಿಚಿತ್ರ ಎನಿಸುತ್ತದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಐವತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ