Advertisement

Tag: ಕೆಂಡಸಂಪಿಗೆ

ವೇಗಸ್ಸಿನಿಂದ ವಿಂಬಲ್ಡನ್‌ವರೆಗೆ: ಅಚಲ ಸೇತು ಬರಹ

ಫ್ರೆಂಚ್‌ ಓಪನ್ ಪಂದ್ಯಾವಳಿಯ ಕಡೆಯ ಆಟದಲ್ಲಿ ಅದೇನಾಯಿತೋ ಏನೋ ಟೋಫನ್ ಸರಿಯಾಗೇ ಕೂರದೆ ಕೆಳಗೆ ಜಾರುವಂತಾಗುತ್ತಿತ್ತು. ಪ್ರಾಣಪದಕವಾಗಿದ್ದ ತನ್ನ ಇಮೇಜನ್ನು ಕಾಪಾಡಿಕೊಳ್ಳುವ ಸಲುವಾಗಿ ಅತ್ತಿಂದಿತ್ತ ಜೋರಾಗಿ ಓಡಾಡಲು ಹೆದರಿ ಪ್ರತಿಷ್ಠಿತ ಚಾಂಪಿಯನ್ಷಿಪ್ಪನ್ನೇ ಕೈಬಿಟ್ಟಿದ್ದ! ಅದು ಅಂದಿನ ಕತೆ. ಗಂಭೀರವಾದ ಮನ ಮಂಥನದ ಮೂಲಕ ತನ್ನತನವ ಅಪ್ಪಿಕೊಳ್ಳುವ ಪ್ರಕ್ರಿಯೆಯ ಭಾಗವಾಗಿ ಅಳಿದುಳಿದ ಕೂದಲಿನ ಬೊಕ್ಕ ತಲೆಯನ್ನು ಚೊಕ್ಕವಾಗಿ ಬೋಳಿಸಿಕೊಂಡು ಸಾರ್ವಜನಿಕವಾಗಿ ಓಡಾಡತೊಡಗಿದ.
ಟೆನ್ನಿಸ್‌ ತಾರೆ ಲಾಸ್‌ ವೇಗಸ್‌ ಮೂಲದ ಆಂಡ್ರೆ ಅಗಸಿಯ ಕುರಿತ ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ

ಅಪ್ಪನ ನಿರ್ಧಾರ ಪಲ್ಲವಿಗೆ ಅಡ್ಡಕತ್ತರಿಯಲ್ಲಿ ಸಿಲುಕಿಸಿತು. ತಾನು ಮಾಡದೇ ಇರುವ ತಪ್ಪಿಗೆ ಶಿಕ್ಷೆ ಅನುಭವಿಸಿದಂತಾಗಿದೆ, ಹೀಗಾಗುತ್ತದೆ ಅಂತ ಕನಸು ಮನಸ್ಸಿನಲ್ಲೂ ಯೋಚನೆ ಮಾಡಿರಲಿಲ್ಲ ನಾನು ಸರಿಯಾಗಿ ಓದಿ ಇಡೀ ಕ್ಲಾಸಿಗೇ ಫಸ್ಟ್ ಬರಬೇಕು ಮುಂದೆ ಕಾಲೇಜು ಸೇರಿ ದೊಡ್ಡ ಸಾಧನೆ ಮಾಡಬೇಕು ಅಂತ ಏನೇನೋ ಕನಸು ಕಂಡಿದ್ದೆ.
ಶರಣಗೌಡ ಬಿ.ಪಾಟೀಲ ತಿಳಗೂಳ ಬರೆದ ಪ್ರಬಂಧ “ವಿಳಾಸ ತಪ್ಪಿದ ಪತ್ರ” ನಿಮ್ಮ ಓದಿಗೆ

Read More

ತಾರಿದಂಡೆ – ಕಳೆದು ಹೋದ ಬದುಕಿನ ಸುಂದರ ಯಾನ: ಶ್ವೇತಾ ಹೊಸಬಾಳೆ ಬರಹ

ಈ ಮುತ್ತಿನಂಥಾ ಮಾತುಗಳ ಸರಣಿ ಮುಂದಿನ ಬರಹದಲ್ಲೂ ಮಾಲೆಯಾಗಿ ನಾಲ್ಕು ಸಾಲು ಗೀಚಿಯೋ, ಫೇಸ್ಬುಕ್, ವಾಟ್ಸ್ ಅಪ್‌ಗಳ ಸ್ಟೇಟಸ್‌ಗಳಲ್ಲಿ ಬರುವ ಕವನಗಳನ್ನೋದಿಕೊಂಡು ಬೀಗುವವರ ಕಿವಿಹಿಂಡಿದೆ. “ಕವಿತೆ ಒಂದು ಜೀವನ ದೃಷ್ಟಿ, ಎಷ್ಟೆಲ್ಲಾ ಸಂವೇದನಾಶೀಲರ ಪ್ರಜ್ಞಾ ಪ್ರವಾಹದ ಮನೋಸಂಗಮದಿಂದ ಅರಳುವ ಜೀವನ ಕಲೆ” ಎನ್ನುತ್ತಾ ಪರಂಪರೆಯನ್ನು ಅರಿತಿರುವುದರ ಜೊತೆಗೆ ಕವಿತಾರಚನೆಗೆ ಆಳವಾದ ಧ್ಯಾನ ಅಧ್ಯಯನದ ಅಗತ್ಯವಿದೆ ಎನ್ನುವದನ್ನು ಹೇಳುತ್ತದೆ. ಅವರ ಪುಟ್ಟ ಪುಟ್ಟ ವಾಕ್ಯಗಳನ್ನು ಓದುವುದೇ ಖುಷಿ.
ಜಯಂತ ಕಾಯ್ಕಿಣಿಯವರ “ತಾರಿದಂಡೆ” ಕೃತಿಯ ಕುರಿತು ಶ್ವೇತಾ ಹೊಸಬಾಳೆ ಬರಹ

Read More

ಮಡಿಕೇರಿ ಮೇಲ್ ಮಂಜು: ಸುಮಾವೀಣಾ ಸರಣಿ

ಮಳೆಗಾಲದಲ್ಲಿ ದಟ್ಟ ಮಂಜು ಆವರಿಸಿಬಿಟ್ಟರೆ ಐದಾರು ಮೀಟರುಗಳು ಸ್ಪಷ್ಟವಾಗಿ ಕಂಡರೆ ಹೆಚ್ಚು. ಉಳಿದಂತೆ ಮಂಜನ್ನೆ ಸೀಳಿಕೊಂಡು ಹೋಗಬೇಕಾಗಿರುತ್ತಿತ್ತು ಆಗ ಒಂಥರಾ ಥ್ರಿಲ್ ಆಗಿರುತ್ತಿತ್ತು. ವಾಹನ ಅಪಘಾತಗಳು ಸಂಭವಿಸುತ್ತಿದ್ದವು. ಮಳೆ ಜೋರಾಗಿ ಬಂದರೆ ಮಂಜು ಎಲ್ಲಿ ಹೋಗುತ್ತಿತ್ತೋ? ಬಹುಶಃ ಮಳೆಯ ರಭಸಕ್ಕೆ ಎಲ್ಲಿಯಾದರೂ ಅಡಗುತ್ತಿತ್ತೋ ತಿಳಿಯದು ರಣ ಮಳೆ ಚಚ್ಚಿ ಹೋದನಂತೆ ಯಾವುದೋ ಬಿಲದಿಂದ ಮೆಲ್ಲನೆ ಆಚೆ ಬಂದು ತಾಯಿ ಮಗುವನ್ನು ತಬ್ಬುವಂತೆ ಇಡೀ ಮಡಿಕೇರಿ ನಗರವನ್ನು ತಬ್ಬಿಬಿಡುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೇಳನೆಯ ಕಂತು ನಿಮ್ಮ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ