Advertisement

Tag: ಗುಂಡುರಾವ್ ದೇಸಾಯಿ

ಗುಂಡುರಾವ್ ದೇಸಾಯಿ ಬರೆದ ಈ ಭಾನುವಾರದ ಕತೆ

ಸಂಜೆ ಅಪ್ಪ ಬಾಳೆಹಣ್ಣು ತಂದಿದ್ದನ್ನು ನೋಡಿದ್ದ. ಕೂಡಲೆ ರಾತ್ರಿ ಎದ್ದು ಡಜನ್ ಬಾಳೆ ಹಣ್ಣನ್ನು ತಿಂದು ಮಲಗಿದ. ಬೆಳಿಗ್ಗೆ ಹಣ್ಣು ಇಲ್ಲದನ್ನು ನೋಡಿ ಅಮ್ಮಗ ನೋಡಿ ಗಾಭರಿಯಾಯಿತು. ಬಾಳೆ ಹಣ್ಣು ತಿಂದವರಾರು? ಸಮುನ ಮೇಲೆ ಅನುಮಾನ ಬಂದು “ಸತ್ಯ ಹೇಳು ತಿಂದವನು ನೀನು ತಾನೆ?” ಎಂದು ತರಾಟೆ ತೆಗೆದುಕೊಂಡಳು. ಸಮು ನಡೆದ ವಿಷಯವನ್ನೆಲ್ಲ ಹೇಳಿ ಬೆಳಿಗ್ಗೆ ಮಲವಿಸರ್ಜನೆ ಮಾಡುವಾಗ ಸಿಕ್ಕ ಬೀಜಗಳನ್ನು ಖುಷಿಯಿಂದ ತೋರಿಸಿ “ಅಮ್ಮಾ, ನೋಡು ನನ್ನ ಹೊಟ್ಟೆಯಲ್ಲಿ ಹುಣಸೆ ಮರ ಬೆಳೆಯಲು ಸಾಧ್ಯನ ಇಲ್ಲ?” ಎಂದು ಗೆಲುವಿನಿಂದ ತೋರಿಸಿದ.
ಗುಂಡುರಾವ್‌ ದೇಸಾಯಿ ಬರೆದ ಮಕ್ಕಳ ಕತೆ “ಸಮು ಮತ್ತು ಹುಣಸೆ ಬೀಜ”

Read More

ಪೆಣ್ಣೆತ್ತ ಖುಷಿಯನು ಲೋಕಕೆ ಹಂಚಿ…: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಆಕಾಶದ ನೀಲಿಯಲ್ಲಿ ಚಂದ್ರ ತಾರೆ ತೊಟ್ಟಿಲಲ್ಲಿ ಬೆಳಕನಿಟ್ಟು ತೂಗಿದಾಕೆ ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಎಂದರೆ ಅಷ್ಟೇ ಸಾಕೆ ಎನ್ನುವಂತೆ ಇಂತಹ ಎಷ್ಟು ಸಾಹಿತ್ಯ ರಚನೆಯಾದರೂ ಹೆಣ್ಣಿನ ಕುರಿತಾದ ಸಮಾಜದ ಮನಸ್ಥಿತಿ ಬದಲಾಯಿಸಲು ಆಗುತ್ತಿಲ್ಲ. ಎಷ್ಟೋ ಹೆಣ್ಣೆತ್ತ ತಂದೆ – ತಾಯಿಯರಿಗೆ ಹೆಣ್ಣನ್ನು ಹೆತ್ತಿದ್ದೇವೆ ಎನ್ನುವ ನೋವಿಗಿಂತಲೂ ಹೆಣ್ಣೆತ್ತವರನ್ನು ಸಮಾಧಾನ ಮಾಡುವ ಸೋಗಿನಲ್ಲಿ ಆಡುವ ಮಾತುಗಳ ನೋವೇ ಹೆಚ್ಚೆಂಬುದನ್ನು ದೇಸಾಯಿಯವರು ಬಹಳ ವಿಶೇಷವಾಗಿ ಹಾಸ್ಯ ಮಿಶ್ರಿತಗೊಳಿಸಿ ಹೇಳಿದ್ದಾರೆ.
ಗುಂಡುರಾವ್ ದೇಸಾಯಿ ಲಲಿತ ಪ್ರಬಂಧಗಳ ಕೃತಿ “ಪೆಣ್ಣೆತ್ತ ಖುಷಿಗೆ.. ಕುರಿತು ಡಾ. ತಿಮ್ಮಯ್ಯ ಶೆಟ್ಟಿ ಇಲ್ಲೂರು ಬರಹ

Read More

‘ಮಕ್ಕಳೇನು ಸಣ್ಣವರಲ್ಲ’: ಹಾಸ್ಯದ ಒರತೆಯ ಕೃತಿ

ಸಂಕಲನದ ಮೊದಲ ಕಥೆ ‘ಎಗ್ ರೈಸ್ ಮಂತ್ರಿ’ ಹಾಸ್ಯದ ಜೊತೆಗೆ ಎಚ್ಚರವನ್ನೂ ಮೂಡಿಸುತ್ತದೆ. ಶಾಲಾ ಸಂಸತ್ತಿಗೆ ನಡೆಯುವ ಚುನಾವಣೆಯಲ್ಲಿ ವಿದ್ಯಾರ್ಥಿಯೊಬ್ಬ ಮಂತ್ರಿಯಾಗುವ ಆತುರದಲ್ಲಿ ಪೊಳ್ಳು ಭರವಸೆ ನೀಡಿ, ಗೆದ್ದಮೇಲೆ ಎಗ್ ರೈಸ್ ಕೊಡಿಸಲಾಗದೇ ಇರುವ ಸ್ಥಿತಿ, ಅದನ್ನು ಪಡೆಯಲು ಪ್ರಯತ್ನಿಸುವ ಅವನ ಗೆಳೆಯರು ಮಾಡುವ ಸತತ ಪ್ರಯತ್ನ ಹಾಸ್ಯವನ್ನುಕ್ಕಿಸುತ್ತದೆ. ಇದರಲ್ಲಿ ಸತ್ಯಾಂಶವೂ ಇದೆ. ಆದರೆ ನಾಗ ‘ನನಗೆ ಅಷ್ಟು ದುಡ್ಡು ಎಲ್ಲಿಂದ ಬರತೈತಿ, ಆಗಲ್ಲ ಬೇಕಾದ್ರ ಶಾಲಿಗೆ ಒಳ್ಳೆ ಕೆಲ್ಸ ಮಾಡ್ತೇನಿ’ ಅಂತ ಹೇಳಿದ್ದು ಅವನ ಪ್ರಾಮಾಣಿಕತೆಯಾದರೆ, ಆಸೆಗೆ ಬಲಿಯಾಗಬೇಡಿ ಎಂಬುದನ್ನೂ ಕಥೆ ಸೂಚ್ಯವಾಗಿ ಹೇಳುತ್ತದೆ.
ಗುಂಡುರಾವ್ ದೇಸಾಯಿ ಬರೆದ “ಮಕ್ಕಳೇನು ಸಣ್ಣವರಲ್ಲ” ಮಕ್ಕಳ ಕಥಾ ಸಂಕನದ ಕುರಿತು ನಾಗರಾಜ ಎಂ ಹುಡೇದ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ