Advertisement

Tag: ಕೆಂಡಸಂಪಿಗೆ

ಸಮಾಜ ಮತ್ತು ದೇವರ ಕುದುರೆ: ಸಚಿನ್ ಎ ಜೆ ಬರಹ

ಇಲ್ಲಿ ಶಿಕ್ಷಣದ ಹಸಿವು ಎದ್ದು ಕಾಣುವಂತಹ ದೃಶ್ಯ, ಯಾವ ಗಂಡಸಿನ ಆಧಾರವಿಲ್ಲದೆ ತನ್ನ ಮಗನ ಭವಿಷ್ಯಕ್ಕಾಗಿ ಏನೂ ಅರಿಯದ ಹೆಂಗಸು ಕಚೇರಿ, ಶಾಲೆ ಇವುಗಳ ಹೋರಾಟದಲ್ಲಿ ಗೆಲ್ಲುವ ಸನ್ನಿವೇಶ ನಿಜಕ್ಕೂ ಅದ್ಭುತ “ಅವ್ವ ನಾನು ಓದಲೂ ಬೇಕು ನಂಗೆ ನೀನು ಬೇಕು” ಎನ್ನುವಂತಹ ಒಂದು ಬರಹ ಓದು ಮತ್ತು ಪ್ರೀತಿ ಎರಡು ಮನುಷ್ಯನ ಬಹುಮುಖ್ಯ ಅಂಗವಾಗಿದೆ ಎಂಬುದನ್ನು ತೋರಿಸಿಕೊಡುತ್ತದೆ ರಾಮಾಂಜಿಗೆ ಓದಿನಲ್ಲಿ ಅಪಾರ ಆಸಕ್ತಿ. ಹಾಗಾಗಿ ತನ್ನ ಮಗನನ್ನು ಓದಿಸುವ ಉದ್ದೇಶದಿಂದ ರಾಮಾಂಜಿಯ ತಾಯಿ ಶಿಕ್ಷಣವನ್ನು ಕೊಡಿಸುವಂತಹ ದೃಶ್ಯ, ಅಲೆಮಾರಿ ಜೀವನಕ್ಕೂ ಕೂಡ ಶಿಕ್ಷಣ ಅಗತ್ಯ ಎಂಬುದನ್ನು ಸಾಬೀತುಪಡಿಸುತ್ತದೆ.
ಎಸ್. ಗಂಗಾಧರಯ್ಯ ಕಥಾಸಂಕಲನ “ದೇವರ ಕುದುರೆ”ಯ ಕುರಿತು ಸಚಿನ್ ಎ ಜೆ ಬರಹ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಹಾಗೇ ಒಂದು ಜೊಂಪು ಹತ್ತಿತ್ತು. ಕನಸಿನಲ್ಲಿ ತನ್ನಲ್ಲಿ ಉಳಿದಿದ್ದ ಟಿಕೆಟ್ ಒಂದಕ್ಕೆ ಲಕ್ಷ ರೂಪಾಯಿಯ ಬಂಪರ್ ಬಂದ ಹಾಗೆ, ಅದರಿಂದ ಬಂದ ಹಣದಲ್ಲಿ ತಂಗಿಯ ಮದುವೆ, ತನಗೊಂದು ಮೂರು ಚಕ್ರದ ಸ್ಕೂಟರ್, ಸಣ್ಣದೊಂದು ಲಾಟರಿ ಟಿಕೆಟ್ ಮಾರುವ, ಸ್ಟೇಷನರಿ ಅಂಗಡಿ. ಅದರಿಂದ ಬರುವ ಆದಾಯ. ಅಲ್ಲಿ ಹುಡುಗನೊಬ್ಬನನ್ನು ಕೆಲಸಕ್ಕೆ ಇರಿಸಿ ತಾನು ಬಿ.ಕಾಂ. ಮುಂದುವರಿಸಿದ ಹಾಗೆ……
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಬಂಪರ್‌ ಬಹುಮಾನ” ನಿಮ್ಮ ಓದಿಗೆ

Read More

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸೈನ್‌ ಹಾಕೋ ಫ್ರೆಂಡು…: ಎಚ್. ಗೋಪಾಲಕೃಷ್ಣ ಸರಣಿ

ಏನು ನೀನಿಲ್ಲಿ… ಅಂತ ಕೇಳಿದವರಿಗೆ ನನ್ನ ಹುಡುಕಾಟ ವಿವರಿಸಿ ವಿವರಿಸಿ ಬಾಯಿಪಾಠ ಆಗಿತ್ತು. ಬರೀ ಜಾಲಹಳ್ಳಿ ಅಂತ ಇದ್ದರೆ ಹುಡುಕೋದು ಅಸಾಧ್ಯ. ಆದರೂ ಇಂತ ಕಡೆ ಕೇಳು ಅಂತ ಅವರು ಸಿಕ್ಕಿದ ಜಾಗದಿಂದ ಒಂದು ಕಿಮೀ ದೂರ ಇರುವ ಮತ್ತೊಂದು ಜಾಗಕ್ಕೆ ಕಳಿಸಿ ಕೈ ತೊಳೆದವರು ಹೆಚ್ಚು. ಎಷ್ಟು ಉತ್ಸಾಹದಿಂದ ಬೆಳಿಗ್ಗೆ ಸೈಕಲ್ ಹತ್ತಿ ಹೊರಟಿದ್ದೆನೋ ಅಷ್ಟರ ನೂರು ಪಾಲು ಬೇಸರದಿಂದ ಮನೆಗೆ ವಾಪಸ್ ಆದೆ. ಅಣ್ಣನಿಗೆ ಈ ವಿಷಯ ವರದಿ ಮಾಡಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ನೇಪಾಳವೆಂಬ ಮತ್ತೊಂದು ಭಾರತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನೇಪಾಳದ ಜನರು ಶ್ರಮಜೀವಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಪರ್ವತ ಪ್ರದೇಶಗಳನ್ನು ಅವರು ಏರುವ ಮತ್ತು ಇಳಿಯುವ ರೀತಿ ಎಂಥವರಲ್ಲೂ ಅಚ್ಚರಿ ಮೂಡಿಸುತ್ತದೆ. ಮೊದಮೊದಲು ಪರ್ವತಾರೋಹಣಕ್ಕೆ ಹೊರಟವರಿಗೆ ಖಾಲಿ ಕೈಯ್ಯಲ್ಲಿ ಪರ್ವತದ ತುದಿ ತಲುಪುವುದೇ ಅಬ್ಬಬ್ಬಾ ಎನಿಸಿಬಿಡುತ್ತದೆ. ಆದರೆ ನೇಪಾಳದವರು ತಮ್ಮ ಬೆನ್ನ ಮೇಲೆ ಭಾರವಾದ ಚೀಲಗಳನ್ನು ಇಲ್ಲವೇ ವಸ್ತುಗಳನ್ನು ಹೊತ್ತುಕೊಂಡು ಪರ್ವತವನ್ನು ಏರುತ್ತಾರೆ; ಇಳಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ನೇಪಾಳದ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ