Advertisement

Tag: ಗಿರಿಧರ್ ಗುಂಜಗೋಡು

ಜೋಕು ಮಾಡಲು ಬಳಸುತ್ತಿದ್ದ ಪದದ ನಿಜ ಅರ್ಥ ತಿಳಿಯಿತು

ಮೋಹನ ಸ್ವಾಮಿ ಒಂದು ಕಥಾ ಸಂಕಲನವಾದರೂ ನಿಧಾನವಾಗಿ LGBT ಸಮುದಾಯದೆಡೆಗಿನ ನನ್ನ ಮನೋಭಾವನೆಯನ್ನು ಬದಲಾಯಿಸಿಕೊಳ್ಳಲು ಸಹಾಯಮಾಡಿತು. ನನ್ನೆದುರು ಆ ಸಮುದಾಯದ ವ್ಯಕ್ತಿಗಳು ಸಿಕ್ಕಾಗ ಮಾಮೂಲಿ ಗಂಡು ಹೆಣ್ಣುಗಳ ಹಾಗೇ ಮಾತನಾಡಲು, ಹರಟೆ ಹೊಡೆಯಲು ಸಾಧ್ಯವಾಯಿತು. ಹಾಗಾದರೆ ನಾನು ಈ ವಿಚಾರಲ್ಲಿ ನನ್ನ ಯೋಚನೆಯನ್ನು ನೂರಕ್ಕೆ ನೂರು ಬದಲಿಸಿಕೊಂಡೆನೇ? ಎಂದು ಕೇಳಿದರೆ ಉತ್ತರ ಗೊತ್ತಿಲ್ಲ, ಅಥವಾ ಇಲ್ಲವೆನ್ನಿಸುತ್ತದೆ.
ಓದುವ ಸುಖ ಅಂಕಣದಲ್ಲಿ ವಸುಧೇಂದ್ರರ “ಮೋಹನಸ್ವಾಮಿ” ಕೃತಿಯ ಕುರಿತು ಬರೆದಿದ್ದಾರೆ ಗಿರಿಧರ್ ಗುಂಜಗೋಡು

Read More

ರಾಜಕೀಯ ಹಾದಿಯಲ್ಲಿ ಕಂಡ ಪ್ರಾಮಾಣಿಕ ನುಡಿಗಳು

ಬಿ.ಎ. ಮೊಹಿದೀನ್ ಅವರು ಜೀವನದಲ್ಲಿ ಇಟ್ಟುಕೊಂಡ ಮೌಲ್ಯಗಳು ಅನುಕರಣೀಯವಾದುದು. ತಾನು ಚುನಾವಣೆಗೆ ನಿಂತಾಗ ಮಸೀದಿ ದೇವಾಲಯ ಚರ್ಚುಗಳಿಗೆ ಮತಕೇಳಲು ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿ ಅದನ್ನು ಹಟಬಿಡದೇ ಪಾಲಿಸಿದವರು ಅವರು. ತಾವು ಹುಟ್ಟಿಬಂದ ಸಮುದಾಯದ ಏಳಿಗೆಗಾಗಿ ಮೊಹಿದೀನ್ ಅವರಿಗಿದ್ದ ಕಾಳಜಿ ಪ್ರಶ್ನಾತೀತವಾದುದು.
ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಅಧಿಕಾರವೆಂಬ ಮುಳ್ಳಿನ ಹಾದಿಯಲ್ಲಿ..

ಡಾ. ವೈ.ವಿ.  ಅವರು ತೆಲುಗಿನಲ್ಲಿ ಬರೆದ  ‘ನಾ ಜ್ಞಾಪಕಾಲು’ ಅನ್ನುವ ಆತ್ಮಕಥೆಯಲ್ಲಿ ತಮ್ಮ ಜೀವನದ ಬಗ್ಗೆ ಹೆಚ್ಚಿನ ಬೆಳಕು ಚೆಲ್ಲಿದ್ದಾರೆ. ಆಂಗ್ಲ ಭಾಷೆಯಲ್ಲಿ ಬರೆದ ಪುಸ್ತಕವು, ದೇಶದ ಆರ್ಥಿಕತೆಯ ಬಗೆಗಿನ ಸಂಕೀರ್ಣ ವಿಷಯಗಳನ್ನು ಒಳಗೊಂಡಿದೆ. ಇವೆರಡನ್ನು ಒಟ್ಟುಗೂಡಿಸಿ, ಹಣಕಾಸು ವಿಷಯದಲ್ಲಿ ಜ್ಞಾನ ಇಲ್ಲದವರಿಗೂ ಅರ್ಥವಾಗುವಂತೆ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸುವುದು ಖಂಡಿತವಾಗಿಯೂ ಸುಲಭದ ವಿಷಯವಲ್ಲ. ಎಂ.ಎಸ್. ಶ್ರೀರಾಮ್ ಈ ಕೆಲಸವನ್ನುಯಶಸ್ವಿಯಾಗಿ ಮಾಡಿದ್ದಾರೆ.  ಓದುವ ಸುಖ ಅಂಕಣದಲ್ಲಿ ಗಿರಿಧರ್ ಗುಂಜಗೋಡು ಬರಹ

Read More

ಆನೆ ಸಾಕಲು ಹೊರಟವಳ ಕಥೆ

ಸುಲಲಿತವಾದ ಪ್ರಬಂಧಗಳಿಗೆ ಅವರು ಆಯ್ದುಕೊಳ್ಳುವ ವಿಷಯಗಳೇನೂ ಅಸಾಮಾನ್ಯವಾದುದಲ್ಲ. ಹೆಚ್ಚಿನವು ದಿನನಿತ್ಯ ಜರುಗುವ ಸಂಗತಿಗಳೇ. ಆದರೆ ಅದನ್ನು ಹೇಳುವ ಶೈಲಿ ಇದೆಯಲ್ಲಾ, ಅದು ಮಾತ್ರ ನಿಜಕ್ಕೂ ಅದ್ಭುತ. ಅತ್ಯಂತ ಚಿಕ್ಕದಾಗಿ, ಚೊಕ್ಕದಾಗಿ ಮತ್ತು ಸರಳವಾಗಿ ನಿರೂಪಣೆ‌ ಮಾಡುತ್ತಾರೆ. ಮಧ್ಯಾಹ್ನ ಮಾಡುವ ಅಡುಗೆಗೆ ಸಂಬಂಧಿತ ಲಹರಿ ಬಂದರೆ ಅದುವೇ ಒಂದು ಪ್ರಬಂಧವಾಗುತ್ತದೆ. ‘ಓದುವ ಸುಖ’ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಮೀನಿನ ರುಚಿ ಹಿಡಿದು ಅಲೆದಾಡಿದವರು

ಒಂದು ಪ್ರವಾಸ ಕಥನ ಹೇಗಿರಬೇಕು ಅನ್ನೋದಕ್ಕೆ ಬೆಂಚ್‌ಮಾರ್ಕ್ ಆಗಿ ನಿಲ್ಲುತ್ತದೆ ಈ ಪುಸ್ತಕ. ಆದರೆ ಇದನ್ನು ಪ್ರವಾಸ ಕಥನವೆನ್ನಲು ಸಾಧ್ಯವೇ ಅಥವಾ ಬೇರೆ ಏನಾದರೂ ಹೆಸರು ಕೊಡಬೇಕೆ ಅನ್ನುವುದು ನನಗೆ ತಿಳಿದಿಲ್ಲ. ಯಾಕೆಂದರೆ ಮೀನಿನ ಖಾದ್ಯಗಳ ಸವಿಯುವ ನೆಪದಲ್ಲಿ ಭಾರತದ ಪ್ರತಿ ರಾಜ್ಯಗಳ ಕರಾವಳಿ ಪ್ರದೇಶಗಳಿಗೂ ಭೇಟಿಕೊಟ್ಟು, ಆಯಾ ರಾಜ್ಯಗಳಲ್ಲಿ ಮೀನು ಅಲ್ಲಿನ ಸಂಸ್ಕೃತಿಯಲ್ಲಿ ವಹಿಸಿದ ಪಾತ್ರದ ಬಗ್ಗೆ ಲೇಖಕರು ಬಹಳ ಆಳವಾಗಿ ವಿಶ್ಲೇಷಣೆ ಮಾಡುತ್ತಾ ಸಾಗುತ್ತಾರೆ. ‘ಓದುವ ಸುಖ’ ಅಂಕಣದಲ್ಲಿ ಗಿರಿಧರ್‌ ಗುಂಜಗೋಡು ಬರಹ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕುಂಬಳೆಯೆಂಬ ನಿಲ್ದಾಣದಲ್ಲಿ ತಿರುಮಲೇಶರು: ಸುಮಾವೀಣಾ ಬರಹ

‘ಕುಂಬಳೆಯೆಂಬ ನಿಲ್ದಾಣ ಅದು ಬಹಳ ದೊಡ್ಡದೇನಲ್ಲ’ ಎನ್ನುವ ಮೂಲಕ ಕಾಲ ನಿರಂತತೆಯಿಂದ ಕೂಡಿರುತ್ತದೆ. ಆದರೆ ಕಾಲದ ತೆಕ್ಕೆಯಲ್ಲಿ ಜೀವಿಸುವ ಜೀವಿ ನಿರಂತರವಾಗಿ ಇರಲು ಸಾಧ್ಯವಿಲ್ಲ. ಆತ ಅಲ್ಪ…

Read More

ಬರಹ ಭಂಡಾರ