Advertisement

Tag: ಕೆ. ಸತ್ಯನಾರಾಯಣ

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ತಂದೆ ಏಕೆ ಹೀಗಾದರೂ ಅಂತ ಈವತ್ತಿಗೂ ನನಗೆ ಗೊತ್ತಾಗುತ್ತಿಲ್ಲ. ಸ್ನಾನ, ಸಂಧ್ಯಾವಂದನೆ, ಪೂಜೆ, ಅಚರಣೆ, ಯಾವುದನ್ನೂ ತಂದೆ ತಪ್ಪಿಸಿದವರಲ್ಲ. ಅವರ ತಂದೆಯ ಭಯದಲ್ಲೇ ಬೆಳೆದಿದ್ದರು. ತಂದೆ ಸತ್ತು ಹೋದ ಮೇಲೆ ಹೀಗೆಲ್ಲ ಆದದ್ದು. ನಿನ್ನ ಹತ್ತಿರ ಏನು ಮುಚ್ಚು ಮರೆ. ನಮ್ಮ ತಾತನದು ಕೂಡ ಇದೇ ರೀತಿಯ ರಂಪವಂತೆ. ಆತ ಇಟ್ಟುಕೊಂಡಿದ್ದವಳೊಬ್ಬಳನ್ನು ಮನೆಗೇ ಕರೆದುಕೊಂಡು ಬಂದು ಮಂಚದ ಮೇಲೆ ಮಲಗಿಸಿಕೊಳ್ಳುತ್ತಿದ್ದರಂತೆ. ನಮ್ಮಜ್ಜಿ ಅವಳ ಎಂಜಲು ತಟ್ಟೆ ತೊಳೆಯುವುದರಿಂದ ಹಿಡಿದು ಪ್ರತಿಯೊಂದು ಸೇವೆಯನ್ನೂ ಮಾಡಬೇಕಾಗುತ್ತಿತ್ತಂತೆ.
ಕೆ. ಸತ್ಯನಾರಾಯಣ ಬರೆದ ಕಥೆ “ಪ್ರೀತಿ ಬೇಡುವ ರೀತಿ” ‌

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಕೆ. ಸತ್ಯನಾರಾಯಣ ಬರೆದ ‘ಚಿನ್ನಮ್ಮನ ಲಗ್ನ’ ಪುಸ್ತಕದಿಂದ ಒಂದು ಟಿಪ್ಪಣಿ

“ಮುಕುಂದಯ್ಯ ಗದ್ದೆ ಕೊಯ್ಲಿಗೆ ಜನರನ್ನು ಗೊತ್ತುಮಾಡಬೇಕು, ಸುಮ್ಮನೆ ಕೂತರೆ ಆಗುವುದಿಲ್ಲ ಎಂದೆಲ್ಲ ಮುಂದೆ ಆಗಬೇಕಾದ ಕೆಲಸಗಳ ಬಗ್ಗೆ ಐತನೊಡನೆ ಚರ್ಚಿಸುತ್ತಿದ್ದಾನೆ. ಚಳಿಗೆ ಬೆಂಕಿಯ ಹತ್ತಿರ ಕಾಯಿಸಿಕೊಳ್ಳುತ್ತಾ ಸಂಸಾರದ ಜವಾಬ್ದಾರಿ ಹೊರಲು ತಯಾರಾಗುವುದು, ವೃತ್ತಿ ಜೀವನದ ಮುಂದಿನ ಕೆಲಸಗಳ ಬಗ್ಗೆ ಕಾಳಜಿ ವಹಿಸುವುದು…”

Read More

ಕೆ. ಸತ್ಯನಾರಾಯಣ ಬರೆದ ‘ಬಾಡಿಗೆ ಮನೆಗಳ ರಾಜಚರಿತ್ರೆ’ ಪುಸ್ತಕದಿಂದ ಒಂದು ಲೇಖನ

“ಬೆಂಗಳೂರಿನಲ್ಲಿ ನಮ್ಮ ತಂದೆ-ತಾಯಿ ವಾಸ ಮಾಡಿದ ಮನೆಗಳ ಸಂಖ್ಯೆಗೆ ಲೆಕ್ಕವೇ ಇಲ್ಲ. ಒಂದು ಸಲ ಮಂಡ್ಯದಲ್ಲಿ ಮನೆಯೊಂದನ್ನು ಬಾಡಿಗೆಗೆ ಗೊತ್ತುಮಾಡಿಕೊಳ್ಳುವಾಗ, ಮನೆ ಒಳಗಿನ ವಿನ್ಯಾಸ ಎಂತಹುದು, ಅದರೊಳಗೆ ಏನೇನು ಅನುಕೂಲ…”

Read More

ಸೀರೆಯುಡುವ ಗೋಧಾಳ ಮಗ: ಕೆ.ಸತ್ಯನಾರಾಯಣ ಕಾದಂಬರಿ “ಲೈಂಗಿಕ ಜಾತಕ”ದ ಆಯ್ದ ಭಾಗ

“ಗೋದಾ ಸಾಯುವ ಹಿಂದಿನ ವರ್ಷ ಮಗ-ಸೊಸೆ ಬಂದಿದ್ದಾಗ ದೊಡ್ಡ ರಾದ್ಧಾಂತವೇ ಆಗಿಹೋಯಿತು. ಒಂದು ದಿನ ಸೊಸೆ ಗೊಲೇಚಾ ಮಧ್ಯಾಹ್ನ ನಾಲ್ಕು- ನಾಲ್ಕೂವರೆ ಘಂಟೆ ಹೊತ್ತಿನಲ್ಲಿ ರೂಮಿಂದ ಈಚೆಗೆ ಬಂದ(ಳು). ಸಾಲಂಕೃತ ವಧು. ನೋಡಿದರೆ ಕಣ್ಣು ತುಂಬಿ ಬರುವ ಹಾಗೆ. ನಮ್ಮ ಶ್ರೀ ವೈಷ್ಣವ ಹುಡುಗಿಯರ ರೀತಿಯೇ. ಕೆಂಪಂಚು ಇರುವ ಹಸಿರು ಸೀರೆ, ಬಿಳಿ ಬಣ್ಣದ ತುಂಬು ತೋಳಿನ ರವಿಕೆ, ಲೋಲಾಕು, ದೊಡ್ಡ ಹೆರಳು, ಹೀಗೆ.”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಶಾಪ ವಿಮೋಚನೆಯ ಹಂಬಲದ ಮಹತ್ವಾಕಾಂಕ್ಷಿ ಕಥನಗಳು: ಗೋವಿಂದರಾಜು ಕಥಾಸಂಕಲನದ ಮುನ್ನುಡಿ

‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಸಂಕಲನದ ಕಥೆಗಳು ತಮ್ಮ ಆಶಯ ಮತ್ತು ಭಿನ್ನ ದೇಹದ ಮೂಲಕ ಗಮನಸೆಳೆಯುತ್ತವೆ ಹಾಗೂ ಕಥೆಗಾರನ ಪ್ರಯೋಗಶೀಲತೆಯ ಬಗ್ಗೆ ಮೆಚ್ಚುಗೆ ಹುಟ್ಟಿಸುತ್ತವೆ. ಭಾವಾವೇಶಕ್ಕೆ ಒಳಗಾಗದೆ…

Read More

ಬರಹ ಭಂಡಾರ