Advertisement

Tag: ಚಳಿಗಾಲ

‘ಡಿಸೆಂಬರ್ ಬಂದಿತು, ಚಳಿಯಾಕೆ ಬಂದಳು’: ಮಹಾಲಕ್ಷ್ಮೀ ಕೆ.ಎನ್.‌ ಬರಹ

ಈ ಬೆಟ್ಟಕ್ಕೆ, ಆ ಮರಕ್ಕೆ, ಹೆಂಚಿನ ಪುಟ್ಟ ಮನೆಗೆ ಹಿಮದ ಹೊದಿಕೆ ಬಂದುಬಿಡುತ್ತೆ. ನಮ್ಮನ್ನೂ ಆ ಹೊದಿಕೆ ಆವರಿಸಿಬಿಡುತ್ತದೆ. ವಿಸ್ಮೃತ ದೃಶ್ಯವನ್ನು ತಂದಿಟ್ಟುಬಿಡುತ್ತದೆ. ಹೆಜ್ಜೆ ಇಟ್ಟಲ್ಲೆಲ್ಲಾ ಹಿಮಮಣಿ ಕಾಲಿಗೆ ಮುತ್ತಿಡುತ್ತದೆ. ಎಳೆಕೂಸಿನ ಕೈ ಕಾಲುಗಳ ಮೆತ್ತಗೆ ಹಿಡಿದು ತೊಳೆಯುವಂತೆ ನಮ್ಮನ್ನು ತಣ್ಣಗೆ ಸೋಕಿ ತೊಳೆಯುತ್ತದೆ ಮಂಜು. ಹಿಮವು ನೆಲದ ಮೇಲೆ ಆವರಿಸಿದಾಗ ಧ್ವನಿ ಹೀರಿಕೊಳ್ಳುವ ಸಾಧನವಾಗಿ ಕಾರ್ಯನಿರ್ವಹಿಸುವುದರಿಂದ ಇಷ್ಟು ದಿನದ ಸದ್ದು ಸಪ್ಪಳ ಸುಮ್ಮನಾಗುತ್ತದೆ.
ಡಿಸೆಂಬರ್‌ ಚಳಿಯ ಕುರಿತು ಮಹಾಲಕ್ಷ್ಮೀ ಕೆ.ಎನ್.‌ ಬರಹ

Read More

ಮಾಗಿ ಮಾವ ಬಂದ ಮಂಜು ಗಿಂಜು ತಂದ: ಚಂದ್ರಮತಿ ಸೋಂದಾ ಸರಣಿ

ಉಳಿದ ದಿನಗಳಲ್ಲಿ ಸ್ನಾನಮಾಡಲು ಹಿಂದೇಟು ಹಾಕುತ್ತಿದ್ದ ನಾವು ಚಳಿಗಾಲದಲ್ಲಿ ಮಾತ್ರ ಸ್ನಾನ ಮಾಡಲು ನಾಮುಂದು ತಾಮುಂದು ಎಂದು ಓಡುತ್ತಿದ್ದೆವು. ಮೈ ಮೇಲೆ ಬಿಸಿನೀರು ಸುರಿದುಕೊಳ್ಳುವುದು ಬಹಳ ಆಪ್ಯಾಯಮಾನ ಎನಿಸುತ್ತಿತ್ತು. ʻಅದೆಷ್ಟು ಹೊತ್ತು? ನಿಂದೊಳ್ಳೆ ಊರ್ಮಿಳೆ ಸ್ನಾನ ಆಯ್ತುʼ ಅಂಥ ಅಮ್ಮನಿಂದ ಮಂತ್ರಾಕ್ಷತೆ ಸಿಗುವುದೂ ಇತ್ತು. ಚಿಕ್ಕವರಿರುವಾಗ ಇದರ ಅರ್ಥ ಗೊತ್ತಿರಲಿಲ್ಲ, ಆಮೇಲೆ ತಿಳಿಯಿತು. ರಾಮಲಕ್ಷ್ಮಣರು ಸೀತೆಯೊಂದಿಗೆ ವನವಾಸಕ್ಕೆ ಹೋಗುವಾಗ ಊರ್ಮಿಳೆ ಸ್ನಾನ ಮಾಡುತ್ತಿದ್ದಳಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹನ್ನೆರಡನೆಯ ಕಂತು

Read More

ಚಳಿಗಾಳಿ, ಸಿಹಿಗಾಳಿಯ ಕಂಪೆಲ್ಲ ಸೊಗಸಾಗಿ..

ಚಳಿಗಾಲಕ್ಕೆಂದೆ ಅರಳುವ ಕೆಲವು ಕಾಡ ಹೂಗಳಿಗೆ ಹೆಸರಿಲ್ಲದಿದ್ದರೂ ಬಣ್ಣಗಳಿವೆ. ಈ ಬಣ್ಣದ ಹೂಗಳಿಗೆ ಹೆಸರಿಡುವ ಕೆಲಸವೂ ಅಣಶಿ ಮಕ್ಕಳಿಂದ ಸದ್ದಿಲ್ಲದೆ ನಡೆಯುತ್ತದೆ. ಕೊರೆವ ಚಳಿಯಲ್ಲೂ ಮಕ್ಕಳೆಲ್ಲ ಹಳ್ಳದ ಅಂಚಿರುವ ಕಾಡ ಮರದ ತುದಿಯನ್ನೇರಿ ಹಳ್ಳದ ನೀರಿಗೆ ಧುಮುಕಿ ಈಜುವ ಸಾಹಸದ ಕ್ರೀಡೆಯಲ್ಲಿ ತಲ್ಲೀನರಾಗಿದ್ದಾರೆ. ಶಿಶಿರನ ಹೆಸರು ಕೇಳತ್ತಿದ್ದಂತೆಯೆ ನದಿಯೂ ಕೂಡ ನಲುಮೆಯ ಮಾತಾಡಿದೆ. ಪ್ರತಿ ಚಳಿಗಾಲಕ್ಕೆ ಕಾಂದಾಬಜ್ಜಿ ಬಿಸಿ ಬಿಸಿ ತಯಾರಿಸಿ ಮಾರುವ…

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ