Advertisement

Tag: ಕೆಂಡಸಂಪಿಗೆ

ಐವತ್ತು ಪದ್ಯ, ಮೂವತ್ತಮೂರು ವರ್ಷ…: ದೀಪಾ ಗೋನಾಳ ಬರಹ

ಹೀಗೆ ತೇಲಿ ಹೋದ ಮತ್ತು ಕವಿತೆಯಾಗಿ ಉಳಿದು ಹೋದ ಜೀವ ಕೆತ್ತಿದ ಮೆತ್ತನೆ ಪದಗಳು ಬದುಕನ್ನ ಅವನು ಪಳಗಿಸ ಹೊರಟ ದಾರಿ ನಡುವೆ ನಿಂತು ನಕ್ಕ ದಾರಿಗಲ್ಲು. ಆ ಕಲ್ಲಿಗೂ ಕರುಳುಂಟು ಎನ್ನುವ ಅವನೊಳಗಿನ ಜೀವನಪ್ರೀತಿ. ಕವಿ ತಾನು ಇಲ್ಲದಾಗ ನಾವು ಅವನ ಮನೆಗೆ ಹೋದ್ರೆ ಏನು ಮಾಡಬೇಕು ಅಂತ ಹೇಳಿದ್ದಾನೆ, ಹೇಳಿ ಹೋಗಿದ್ದಾನೆ. ಅವನು ಇದನ್ನೆಲ್ಲ ಯಾಕೆ ಮೊದಲೇ ಇಷ್ಟು ನಿಖರವಾಗಿ ಹೇಳಿದ ಅನ್ನೊ ಪ್ರಶ್ನೆ ನನ್ನದು, ಆದರೆ ಅವನು ಹೇಳಿದ ಮಾತಿಗೆ ಬೆರಗೂ ಹಿಂಬಾಲಿಸೋದು ಕಂಡು ಆಶ್ಚರ್ಯವೂ..
ಎರಡು ವರ್ಷಗಳ ಹಿಂದೆ ತೀರಿಕೊಂಡ ಯುವಕವಿ ಅನಿಲ ಹುಲಮನಿ ಅವರ ಕವನ ಸಂಕಲನ “ಹೊಸ ಅಧ್ಯಾಯ”ವನ್ನು ಧಾರವಾಡದ ಕ್ರಾಂತಿ ಪ್ರಕಾಶನ ಪ್ರಕಟಿಸಿದ್ದು, ಈ ಸಂಕಲನದ ಕುರಿತು ದೀಪಾ ಗೋನಾಳ ಬರಹ

Read More

ಕೇರಿಯ ಕುಟುಂಬವೊಂದರ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಪಕ್ಕದ ಊರಿಗೆ ಒಂದೆರಡು ಬಾರಿ ಹೋದಾಗ ಅವರ ಮನೆಗೆ ನಾವು ಹೋಗಿದ್ದೆವು. ಆದರೆ ಹಿರಿಮಗ ಪಾಂಡುರಂಗನ ಮೇಲೆ ಬಹಳಷ್ಟು ಜವಾಬ್ದಾರಿ ಇತ್ತು. ಆತ ದುಡಿದ… ದುಡಿಯುತ್ತಲೆ ಇದ್ದ. ತಂಗಿಯ ಮದುವೆಯನ್ನು ಬಹಳ ಜೋರಾಗಿಯೆ ಮಾಡಿದ. ವ್ಯಾಪಾರ ಚೆನ್ನಾಗಿಯೇ ನಡೆಯುತ್ತಿತ್ತು. ತಮ್ಮನ ಮದುವೆಯೂ ಆಗಿ ಆತ ಬೇರೆಯಾದನು. ಪಾಂಡುರಂಗ ಎಲ್ಲ ಜವಾಬ್ದಾರಿಗಳ ನಡುವೆ ಒಂದಿಷ್ಟು ಸಾಲಗಾರನಾದ.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿಯ ಇಪ್ಪತ್ತಾರನೆಯ ಕಂತು ನಿಮ್ಮ ಓದಿಗೆ

Read More

‘ಮೋಹಿತ’ನ ಮೋಹಕ ಕವಿತೆಗಳು: ಅಬ್ದುಲ್‌ ರಶೀದ್‌ ಕವನ ಸಂಕಲನಕ್ಕೆ ಎಸ್‌. ಮಂಜುನಾಥ್‌ ಮುನ್ನುಡಿ

ಕರಗಿ-ಹರಿಯುವ- ಈ ಶಬ್ದಗಳನ್ನು ಬಳಸಬೇಕಾಗುವುದರಿಂದ ರಶೀದರದ್ದು ಒಂದು ‘ದ್ರವ ಪ್ರತಿಭೆ’! ತನ್ನನ್ನು ಪೂರಾ ಬಿಟ್ಟುಕೊಟ್ಟೇ ಹರಿದುಹೋಗುವಂತಿರುವುದು ನದಿಯ ಜೀವಂತಿಕೆ ತಾನೇ? ಇಷ್ಟು ಹೇಳಿದರೆ ರಶೀದರ ಕವಿತೆಯ ಗುಣವನ್ನು ಪೂರ್ತಿ ಹೇಳಿದಂತಾಗುವುದಿಲ್ಲ. ಅಷ್ಟು ವೈಚಿತ್ರ್ಯಗಳನ್ನು ಒಳಗೊಂಡುದು ಅದು. ಮಾತಿನಲ್ಲಿ ಪ್ರತಿಮೆಯಲ್ಲಿ ಚಿಂತನೆಯಲ್ಲಿ ಭಾವನೆಯಲ್ಲಿ ಹಾಗೆ ವಿಚಿತ್ರವಾದುದು. ಒಂದು ಕಾರಣ: ಇದು ಕವಿತೆಗೆ ಸೇರುವುದು. ಇದು ಸೇರಲಾರದ್ದು ಎಂಬ ಭೇದವಿರದೆ ಏನೆಲ್ಲವನ್ನು ಬೇಕಾದರೂ ಒಳಗೊಳ್ಳುವಂಥದು. ಹಾಗಿದ್ದೂ ಅಂತಿಮವಾಗಿ ಸಹಜತೆಯೇ ಹೆಗ್ಗುರುತಾದ್ದು.
ಅಬ್ದುಲ್‌ ರಶೀದ್‌ ಕವನ ಸಂಕಲನ “ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನ ಹುರಿ”ಗೆ ಎಸ್‌. ಮಂಜುನಾಥ್‌ ಬರೆದ ಮುನ್ನುಡಿ

Read More

ಒಮಾಹಾದಲ್ಲಿ ಟೊಮೆಟೋ ಸಾರು!: ಗುರುಪ್ರಸಾದ ಕುರ್ತಕೋಟಿ ಸರಣಿ

ನಮ್ಮವರಲ್ಲಿ ಹೆಚ್ಚಿನವರು ಅಲ್ಲಿನವರಿಗೆ ತುಂಬಾ ಹೆದರುತ್ತೇವೆ. ಅಮೆರಿಕನ್ನರು ತುಂಬಾ superior ಅಂತ ನಮ್ಮವರು ಭಾವಿಸಿಬಿಡುತ್ತಾರೆ. ಅಲ್ಲಿಗೆ ಹೋದಾಗಲೆ ಅದು ಸುಳ್ಳು ಅಂತ ಗೊತ್ತಾಗುತ್ತದೆ. ಅವರೂ ಕೂಡ ನಮ್ಮಂತೆಯೇ ಮನುಷ್ಯರೇ, ಅವರಿಗೂ ತಮ್ಮ ದೈನಂದಿನ ಆಗುಹೋಗುಗಳ ಬಗ್ಗೆ ಕಳವಳ ಇದೆ, ಅವರಿಗೂ ದುಡ್ಡಿನ ಚಿಂತೆ ಇದೆ, ತಾವು ಒಂದು ವೇಳೆ ಕೆಲಸ ಕಳೆದುಕೊಂಡರೆ ಹೇಗೆ ಎಂಬ ಭಯ ಇದೆ.. ಇತ್ಯಾದಿ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಏಳನೆಯ ಬರಹ

Read More

ತಿಜೋರಿಯಿಂದ ತಪ್ಪಿಸಿಕೊಂಡ ಘಳಿಗೆಗಳೆಷ್ಟೋ…: ಆಶಾ ಜಗದೀಶ್ ಅಂಕಣ

ಸುಮ್ಮನೇ ತಟ್ಟೆಯ ಮುಂದೆ ಕುಳಿತು ಸಮಯ ಉರುಳದಂತೆ, ಈ ತುತ್ತು ಮತ್ತಾರದೋ ಚೀಲ ಸೇರಲಿ ಎಂದಷ್ಟೇ ಪ್ರಾರ್ಥಿಸುತ್ತಾ… ಇಷ್ಟೇ ಅಲ್ಲವಾ ಈ ಬದುಕು ಎನ್ನುವ ಅಂತಿಮ ಸತ್ಯದ ದರ್ಶನವಾದಾಗ ಯಾವುದೆಲ್ಲವನ್ನು ಬೇಕು ಎಂದುಕೊಳ್ಳುತ್ತಿದ್ದೇವೋ ಅದಾವುದೂ ನಮ್ಮ ಆತ್ಯಂತಿಕ ಜರೂರತ್ತಿನ ಪಟ್ಟಿಯಲ್ಲಿ ಇರಲೇ ಇಲ್ಲ ಎನ್ನುವುದನ್ನು ಪ್ರಯಾಸದಿಂದ ಮನಗಾಣುತ್ತಾ… ಯಾವುದೂ ಪೂರ್ಣವಲ್ಲ ಇಲ್ಲಿ… ಈ ರೈಲು ಬಂಡಿ, ನಾವು ಹತ್ತುವ ಮುಂಚೆಯೇ ಪಯಣ ಆರಂಭಿಸಿತ್ತು ಮತ್ತು ನಾವು ಇಳಿದ ನಂತರವೂ ಪಯಣಿಸುತ್ತಲೇ ಇರುತ್ತದೆ..
ಆಶಾ ಜಗದೀಶ್ ಅಂಕಣ “ಆಶಾ ಲಹರಿ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ