Advertisement

Tag: ಕೆಂಡಸಂಪಿಗೆ

ಮರ್ಫಿ: ಸಮಯವೆಂಬ ಭ್ರಮೆಯ ಬರ್ಫಿ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಕಡಲಿನ ಪೂರಾ ಅವನದೇ ನಾವೆಗಳು. ಕಡುಗತ್ತಲಲ್ಲಿ ಬೀಳುವ ಕನಸುಗಳಿಗೆ ಆತನೇ ಕಂದೀಲು. ಇಂತಹ ಪ್ರೇಮದ ಪರಿಯ ವಿವರಣೆ ಆಕೆ ನೀಡುವುದು ಸ್ವತಃ ಆತನ ಮಗನಿಗೆ. ಆದರೆ ಡೇವಿಡ್‌ಗೆ ಎರಡು ಕಹಿ ಗುಳಿಗೆಗಳು ನೆನಪಿದೆ. ಒಂದು ತನ್ನ ಹೆತ್ತವ್ವ ಜನನಿಯಲ್ಲ ಎಂದು. ಮತ್ತು ತನ್ನ ತಂದೆ ಅನಿರೀಕ್ಷಿತ ಅಪಘಾತವೊಂದರಲ್ಲಿ ನಿಧನ ಹೊಂದಿದ್ದಾರೆಂದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿಯಲ್ಲಿ ಕನ್ನಡದ ‘ಮರ್ಫಿ’ ಸಿನಿಮಾದ ವಿಶ್ಲೇಷಣೆ

Read More

ಕತೆ ಕಟ್ಟುವ ಕಲೆಗಾರರು: ಸುಮಾ ಸತೀಶ್ ಸರಣಿ

ಆಗೆಲ್ಲಾ ಯರಗುಂಟೇಗೆ ಊರಿನ ತಂಕ ಬಸ್ಸಿರಲಿಲ್ಲ. ಒಂದೋ ಎರಡೊ ಕಿಲೋಮೀಟರ್ ನಡೆದು ಹೋಗಬೇಕಿತ್ತು. ಇನ್ನೂ ಕತೆ‌ ಮುಗಿದಿಲ್ಲ, ಯಾಸೆಟ್ಗೆ ಅತ್ಲಾಗೆ ನಡಿಯಮ್ಮಿ, ಮನೆತಂಕ ಬರ್ತೀನಿ ಅಂತ ಅದೇ ಅವತಾರದಲ್ಲಿ ಮಗಳ‌ಮನೆ ತಂಕಾನೂ ಹೋಗಿದೆ. ಬೀಗರು ಇವ್ರ ಅವತಾರ ನೋಡಿ, ನಕ್ಕಂಡು ಇವತ್ತಿದ್ದು ನಾಳೆ ಹೋಗಿ ಅಂದ್ರಂತೆ. ಈ ಅಜ್ಜಿ, ಹೂ ನನ್ ಕತೆ ಇನ್ನೂ ಮುಗಿದಿಲ್ಲ ಅಂತ ಕತೆ ಪೂರ್ತಿ ಹೇಳಿದ್ದಾದ ಮೇಲೆ ಬೇರೆ ಸೀರೆ ಉಟ್ಕಂಡು ವಾಪಸ್ ಬಂತಂತೆ. ಇದ್ನ ಹೇಳ್ಕಂಡು‌ ನಮ್ಮತ್ತೆದೀರೆಲ್ಲಾ ನಗಾಡ್ತಿದ್ರು.
ಸುಮಾ ಸತೀಶ್ “ರಂಗಿನ ರಾಟೆ” ಸರಣಿ

Read More

ಮೌಲ್ಯಗಳಿರುವುದು ಪಾಲಿಸಲೇ ಹೊರತು, ಬರೀ ಬೋಧಿಸಲಿಕ್ಕಲ್ಲ!!: ಬಸವನಗೌಡ ಹೆಬ್ಬಳಗೆರೆ ಸರಣಿ

ಬಹುತೇಕರು ಮಕ್ಕಳಿಗೆ ತಮ್ಮ ಮಗುವಿನ ಆಸಕ್ತಿಯ ಕ್ಷೇತ್ರ ಯಾವುದು? ಎಂಬುದನ್ನೇ ಗುರುತಿಸಿಯೇ ಇರುವುದಿಲ್ಲ. ತಾವು ಏನನ್ನು ಅಂದುಕೊಂಡಿರುತ್ತಾರೋ ಅದನ್ನು ಸಾಧಿಸಲು ಮಕ್ಕಳ ಮೇಲೆ ಒತ್ತಡ ಹೇರುತ್ತಾರೆ. ಟಿವಿ ಮಾಧ್ಯಮಗಳಲ್ಲಿ ಬರುವ ಸ್ಪರ್ಧೆಗಳಲ್ಲಿ ತಮ್ಮ ಮಗುವೂ ಭಾಗವಹಿಸಬೇಕು, ಬೇಗ ಫೇಮಸ್ ಆಗಬೇಕು ಎಂದು ಕೆಲವರು ತಮ್ಮ ಮಗುವಿಗೆ ಇಷ್ಟವಿದೆಯೋ ಇಲ್ಲವೋ ಎಂದು ಕೇಳದೇ ಸಿಕ್ಕ ಸಿಕ್ಕ ಕ್ಲಾಸ್‌ಗಳಿಗೆಲ್ಲಾ ಸೇರಿಸುತ್ತಾರೆ. ಜೊತೆಗೆ ಮಣಭಾರದ ಪುಸ್ತಕ, ಟ್ಯೂಷನ್! ಆ ಕೋಚಿಂಗ್, ಈ ಕೋಚಿಂಗ್ ಅಂತಾ ಮಕ್ಕಳ ಬಾಲ್ಯ ಇದರಲ್ಲೇ ಕಳೆದುಹೋಗುತ್ತೆ!!
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ಕನ್ನಡ –ಇಂಗ್ಲಿಷ್ ಅನುವಾದಗಳಲ್ಲಿ ಪದ ಕಚಗುಳಿ: ಸುಮಾವೀಣಾ ಸರಣಿ

ಇತ್ತೀಚೆಗೆ ಕೆಪಿಎಸ್ಸಿ ಪೂರ್ವಭಾವೀ ಪರೀಕ್ಷೆ ನಡೆಯಿತು. ಆ ಪ್ರಶ್ನೆ ಪತ್ರಿಕೆಯಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಅಚ್ಚಾಗಿದ್ದ ಪ್ರಶ್ನೆಗಳು ಸರಿ ಇದ್ದವು. ಅವೇ ಪ್ರಶ್ನೆಗಳು ಕನ್ನಡಕ್ಕೆ ಅನುವಾದ ಮಾಡುವಾಗ ದೋಷಗಳು ಸಂಭವಿಸಿದ್ದವು. ಆದಕಾರಣ ಪರೀಕ್ಷೆಯನ್ನೆ ರದ್ದುಮಾಡಿ ಇಲ್ಲವಾದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದವರನ್ನು ಪಾಸು ಮಾಡಿ ಎನ್ನುವ ಬೇಡಿಕೆಗಳು ಬಂದವು. ಕಳೆದ ಶನಿವಾರದ ವರದಿಯ ಪ್ರಕಾರ ಪೂರ್ವಭಾವಿ ಪರೀಕ್ಷೆಯ ಗೊಂದಲಗಳು ಇತ್ಯರ್ಥವಾಗುವವರೆಗೆ ಮುಖ್ಯ ಪರೀಕ್ಷೆ ನಡೆಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ.
ಸುಮಾವೀಣಾ ಬರೆಯುವ “ಮಾತು-ಕ್ಯಾತೆ” ಸರಣಿ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ

ಒಂದು ದಿನ ಕ್ಯಾಂಪಸ್ಸಿಗೆ ಬಂದ ಚಂದ್ರಮೌಳಿ ಸಂಜೆ ಸುಧಾಳೊಂದಿಗೆ ಟೀ ಕುಡಿಯುತ್ತಾ “ನೋಡು, ನಾನು ಕಲ್ಕತ್ತಾಗೆ ಹೋಗ್ತಿದ್ದೀನಿ. ಈ ಹೋರಾಟ ಎಲ್ಲ ಶಕ್ತಿಗುಂದುತ್ತಾ ಇದೆ. ಇದ್ರಿಂದೆಲ್ಲ ಏನಾದ್ರೂ ಆಗುತ್ತೆ ಅನ್ನೋ ನಂಬಿಕೆನೂ ನನಗಿಲ್ಲ. ಒಂದು ಅಮೆರಿಕನ್ ಕಂಪೆನಿಯಿಂದ ಒಳ್ಳೆ ಆಫರ್ ಇದೆ. ಎರಡು ವರ್ಷದ ಮೇಲೆ ಸ್ಟೇಟ್ಸ್‌ಗೆ ಹೋಗೋ ಛಾನ್ಸೂ ಇದೆ. ನಿಂಗೆ ಇದು ದ್ರೋಹದ ಥರ ಕಾಣಿಸಬಹುದು, ಪರ್ಸನಲ್ ಲೆವೆಲ್‌ನಲ್ಲೂ…
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕೆ.ಪಿ.ಸುರೇಶ ಕತೆ “ಯಾರಲ್ಲಿ, ಕಳೆದಿರುಳು….” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ