Advertisement

Tag: ಕೆಂಡಸಂಪಿಗೆ

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ದೇವರಂಥಾ ಗೆಳೆಯ… ನನ್ನ ಗಣೇಶ: ಆಶಾ ಜಗದೀಶ್ ಬರಹ

ನನ್ನ ಬಾಲ್ಯದ ಪುಟಗಳ ಮೇಲೆ ಅಚ್ಚೊತ್ತಿರುವ ಗಣೇಶನ ನೆನಪುಗಳು, ಬೆಳೆಯುತ್ತಾ ಬೆಳೆಯುತ್ತಾ ದೊಡ್ಡವರು ಎನಿಸಿಕೊಳ್ಳುವ ಹೊತ್ತಿಗೆ, ತೀವ್ರತೆಯನ್ನು ಕಳೆದುಕೊಳ್ಳತೊಡಗಿದ್ದವು. ಹಾಸ್ಟೆಲ್‌ನಲ್ಲಿ ಮನೆಯಲ್ಲಿ ಮಾಡುವಂತೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಗೆಳತಿಯರ ಮುಂದೆ ನಗೆಪಾಟಲಿಗೆ ಈಡಾಗುವ ಭಯವಿತ್ತು. ಆದರೆ ಗಣೇಶ ಆ ಹೊತ್ತಿಗೆಲ್ಲಾ ಗೆಳೆಯನಂತಾಗಿ ಹೋಗಿದ್ದ. ಎಂಥದ್ದೇ ಸಮಸ್ಯೆ ಎದುರಾದರೂ, ‘ವಿಘ್ನೇಶ್ವರ ಕಾಪಾಡು ತಂದೆ’ ಎಂದುಕೊಂಡರೆ ಸಾಕು ಅವ ಕಾಪಾಡೇ ಕಾಪಾಡ್ತಾನೆ ಎನ್ನುವುದೊಂದು ಬಲವಾದ ನಂಬಿಕೆಯಾಗಿ ಮನಸಿನಲ್ಲಿ ಆಳವಾಗಿ ಬೇರೂರಿತ್ತು. ಈಗಲೂ ಹಾಗೇ, ಸಮಸ್ಯೆ ಎಂದರೆ ಸಾಕು ಮೊದಲು ನಾಲಿಗೆ ನೆನೆಸಿಕೊಳ್ಳುವುದು ಅವನನ್ನೇ.
ತಮ್ಮ ಪಾಲಿಗೆ ಗೆಳೆಯನಂತೆ ಆಗಿರುವ ಗಣೇಶನ ಕುರಿತು ಆಶಾ ಜಗದೀಶ್‌ ಬರಹ ನಿಮ್ಮ ಓದಿಗೆ

Read More

ಗೌರಮ್ಮನ ಜತ್ಯಾಗೇ ಬರಾ ಗಣಪ್ಪ: ಸುಮಾ ಸತೀಶ್ ಸರಣಿ

ನಮ್ಮೂರಿನ್ ಗೌರೀಗೆ ಪೂಜೆ ಮಾಡ್ತಿದ್ದಿದ್ದು ವಸಿ ಜನ್ವೇಯಾ. ಆದ್ರೆ ಗಣೇಶುನ್ನ ಬಿಡಾಕೇಂತ್ಲೇ ಊರಿನ್ ಜನ್ವೆಲ್ಲಾ ಮೇಲ್ ಬಿದ್ದು ಕಾದ್ಕಂಡು ಕುಂತಿರ್ತಿದ್ವಿ. ಐದನೇ ದಿನ ಸಂಜೀ ಹೊತ್ನಾಗೆ, ಗೌರಮ್ಮುಂಗೆ ಮಡ್ಲು ತುಂಬಿ, ಮಗುನ್ನ ಮುಂದಿಟ್ಗಂಡು, ಅವ್ವನ್ನ ಹಿಂದ್ ಕುಂಡ್ರಿಸಿ ಮೆರೋಣಿಗೆ ಹೊಂಡುತಿತ್ತು. ರಾಮ ದ್ಯಾವ್ರ ಗುಡೀಗ್ಳಿಂದ ನಮ್ಮನೆ ಆಸಿ, ಕೆರೆ ಏರಿ ಕಡೆ ಊರ ಗಂಡಸರು, ಹೆಂಗಸರು, ಚಳ್ಳೆ ಪಿಳ್ಳೆಗ್ಳು ಜೈಕಾರ ಹಾಕ್ಕಂಡು ಗಣಪತಿ ಬಾಪ್ಪ ಮೋರ್ಯಾ ಅಂತ ಕಿರುಚ್ಕಂಡು ಅವುರ್ ಹಿಂದಿಂದ್ಲೇ ಸಾಗುಸ್ಕಂಡು ಹೋಗ್ತಿದ್ವಿ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಗಣೇಶ ಚತುರ್ಥಿಯ ಆಚರಣೆಯ ಕುರಿತು ಹೇಳುತ್ತಲೇ ಈ ಸರಣಿ ಇಲ್ಲಿಗೆ ಮುಕ್ತಾಯವಾಗುತ್ತದೆ

Read More

ಕಲಾ ಅಸೈನ್‌ಮೆಂಟ್ ಪುರಾಣ!!!: ಬಸವನಗೌಡ ಹೆಬ್ಬಳಗೆರೆ ಸರಣಿ

ಆಗ ಈಗಿನಂತೆ ಇರಲಿಲ್ಲ. ಸಣ್ಣಪುಟ್ಟ ತಪ್ಪಿಗೂ ಅಂಕಗಳನ್ನು ಕಳೆಯಲು ನೋಡಲಾಗುತ್ತಿತ್ತು!! ಆಗ ತಿಂಗಳಿಗೊಮ್ಮೆ ಕಿರುಪರೀಕ್ಷೆಗಳು ಇರಲಾಗುತ್ತಿತ್ತಾದರೂ ಆ ಅಂಕಗಳನ್ನು ವಾರ್ಷಿಕ ಪರೀಕ್ಷೆಯ ಅಂಕಗಳಿಗೆ ಲೆಕ್ಕಕ್ಕೆ ತೆಗೆದುಕೊಳ್ಳುತ್ತಿರಲಿಲ್ಲ. ಸೆಮಿಸ್ಟರ್ ಪದ್ಧತಿ ಇರಲಿಲ್ಲ. ಇಡೀ ವರ್ಷ ಮಾಡಿದ ಪಾಠಗಳನ್ನು ಒಳಗೊಂಡ ವಾರ್ಷಿಕ ಪರೀಕ್ಷೆ ಮಾಡಲಾಗುತ್ತಿತ್ತು. ಪರೀಕ್ಷೆಯಲ್ಲಿ ಕೇಳಲಾಗುತ್ತಿದ್ದ ಪ್ರಶ್ನೆಗಳೂ ಹೆಚ್ಚು ಅಂಕಗಳಿಗೆ, ದೀರ್ಘ ಉತ್ತರ ಬಯಸುವ ಪ್ರಶ್ನೆಗಳನ್ನೂ ಕೇಳಲಾಗುತ್ತಿತ್ತು. ಆಗ ಪರೀಕ್ಷೆಯಲ್ಲಿ 35 ಅಂಕಕ್ಕಿಂತ ಕಮ್ಮಿ ತೆಗೆದರೆ ಫೇಲ್ ಮಾಡುವ ವ್ಯವಸ್ಥೆಯಿತ್ತು. ಈಗ ಆ ವ್ಯವಸ್ಥೆಯು ಸಂಪೂರ್ಣ ಬದಲಾಗಿದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ನಾಲ್ಕನೆಯ ಕಂತು

Read More

ನವೀನ ತಂತ್ರಜ್ಞಾನದ ಕುರಿತ ನವೀನ ಮಾದರಿ ಕತೆಗಳು: ಗುರುರಾಜ ಕುಲಕರ್ಣಿ ಕೃತಿಯ ಕುರಿತು ವಸುಮತಿ ಉಡುಪ ಮಾತುಗಳು

ಈ ಕಥಾಸಂಕಲನದ ಕತೆಗಳು ಸಿದ್ಧ ಮಾದರಿಯ ಕತೆಗಳಿಗಿಂತ ವಿಭಿನ್ನವಾಗಿ ಚಿತ್ರಿತಗೊಂಡಿವೆ. ನವೀನ ತಂತ್ರಜ್ಞಾನದ ಕುರಿತು ಹೆಚ್ಚಿನ ಅರಿವಿಲ್ಲದವರಿಗೂ ತಿಳಿಯುವಂತೆ ಸರಳ ಭಾಷೆಯಲ್ಲಿ, ಸರಾಗವಾಗಿ ಕತೆ ಹೇಳಿದ್ದಾರೆ ಕುಲಕರ್ಣಿ, ಕತೆಗಳ ವೈವಿಧ್ಯ, ಭಾಷೆಯನ್ನು ಸಮರ್ಥವಾಗಿ, ಸುಲಲಿತವಾಗಿ ಬಳಸಿಕೊಂಡ ರೀತಿ, ಕತೆ ಹೇಳುವಲ್ಲಿನ ಲವಲವಿಕೆಯ ಗುಣದಿಂದಾಗಿ ಈ ಸಂಕಲನ ಛಂದ ಪುಸ್ತಕ ಬಹುಮಾನಕ್ಕೆ ಆಯ್ಕೆಯಾಗಿದೆ. ಕನ್ನಡ ಸಾಹಿತ್ಯದ ಮಟ್ಟಿಗೆ ಅಪರೂಪ ಎನಿಸುವಂತಹ ಹಲವು ಕತೆಗಳು ಸಂಕಲನದಲ್ಲಿ ಗಮನ ಸೆಳೆಯುವಂತಿವೆ.
ಗುರುರಾಜ ಕುಲಕರ್ಣಿ ಕಥಾಸಂಕಲನ “ಹ್ಯಾಷ್‌ ಟ್ಯಾಗ್”ಗೆ ಛಂದ ಪುಸ್ತಕದ ಬಹುಮಾನ ಲಭಿಸಿದ್ದು, ಈ ಕೃತಿಯ ಕುರಿತು‌ ವಸುಮತಿ ಉಡುಪ ಮಾತುಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ