Advertisement

Tag: ಕೆಂಡಸಂಪಿಗೆ

ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ

ಬತ್ತಿ ಹೋಗಿರುವ ನದಿಯ ದಡದಲ್ಲಿ ಕುಳಿತು ಹರಿಯುವ ನದಿಯನ್ನು ಕಲ್ಪಿಸಿಕೊಂಡು ಸುಖಪಡುತ್ತಿದ್ದ ಕುಮದ್ವತಿಗೆ, ಎಲ್ಲವೂ ವೇಗವಾಗಿ ಮನಸಿನಲಿ ಸುಳಿದುಹೋದವು. ಕೆಲವು ಸಲ ಊರಿನವರ ಮಾತುಗಳಿಗೆ ಬೇಸರವಾದರೂ, ಪ್ರೀತಿಸುವ ಗಂಡನಿಂದ ಎಲ್ಲವೂ ಮರೆಯುತ್ತಿದ್ದಳು. ಸೊಸೆಯ ಒಳ್ಳೆಯತನ ಕಂಡಮೇಲೆ ಅತ್ತೆ ಇನ್ನೂ ಹತ್ತಿರವಾಗಿದ್ದರು. ಸೊಸೆಗೆ ಯಾವುದೇ ತೊಂದರೆ ಆಗದಂತೆ, ತನ್ನ ಮಗನಿಂದ ಅವಳಿಗೆ ಅನ್ಯಾಯ ಆಯಿತಲ್ಲ ಎನ್ನುವ ಪಾಪ ಪ್ರಜ್ಞೆಯಿಂದ ಸೊಸೆಯನ್ನು ಇನ್ನೂ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದಳು.
ಎಂ.ವಿ. ಶಶಿಭೂಷಣ ರಾಜು ಬರೆದ ಈ ಭಾನುವಾರದ ಕತೆ “ಕುಮದ್ವತಿ”

Read More

ಆರಕ್ಕೇರದ ಮೂರಕ್ಕಿಳಿಯದ ಬಡವರ ಬದುಕು: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಪಕ್ಕದಲ್ಲಿದ್ದ ಮಣಿ, “ಸರ್ ಅವರೆಲ್ಲರ ಹೆಸರುಗಳು ಏನೇನು ಅಂತ ಗೊತ್ತ ಸರ್?” ಎಂದ. ಲೋಗನಾಥನ್, “ಗೊತ್ತಿಲ್ಲ” ಎಂದ. ಮಣಿ “ಕರ್ಣನ್, ಧರ್ಮರಾಯನ್, ಭೀಮನ್, ಅರ್ಜುನನ್, ನಖುಲನ್ ಮತ್ತು ಸಹದೇವನ್” ಎನ್ನುತ್ತಿದ್ದಂತೆ, ಲೋಗನಾಥನ್ “ಇನ್ನೂ ಮೂವರ ಹೆಸರು?” ಕೇಳಿದರು. ಗೋವಿಂದ, “ಮೊದಲ ಇಬ್ಬರು ಸತ್ತೋದರಂತೆ ಸರ್. ಐದು ಜನ ಗಂಡು ಮಕ್ಕಳಾದ ಮೇಲೆ ನಾನು ಹುಟ್ಟಿ, ನನಗೆ ಗೋವಿಂದಾ ಅಂತ ಹೆಸರು ಇಟ್ಟ ಮೇಲೆ ನಮ್ಮಮ್ಮನಿಗೆ ಮಕ್ಕಳಾಗುವುದು ನಿಂತೋಯಿತಂತೆ” ಎಂದ ಗೋವಿಂದನೆ ಬಿದ್ದೂಬಿದ್ದು ನಕ್ಕ.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

ನೀರು ಕುಡಿಯದಿದ್ದರೂ, ಆ ಅನಿರೀಕ್ಷಿತ ಘಟನೆಗೆ ಹೆದರಿ ನಾನು ಪ್ರಜ್ಞೆ ಕಳೆದುಕೊಂಡಿದ್ದೆ. ಯಾರಾದರೂ ನೋಡಿಬಿಡುತ್ತಾರೆಂದು ಹೆದರಿದ ಆತ ತನ್ನ ತೋಳಲ್ಲಿ ನನ್ನನ್ನು ಎತ್ತಿಕೊಂಡು ಮರದ ಮೇಲಿನ ಆತನ ಅಟ್ಟಳಿಗೆಯ ಒಳಗೆ ಮಲಗಿಸಿದ. ತನ್ನ ಟವೆಲ್‌ನಿಂದ ನನಗೆ ಗಾಳಿ ಬೀಸಿ, ಮುಖಕ್ಕೆ ನೀರೆರಚಿದಾಗ ನಿಧಾನಕ್ಕೆ ಕಣ್ಣು ಬಿಟ್ಟೆ. ನಾನಿರುವ ಜಾಗವನ್ನು ನೋಡಿ ಒಮ್ಮೆಲೆ ಬೆಚ್ಚಿದೆ. ಎದ್ದೇಳಲು ಪ್ರಯತ್ನಿಸುತ್ತಿದ್ದಂತೆಯೇ ಹತ್ತಿರ ಬಂದ ಆತ ಕೈಮುಗಿದು “ತಪ್ಪಾಯಿತು, ಇನ್ನೊಮ್ಮೆಯೂ ಹೀಗೆ ಮಾಡಲ್ಲ ಕ್ಷಮಿಸಿಬಿಡಿ” ಎಂದು ಮುಜುಗರದಿಂದ ಹೇಳಿ ಹೊರ ನಡೆದ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಸುನೀತ ಕುಶಾಲನಗರ ಕತೆ

Read More

ನಿದ್ದೆ ಮತ್ತು ಚಲನೆ; ಪಯಣ ಹೇಳುವ ಕಥೆ: ರಾಮ್‌ ಪ್ರಕಾಶ್‌ ರೈ ಕೆ. ಸರಣಿ

ದೈವ ದರುಶನದ ನಂತರ ಜೇಮ್ಸ್ ತನ್ನ ಪತ್ನಿಯ ಕಾಲಿಗೆ ಮುಲಾಮು ಹಚ್ಚಿ ನೇವೇರಿಸುವ ದೃಶ್ಯ ಬರುತ್ತದೆ. ಅದನ್ನು ಸ್ನಾನ ಮುಗಿಸಿ ಬರುವ ಮಗ ನೋಡುತ್ತಾ ನಿಲ್ಲುತ್ತಾನೆ. ಗಂಡಸರ ತುಕ್ಕು ಹಿಡಿದ ಈಗೋಗಳಿಗೆ ಈ ದೃಶ್ಯ ಚಾಟಿ ಏಟಿನಂತೆ ಕಾಣುತ್ತದೆ. ಮುಂದೆ, ಜೇಮ್ಸ್ ಕಾಣೆಯಾಗಿ ಸುಂದರಂ ಆಗಿ ಬದಲಾದಾಗ, ಬಸ್ಸಿನಲ್ಲಿದ್ದ ಒಂದು ಪರಿವಾರ ಎರ್ನಾಕುಳಮ್ ನತ್ತ ಸಾಗುವ ಗಾಡಿಯ ಹತ್ತಿ ಹೋಗಿ ಬಿಡುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ