Advertisement

Tag: ಕೆಂಡಸಂಪಿಗೆ

ಬದುಕಿನ ಬಣ್ಣಗಳು: ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ

ಆದರೆ ಈ ಸಮುದ್ರವನ್ನು ಬೊಗಸೆಯಲ್ಲಿ ತುಂಬಿಕೊಳ್ಳಲು ಸಾಧ್ಯವಿಲ್ಲ ಅನ್ನುವ ಅರಿವು ನನಗೆ ಯಾವತ್ತೋ ಆಗಬೇಕಿತ್ತು. ಸುಮ್ಮನೆ ದಡದಲ್ಲಿ ಕಾಯುತ್ತಾ ಕುಳಿತೆ. ಅವಳಿಗೆ ಕನಸಿತ್ತು ಸ್ಪಷ್ಟವಾದ ಗುರಿಯಿತ್ತು. ತನ್ನ ಸುತ್ತ ಇರುವ ಮಿತಿಗಳನ್ನು ಮೀರುವ ತುಡಿತವಿತ್ತು. ಅವಳ ಪಾತ್ರ ವಿಶಾಲವಿತ್ತು. ನಾನು ಒಡ್ಡಿದ ಬೊಗಸೆಗೆ ಹೆಚ್ಚು ಹೊತ್ತು ನಿಲ್ಲಲಾರಲು ಅನ್ನುವುದು ಗೊತ್ತಾಗಬೇಕಿತ್ತು.
ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಅಂಕಣ “ಇನ್ನೊಂದು ಬದಿ”ಯ ಎಂಟನೆಯ ಬರಹ

Read More

ಹೊಷಾಯ್ ಹೊಸೆದ ಹೊಸ ಕತೆ….: ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ ಪ್ರವಾಸ ಸರಣಿ

ನಿಧಾನಕ್ಕೆ ನಾಲ್ಕಾರು ಬಾರಿ ಹತ್ತಿ ಇಳಿಯುತ್ತಾ ನನ್ನ ಕಾಲಿಗೆ ಬಲ ಬರಲು ಪ್ರಾರಂಭವಾಯಿತು! ನಿಧಾನವಾಗಿ ನನ್ನ ಕಾಲಿನ ಶಕ್ತಿ ಮರಳಿತು. ಮೊದಲಿನಂತಾದೆ. ಕೂಡಿಕೊಂಡ ನರಗಳೆರಡು ನೈಸರ್ಗಿಕ ವಿಧಾನದಲ್ಲೇ ಬೇರ್ಪಟ್ಟವು! ವಾವ್‌ ಅದ್ಭುತ! ಬದುಕಿನ ಆಸೆ ಕಳಕೊಂಡ ನಾನು ಮತ್ತೆ ಬದುಕ ಜೀವಿಸತೊಡಗಿದೆ. ತಾನು ಹೊಷಾಯ್ ಆದರೂ ಬಾಹುಬಲಿಯ ಸೇವೆಗೆ ನಿಂತೆ! ಬೆಳಿಗ್ಗೆ ಬೇಗ ಬಂದು ಬಾಗಿಲು ತೆಗೆಯುವುದು. ದೇವಾಲಯದ ವಠಾರದ ಸ್ವಚ್ಛತೆ. ಬಂದವರಿಗೆ ಮಾಹಿತಿ ನೀಡುವುದು. ಪೂಜೆಗೆ ಬರುವ ಪುರೋಹಿತರಿಗೆ ಸಹಾಯ ಮಾಡುತ್ತಾ ನನ್ನ ಕೃತಜ್ಞತೆ ಸಲ್ಲಿಸುತ್ತಿದ್ದೇನೆ.
ಶ್ರೀಧರ್‌ ಎಸ್.‌ ಸಿದ್ದಾಪುರ ಬರೆಯುವ “ಸಾಗುತ ದೂರ ದೂರ…” ಪ್ರವಾಸ ಸರಣಿ

Read More

ನೀನು ಬೆಳೆದರೆ ನಾನು ಬೆಳೆವೆನು: ಚಿತ್ರಾ ವೆಂಕಟರಾಜು ಸರಣಿ

ಎಷ್ಟು ಸಲ ಪ್ರವೇಶ ಕೊಡಬಾರದ ಸೀನ್‌ಗಳಲ್ಲಿ ತಪ್ಪಿ ಪ್ರವೇಶ ಕೊಟ್ಟಿರುತ್ತೇವೆ, ಆಡಲೇಬೇಕಾದ ಮಾತನ್ನು ಆಡದೇ ಉಳಿದಿದ್ದೇವೆ. ಆಡಬಾರದಿದ್ದ ಸಂಭಾಷಣೆಗಳನ್ನು ಸುಲಭವಾಗಿ ಆಡಿಬಿಟ್ಟಿರುತ್ತೇವೆ. ಏನೇ ಮಾಡಲಿ ಒಮ್ಮೆ ಆ ನಾಟಕ ಮುಗಿದ ಮೇಲೆ ಮುಗಿಯಿತು… ಒಮ್ಮೆ ಪ್ರದರ್ಶನ ಮುಗಿದ ಮೇಲೆ ಮತ್ತೆ ಆ ದೃಶ್ಯದಲ್ಲಿ ನಮ್ಮ ಎಂಟ್ರಿ ಇಲ್ಲ. ಮತ್ತೆ ಬೇರೆಯದೇ ನಾಟಕದಲ್ಲಿ ಬೇರೆಯದೇ ಪಾತ್ರ! ನಾಟಕದ ಮಜಾ ಎಂದರೆ ಬದುಕಿಗಿಲ್ಲದ ಮರು ಪ್ರದರ್ಶನದ ಅವಕಾಶ ನಾಟಕದಲ್ಲಿದೆ. ಎಲ್ಲ ನಟರೂ ಒಪ್ಪಿದರೆ ಮತ್ತೆ ಅದೇ ನಾಟಕವನ್ನು ಆಡಬಹುದು. ಬೇಕಿದ್ದರೆ ಬೇರೆ ರೀತಿಯಲ್ಲಿ. ಆದರೆ, ಪ್ರತಿ ಬಾರಿಯೂ ಹೊಸದಾಗಿ ಅಭಿನಯಿಸಬೇಕು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಕ್ರೌರ್ಯಕ್ಕೆ ಸಿಕ್ಕ ಮಕ್ಕಳು…: ಜಯಲಕ್ಷ್ಮಿ ಪಾಟೀಲ್ ಅಂಕಣ

ನಮ್ಮಲ್ಲೂ ಕೆಲಸ ಕೇಳಿ ಬಂದ ನೂರಾರು ಜನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರವೆಸಗಿದ ರಾಜಕಾರಣಿ ಇದ್ದಾನೆ, ಹೈಸ್ಕೂಲು ಓದುತ್ತಿದ್ದ ದಾನಮ್ಮ ಎಂಬ ಹೆಣ್ಣುಮಗುವನ್ನು ಅತ್ಯಾಚಾರವೆಸಗಿ ಕೊಂದ ಸಹಪಾಠಿಗಳಿದ್ದಾರೆ, ಸೌಜನ್ಯಾ ಎಂಬ ಹುಡುಗಿ ಕಾಲೇಜಿಗೆ ಹೋದವಳು ಮರಳಿ ಮನೆ ತಲುಪದಂತೆ ಅತ್ಯಾಚಾರವೆಸಗಿ ಕೊಂದುಹಾಕಿದ ದುರುಳರಿದ್ದಾರೆ, ಜಾತಿಯ ಕಾರಣಕ್ಕಾಗಿ ಕರುಳ ಕುಡಿಯನ್ನೆ ಹೊಸಕಿಹಾಕಿದ ಹೆತ್ತವರಿದ್ದಾರೆ, ಧರ್ಮದ ಹೆಸರಲ್ಲಿ ಒಂಬತ್ತು ವರ್ಷದ ಹೆಣ್ಣುಮಗುವಿನ ಮೇಲೆ ದೇವಸ್ಥಾನದಲ್ಲೆ ಮುಗಿಬಿದ್ದು ಅತ್ಯಾಚಾರವೆಸಗಿದ ಮಹಾಮಹಿಮರಿದ್ದಾರೆ, ಹೆಂಗಸರು ಮನೆಯ ಹೊರಗೆ ದುಡಿಯತೊಡಗಿದರೆ ಅತ್ಯಾಚಾರಗಳಾಗುವುದು ಸಹಜ ಎಂಬರ್ಥದಲ್ಲಿ ಮಹಾಜ್ಞಾನಿ ರಾಜಕಾರಣಿಯೊಬ್ಬ ಹೇಳಿಕೆ ನೀಡಿ ಮೀಸೆ ತಿರುವುತ್ತಾನೆ…
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಕಾರ್ತಿಕ್ ಕೃಷ್ಣ ಬರೆದ ಈ ಭಾನುವಾರದ ಕತೆ “ಕ್ರಮ ತಪ್ಪಿದ ನಗರ”

“ನೀವು ಎಂದಾದರೂ ಆಕಾಶದ ನಕ್ಷತ್ರಗಳನ್ನು ಗಮನಿಸಿದ್ದೀರಾ?” ಅವನು ಕೇಳಿದ. ಅವನ ಧ್ವನಿ ಹಳೆಯ ರೇಡಿಯೋ ಸ್ಟೇಷನ್‌ನಿಂದ ಬರುವ ಸಿಗ್ನಲ್‌ನಂತೆ ಇತ್ತು. ಅದಕುತ್ತರವಾಗಿ “ಹೌದು, ನೋಡಿದ್ದೇನೆ.” ಎಂದೆ. “ಆಕಾಶದಲ್ಲಿ ನಕ್ಷತ್ರಗಳು ಸುಮ್ಮನೆ ಬಿದ್ದಿಲ್ಲ” ಅವನು ಹೇಳುತ್ತಾ ಒಂದು ನೋಟಿನ ಮೇಲೆ ಒಂದು ನಾಣ್ಯವನ್ನು ಇಟ್ಟ. “ಅವುಗಳಿಗೊಂದು ಕ್ರಮವಿದೆ. ಆ ಕ್ರಮ ತಪ್ಪಿದರೆ ಈ ಜಗತ್ತು ಕುಸಿದು ಬೀಳುತ್ತದೆ. ಈ ಸ್ಕೈವಾಕ್ ಕೆಳಗೆ ಹರಿಯುವ ಸಾವಿರಾರು ಕಾರುಗಳು, ಈ ದೊಡ್ಡ ದೊಡ್ಡ ಬಿಲ್ಡಿಂಗ್‌ಗಳು, ನಿಮ್ಮ ಕೈಯಲ್ಲಿರುವ ಈ ಕಾಫಿ ಕಪ್… ಎಲ್ಲವೂ ಒಂದು ನಿಖರವಾದ ಜಾಗದಲ್ಲಿ ಇರಬೇಕು.”
ಕಾರ್ತಿಕ್ ಕೃಷ್ಣ ಬರೆದ ಕತೆ “ಕ್ರಮ ತಪ್ಪಿದ ನಗರ” ನಿಮ್ಮಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ