Advertisement

Tag: ಕೆಂಡಸಂಪಿಗೆ

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ವಸ್ತುಗಳ ಸರ್ವಾಧಿಕಾರದಿಂದ ಮುಕ್ತಿ ಪಡೆಯವುದು ಹೇಗೆ?: ಎಲ್.ಜಿ.ಮೀರಾ ಅಂಕಣ

ವಸ್ತುಗಳನ್ನು ವ್ಯವಸ್ಥಿತವಾಗಿ ಇರಿಸಿಕೊಳ್ಳುವ ವಿಷಯದ ಬಂದಾಗ, ಕೊನೆಗೂ ನಾವು ಮನುಷ್ಯರು ಅಭ್ಯಾಸಗಳ ದಾಸರು ಅನ್ನಿಸುತ್ತದೆ. ಚಿಕ್ಕದೋ ದೊಡ್ಡದೋ, ಮುಖ್ಯವೋ, ಅಮುಖ್ಯವೋ ಯಾವುದೇ ವಸ್ತುವನ್ನಾದರೂ ಯಾವಾಗಲೂ ಒಂದೇ ಜಾಗದಲ್ಲಿ ಇಡಲು ಕಲಿತೆವು ಅಂದರೆ ಅಲ್ಲೇ ಇಡುತ್ತೇವೆ, ಅಭ್ಯಾಸ ಆಗಿಬಿಟ್ಟಿತೆಂದರೆ, ಎಷ್ಟೋ ಸಲ ಅನ್ಯಮನಸ್ಕರಾಗಿಯೂ ವಸ್ತುಗಳನ್ನು ಸರಿಯಾದ ಜಾಗದಲ್ಲೇ ಇಟ್ಟುಬಿಡುತ್ತೇವೆ! ಹೀಗಾಗಿ ತುಂಬ ಮುಖ್ಯವಾದ ಸಲಕರಣೆಗಳನ್ನಾದರೂ ಒಂದೇ ಜಾಗದಲ್ಲಿ ಯಾವಾಗಲೂ ಇಡುವ ಅಭ್ಯಾಸವನ್ನು ಮಾಡಿಕೊಂಡೆವೆಂದರೆ ನಮಗೆ ನಾವೇ ದೊಡ್ಡ ಸಹಾಯ ಮಡಿಕೊಂಡೆವು ಎಂದರ್ಥ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಉಲ್ಟಾಪಲ್ಟಾ ಆದ ನನ್ನ ಪ್ಲಾನು! : ಎಚ್. ಗೋಪಾಲಕೃಷ್ಣ ಸರಣಿ

ಅವರು ಎಲೆಕ್ಟ್ರಿಕ್ ಕಾಂಟ್ರಾಕ್ಟ್ ಮಾಡ್ತಾ ಇದ್ದರು, ಪಾರ್ಟ್ ಟೈಮ್ ಆಗಿ. ನೀನೂ ಇದನ್ನೇ ಮಾಡು, ದುಡ್ಡು ಚೆನ್ನಾಗಿ ಸಿಗುತ್ತೆ, ಹೇಗಿದ್ದರೂ ನಿಮ್ಮದು ಹೊಸಾ ಏರಿಯ, ಬೇಕಾದಷ್ಟು ಜನ ಮನೆ ಕಟ್ಟುತ್ತಾರೆ, ನೀನೇ ಕಾಂಟ್ರಾಕ್ಟ್ ಮಾಡಬಹುದು ಅಂತ ಹುರಿದುಂಬಿಸಿ ಏಣಿ ಹತ್ತಿಸಿದ್ದ. ಪಾರ್ಟ್ ಟೈಮ್ ಕೆಲಸ, ಅದೂ ಚೆನ್ನಾಗಿ ದುಡ್ಡು ಮಾಡಬಹುದು ಅನ್ನುವ ಹಾಗಿದ್ದರೆ ಒಂದು ಕೈ ನೋಡೇ ಬಿಡೋಣ ಅನ್ನುವ ಉತ್ಸಾಹ ತುಂಬಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ

ಸುನಂದಕ್ಕಗೆ ಮದುವೆಯಾಗಿ ಒಂದು ವಾರವೂ ಆಗಿರಲಿಕ್ಕಿಲ್ಲ. ದಿವಾಕರ ಭಾವ ಅವಳಿಗೆ ಉದ್ದದ ಹೆರಳನ್ನು ಕತ್ತರಿಸಲು ಆಜ್ಞೆಮಾಡಿದ್ದು! ನಗುವನ್ನೆ ಕಳೆದುಕೊಂಡಂತಿದ್ದ ಸುನಂದಕ್ಕ ತನ್ನ ಹೆರಳನ್ನು ಮೋಟು ಜಡೆ ಮಾಡಿಸಿಕೊಂಡು ‘ಅನೂ ಪುಟ್ಟಾ’ ಎಂದು ಯಾವತ್ತೂ ಕರೆವಂತೆ ‘ಅಮ್ಮಗೆ ಹೇಳು ಇನ್ನು ಮುಂದೆ ನನಗೆ ಜಡೆಹಾಕುವಾಗ ಯಾವತ್ತೂ ಕೈ ಸೋಲು ಬರುವುದಿಲ್ಲ’ ಅಂದಿದ್ದಳು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ವಾಸುದೇವ ನಾಡಿಗ್ ಕತೆ “ಅರ್ಥವಾಗುತ್ತಿದೆ ಎಲ್ಲ ಮೆಲ್ಲ ಮೆಲ್ಲನೆ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ