Advertisement

Tag: ಕೆ. ಸತ್ಯನಾರಾಯಣ

ಹೊಸ ಸ್ವರೂಪಕ್ಕೆ ಕಾಯುತ್ತಿರುವ ಪ್ರವಾಸ ಕಥನ

ಎರಡು ಮೂರು ದಶಕಗಳ ಹಿಂದೆ ವಿದೇಶಗಳ ಬಗ್ಗೆ ಇದ್ದಷ್ಟು ಕುತೂಹಲ ಈಗ ಭಾರತದಲ್ಲಾಗಲಿ, ಮೂರನೆ ಜಗತ್ತಿನ ದೇಶಗಳಲ್ಲಾಗಲಿ ಇಲ್ಲ. ಜಾಗತೀಕರಣವೂ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ, ಉದ್ಯೋಗ, ವ್ಯಾಪಾರ, ಪ್ರವಾಸಗಳಿಗೆ ಬೇರೆ ದೇಶಗಳಿಗೆ ಹೋಗಿ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚು ಅವಕಾಶಗಳು ಕೂಡ ತೆರೆದಿವೆ. ಉದಾಹರಣೆಗೆ ಕರ್ನಾಟಕದ ಪ್ರತಿ ಜಿಲ್ಲೆಯಿಂದ ಕನಿಷ್ಠ ಹತ್ತು ಕುಟುಂಬಗಳ ಸದಸ್ಯರಾದರೂ, ಬಂಧುಗಳಾದರೂ ಈಗ ಹೊರದೇಶಗಳೊಡನೆ ಬೇರೆ ಬೇರೆ ರೀತಿಯಲ್ಲಿ ಸಂಪರ್ಕ, ಒಡನಾಟ ಇಟ್ಟುಕೊಂಡಿರುತ್ತಾರೆ.
ಕೆ. ಸತ್ಯನಾರಾಯಣ ಪ್ರವಾಸ ಕಥನ “ಅಮೆರಿಕದಲ್ಲಿ ಬಸವನಗುಡಿ”ಯ ಒಂದು ಬರಹ ನಿಮ್ಮ ಓದಿಗೆ

Read More

ಪ್ರಬಂಧಕಾರನಿಗೆ ಉಪದೇಶಾಮೃತ

ಪ್ರಾಮಾಣಿಕವಾದದ್ದಾಗಲೀ, ಯಥೋಚಿತವಾದದ್ದಾಗಲೀ, ದುರುದ್ದೇಶಪೂರ್ವಕವಾದದ್ದಾಗಲೀ ಉಪದೇಶವೆಂಬುದು ಉಪದೇಶವೇ! ಈ ಜಗತ್ತಿನಲ್ಲಿ ಉಪದೇಶಗಳಿಂದ ಆಗಿರುವಷ್ಟು ಹಾವಳಿ ಇನ್ನು ಯಾವುದರಿಂದಲೂ ಆಗಿಲ್ಲ. ಎಲ್ಲ ಬಣ್ಣದ, ಎಲ್ಲ ನೆರಳಿನ, ಎಲ್ಲ ಧರ್ಮದ, ಎಲ್ಲ ವಿತಂಡವಾದದ ಸಕಲ ರೀತಿಯ ಆಧ್ಯಾತ್ಮಿಕ, ಸಾಂಸ್ಕೃತಿಕ ಉಪದೇಶಗಳಿಂದ ಈ ಜಗತ್ತು ನಲುಗಿ ನಲುಗಿ ಬಸವಳಿದುಹೋಗಿದೆ. ಈಗಾಗಲೇ ಸತ್ಯವನ್ನು ಕಂಡಾಗಿದೆ, ಹೇಳಿಯೂ ಆಗಿದೆ ಎಂಬ ಬಾಲಿಶ ಧೋರಣೆಯಿಂದ ಕೊನೆಗೂ ನಾನು ಒಂದು ಮಾತು ಹೇಳುತ್ತೇನೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಕೊನೆಯ ಪ್ರಬಂಧ ನಿಮ್ಮ ಓದಿಗೆ

Read More

ಇತರೆಯವರು ಮತ್ತು ನಾವುಗಳು…

ಇತರೆಯವರಿಗೆ ಯಾವತ್ತೂ ನಮ್ಮಷ್ಟು ಸೂಕ್ಷ್ಮತೆ, ಅಭಿರುಚಿ, ಸಾಮರ್ಥ್ಯ ಇದೆಯೆಂದು ಯಾವ ಜಾತಿಯವರೂ ಒಪ್ಪುವುದಿಲ್ಲ. ಮೇಲು ಮತ್ತು ಕೀಳು ಜಾತಿಗಳಲ್ಲಿರುವ ತುದಿ ನಿಲುವಿನ ಮಂದಿ ಮಾತ್ರವಲ್ಲ, ಈ ಎರಡು ತುದಿ-ತುದಿಗಳ ನಡುವೆ ಇರುವ ಸಾವಿರಾರು ಜಾತಿಗಳಲ್ಲಿ ಪ್ರತಿಯೊಂದು ಜಾತಿಯವರಿಗೂ “ಇತರೆ”ಯವರ ಅಗತ್ಯವಿದೆ – ದ್ವೇಷಿಸಲು, ವಿನಾಶ ಬಯಸಲು, ಭ್ರಮಾಲೋಕದಲ್ಲಿ ಬದುಕಲು.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹದಿಮೂರನೆಯ ಪ್ರಬಂಧ ನಿಮ್ಮ ಓದಿಗೆ

Read More

ಹ್ಯಾಂಗರ್ಸ್‌ ಆನ್‌…..

ಬರಹಗಾರನಾಗಿ ನಾನು Hanger on ಸ್ಥಾನದ ಪಾತ್ರವನ್ನೇ ತುಂಬಾ ಇಷ್ಟಪಡುತ್ತೇನೆ. ಯಾರೂ ನಿಮ್ಮನ್ನು ಗಮನಿಸುವುದಿಲ್ಲ, ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ಹೆಚ್ಚು ಜನ ನಿಮ್ಮನ್ನು ನಿಷ್ಪ್ರಯೋಜಕ ವ್ಯಕ್ತಿ ಎಂದು ಪರಿಗಣಿಸಿ ನಿಮ್ಮ ತಂಟೆಗೇ ಬರುವುದಿಲ್ಲ. ನಿಮ್ಮ ಸ್ವಾತಂತ್ರ್ಯ, ನಿಮಗೆ ಸಿಗುವ ಸಮಯ ಎಲ್ಲವೂ ಹೆಚ್ಚಾಗುತ್ತದೆ. ಎಲ್ಲರನ್ನೂ ನೀವು ನಿರಾಳವಾಗಿ ಗಮನಿಸಬಹುದು. ನಿಮಗೇ ಗೊತ್ತಿಲ್ಲದಂತೆ ನಿಮ್ಮ ವ್ಯಕ್ತಿತ್ವಕ್ಕೆ ಒಂದಕ್ಕಿಂತ ಹೆಚ್ಚು ಆಯಾಮಗಳು ಸಿಗುತ್ತವೆ. ನನ್ನ ಕುಟುಂಬದ ಸದಸ್ಯರು ಇದನ್ನೆಲ್ಲ ಒಪ್ಪುವುದಿಲ್ಲ. ಇದನ್ನು ಒಂದು ತಂತ್ರವೆಂದು ಭಾವಿಸುತ್ತಾರೆ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೆರಡನೆಯ ಪ್ರಬಂಧ ನಿಮ್ಮ ಓದಿಗೆ

Read More

ನಾನೇಕೆ ಪಾತ್ರವಾಗುವುದಿಲ್ಲ

ತಪ್ಪು ತಿಳಿಯಬೇಡಿ! ನನಗೆ ಪಾತ್ರಗಳನ್ನು ಸೃಷ್ಟಿಸುವುದಕ್ಕಿಂತ ಹೆಚ್ಚಾಗಿ ಅವುಗಳ ಜೊತೆಗೇ ಇದ್ದುಬಿಡುವುದು, ಅವುಗಳ ಜೊತೆ ಹೋಗಿಬಿಡುವುದೇ ಇಷ್ಟ. ನಾಲ್ಕು ಜನರ ಮಧ್ಯೆ, ಜನಸಂದಣಿಯ ನಡುವೆ ಇದ್ದೂ ಕೂಡ ನಾನು ಪಾತ್ರಗಳ ಜೊತೆ ಇದ್ದುಬಿಡಬಲ್ಲೆ. ಕುಟುಂಬದ ಸದಸ್ಯರು ಆಗಾಗ್ಗೆ ಆಕ್ಷೇಪಣೆ ತೆಗೆಯುವುದುಂಟು. ನೀವು ಮನೆಯಲ್ಲಿದ್ದರೂ, ನಮ್ಮೊಡನೆಯೇ ಇರುವಂತೆ ಕಂಡರೂ, ಇನ್ನೊಂದು ಲೋಕದಲ್ಲಿರುತ್ತೀರಿ. ಯಾರ ಮಾತನ್ನೋ ಕೇಳಿಸಿಕೊಳ್ಳುತ್ತಿರುತ್ತೀರಿ.
ಕೆ. ಸತ್ಯನಾರಾಯಣ ಬರೆಯುವ “ಬೀದಿ ಜಗಳ ಮತ್ತು ಇತರೆ ಪ್ರಬಂಧಗಳು” ಸರಣಿಯ ಹನ್ನೊಂದನೆಯ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ