Advertisement

Tag: ಕ್ಷಮಾ ವಿ. ಭಾನುಪ್ರಕಾಶ್‌

ನೀ ನನಗಾದರೆ ನಾ ನಿನಗೆ!: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

“ನಾವು ಒಂದೊಂದೇ ಮರದ ಜೊತೆ ಸಂಬಂಧ ಬೆಸೆಯೋದಿಲ್ಲ; ಅನೇಕ ಮರಗಳ ಜೊತೆಗೆ ಸಂಬಂಧ ಬೆಸೆಯುತ್ತಾ, ಮರಗಳನ್ನೂ ಹತ್ತಿರ ತರ್ತೇವೆ. ಈ ಜಾಲದ ಮೂಲಕ ನಾವೂ ಮತ್ತು ಮರಗಳೂ ಮಾತಾಡೋದು ಮಾತ್ರವಲ್ಲ, ಮರಗಳೂ ತಮ್ಮೊಳಗೇ ಮಾತಾಡಿಕೊಳ್ಳೋದೂ ಸಾಧ್ಯ. ನಮ್ಮ ಈ ಜಾಲದ ಸಹಾಯದಿಂದ, ತಾಯಿ ಮರಗಳೂ ತಮ್ಮ ಮಕ್ಕಳೊಂದಿಗೆ ಸದಾ ಬೆಸೆದುಕೊಂಡಿರಬಹುದು; ಒಂದು ಸಮುದಾಯದ ಎಲ್ಲಾ ಮರಗಳೂ ಒಂದಕ್ಕೊಂದು ಸದಾ ಸಂಪರ್ಕದಲ್ಲಿರಬಹುದು. ಅದಕ್ಕೆ ಬೇಕಾದ ಸಂದೇಶಗಳನ್ನು ನಾವು ಇಲ್ಲಿಂದ ಅಲ್ಲಿಗೆ, ಅಲ್ಲಿಂದ ಇಲ್ಲಿಗೆ ರವಾನೆ ಮಾಡ್ತೇವೆ” ಎಂದು ಹೇಳಿದಳಂತೆ;
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಹನ್ನೊಂದನೆಯ ಕತೆ

Read More

ಪಿಸುಮಾತಿನ ಪಲ್ಲವಿಗೆ ಮರಗಿಡಗಳ ತನನ!: ಕ್ಷಮಾ ವಿ.ಭಾನುಪ್ರಕಾಶ್ ಬರೆಯುವ ಕಥಾ ಸರಣಿ

ಅಲ್ಲಕ್ಕಾ, ಮರಗಿಡಗಳು ಕೇಳಿಸಿಕೊಳ್ಳೋದು ಹೇಗೆ ಅಂತ ಒಂದು ಚೂರು ಅರ್ಥಾ ಆಯ್ತು. ಇದೇ ಒಂದು ಅಚ್ಚರಿ ಅಂದ್ರೆ, ಈ ಮೂಕಮರಗಳು ಮಾತು ಹೇಗಪ್ಪಾ ಆಡತ್ವೇ? ಅದು ಕೂಡ ತುಂಬಾ ಆಶ್ಚರ್ಯವೇ” ಎಂದಳು. ಆಗ ಕಾವ್ಯ, “ಹೂಂ, ಅದಕ್ಕೆ ನಮ್ ಮರಗಳ ‘ನೆಟ್ವರ್ಕ್’ ಬೇಕಪ್ಪಾ! ಹೌದೂ.. ಫಂಗಸ್ ಗೊತ್ತಲ್ವಾ ನಿಂಗೆ? ಎಂದು ಕೇಳಿದಳು. ಆಗ ವಿಭಾ, “ಹೂಂ, ಮಳೆ ಬಂದಾಗ ಒದ್ದೆ ಬಟ್ಟೆ ಮೇಲೋ, ಒದ್ದೆ ಗೋಡೆ ಮೇಲೋ ಕಪ್ಪು ಚುಕ್ಕಿಗಳು ಕಾಣಿಸತ್ತಲ್ವಾ? ಅದೇ ತಾನೆ ಫಂಗಸ್?” ಎಂದಳು.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಹತ್ತನೆಯ ಕತೆ

Read More

ಮರಗಳೂ ಮಾತಾಡುತ್ವೆ ಗೊತ್ತಾ!: ಕ್ಷಮಾ ವಿ.ಭಾನುಪ್ರಕಾಶ್ ಬರೆಯುವ ಕಥಾ ಸರಣಿ

“ಈ ವೀವಿಲ್ ಆಗ್ಲೀ, ಅಥವಾ ಯಾವುದೇ ಪ್ರಭೇದದ ಕೀಟವಾಗ್ಲೀ, ಅದರ ಬಾಯನ್ನು ಎಲೆಗಳಿಗೋ, ಹಣ್ಣು-ಕಾಯಿಗಳಿಗೋ ಹಾಕಿದ ಕ್ಷಣವೇ, ಅದರ ಜೊಲ್ಲು ಅಥವಾ ಎಂಜಿಲಿರತ್ತಲ್ಲಾ? ಅದರ ರುಚಿಯನ್ನ ಗುರುತಿಸಿದ ಮರಗಳು, ಕರೆಕ್ಟಾಗಿ ಅದು ಯಾವ ಪ್ರಭೇದದ ಕೀಟ ಅಂತ ಕಂಡುಹಿಡಿದು ಬಿಡತ್ವೆ. ಪ್ರತೀ ಜೀವಿಯ ಜೊಲ್ಲೂ ಜೀವರಾಸಾಯನಿಕವಾಗಿ ವಿಶಿಷ್ಟವೇ. ಈ ಜೊಲ್ಲಿನ ರುಚಿಯನ್ನು ಗುರುತಿಸಿದ ಮರಗಳು, ಆ ಕೀಟವನ್ನ ಓಡಿಸಿ, ತಮ್ಮ ಎಲೆಗಳನ್ನ, ಕಾಯಿಗಳನ್ನ ಕಾಪಾಡಿಕೊಳ್ಳೊಕೆ ಒಂದು ಪ್ಲಾನ್ ಮಾಡತ್ವೆ. ಏನು ಪ್ಲಾನ್ ಇರ್ಬಹುದು ಹೇಳಿ ನೋಡೋಣ?” ಎಂದು ಪ್ರಶ್ನಿಸಿದಳು.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಒಂಭತ್ತನೆಯ ಕತೆ

Read More

ಬಿಸಿಬೆಳಕು -ತಂಪುಬೆಳಕಿನ ಸಂಗಮ, ಸಂಭ್ರಮ!: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

ಝಗ್ಗನೆ ‘ಸೀರಿಯಲ್ ಸೆಟ್’ ಹತ್ತಿಕೊಂಡಂತೆ ಹತ್ತಿಕೊಂಡು, ಮತ್ತೆ ರಪ್ಪನೆ ಆಫ್ ಆಗಿ, ಮಿಂಚುಹುಳುಗಳ ಈ ಮಾಯಕ ಮೋಡಿಯಲ್ಲಿ ಸಮಯ ಉರುಳುತ್ತಿದ್ದುದೇ ತಿಳಿಯಲಿಲ್ಲ; ಅದರಲ್ಲೂ ಲಕ್ಷಾಂತರ ಮಿಂಚುಹುಳುಗಳ ಈ ನರ್ತನವನ್ನು ಮೊದಲಬಾರಿಗೆ ಕಣ್ದುಂಬಿಸಿಕೊಳ್ಳುತ್ತಿದ್ದ ಕಾವ್ಯಳ ಕುಟುಂಬ, ಬಿಟ್ಟ ಬಾಯಿ ಬಿಟ್ಟಂತೆಯೇ ಈ ಅಮೋಘ ಅನುಭವದಲ್ಲಿ ಕಳೆದುಹೋಗಿದ್ದರು. ನಡುನಡುವೆ ವಿಜ್ಞಾನದ, ಪರಿಸರದ ಬಗ್ಗೆ ಮಾತುಕತೆ, ಮತ್ತೆ ಅಚಾನಕ್ಕಾಗಿ ಮೌನ ಮತ್ತು ಮಾಯೆ! ಹೀಗೇ ಸಾಗಿತ್ತು.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಎಂಟನೆಯ ಕತೆ

Read More

ಕೇಳಿದ್ದು ಸುಳ್ಳಾಗಬಹುದು, ರುಚಿಸಿದ್ದೂ ಸುಳ್ಳಾಗಬಹುದೇ?: ಕ್ಷಮಾ ವಿ. ಭಾನುಪ್ರಕಾಶ್ ಕಥಾ ಸರಣಿ

ಗೆಳತಿಯ ಜಾಣ ಪ್ರಶ್ನೆಗೆ ಉತ್ತರಿಸುತ್ತಾ “ಅದು ಹೇಗೆ ಗೊತ್ತಾ? ಈ ನಿಂಬೆ, ಹುಣಸೆಯಂತಹ ಹುಳಿ ಅಂಶ ಇರೋ ಆಹಾರಗಳಲ್ಲಿ ‘ಆಸಿಡ್’ ಅಂದ್ರೆ ‘ಆಮ್ಲ’ಗಳಿರತ್ವೆ ಅಲ್ವಾ? ಅಂತಹ ಹುಳಿಯಾದ ಆಹಾರ, ನಾಲಗೆಗೆ ತಗುಲಿದಾಗ, ನಾಲಗೆಯ ಆಮ್ಲೀಯತೆ ಹೆಚ್ಚುತ್ತೆ; ಈ ಬದಲಾದ ಸ್ಥಿತಿಯಲ್ಲಿ, ನಮ್ಮ ‘ಮಿರಾಕ್ಯುಲಿನ್’ ಇದ್ಯಲ್ಲ? ಅದು ರಾಸಾಯನಿಕವಾಗಿ ಪ್ರತಿಕ್ರಯಿಸಿ, ಸಿಹಿಯನ್ನು ಗುರುತಿಸುವ ರುಚಿಸಂವೇದಕಗಳನ್ನು ಆಕ್ಟಿವೇಟ್ ಮಾಡತ್ತೆ. ಹಾಗಾಗಿ, ಹುಳಿಯಂಶದ್ದೆಲ್ಲಾ ಸಿಹಿಯೆನಿಸೋಕೆ ಶುರುವಾಗತ್ತೆ. ಆದ್ರೆ ಈ ಎಫೆಕ್ಟ್ ಒಂದು ಅರ್ಧ ಘಂಟೆ, ೧ ಘಂಟೆ ಇರ್ಬಹುದಷ್ಟೇ. ನಮ್ಮ ಬಾಯಲ್ಲಿನ ಜೊಲ್ಲು ನಾಲಗೆಯ ಮೇಲಿದ್ದ ಈ ‘ಮಿರಾಕ್ಯುಲಿನ್’ ಅನ್ನೋ ‘ಗ್ಲೈಕೋಪ್ರೋಟೀನ್’ನ್ನ ತೊಳೆದು ಹಾಕಿ, ನಮ್ಮ ನಾಲಗೆ ಮೊದಲಿನ ಸ್ಥಿತಿಗೆ ಬರೋ ಹಾಗೆ ಮಾಡತ್ತೆ. ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ”ದಲ್ಲಿ ಏಳನೆಯ ಕತೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ