Advertisement

Tag: ಕೆಂಡಸಂಪಿಗೆ

ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ

ಯಾಕೋ ಅವರ ಮನೆಯ ಕೆಲವು ಆಗುಹೋಗುಗಳಿಗೆ ನಾನು ಸಾಕ್ಷಿಯಾಗಿರುವಂತೆ ನನಗೆ ಅನಿಸಿದ್ದು ಸುಳ್ಳಲ್ಲ. ಮೊನ್ನೆಯ ಭೇಟಿಯ ನಂತರದಲ್ಲಿ ಯಾಕೋ ಗಂಗತ್ತೆ ಬಹಳವಾಗಿ ನೆನಪಾಗುತ್ತಿದ್ದಾರೆ. ಅಷ್ಟು ವರ್ಷ ಮನೆಯಿಂದ ದೂರವಿದ್ದ ಅವರಿಗೆ ಕೊನೆಗಾಲಕ್ಕೆ ಮತ್ತೆ ಆ ಮನೆಗೆ ಬರಬೇಕು ಅನಿಸಿದ್ದು ಯಾಕೆ? ಮನೆಯವರು ಒಪ್ಪದಿರುವುದರಿಂದ ಅವರಿಗೆ ಆ ಮನೆಗೆ ಬರುವ ಅವಕಾಶ ದೊರಕಿರಲಿಲ್ಲ. ಆದರೆ ಅವರ ಸಾವು ರಾಮಣ್ಣನನ್ನು ವಿಚಲಿತಗೊಳಿಸಿತೇ? ಸಾವಿನ ಸುದ್ದಿ ತಿಳಿದಿದ್ದೆ ರಾಮಣ್ಣ ಜಾನಕ್ಕ ಅಲ್ಲಿಗೆ ಧಾವಿಸಿದ್ದರಂತೆ.
ಡಾ. ಚಂದ್ರಮತಿ ಸೋಂದಾ ಬರೆದ ಈ ಭಾನುವಾರದ ಕತೆ “ಕಣ್ಣಾಚೆಯ ನೋಟ” ನಿಮ್ಮ ಓದಿಗೆ

Read More

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಸಿದ ನೆಲದ ಕೆಳಗಿದ್ದ ಅದೃಷ್ಟ: ಎಚ್. ಗೋಪಾಲಕೃಷ್ಣ ಸರಣಿ

ಇಂದಿನವರೆಗೆ ಸುತ್ತ ಪರಿಸರ ಹೀಗಿರಬೇಕಾದರೆ ಚಾವಣಿಯ ಮೇಲೆ ಜಗ್ಗದೆಯೇ ಕುಗ್ಗದೆಯೇ ಹಿಗ್ಗಿ ಹಿಗ್ಗಿ ನಡೆ ಮುಂದೆ ಮಾಡುತ್ತಿದ್ದ ನಾನು ಎಲ್ಲೋ ಕಾಲು ಇಟ್ಟಿದ್ದೆ ಅಂತ ಕಾಣುತ್ತದೆ. ಏಕ್ ದಂ ಡಿವಿಜಿ ಪ್ರತ್ಯಕ್ಷ ಆದರು. ಪದ ಕುಸಿಯೆ ನೆಲವಿಹುದು… ಅಂತ ಅವರು ತಾನೇ ಹೇಳಿದ್ದು? ಕಾಲು ಕುಸಿಯಿತು ಮತ್ತು ನೆಲ ಸಹ ಇತ್ತು. ಆದರೆ ಅದು ಕೆಳಗೆ ಇದ್ದದ್ದು. ನಾನು ಸುಮಾರು ಹತ್ತು ಹನ್ನೆರೆಡು ಅಡಿ ಮೇಲಿಂದ ನೆಲಕ್ಕೆ ಕುಸಿದೆ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಅರವತ್ತೊಂದನೆಯ ಕಂತು

Read More

ನನ್ನಜ್ಜಿ ಬದುಕಿರುವುದು ಅವಳ ಹಾಡುಗಳಲ್ಲಿ: ಅನನ್ಯ ತುಷಿರಾ ಬರಹ

ಎಷ್ಟೋ ಬಾರಿ ಸಣ್ಣ ಪುಟ್ಟ ಸಂಗತಿಗಳಿಗೆ ಸೋತು ಹೋದಂತಾಗುತ್ತದೆ. ಏರಿ ನಿಂತ ಎತ್ತರ ಸುಲಭಕ್ಕೆ ದಕ್ಕಿಲ್ಲವಾದರೂ ನಿಭಾಯಿಸುವಲ್ಲಿ ಅಲುಗಾಡಿದಂತಾಗುತ್ತದೆ. ಅಂಥ ಸಂದರ್ಭದಲ್ಲಿ ಹುಟ್ಟುವ ಪ್ರಶ್ನೆಗಳಿಗೆ ಉತ್ತರವಾಗಿ ಒಂದು ಬೆಳಕು ಕಾಣುವುದು ನನ್ನಜ್ಜಿಯ ಬದುಕಿನಿಂದ. ಅವಳ ಹಾಡುಗಳಿಂದ. ಬದುಕು ಕಟ್ಟುವ ಹೊತ್ತಿಗೆ ಸಂಗಾತಿಯ ಸಾವು ಕಂಡೂ ಕೂಡ ಬದುಕ ಹಾಡು ಕಟ್ಟಿದವಳು ನನ್ನಜ್ಜಿ. ‘ನನ್ನಜ್ಜಿಯ ಜೀವನವನ್ನೂ, ಜನಪದ ಹಾಡುಗಳನ್ನೂ ಬಿಡಿಸಿ ಪ್ರತ್ಯೇಕವಾಗಿ ನೋಡಲು ಸಾಧ್ಯವಿಲ್ಲ ನನ್ನಿಂದ’ ಎನ್ನುವಷ್ಟು ಆ ಪದಗಳು ಅವಳ ಹಾದಿಯಲ್ಲಿ ಬೆರೆತು ಹೋಗಿವೆ.
ಅನನ್ಯ ತುಷಿರಾ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ