Advertisement

Tag: ಕೆ. ಸತ್ಯನಾರಾಯಣ

ನಮಗೊಂದು ಸೊಸೆ ಬೇಕು: ಕೆ. ಸತ್ಯನಾರಾಯಣ ಹೊಸ ಕಾದಂಬರಿಯ ಆಯ್ದ ಭಾಗ

ಸತೀಶ ದುರ್ದಾನ ತೆಗೆದುಕೊಂಡವನಂತೆ ರೂಮಿಗೆ ಹೋಗಿ ಬಾಗಿಲನ್ನು ಪಟಾರನೆ ಹಾಕಿಕೊಂಡ. ಹಾಲ್‌ನಲ್ಲೇ ಉಳಿದಿದ್ದ ಮೂರ್ತಿ-ಅನಿತಾ ಕೂಡ ಕಾಲೆಳೆದುಕೊಂಡು ರೂಮಿಗೆ ಹೋದರು. ಇಬ್ಬರೂ ಮಂಚದ ಮೇಲೆ ನೀಟಾಗಿ ಹಾಸಿದ್ದ ಹಾಸಿಗೆಯ ಮೇಲೆ ಕುಳಿತುಕೊಂಡು ಒಬ್ಬರನ್ನೊಬ್ಬರು ನೋಡುತ್ತಲೇ ಇದ್ದರು. ಮಾತೇ ಹೊರಡಲಿಲ್ಲ. ಅನಿತಾ ಹತ್ತು ಸಲ ಬಚ್ಚಲು ಮನೆಗೆ ಹೋಗಿ ಬಂದರು. ಮೂರ್ತಿ ಒಂದಿಪ್ಪತ್ತು ಸಲ ಕೂದಲನ್ನು ಕಿತ್ತು ಹಾಕಿದರು. ಬಲಗೈ ಮಧ್ಯ ಬೆರಳಿನ ಉಗುರನ್ನು ಕಡಿಯುತ್ತಲೇ ಇದ್ದರು. ದೀಪ ಆರಿಸಿ ಮಲಗಲು ಇಬ್ಬರಿಗೂ ಭಯವಾಯಿತು. ಬಲ್ಬ್‌ ಪ್ರತಿದಿವಸವೂ ಹೊರಡಿಸುವುದಕ್ಕಿಂತ ಹೆಚ್ಚಿನ ಕಾಂತಿಯನ್ನು ಹೊರಡಿಸುತ್ತಿದೆ ಅನಿಸಿತು.
ಕೆ. ಸತ್ಯನಾರಾಯಣ ಹೊಸ ಕಾದಂಬರಿ “ನಮಗೊಂದು ಸೊಸೆ ಬೇಕು” ಕೃತಿಯ ಆಯ್ದ ಭಾಗ

Read More

 ರೂಪಿಸಿದ ಮುಂಬೈ, ರೂಪುಗೊಂಡ ಮುಂಬೈ: ಕೆ. ಸತ್ಯನಾರಾಯಣ ಕೃತಿಯ ಪುಟಗಳು

ನವರೋಜಿ ಶಾಲೆಗೆ ಸೇರಿದ ಕಾಲಾವಧಿ ಎಂತಹುದೆಂದರೆ, ಮುಂಬೈ, ನಗರವಾಗಿ, ಪ್ರಾಂತ್ಯವಾಗಿ, ಶಿಕ್ಷಣ ಕ್ಷೇತ್ರದಲ್ಲಿ ನಾನಾ ರೀತಿಯ ಪ್ರಯೋಗ, ಪರಿವರ್ತನೆಗಳನ್ನು ಕಾಣುತ್ತಿದ್ದ ದಿನಗಳವು. ನೂರಾರು ಕನಸಿಗರು, ಪ್ರಯೋಗಶೀಲರು, ವಿಶಾಲ ಹೃದಯದ ಪಾಶ್ಚಿಮಾತ್ಯರು, ಎಲ್ಲರಿಗೂ ಶಿಕ್ಷಣದ ಬಗ್ಗೆ ಆಸಕ್ತಿ. ಭಾರತೀಯರನ್ನು ಹೊಸ ವಿಚಾರಗಳಿಗೆ, ಕಲಿಯುವ ಪದ್ಧತಿಗಳಿಗೆ ತೆರೆಯುವ ಹುಮ್ಮಸ್ಸು. ನವರೋಜಿ ಈ ಎಲ್ಲ ಕನಸು, ಪ್ರಯೋಗಗಳ ಫಲಾನುಭವಿ. ಮೊದಲನೆಯ ತಲೆಮಾರಿನ ಫಲಾನುಭವಿ.
ಕೆ. ಸತ್ಯನಾರಾಯಣ ಹೊಸ ಕೃತಿ “ದಾದಾಭಾಯಿ ನವರೋಜಿ” ಕೆಲವು ದಿನಗಳಲ್ಲಿ ಬಿಡುಗಡೆಯಾಗಲಿದ್ದು, ಇಂದು ನವರೋಜಿ ಅವರ ೨೦೦ನೇ ಹುಟ್ಟುಹಬ್ಬ, ಅದರ ಪ್ರಯುಕ್ತ ಈ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ಸಂದರ್ಶನ ಚೆನ್ನಾಗಿ ಮೂಡಿ ಬಂತು. ಬಾಲಮುರಳಿ ಸಂಗೀತದ ಬಗ್ಗೆ, ತಮ್ಮ ಬಗ್ಗೆ ಮಾತ್ರವಲ್ಲ, ಉಳಿದ ಸಂಗೀತಗಾರರ ಬಗ್ಗೆ ಕೂಡ ಅದ್ಭುತ ಒಳನೋಟಗಳನ್ನು ನೀಡಿದರು. ಮಾತು ಮಾತಿಗೂ ಹಾಡುತ್ತಿದ್ದರು. ಕಣ್ಣುಗಳಲ್ಲಿ ಅದೇನು ತಲ್ಲೀನತೆ. ಮೈಮರೆತು ಇನ್ನೊಂದು ಲೋಕಕ್ಕೆ ಹೋಗಿ ಕೇಳುಗರನ್ನೂ, ವೀಕ್ಷಕರನ್ನೂ ಇನ್ನೊಂದು ಲೋಕಕ್ಕೆ ಕರೆದೊಯ್ಯುವ ಉತ್ಸುಕತೆ. ಮಾತುಕತೆಯ ಉದ್ದಕ್ಕೂ.
ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ “ಅಕಾಡೆಮಿ ಒಲ್ಲೆನೆಂದ ಬಾಲಮುರಳಿ ಕೃಷ್ಣ” ನಿಮ್ಮ ಓದಿಗೆ

Read More

ಪ್ರಯಾಣ-ಪ್ರವಾಸದಲ್ಲಿ ಓದಬೇಕೆ?: ಕೆ. ಸತ್ಯನಾರಾಯಣ ಹೊಸ ಕೃತಿಯ ಒಂದು ಬರಹ

ಪ್ರವಾಸ-ಪ್ರಯಾಣದಲ್ಲಿ ಸಹಪ್ರಯಾಣಿಕರು ನಮ್ಮ ಓದಿನ ರೀತಿಯನ್ನು ಪ್ರಭಾವಿಸುತ್ತಾರೆ. ಅಲ್ಲದೆ, ಪ್ರವಾಸ-ಪ್ರಯಾಣದ ಉದ್ದೇಶ, ಓದುವುದೇನಲ್ಲ. ರೈಲಿನಲ್ಲಾಗಲಿ, ವಿಮಾನದಲ್ಲಾಗಲಿ ನಿಮಗೆ ಊಟಕ್ಕೆ, ನಿದ್ದೆಗೆ, ಶೌಚಕ್ಕೆ ವ್ಯವಸ್ಥೆ, ಅನುಕೂಲ ಮಾಡಿಕೊಡಬಹುದೇ ಹೊರತು ಓದಿಗಲ್ಲ. ನೀವು ಓದುವುದರಿಂದ ಎಷ್ಟೋ ಸಲ ಸಹಪ್ರಯಾಣಿಕರಿಗೆ ತೊಂದರೆಯೂ ಆಗಬಹುದು. ನಿಮ್ಮನ್ನು ಒಬ್ಬ ವಿಚಿತ್ರ ಪ್ರಾಣಿಯೆಂದು ಕೂಡ ಪರಿಗಣಿಸಬಹುದು.
ಕತೆಗಾರ ಕೆ. ಸತ್ಯನಾರಾಯಣ ಬರೆದ “ಓದುವವರೆಲ್ಲ ಓದುಗರೆಲ್ಲ-ಹಾಗಾದರೆ?” ಹೊಸ ಕೃತಿಯ ಒಂದು ಬರಹ ನಿಮ್ಮ ಓದಿಗೆ

Read More

ನೆದರ್‌ಲ್ಯಾಂಡ್ಸ್ ರಾಜಕಾರಣ- ಒಂದು ಅಪೂರ್ಣ ಅನುಬಂಧ: ಕೆ. ಸತ್ಯನಾರಾಯಣ ಪ್ರವಾಸ ಸರಣಿ

ನಾಗರಿಕರನ್ನು ಸಾಕಬೇಕು, ಪೋಷಿಸಬೇಕು ಎನ್ನುವುದಕ್ಕಿಂತ ಹೆಚ್ಚಾಗಿ, ಅವರನ್ನು ಸಬಲಗೊಳಿಸಬೇಕು, ಅವರು ಸರ್ಕಾರ, ರಾಜ್ಯದ ಮೇಲೆ ಅವಲಂಬಿತರಾಗದ ಹಾಗೆ ನೋಡಿಕೊಳ್ಳಬೇಕು, ಹಾಗಾದಾಗ ಮುಂದೆ ಅವರೇ ದೇಶದ ಆರ್ಥಿಕ-ಸಾಮಾಜಿಕ ಅಭಿವೃದ್ಧಿಯ ಕಡೆ ಗಮನ ಹರಿಸುತ್ತಾರೆ ಎಂಬುದು ಈ ಸಮಾಜದ ನಿಲುವು. ಉನ್ನತ ಮಟ್ಟದ ರಾಷ್ಟ್ರೀಯ ಆದಾಯ, ತಲಾವಾರ್ಷಿಕ ಆದಾಯದ ಹಂತವನ್ನು ತಲುಪಿದ ದೇಶದಲ್ಲಿ ಮಾತ್ರ ಇದು ಸಾಧ್ಯ. ಶ್ರೀಮಂತರು, ಚಕ್ರವರ್ತಿಗಳು ಇಲ್ಲವೆಂದಿಲ್ಲ.
ಕೆ. ಸತ್ಯನಾರಾಯಣ ಬರೆಯುವ ಪ್ರವಾಸ ಪ್ರಬಂಧಗಳ “ನೆದರ್‌ಲ್ಯಾಂಡ್ಸ್ ಬಾಣಂತನ” ಸರಣಿಯ ಕೊನೆಯ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ