Advertisement

Tag: ಚಿತ್ರಾ ವೆಂಕಟರಾಜು

ರಾಮಮನೋಹರ ಲೋಹಿಯಾ ಮತ್ತು ರಾಮ ಕೃಷ್ಣ ಶಿವ: ಚಿತ್ರಾ ವೆಂಕಟರಾಜು ಸರಣಿ

ಪ್ರಬಂಧದಲ್ಲಿ ರಾಮಮನೋಹರ ಲೋಹಿಯಾ ಅವರು ರಾಮ, ಕೃಷ್ಣ, ಶಿವ ಮೂವರಲ್ಲಿ ಒಂದೊಂದು ವ್ಯಕ್ತಿತ್ವವನ್ನು ಗುರುತಿಸಿದ್ದಾರೆ. ಆ ಮೂರೂ ವ್ಯಕ್ತಿತ್ವಗಳೂ ಭಾರತಕ್ಕೆ ಹೇಗೆ ಮತ್ತು ಯಾಕೆ ಬೇಕು ಎನ್ನುವುದೇ ಲೇಖನದ ಆಶಯ. ರಾಮನಲ್ಲಿನ ಸೀಮಿತ ವ್ಯಕ್ತಿತ್ವ, ಕೃಷ್ಣ ನ ಸಮೃದ್ಧ ವ್ಯಕ್ತಿತ್ಚ ಮತ್ತು ಶಿವ ನ ಪ್ರಮಾಣಾತೀತ ವ್ಯಕ್ತಿತ್ವ. ಈ ವ್ಯಕ್ತಿತ್ವಗಳನ್ನು ಆ ಪಾತ್ರಗಳ ಘಟನೆಗಳ ಮೂಲಕವೇ ನಿರೂಪಿಸುತ್ತಾರೆ. ರಾಮನೊಳಗೆ ಕೃಷ್ಣ ನ ಸಮೃದ್ಧ ವ್ಯಕ್ತಿತ್ವವೂ, ಕೃಷ್ಣನೊಳಗೆ ರಾಮನ ಸೀಮಿತತೆಯೂ ಬಂದುಬಿಡುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಒಂದು ಡೈಲಾಗ್‌ ಹೇಳಿ!: ಚಿತ್ರಾ ವೆಂಕಟರಾಜು ಸರಣಿ

ಕಲಿಕೆಯ ಪ್ರಾರಂಭದಲ್ಲಿ ಎಲ್ಲಾ ಕಲೆಗಳಲ್ಲೂ ಅದನ್ನು ಕಲಿಸುವವರನ್ನು ಅನುಕರಣೆ ಮಾಡುತ್ತಾರೆ. ಒಂದು ಹಂತದಲ್ಲಿ ಅದು ಅನಿವಾರ್ಯ ಕೂಡಾ. ನಂತರ ನಿಧಾನವಾಗಿ ಅದನ್ನು ಬಿಡಿಸಿಕೊಂಡು ಅಂದರೆ ಕೌಶಲವನ್ನು ಮೀರಿ, ಒಂದು ನಿರ್ದಿಷ್ಟ ಸನ್ನಿವೇಶದಲ್ಲಿ ಒಂದು ಪಾತ್ರದ ನಡವಳಿಕೆ ಹೇಗಿರಬಹುದು ಎನ್ನುವುದರಿಂದ ನಟನೆಯ ಪ್ರಕ್ರಿಯೆಯನ್ನು ಪ್ರಾರಂಭ ಮಾಡಬೇಕಾಗುತ್ತದೆ. ಇಲ್ಲದಿದ್ದರೆ, ವರ್ಷಗಳ ಹಿಂದೆ ಅನುಕರಣೆ ಮಾಡಿದ ರೀತಿಯಲ್ಲೇ ಎಲ್ಲಾ ಸಂಭಾಷಣೆಗಳನ್ನೂ ಹೇಳುತ್ತೇವೆ. ಕಾಳಿದಾಸನಿಂದ ಹಿಡಿದು ಷೇಕ್ಸ್‌ಪಿಯರ್‌ ನವರೆಗೂ ಎಲ್ಲಾ ನಾಟಕದ ಎಲ್ಲಾ ಪಾತ್ರಗಳೂ ಒಂದೇ ರೀತಿ ಮಾತನಾಡುತ್ತವೆ. ನಿಜ ಜೀವನದಲ್ಲಿ ಮಾತನಾಡುವಂತೆ ರಂಗದ ಪಾತ್ರಗಳು ಮಾತನಾಡಲು ಆಗುವುದಿಲ್ಲ ಅದಕ್ಕೊಂದು ನಾಟಕೀಯತೆ ಇರಬೇಕಾಗುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು”

Read More

ನೀನು ಬೆಳೆದರೆ ನಾನು ಬೆಳೆವೆನು: ಚಿತ್ರಾ ವೆಂಕಟರಾಜು ಸರಣಿ

ಎಷ್ಟು ಸಲ ಪ್ರವೇಶ ಕೊಡಬಾರದ ಸೀನ್‌ಗಳಲ್ಲಿ ತಪ್ಪಿ ಪ್ರವೇಶ ಕೊಟ್ಟಿರುತ್ತೇವೆ, ಆಡಲೇಬೇಕಾದ ಮಾತನ್ನು ಆಡದೇ ಉಳಿದಿದ್ದೇವೆ. ಆಡಬಾರದಿದ್ದ ಸಂಭಾಷಣೆಗಳನ್ನು ಸುಲಭವಾಗಿ ಆಡಿಬಿಟ್ಟಿರುತ್ತೇವೆ. ಏನೇ ಮಾಡಲಿ ಒಮ್ಮೆ ಆ ನಾಟಕ ಮುಗಿದ ಮೇಲೆ ಮುಗಿಯಿತು… ಒಮ್ಮೆ ಪ್ರದರ್ಶನ ಮುಗಿದ ಮೇಲೆ ಮತ್ತೆ ಆ ದೃಶ್ಯದಲ್ಲಿ ನಮ್ಮ ಎಂಟ್ರಿ ಇಲ್ಲ. ಮತ್ತೆ ಬೇರೆಯದೇ ನಾಟಕದಲ್ಲಿ ಬೇರೆಯದೇ ಪಾತ್ರ! ನಾಟಕದ ಮಜಾ ಎಂದರೆ ಬದುಕಿಗಿಲ್ಲದ ಮರು ಪ್ರದರ್ಶನದ ಅವಕಾಶ ನಾಟಕದಲ್ಲಿದೆ. ಎಲ್ಲ ನಟರೂ ಒಪ್ಪಿದರೆ ಮತ್ತೆ ಅದೇ ನಾಟಕವನ್ನು ಆಡಬಹುದು. ಬೇಕಿದ್ದರೆ ಬೇರೆ ರೀತಿಯಲ್ಲಿ. ಆದರೆ, ಪ್ರತಿ ಬಾರಿಯೂ ಹೊಸದಾಗಿ ಅಭಿನಯಿಸಬೇಕು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಆಪ್ತವಾಗಿದ್ದ ಆಪ್ತರಂಗ ಪ್ರಯೋಗಗಳು: ಚಿತ್ರಾ ವೆಂಕಟರಾಜು ಸರಣಿ

ಮೂರನೇ ಬೆಲ್‌ ಆದ ತಕ್ಷಣ ನಟ ನಿಧಾನವಾಗಿ ಪ್ರೇಕ್ಷಕರ ಕೈಹಿಡಿದು ಬೇರೆಯದೇ ಲೋಕಕ್ಕೆ ಕರೆದುಕೊಂಡು ಹೋಗುತ್ತಾನೆ. ನಟ ಪಾತ್ರದಲ್ಲಿ ಇಳಿಯುತ್ತಿದ್ದಂತೆ ಪ್ರೇಕ್ಷಕನೂ ತನ್ನನ್ನು ಮರೆಯುತ್ತಾನೆ. ನಟರೊಂದಿಗೆ – ನಿರ್ದೇಶಕರು ತಮ್ಮ ತಮ್ಮ ಕಲ್ಪನೆಯಲ್ಲಿ ಇಷ್ಟು ತಿಂಗಳೂ ಕಟ್ಟಿದ ನಾಟಕ ಪ್ರೇಕ್ಷಕರೊಂದಿಗೆ ಸಂವಾದಕ್ಕಿಳಿಯುತ್ತದೆ. ನೋಡಿದ ನಾಟಕಗಳಲ್ಲಿ ಕೆಲವೇ ಕೆಲವು ಪ್ರಯೋಗಗಳು ನಾಟಕ ಮುಗಿದ ಎಷ್ಟೋ ವರ್ಷಗಳ ನಂತರವೂ ನೆನಪಿನ ಭಾಗವಾಗಿ ಭದ್ರವಾಗಿರುತ್ತದೆ ಎಂದರೆ ಆ ಮಾಧ್ಯಮಕ್ಕಿರುವ ಶಕ್ತಿ ಅಂಥದ್ದು! ಆ ಪ್ರಯೋಗಗಳು ಹೇಗಿತ್ತು ಎಂದರೆ ಹೇಳಲು ಬರುವುದಿಲ್ಲ…
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ರಂಗದ ನಂಟು ಅಂಟಿದ ಬಗೆ: ಚಿತ್ರಾ ವೆಂಕಟರಾಜು ಸರಣಿ

ನಾಟಕೋತ್ಸವ ಮುಗಿದು ಅವರೆಲ್ಲ ಹೊರಟುಹೋದ ಮೇಲೆ ಮತ್ತೆ ನಮ್ಮ ದಿನಚರಿಗೆ ಹೊಂದಿಕೊಳ್ಳುವುದಕ್ಕೆ ಬಹಳ ಸಂಕಟವಾಗುತ್ತಿತ್ತು. ಕಿಂದರಿಜೋಗಿಯ ಕುಂಟನಂತೆ ‘ಅಯ್ಯೋ ಹೋಯಿತೆ ಆ ನಾಕ, ಅಯ್ಯೋ ಬಂದಿತೆ ಈ ಲೋಕʼ ಎನ್ನುವ ಭಾವನೆ ಬರುತ್ತಿತ್ತು. ಈಗಿನಷ್ಟು ನಾಟಕ ಪ್ರಯೋಗಗಳು ನೋಡಲು ಸಿಗುತ್ತಿರಲಿಲ್ಲವಾದ್ದರಿಂದ ನೀನಾಸಮ್‌ ತಿರುಗಾಟವನ್ನು ನಾವು ಕರೆಸಿದಷ್ಟು ವರ್ಷಗಳೂ ನಾಟಕ ಮಾಡಬೇಕು ಅನ್ನೋ ಆಸೆ ಹೆಚ್ಚಾಗುತ್ತಿತ್ತು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ