Advertisement

Tag: ಗುರುಪ್ರಸಾದ ಕುರ್ತಕೋಟಿ

ಕೃಷಿಯ ಖುಷಿ ಬಲ್ಲವರೇ ಬಲ್ಲರು…

ಬೆಂಗಳೂರಿನಲ್ಲಿ ಇನ್ನೂ ಕೆಲಸದಲ್ಲಿದ್ದ ಅವರಿಗೆ ಕೃಷಿಯ ಹುಚ್ಚು. ಅವರಿಗೆ ಮನೆಯಲ್ಲಿ ಹೊಲ ಇದ್ದರೂ ಕೂಡ ಮಾಡಲಾಗದ ಪರಿಸ್ಥಿತಿ. ಅವರ ತಂದೆ ಹೊಲ ಮಾಡಲು ಕೊಡುತ್ತಿರಲಿಲ್ಲ. ಬೆಂಗಳೂರಿನಲ್ಲಿ ಆರಾಮಾಗಿ ಇರು, ನಮ್ಮ ಹಾಗೆ ಯಾಕೆ ಕಷ್ಟ ಪಡುತ್ತೀಯ ಎಂಬುದು ಒಂದು ಕಾರಣವಾದರೆ, ಅವರಿಗೆ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದರು ಅನ್ನುವುದು ಇನ್ನೊಂದು ಬಲವಾದ ಕಾರಣ! ಕೃಷಿಕ ಅಂತ ಗೊತ್ತಾದರೆ ಅವರ ಮದುವೆ ಆಗಲು ಸಾಧ್ಯವೇ ಇರಲಿಲ್ಲ! ಅರೆ ಯಕಶ್ಚಿತ ಒಬ್ಬ ರೈತನನ್ನು ಮದುವೆಯಾಗಲು ಹುಡುಗಿಯರಿಗೇನು ಹುಚ್ಚೆ?!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…

ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಬೋರ್‌ವೆಲ್ ಮತ್ತು ʻನೀರʼಕ್ಷರಿಗಳು

ಕಡೆಗೊಮ್ಮೆ ಬೋರ್ ಕೊರೆಸುವ ಮನಸ್ಸು ಮಾಡಿದೆವು. ನೀರಿನ ಸೆಲೆಯನ್ನು ಕಂಡು ಹಿಡಿಯುವುದು ಅತ್ಯಂತ ಕ್ಲಿಷ್ಟವಾದ ಕೆಲಸ. ಮೇಲೆ ನಿಂತುಕೊಂಡು ಭೂಮಿಯಲ್ಲಿ ಇಷ್ಟು ಆಳದಲ್ಲಿ ನೀರು ಸಿಗುತ್ತದೆ ಅಂತ ಹೇಳುವುದು ಸುಲಭ ಅಲ್ಲ. ಆದರೆ ಹಾಗೆ ಹೇಳುತ್ತೇವೆ ಅಂತ ತೆಂಗಿನಕಾಯಿ ಸರ್ಕಸ್ ಮಾಡಿ ಜನರನ್ನು ಯಾಮಾರಿಸುವ ತುಂಬಾ ಜನರು ಹುಟ್ಟಿಕೊಂಡಿದ್ದಾರೆ. ತೆಂಗಿನಕಾಯಿ ಅಲುಗಾಡಿಸಿ ಒಂದು ಪಾಯಿಂಟ್ ತೋರಿಸಿ ಅಲ್ಲಿ ನೀರು ಬರದಿದ್ದರೆ ಅರ್ಧ ದುಡ್ಡು ವಾಪಸ್ಸು ಅಂತ ಹೇಳುವವರೂ ಇದ್ದಾರೆ. ಹತ್ತಿದರೆ ಅವರಿಗೆ ಲಾಟರಿ. ಇಲ್ಲದಿದ್ದರೆ ಅವರಿಗೆ ಅರ್ಧ ದುಡ್ಡು. ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ಹಾವು ಬಾವಲಿಗಳ ಸ್ನೇಹಕ್ಕೆ ಕಾಯುತ್ತ

ತೋಟದ ಮನೆಯಲ್ಲಿ ಎಲ್ಲವೂ ಆಹ್ಲಾದಕರವಾಗಿರಲಿಲ್ಲ! ಹಲವಾರು ಹೆದರಿಕೆ ಬರುವ ಸಂಗತಿಗಳೂ ಇದ್ದವು. ಬಯಲುಸೀಮೆಯಲ್ಲಿ ಹುಟ್ಟಿ ಬೆಳೆದಿದ್ದ ನನಗೆ ತುಂಬಾ ಪರಿಚಿತ ಪ್ರಾಣಿಗಳೆಂದರೆ ಮಂಗಗಳು. ನಮ್ಮ ಮೂಲವಾದ ಕುರ್ತಕೋಟಿ, ಕೆಂಪು ಮಂಗಗಳಿಗೆ ಎಷ್ಟು ಪ್ರಸಿದ್ಧ ಅಂದ್ರೆ ಅವಕ್ಕೆ “ಕುರ್ತಕೋಟಿ ಮಂಗ್ಯ” ಅಂತಲೇ ಬ್ರಾಂಡು. ಅದರ ಜೊತೆಗೆ ಹಾವುಗಳನ್ನು ಬಾಲ್ಯದಲ್ಲಿ ಲಕ್ಷ್ಮೇಶ್ವರದಲ್ಲಿದ್ದಾಗ ಆಗೀಗ ನೋಡಿದ್ದೆನಾದರೂ ಅವುಗಳ ಬಗ್ಗೆ ಭಯವಂತೂ ಇದ್ದೆ ಇತ್ತು. ಗುರುಪ್ರಸಾದ ಕುರ್ತಕೋಟಿ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ