Advertisement

Tag: ಕ್ಷಮಾ ವಿ. ಭಾನುಪ್ರಕಾಶ್‌

ಕ್ಷಮಾ ವಿ. ಭಾನುಪ್ರಕಾಶ್‌ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ

“ನಮ್ಮ ತೋಟದಲ್ಲಿ ಎಲ್ಲೆಡೆಯೂ ಕಾಣುವ ಹನಿನೀರಾವರಿ ಪೈಪುಗಳಂತೆ ಈ ಜಲವಾಹಕ ಮತ್ತು ಆಹಾರವಾಹಕ ಕೊಳವೆಗಳೂ, ಸಸ್ಯದ ತುಂಬೆಲ್ಲಾ ಇರತ್ವೆ ಅಲ್ವಾ? ತಮ್ಮ ಪಾಡಿಗೆ ತಮ್ಮ ಕೆಲಸ ಮಾಡುತ್ತಾ ಗಿಡಮರಗಳನ್ನ ಚೆನ್ನಾಗಿಡತ್ವೆ” ಎಂದಳು ನಗುತ್ತಾ. “ಹೌದು ಕಣೋ, ಹಾಗೇನೇ. ಇಲ್ಲಿ ನೋಡು, ಈ ಎಲೆಯನ್ನ!” ಎಂದು ತನ್ನ ಅಂಗಳದಲ್ಲೇ ಸೊಂಪಾಗಿ ಬೆಳೆದಿದ್ದ ಮಲ್ಲಿಗೆಯ ಬಳ್ಳಿಯಿಂದ ಎಲೆಯೊಂದನ್ನು ತೋರಿಸುತ್ತಾ! “ಈ ಎಲೆಯಲ್ಲಿ ಆಚೀಚೆ ಕಾಣುವ ಗೆರೆಗಳನ್ನ ಗಮನಿಸು; ಅದೇ ರೀತಿ ಇಲ್ಲಿ ಅಂಗಳದಲ್ಲಿರುವ ಎಲ್ಲಾ ಗಿಡಗಳನ್ನೂ ಗಮನಿಸು. ಎಲ್ಲಾ ಎಲೆಗಳಲ್ಲೂ ಹೀಗೆ ಗೆರೆಗಳು ಕಾಣಿಸುತ್ತಲ್ವಾ? ಅದೇ ಈ ಜಲವಾಹಕ-ಆಹಾರವಾಹಕಗಳ ಕಂತೆ.
ಕ್ಷಮಾ ವಿ. ಭಾನುಪ್ರಕಾಶ್‌ ಮಕ್ಕಳಿಗಾಗಿ ಬರೆಯುವ ಹೊಸ ಕಥಾ ಸರಣಿ “ಎಳೆಯರಿಗೆ ಸುಲಭ ವಿಜ್ಞಾನ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಶತಾಯುಷಿ ಸಾಧಕಿಗೆ ಶತಕೋಟಿ ಪ್ರಣಾಮ!: ಕ್ಷಮಾ ವಿ. ಭಾನುಪ್ರಕಾಶ್ ಬರಹ

ಅನೇಕ ಸಂದರ್ಶನಗಳಲ್ಲಿ ಅವರೇ ಹೇಳಿದಂತೆ, ತಿಮ್ಮಕ್ಕ, ಗಿಡ-ಮರಗಳಲ್ಲಿ ಮಕ್ಕಳನ್ನು ಕಂಡು ಸಂತಸಪಟ್ಟವರು. ಪಾತಿ ಮಾಡಿ ಗಿಡ ನೆಡುವುದು, ಅವುಗಳೊಂದಿಗೆ ಮಾತಾಡುತ್ತಾ ನೀರುಣಿಸಿ, ತಲೆಸವರಿ ಅವುಗಳನ್ನು ಹೆಮ್ಮರವಾಗಿಸುವುದು – ತಿಮ್ಮಕ್ಕನವರ ಹವ್ಯಾಸವಲ್ಲ, ಅದು ಅವರ ಬದುಕಿನ ಸಾರ. ಹುಲಿಕಲ್ ಮತ್ತು ಕುಡೂರಿನ ನಡುವಿನ ಹೆದ್ದಾರಿಯ ಅಕ್ಕಪಕ್ಕ ೩೮೫ ಆಲದ ಮರಗಳನ್ನು ಹೀಗೆ ಬೆಳೆಸಿದ ಶ್ರೇಯವೇ, ತಿಮ್ಮಕ್ಕನನ್ನು ‘ಸಾಲುಮರದ ತಿಮ್ಮಕ್ಕ’ನನ್ನಾಗಿಸಿತು, ಗೌರವಾದರಗಳನ್ನು ಮನೆಬಾಗಿಲಿಗೆ ಬರಮಾಡಿಸಿತು!
ನೆನ್ನೆ ತೀರಿಕೊಂಡ ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ

Read More

ಕನ್ನಡದ ಹೆಣ್ಮನಗಳ ಕನ್ನಡಾಭಿಮಾನ: ರೂಪಶ್ರೀ ಕಲ್ಲಿಗನೂರ್ ಬರಹ

ಕನ್ನಡ ನಾಡಿನ ಮಕ್ಕಳು ಇಡೀ ಜಗತ್ತಿನ ತುಂಬಾ ಓಡಾಡಿದರೂ, ಮನೆಗೆ ಬಂದು ಅಮ್ಮನೊಟ್ಟಿಗೆ ಕನ್ನಡ ಮಾತನಾಡಿದಾಗಲೇ ಅವರಿಗೂ ಸಮಾಧಾನ. ಯಾಕೆಂದರೆ ಅವರೆಲ್ಲ ಮೊದಲು ಕಲಿತ ಪದವೇ “ಅಮ್ಮ” ಅಲ್ಲವೇ! ಜಗತ್ತಿನ, ಬೆಳವಣಿಗೆಯೆಂಬ ಸಂಕೀರ್ಣತೆಯ ಸಂದಿಗ್ಧತೆಯಲ್ಲಿ ಕನ್ನಡ ಭಾಷೆ ಚೂರು ನಲುಗುತ್ತಿದೆ ಎನ್ನಿಸುತ್ತಿದೆಯಾದರೂ ದೊಡ್ಡಮಟ್ಟದಲ್ಲಿಯಲ್ಲವಾದರೂ, ತಮಗೆ ಸಿಕ್ಕ ಅವಕಾಶಗಳಲ್ಲಿ ಕನ್ನಡದ ಬೆಳವಣಿಗೆಗೆ, ಉಳಿವಿಗೆ ಶ್ರಮಿಸುವ ಹಲವು ಶ್ರೀಸಾಮಾನ್ಯರಿದ್ದಾರೆ. ಕರ್ನಾಟಕದಲ್ಲಿ ಅಲ್ಲದೇ ಬೇರೆಡೆಗಳಲ್ಲಿ ನೆಲೆಸಿರುವ, ಕನ್ನಡದ ಅಸ್ಮಿತೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಹಲವು ಕನ್ನಡದ ಹೆಣ್ಮಗಳ ಮಾತುಗಳು…

Read More

ಒಂದೊಂದ್ಲೆ ಒಂದು…!: ಕ್ಷಮಾ ವಿ ಭಾನುಪ್ರಕಾಶ್ ಬರಹ

ವೈಜ್ಞಾನಿಕ ತಳಹದಿಯೇ ಇಲ್ದೇ, ಯಾವುದೋ ಬಂಜರು ಭೂಮಿಯಲ್ಲಿ ಸುಲಭವಾಗಿ ಸಿಕ್ಕ ಯಾವುದೋ ಪ್ರಭೇದದ ಸಸಿಗಳನ್ನ ನೆಟ್ಟು, ಪರಿಸರ ದಿನ ಆಚರಿಸೋದು ಅತ್ಯಂತ ಅರ್ಥಹೀನ; ಮರಗಳನ್ನು ನೆಟ್ಟು ಎಲ್ಲೆಂದರಲ್ಲಿ ಕಾಡು ಮಾಡಿಬಿಡ್ತೀವಿ ಅಂದ್ರೆ ಹೇಗೆ? ಅಲ್ಲಿ ಯಾವ ಜೀವರಾಶಿಯಿತ್ತು? ಅಲ್ಲಿನ ಆಹಾರ ಸರಪಳಿಯ ಕಥೆಯೇನು? ಅಲ್ಲಿನ ಅಜೈವಿಕ ಹಾಗೂ ಜೈವಿಕ ಅಂಶಗಳ ನಡುವಿನ ಸಮತೋಲನದ ಕಥೆಯೇನು?
ಈ ಹೊಸ ವರ್ಷದಿಂದ ಸ್ವಲ್ಪವಾದರೂ ನಾವು ನಿಂತಿರುವ ಈ ಭೂಮಿಯ ಕುರಿತು ಯಾವೆಲ್ಲ ರೀತಿಯಲ್ಲಿ ಕಾಳಜಿ ವಹಿಸಬಹುದು ಎನ್ನುವುದರ ಕುರಿತು ಕ್ಷಮಾ ವಿ. ಭಾನುಪ್ರಕಾಶ್‌ ಬರಹ

Read More

ಸಿಕಾಡ- ಕೀಟಲೋಕದ ಸಂಗೀತಸಾಮ್ರಾಟ

ಸಾಮಾನ್ಯವಾಗಿ ಹಾಡುವುದು ಗಂಡು ಸಿಕಾಡಗಳೇ; ಇವು ಹಲವಾರು ಹೆಣ್ಣು ಸಿಕಾಡಗಳ ಮಧ್ಯೆ ಒಂದು ಹೆಣ್ಣು ಸಿಕಾಡವನ್ನು ಆರಿಸಿ, ಅದಕ್ಕೆ ಸಂಗಾತಿಯಾಗೆಂದು ಆಹ್ವಾನವೀಯುವಾಗ ಹಾಡುವ ಹಾಡೇ ಬೇರೆ; ಆ ಹೆಣ್ಣುಸಿಕಾಡವು ಈ ಆಹ್ವಾನವನ್ನು ಒಪ್ಪಿ ಬಳಿಬಂದರೆ ಆಗ ಗಂಡು ಸಿಕಾಡವು ಹಾಡುವ ಹಾಡೇ ಬೇರೆ, ಅಕಸ್ಮಾತ್ ಆ ಆಹ್ವಾನ ತಿರಸ್ಕೃತಗೊಂಡರೆ ಮತ್ತೊಂದು ಶೋಕರಾಗವನ್ನು ಹೊರಡಿಸುತ್ತದೆ ಗಂಡು ಸಿಕಾಡ.
ಕ್ಷಮಾ ವಿ. ಭಾನುಪ್ರಕಾಶ್‌ ಬರೆದ ವಿಜ್ಞಾನ ಲೇಖನಗಳ ಸಂಕಲನ “ಜೀವಿವಿಜ್ಞಾನ”ದಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ