Advertisement

Tag: ಕೆಂಡಸಂಪಿಗೆ

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

Read More

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

ಮಡಿಕೇರಿ ಮೇಲ್ ಮಂಜು: ಸುಮಾವೀಣಾ ಸರಣಿ

ಮಳೆಗಾಲದಲ್ಲಿ ದಟ್ಟ ಮಂಜು ಆವರಿಸಿಬಿಟ್ಟರೆ ಐದಾರು ಮೀಟರುಗಳು ಸ್ಪಷ್ಟವಾಗಿ ಕಂಡರೆ ಹೆಚ್ಚು. ಉಳಿದಂತೆ ಮಂಜನ್ನೆ ಸೀಳಿಕೊಂಡು ಹೋಗಬೇಕಾಗಿರುತ್ತಿತ್ತು ಆಗ ಒಂಥರಾ ಥ್ರಿಲ್ ಆಗಿರುತ್ತಿತ್ತು. ವಾಹನ ಅಪಘಾತಗಳು ಸಂಭವಿಸುತ್ತಿದ್ದವು. ಮಳೆ ಜೋರಾಗಿ ಬಂದರೆ ಮಂಜು ಎಲ್ಲಿ ಹೋಗುತ್ತಿತ್ತೋ? ಬಹುಶಃ ಮಳೆಯ ರಭಸಕ್ಕೆ ಎಲ್ಲಿಯಾದರೂ ಅಡಗುತ್ತಿತ್ತೋ ತಿಳಿಯದು ರಣ ಮಳೆ ಚಚ್ಚಿ ಹೋದನಂತೆ ಯಾವುದೋ ಬಿಲದಿಂದ ಮೆಲ್ಲನೆ ಆಚೆ ಬಂದು ತಾಯಿ ಮಗುವನ್ನು ತಬ್ಬುವಂತೆ ಇಡೀ ಮಡಿಕೇರಿ ನಗರವನ್ನು ತಬ್ಬಿಬಿಡುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಮರುಭೂಮಿಯಲ್ಲಿ ಮರುಕಳಿಸುವ ಹುಂಬತನದ ಹಂಬಲಗಳು: ಅಚಲ ಸೇತು ಬರಹ

ಏರಿಯಾದ ಹತ್ತಿರದ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಡ್ರೋನ್ ಹಾರಿಸಿ ಸೆರೆಹಿಡಿದ ದೃಶ್ಯಗಳನ್ನು ಅಂತರ್ಜಾಲದ ಪುಟಕ್ಕೆ ಮಿನ್ನೇರಿಸುತ್ತಿದ್ದ ನೆವಾಡಾ ನಿವಾಸಿಯ ಲ್ಯಾಪ್ಟಾಪ್, ಡ್ರೋನ್ ಮತ್ತಿತರ ಸಲಕರಣೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡರು. ಹೀಗೆ ಅದಮ್ಯ ಕುತೂಹಲ ತಡೆಯಲಾರದೆ ಎಲ್ಲೆ ಮೀರಿ ವರ್ತಿಸುವರಿಗೆ, ಡ್ರೋನ್ ಹಾರಿಸಿ, ಕ್ಯಾಮೆರಾ ಮೂತಿಯನ್ನು ಬೇಲಿಯ ತೂತಿಗೆ ತೂರಿಸಿ ಒಳಗೆ ಇಣುಕಿ ನೋಡುವ ಚಪಲ ಚನ್ನಿಗರಾಯರಿಗೆ ದೊಡ್ಡ ಮೊತ್ತದ ದಂಡ ಹಾಗು ದೀರ್ಘ ಕಾಲದ ಕಾರಾಗೃಹ ಸಜೆಯಾಗಿದೆ.
ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ