Advertisement

Tag: ಗೀತಾ ಹೆಗಡೆ

ಪ್ರಕಾಂಡ ಪಾಂಡಿತ್ಯದ ಬಿ. ಎಚ್. ಶ್ರೀಧರರು: ಗೀತಾ ಹೆಗಡೆ, ದೊಡ್ಮನೆ ಬರಹ

‘ಸರ್, ಧ್ವಜಾರೋಹಣ ಮಾಡುವಾಗ ಹಾಗೇ ಮಾಡುವದಕ್ಕಿಂತ ತಲೆಯ ಮೇಲೆ ಏನಾದರೂ ಧರಿಸಬೇಕುʼ ಎಂದಾಗ ಅವರಿಗೂ ಅದು ಸರಿಯೆನಿಸಿತು. ಅವರ ಮನೆಯೇನೋ ಸಮೀಪದಲ್ಲೇ ಇದ್ದಿತ್ತಾದರೂ, ಹೋಗಿ ಅಲ್ಲಿಂದ ತರೋಣವೆಂದರೆ ಧ್ವಜಾರೋಹಣದ ಸಮಯಪಾಲನೆ ತಪ್ಪಿಸುವಂತಿಲ್ಲ! ‘ಹೌದಲ್ಲ, ಈಗೇನು ಮಾಡೋದು?ʼ ಎಂದರಂತೆ. “ಈ ಖಾದೀ ಟೋಪಿ ಹಾಕಿಕೊಳ್ಳಿ ಸರ್ʼ ಎಂದಾಗ ‘ಸರಿʼ ಎಂದು ಆ ಖಾದೀ ಟೋಪಿ ಧರಿಸಿ ಧ್ವಜಾರೋಹಣ ಮಾಡಿದರಂತೆ..
ಹಿರಿಯ ಸಾಹಿತಿ ಬಿ. ಎಚ್.‌ ಶ್ರೀಧರರ ಬದುಕು ಮತ್ತು ಬರಹದ ಕುರಿತು ಗೀತಾ ಹೆಗಡೆ, ದೊಡ್ಮನೆ ಬರಹ

Read More

ದೈನಿಕತೆಯಲ್ಲೆ ದೈವಿಕತೆ..

ಕಾಯ್ಕಿಣಿಯವರ ಕಾವ್ಯಗಳಲ್ಲಿ ದಂತಗೋಪುರದ ವಾಸಿ, ವಿಲಾಸಿ, ಪ್ರವಾಸಿಗರು ಕಾಣಸಿಗಲಾರರು; ಏಕೆಂದರೆ, ನಮ್ಮ-ನಿಮ್ಮ ನಡುವೆ, ಆಚೆ-ಈಚೆ, ಕಣ್ಣಿಗೆ ಬಿದ್ದರೂ ಬೀಳದಂತಿರುವ, ಅಥವಾ ನಾವು ನೋಡಿದರೂ ನೋಡದಂತೆ ಮುಂದೆ ಸಾಗುವುದಕ್ಕೆ ಯಾವ ಆಕ್ಷೇಪಣೆಯನ್ನೂ ಮಾಡದ- ಕಷ್ಟವೋ-ಕಾರ‍್ಪಣ್ಯವೋ ಎಲ್ಲಕ್ಕೂ ಎದೆಗೊಡುತ್ತ ಕಾಲ್ಪನಿಕ ರೇಖೆಗಳನ್ನು ಧಿಕ್ಕರಿಸುತ್ತ, ಅಲ್ಲಗಳೆಯುತ್ತ, ತಮ್ಮದೇ ಜೀವನಚಿತ್ರವ ಮೂಡಿಸುವ ಜೀವಭಂಡಾರಿಗಳು- ಕಾಯ್ಕಿಣಿಯವರ ಕಾವ್ಯಪ್ರಪಂಚವನ್ನು ನಿರಾಯಾಸ, ನಿರಪೇಕ್ಷ್ಯವಾಗಿ ಧರಿಸುತ್ತಾರೆ; ಭರಿಸುತ್ತಾರೆ.
ಜಯಂತ ಕಾಯ್ಕಿಣಿಯವರ “ವಿಚಿತ್ರಸೇನನ ವೈಖರಿ” ಕವನ ಸಂಕಲನದ ಕುರಿತು ಗೀತಾ ಹೆಗಡೆ ಬರಹ

Read More

ಆಧ್ಯಾತ್ಮಿಕ ಹೊಳಹಿನ ಕನ್ನಡಿನಲ್ಲಿ ‘ಒಂದು ಸರೀ ಕಡ್ಡಿಗಾಗಿ’

ಕವಿ, ಕಥೆಗಾರ ಜಯಂತ ಕಾಯ್ಕಿಣಿ ಅವರ ಒಂದು ಜಿಲೇಬಿ ಕವನ ಸಂಕಲನದಿಂದ ಆಯ್ದ ಕವನ ‘ಒಂದು ಸರೀ ಕಡ್ಡಿಗಾಗಿ’ ತೀರಾ ಸ್ಥಳೀಯ ನೋಟಗಳ ಪ್ರತಿಮೆಗಳನ್ನು ಹೆಕ್ಕಿ ತೆಗೆದುಕೊಂಡು ಕಾವ್ಯ ದುಕೂಲದಲ್ಲಿ ಅವುಗಳನ್ನು ಬಂಧಿಸಿದ ಪರಿ ವಿಶೇಷವಾದುದು. ಕವನವು ಆಧ್ಯಾತ್ಮಿಕ ಹೊಳಹುಗಳನ್ನಷ್ಟೇ ಅಲ್ಲ, ತತ್ವಶಾಸ್ತ್ರಕ್ಕೆ ಸಂಬಂಧಿಸಿದ ಜಿಜ್ಞಾಸೆಯ ಕಿಡಿ ಹಚ್ಚುವ ಸಾಮರ್ಥ್ಯ ಹೊಂದಿದೆ. ಅಂತಹ ವಿಶ್ಲೇಷಣೆಯನ್ನು ಇಲ್ಲಿ ಮಂಡಿಸಿದ್ದಾರೆ ಲೇಖಕಿ ಗೀತಾ ಹೆಗಡೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

[latest_post_widget]

ಬರಹ ಭಂಡಾರ