Advertisement

Tag: ಗುರುಪ್ರಸಾದ ಕುರ್ತಕೋಟಿ

ನಿಮ್ಮ ಜಾತಿ ಯಾವುದು!

ಹೊಲದ ಹತ್ತಿರ ಅನ್ನುವ ಕಾರಣಕ್ಕೆ ನನಗೆ ಮನೆ ಇಷ್ಟವಾಯ್ತು. ಮನೆಯನ್ನು ಕೂಲಂಕುಷವಾಗಿ ನೋಡಿದ ಮೇಲೆ ಗೌಡರ ಜೊತೆಗೆ ಮಾತಾಡಲು ಅಲ್ಲೇ ಹತ್ತಿರವೇ ಇದ್ದ ಅವರ ಮನೆಗೆ ಹೋದೆ. ಹೆಸರು ಕೇಳಿದವರೆ ಯಾವ ಜಾತಿ ನಿಮ್ಮದು ಅಂದರು. ನನಗೆ ತುಂಬಾ ಇರುಸು ಮುರುಸು ಆಯ್ತು. ನಾನು ಯಾರಿಗೂ ಜಾತಿ ಕೇಳೋದಿಲ್ಲ, ನನಗೆ ಯಾರಾದರೂ ಕೇಳಿದರೂ ನನಗೆ ಆಗೋಲ್ಲ. ಆದರೆ ಹಳ್ಳಿಯಲ್ಲಿ ಜಾತಿ ವ್ಯವಸ್ಥೆ ಇನ್ನೂ ಗಟ್ಟಿಯಾಗಿಯೇ ಇದೆ. ನನ್ನ ಜಾತಿ ಯಾಕೆ ಬೇಕು ಅಂತ ಕೇಳಿದಾಗ “ಒಳ್ಳೆಯವರಿಗೆ ಕೊಡಬೇಕಲ್ರಿ ಮನಿ ಅದಕ್ಕ ಕೇಳತೀವಿ” ಅಂದರು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

ಹೃದಯ ವೈಶಾಲ್ಯತೆಗೆ ಬೇಲಿ ಹಾಕಿಕೊಳ್ಳುವ ಅನಿವಾರ್ಯ!

ನಾವು ಮಾನವೀಯತೆಯಿಂದ ಯೋಚಿಸುವುದನ್ನು ಹಳ್ಳಿಯಲ್ಲಿ ಬೇರೆಯ ತರಹವೆ ನೋಡುತ್ತಾರೆ! ನಾವು ಕೇಳದೆ ಅವರಿಗೆ ಹೀಗೆ ಬೋನಸ್‌ಗಳನ್ನು ಕೊಟ್ಟರೆ ನಾವು ಅವರಿಗೆ ತುಂಬಾ ಹಣವಂತರ ಹಾಗೆ ಕಾಣುತ್ತೇವೆ. ಅದು ನಮಗೆ ಆಮೇಲಾಮೇಲೆ ನಿಧಾನವಾಗಿ ಅರ್ಥವಾಗತೊಡಗಿತು! ಅಲ್ಲಿ ಹೇಗಿರಬೇಕು ಅಂದರೆ, ತುಂಬಾ ಚೌಕಾಶಿ ಮಾಡಬೇಕು, ಒಂದು ರೂಪಾಯಿನೂ ಕಾಡಿಸಿ ಕಾಡಿಸಿ ಕೊಡಬೇಕು, ಸಾಲವನ್ನಂತೂ ಮರಳಿ ಕೂಡಲೇ ಕೂಡದು ಇತ್ಯಾದಿಗಳು… ನನಗೆ ಇದನ್ನೆಲ್ಲ ಮಾಡಲು ಮನಸ್ಸು ಒಪ್ಪುತ್ತಿರಲಿಲ್ಲ.
ಗುರುಪ್ರಸಾದ್‌ ಕುರ್ತಕೋಟಿ ಅಂಕಣ

Read More

ಕೃಷಿಯ ಖುಷಿ ಬಲ್ಲವರೇ ಬಲ್ಲರು…

ಬೆಂಗಳೂರಿನಲ್ಲಿ ಇನ್ನೂ ಕೆಲಸದಲ್ಲಿದ್ದ ಅವರಿಗೆ ಕೃಷಿಯ ಹುಚ್ಚು. ಅವರಿಗೆ ಮನೆಯಲ್ಲಿ ಹೊಲ ಇದ್ದರೂ ಕೂಡ ಮಾಡಲಾಗದ ಪರಿಸ್ಥಿತಿ. ಅವರ ತಂದೆ ಹೊಲ ಮಾಡಲು ಕೊಡುತ್ತಿರಲಿಲ್ಲ. ಬೆಂಗಳೂರಿನಲ್ಲಿ ಆರಾಮಾಗಿ ಇರು, ನಮ್ಮ ಹಾಗೆ ಯಾಕೆ ಕಷ್ಟ ಪಡುತ್ತೀಯ ಎಂಬುದು ಒಂದು ಕಾರಣವಾದರೆ, ಅವರಿಗೆ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದರು ಅನ್ನುವುದು ಇನ್ನೊಂದು ಬಲವಾದ ಕಾರಣ! ಕೃಷಿಕ ಅಂತ ಗೊತ್ತಾದರೆ ಅವರ ಮದುವೆ ಆಗಲು ಸಾಧ್ಯವೇ ಇರಲಿಲ್ಲ! ಅರೆ ಯಕಶ್ಚಿತ ಒಬ್ಬ ರೈತನನ್ನು ಮದುವೆಯಾಗಲು ಹುಡುಗಿಯರಿಗೇನು ಹುಚ್ಚೆ?!
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ಗ್ರಾಮ ಡ್ರಾಮಾಯಣ ಅಂಕಣ

Read More

“ಜೀವಾಮೃತ” ಘಳಿಗೆ ಬಂದೇಬಿಟ್ಟಿತು…

ಶಂಭುಲಿಂಗ ಮಾವನ ಮನೆಯಲ್ಲಿ ಎರಡು ಹಸುಗಳಿದ್ದವು; ಆದರೆ ಅವು ನಾಟಿ ಆಗಿರಲಿಲ್ಲ. ಹೀಗಾಗಿ ನಾಟಿ ಹಸುಗಳ ಹುಡುಕಾಟ ಶುರು ಆಯ್ತು. ಮಲೆನಾಡು ಗಿಡ್ಡ ಎಂಬ ತಳಿ ಅಲ್ಲಿನ ನಾಟಿ ಹಸು. ಹಳ್ಳಿಯಲ್ಲಿ ಎಲ್ಲೋ ಒಂದು ಕಡೆ ಸಿಕ್ಕೆ ಸಿಗುತ್ತದೆ ಅಂದುಕೊಂಡಿದ್ದ ನನಗೆ ಹುಡುಕಿದ ಕಡೆಯೆಲ್ಲ ಅವುಗಳನ್ನು ಕಾಣದೆ ಭ್ರಮನಿರಸನವಾಯ್ತು. ವಿಚಿತ್ರ ಅಂದರೆ ಈಗ ಬೆಂಗಳೂರಿನಲ್ಲೇ ಬೇಕಾದಷ್ಟು ನಾಟಿ ಹಸುಗಳ ಹಾಲಿನ ಡೈರಿಗಳು ಇವೆ, ಆದರೆ ಹಳ್ಳಿಯಲ್ಲಿ ತುಂಬಾ ಅಪರೂಪ. ಇದೊಂದು ದುರಂತ ಅಂತ ನನಗೆ ಅನಿಸಿತು.
ಗುರುಪ್ರಸಾದ್‌ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ…

Read More

ಬರಹ ಭಂಡಾರ