Advertisement

Tag: ಕೆಂಡಸಂಪಿಗೆ

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಆವಾಗಾವಾಗ ರಾತ್ರಿಗಳಲ್ಲಿ ತಾವಿಬ್ಬರೂ ಮೈಗೆ ಮೈ ಬೆಸೆದುಕೊಂಡು ತಾನು ಎಡದಿಂದ ಅವಳು ಬಲದಿಂದ ಎಷ್ಟೊತ್ತಿನವರೆಗೆ ಚುಕ್ಕೆಗಳೆಣಿಸಿದರೂ ಇಬ್ಬರೂ ಬಂದು ಒಂದುಕಡೆ ಸೇರದ ಆಟಕ್ಕೆ ಈಗ ಬೇರೆಯದೇ ಅರ್ಥ ಕಾಣಿಸಿ ಇದೆಲ್ಲ ಎಲ್ಲಿಹೋಗಿ ಮುಟ್ಟುವುದೋ ಎಂದು ಅಯೋಮಯಗೊಳ್ಳುವನು. ಹೀಗೆ ಇಲ್ಲಸಲ್ಲದ ಯೋಚನೆಗೀಡಾದವನು ದಾರಿತಪ್ಪಿದವನಂತೆ ಎಡವುತ್ತ ಮತ್ತೊಂದು ರಾತ್ರಿಯನ್ನು ತುಳಿಯುತ್ತ ತಳ್ಳುವನು. ಬಗ್ಗಡದ ಬದುಕು ಟಿಸಿಲೊಡೆವ ಸೂಚನೆ ಕಂಡು ಮಲಗಿದಲ್ಲೇ ಬಿರುಕು ಬಿಡುವನು.
ಲಕ್ಷ್ಮಣ ಶರೆಗಾರ ಕಥಾ ಸಂಕಲನ “ತಿದಿಯ ತುದಿಗೆ ಬೆಂಕಿಯ ಉಗುಳು” ಕೃತಿಯ “ಉಧೋ ಉಧೋ” ಕತೆ

Read More

ಖಂಡಕಾವ್ಯಕ್ಕೊಂದು ಪ್ರವೇಶ: ಯು.ಆರ್.ಅನಂತಮೂರ್ತಿ ಮುನ್ನುಡಿ

ಆತ್ಮ ಸಫಲತೆಗಾಗಿ ಆತ್ಮಾರ್ಪಣೆ ಮಾಡಿಕೊಳ್ಳುವ ಹೆಣ್ಣು ಪ್ರಣಯಿನಿಯಾಗಿಯೂ, ಹೆಂಡತಿಯಾಗಿಯೂ, ಮಗಳಾಗಿಯೂ, ತಾಯಿಯಾಗಿಯೂ, ‘ಬಜಾರಿ’ಯಾಗಿಯೂ ಅವನಿಗೆ ಒದಗುತ್ತಾಳೆ. ಇದನ್ನು ನಟಿಸಿ ತೋರಲು ತೇಜಶ್ರೀ ಕವನದಲ್ಲಿ ಒಂದು ಅಪರೂಪದ ಕಾವ್ಯ ಪ್ರಯೋಗವಿದೆ. ಇಲ್ಲಿ ಬರುವ ಅವನು ಪುರಾಣದ ಕೃಷ್ಣನೂ ಹೌದು, ನಿಜದ ಅವನೂ ಹೌದು. ಹಾಗೆಯೇ ರಾಧೆ ಪುರಾಣದ ರಾಧೆಯೂ ಹೌದು, ನಿಜದ ಅವಳೂ ಹೌದು. ಈ ಎರಡು ಸತ್ಯಗಳೂ ಒಟ್ಟಾಗಿ ನಮಗೆ ಭಾಸವಾಗುವುದರಿಂದ ಸಾಮಾಜಿಕ ಸಾಂಸಾರಿಕ ನೀತಿ ಅನೀತಿಗಳನ್ನು ಈ ಕವನ ಮೀರುತ್ತದೆ.
ಜ.ನಾ. ತೇಜಶ್ರೀ ಖಂಡಕಾವ್ಯ “ಅವನರಿವಲ್ಲಿ” ಕೃತಿಗೆ ಯು.ಆರ್.‌ ಅನಂತಮೂರ್ತಿ ಮುನ್ನುಡಿ

Read More

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಅಮ್ಮ ಮತ್ತು ಹುಣ್ಣಿಮೆ: ಸುಧಾ ಆಡುಕಳ ಬರಹ

ಪ್ರತಿದಿನ ಸ್ನಾನಮಾಡಿ ಬಂದಕೂಡಲೇ ಅಮ್ಮ ಮುಖದ ತುಂಬ ಪಾಂಡ್ಸ್ ಪೌಡರನ್ನು ಢಾಳಾಗಿ ಹಚ್ಚಿಕೊಳ್ಳುತ್ತಿದ್ದಳು. ಅಶ್ವತ್ಥದ ಎಲೆಯಾಕಾರದಲ್ಲಿ ಕಾಡಿಗೆಯನ್ನು ಚಂದಗೆ ಬೊಟ್ಟಾಗಿಸುತ್ತಿದ್ದಳು. ಎಲ್ಲರಂತೆ ಕುಂಕುಮವನ್ನು ಹಣೆಗೆ, ತಾಳಿಗೆ ಹಚ್ಚಿಕೊಳ್ಳದೇ ತುಟಿಗೆ ನವಿರಾಗಿ ಲೇಪಿಸಿಕೊಳ್ಳುತ್ತಿದ್ದಳು. ಎಲ್ಲವೂ ಮುಗಿದು ಕನ್ನಡಿಯಲೊಮ್ಮೆ ಇಣುಕುವಾಗ ಅವಳ ಮುಖದಲ್ಲೊಂದು ಹೂ-ನಗೆಯಿರುತ್ತಿತ್ತು.
ಇಪ್ಪತ್ತೊಂಭತ್ತು ವರ್ಷಗಳ ಹಿಂದೆ ಹುಣ್ಣಿಮೆಯ ರಾತ್ರಿ ತೀರಿಕೊಂಡ ತಮ್ಮ ತಾಯಿಯ ಕುರಿತು ಸುಧಾ ಆಡುಕಳ ಬರಹ ನಿಮ್ಮ ಓದಿಗೆ

Read More

ಮದುವೆಮನೇನೋ ಸಂತೆಕಟ್ಟೇನೋ: ಸುಮಾ ಸತೀಶ್ ಸರಣಿ

ಇಂತಾ ಜೋರಿನ ಅತ್ತೇ ಒಂದು ಪುಂಡ ಹಸಾನ ಪಳಗಿಸಿದ್ಲು. ಆ ಹಸು ಎಷ್ಟು ಜೋರು ಅಂದ್ರೇ ಯಾರಿಗೂ ಹಾಲು ಕರೆಯೋಕೇ ಬಿಡ್ತಿರಲಿಲ್ಲ. ನಮ್ಮತ್ತೇನೂ ಜೋರಲ್ವಾ. ಅದೂ ಜೋರು. ಇಬ್ರಲ್ಲೂ ಬಲು ಸ್ನೇಹ. ನಮ್ಮತ್ತೆ ಹಾಲು ಕರೆದರೆ ಕಮಕ್‌ ಕಿಮಕ್ ಅಂತಿರಲಿಲ್ಲ ತುಡುಗು ಮುಂಡೇದು. ಕೊನೇಗೆ ಮದುವೇ ದಿನ ಹಸೆಮಣೇ ಮೇಲಿದ್ದಾರೆ. ಈ ಹಸಾ ಹಾಲು ಕೊಡಲಿಲ್ಲ ಅಂತಾ ಹೇಳಿದ್ದಾರೆ. ನಮ್ಮತ್ತೆ ಹಸೇಮಣೇ ಮೇಲಿಂದ ಎದ್ದು ಹೋಗಿ ಹಾಲು ಕರೆದುಕೊಟ್ಟು ಬಂದಿದ್ದಾರೆ.
ಸುಮಾ ಸತೀಶ್ “ರಂಗಿನ ರಾಟೆ” ಸರಣಿಯಲ್ಲಿ ಮದುವೆ ಮನೆಯ ಮತ್ತಷ್ಟು ವಿಷಯಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ