Advertisement

Tag: ಕೆಂಡಸಂಪಿಗೆ

ಕನ್ನಡ –ಇಂಗ್ಲಿಷ್ ಅನುವಾದಗಳಲ್ಲಿ ಪದ ಕಚಗುಳಿ: ಸುಮಾವೀಣಾ ಸರಣಿ

ಇತ್ತೀಚೆಗೆ ಕೆಪಿಎಸ್ಸಿ ಪೂರ್ವಭಾವೀ ಪರೀಕ್ಷೆ ನಡೆಯಿತು. ಆ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅಚ್ಚಾಗಿದ್ದ ಪ್ರಶ್ನೆಗಳು ಸರಿ ಇದ್ದವು. ಅವೇ ಪ್ರಶ್ನೆಗಳು ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳು ಸಂಭವಿಸಿದ್ದವು. ಆದಕಾರಣ ಪರೀಕ್ಷೆಯನ್ನೆ ರದ್ದುಮಾಡಿ ಇಲ್ಲವಾದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರನ್ನು ಪಾಸು ಮಾಡಿ ಎನ್ನುವ ಬೇಡಿಕೆಗಳು ಬಂದವು. ಕಳೆದ ಶನಿವಾರದ ವರದಿಯ ಪ್ರಕಾರ ಪೂರ್ವಭಾವಿ ಪರೀಕ್ಷೆಯ ಗೊಂದಲಗಳು ಇತ್ಯರ್ಥವಾಗುವವರೆಗೆ ಮುಖ್ಯ ಪರೀಕ್ಷೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್‌ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್‌ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ

Read More

ಅಲ್ಲೊಂದು ವೇಲ್ ಸಾವು, ಇಲ್ಲೊಂದು ಪಟಾಕಿ ಸಿಡಿತ: ಡಾ. ವಿನತೆ ಶರ್ಮ ಅಂಕಣ

ಈ ವಾರದ ಕೊನೆಯಲ್ಲಿ – ಶುಕ್ರವಾರ – ಬೇರೊಂದು ಹೊಸ ಕಥೆ ಶುರುವಾಗಿದೆ. ಇದು ಮನುಷ್ಯರಿಗಿರುವ ‘ತಾನೇ ಮೇಲು’ ಅನ್ನೋ ಅಹಂಭಾವ ಸೂಚಕ ಕಥೆ. ಚೈನಾ ದೇಶಕ್ಕೆ ಸೇರಿದ ಮೂರು ಯುದ್ಧ ನೌಕೆಗಳು ಆಸ್ಟ್ರೇಲಿಯಾದ ಟಾಸ್ಮನ್ ಸಮುದ್ರಪ್ರದೇಶದಲ್ಲಿ ‘ಲೈವ್-ಫೈರ್’ ಕಸರತ್ತು ನಡೆಸಿವೆ. ಅಂದರೆ ತಮ್ಮ ನೌಕೆಗಳಿಂದ ಆಕಾಶದಲ್ಲಿ ಸುಮಾರು ಐವತ್ತು ಸಾವಿರ ಅಡಿ ಎತ್ತರಕ್ಕೆ ಯುದ್ಧಾಯುಧಗಳನ್ನು ಚಿಮ್ಮಿಸಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಕಂಕುಳಲ್ಲಿ ಕತೆ ಪುಸ್ತಕ, ಎದೆಯಲ್ಲಿ ಕಥಾಸಾಗರ: ಸುಮಾ ಸತೀಶ್‌ ಸರಣಿ

ಅಂಗೆ ನೋಡಿದ್ರೆ ನಮ್ಮ‌ ನಾಗೂ ಅತ್ತೆಗೆ ಅಕ್ಷರಾನೇ ತಲೆಗೆ ಹತ್ತಲಿಲ್ಲ.‌ ಕೊನೆಗೆ ಅವರಿಗೆ ಸಂಗೀತ ಕಲಿಸಲು ಹಾರ್ಮೋನಿಯಂ ಮೇಷ್ಟ್ರನ್ನ ಕರೆಸಿದ್ರು. ಆ ಮೇಷ್ಟ್ರು ಮೊದಲು ಕಾಗುಣಿತ ತಿದ್ದಿಸಿ ಆಮೇಲೆ ಸಂಗೀತ ಹೇಳಿಕೊಟ್ಟಿದ್ದರು. ನಮ್ಮತ್ತೆಯ ಅಲ್ಪಪ್ರಾಣ ಮಹಾಪ್ರಾಣಗಳಿಗೆ ಜೀವ ತುಂಬಿದರು ಮೇಷ್ಟ್ರು. ಮೊದಲೇ ಕಲ್ಪನಾ ಚತುರೆ ಅತ್ತೆ. ಅಕ್ಷರಾನೂ ಬಂದ ಮೇಲೆ ಕತೆ ಬರೇಯೋಕೆ ಶುರು ಮಾಡಿದ್ರು. ಇಷ್ಟೇ ಅಲ್ಲ, ಅಕ್ಕಂದಿರ ಮಕ್ಕಳನ್ನು ಬಳಿ ಕೂರಿಸಿಕೊಂಡು ಸ್ವಾರಸ್ಯಕರವಾಗಿ ಕತೆ ಕಟ್ಟಿ ಹೇಳುವ ಕಲೆ ಇವರಲ್ಲಿ ಸೊಗಸಾಗಿತ್ತು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ನಾಗರಿಕತೆಯಿಂದ ಅನಾಗರಿಕತೆಯೆಡೆಗೆ ಇರಾಕ್: ಡಾ. ವಿಶ್ವನಾಥ ನೇರಳಕಟ್ಟೆ ಸರಣಿ

2003ರಲ್ಲಿ ಇರಾಕ್ ಯುದ್ಧದ ಮೂಲಕ ಈ ನಿರ್ದಯಿಯ ಆಡಳಿತ ಕೊನೆಗೊಂಡಾಗಲೇ ಇರಾಕ್‌ನ ಜನತೆ ನಿರಾಳತೆಯ ನಿಟ್ಟುಸಿರು ಬಿಟ್ಟದ್ದು. ಇರಾಕ್‌ನಲ್ಲಿ ರಾಜಕೀಯ ಸಂಕೀರ್ಣತೆ ಇರುವುದರ ಜೊತೆಗೆ ರಾಜಕೀಯ ವಿಡಂಬನೆಯೂ ಇದೆ. ಅಲ್ಲಿನ ಜನರು ತಮಾಷೆಯ ಮೂಲಕವೇ ರಾಜಕಾರಣಿಗಳಿಗೆ ಚುರುಕು ಮುಟ್ಟಿಸುತ್ತಾರೆ. ಆಡಳಿತ ವ್ಯವಸ್ಥೆಯ ಅಸಮರ್ಥತೆಯಿಂದಾಗಿ ದಿನನಿತ್ಯದ ಜೀವನದಲ್ಲಿ ಉಂಟಾಗುವ ಏರಿಳಿತಗಳನ್ನು ನಿಭಾಯಿಸಬೇಕಾದರೆ ಇಂತಹ ಹಾಸ್ಯಪ್ರವೃತ್ತಿ ಇರಬೇಕಾಗುತ್ತದೆ ಎನ್ನುವುದು ನಿಜ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ