Advertisement

Tag: ಚಿತ್ರಾ ವೆಂಕಟರಾಜು

ಆಪ್ತವಾಗಿದ್ದ ಆಪ್ತರಂಗ ಪ್ರಯೋಗಗಳು: ಚಿತ್ರಾ ವೆಂಕಟರಾಜು ಸರಣಿ

ಮೂರನೇ ಬೆಲ್‌ ಆದ ತಕ್ಷಣ ನಟ ನಿಧಾನವಾಗಿ ಪ್ರೇಕ್ಷಕರ ಕೈಹಿಡಿದು ಬೇರೆಯದೇ ಲೋಕಕ್ಕೆ ಕರೆದುಕೊಂಡು ಹೋಗುತ್ತಾನೆ. ನಟ ಪಾತ್ರದಲ್ಲಿ ಇಳಿಯುತ್ತಿದ್ದಂತೆ ಪ್ರೇಕ್ಷಕನೂ ತನ್ನನ್ನು ಮರೆಯುತ್ತಾನೆ. ನಟರೊಂದಿಗೆ – ನಿರ್ದೇಶಕರು ತಮ್ಮ ತಮ್ಮ ಕಲ್ಪನೆಯಲ್ಲಿ ಇಷ್ಟು ತಿಂಗಳೂ ಕಟ್ಟಿದ ನಾಟಕ ಪ್ರೇಕ್ಷಕರೊಂದಿಗೆ ಸಂವಾದಕ್ಕಿಳಿಯುತ್ತದೆ. ನೋಡಿದ ನಾಟಕಗಳಲ್ಲಿ ಕೆಲವೇ ಕೆಲವು ಪ್ರಯೋಗಗಳು ನಾಟಕ ಮುಗಿದ ಎಷ್ಟೋ ವರ್ಷಗಳ ನಂತರವೂ ನೆನಪಿನ ಭಾಗವಾಗಿ ಭದ್ರವಾಗಿರುತ್ತದೆ ಎಂದರೆ ಆ ಮಾಧ್ಯಮಕ್ಕಿರುವ ಶಕ್ತಿ ಅಂಥದ್ದು! ಆ ಪ್ರಯೋಗಗಳು ಹೇಗಿತ್ತು ಎಂದರೆ ಹೇಳಲು ಬರುವುದಿಲ್ಲ…
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ರಂಗದ ನಂಟು ಅಂಟಿದ ಬಗೆ: ಚಿತ್ರಾ ವೆಂಕಟರಾಜು ಸರಣಿ

ನಾಟಕೋತ್ಸವ ಮುಗಿದು ಅವರೆಲ್ಲ ಹೊರಟುಹೋದ ಮೇಲೆ ಮತ್ತೆ ನಮ್ಮ ದಿನಚರಿಗೆ ಹೊಂದಿಕೊಳ್ಳುವುದಕ್ಕೆ ಬಹಳ ಸಂಕಟವಾಗುತ್ತಿತ್ತು. ಕಿಂದರಿಜೋಗಿಯ ಕುಂಟನಂತೆ ‘ಅಯ್ಯೋ ಹೋಯಿತೆ ಆ ನಾಕ, ಅಯ್ಯೋ ಬಂದಿತೆ ಈ ಲೋಕʼ ಎನ್ನುವ ಭಾವನೆ ಬರುತ್ತಿತ್ತು. ಈಗಿನಷ್ಟು ನಾಟಕ ಪ್ರಯೋಗಗಳು ನೋಡಲು ಸಿಗುತ್ತಿರಲಿಲ್ಲವಾದ್ದರಿಂದ ನೀನಾಸಮ್‌ ತಿರುಗಾಟವನ್ನು ನಾವು ಕರೆಸಿದಷ್ಟು ವರ್ಷಗಳೂ ನಾಟಕ ಮಾಡಬೇಕು ಅನ್ನೋ ಆಸೆ ಹೆಚ್ಚಾಗುತ್ತಿತ್ತು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಗೋಹರ್‌ಬಾಯಿ ಕತೆ ಹೇಳಿದ ‘ಪ್ರತಿಗಂಧರ್ವʼ: ಚಿತ್ರಾ ವೆಂಕಟರಾಜು ಸರಣಿ

‘ಪ್ರತಿಗಂಧರ್ವʼ ದಂತಹ ನಾಟಕದ ಅಭಿನಯ ಬಹಳ ಸವಾಲಿನದು. ಏಕೆಂದರೆ ಹೆಚ್ಚಿನ ಪಾತ್ರಗಳು ಕಲಾವಿದರದ್ದು. ಗೋಹರ್‌ ಬಾಯಿ ಪಾತ್ರ ಮಾಡುವ ಕಲಾವಿದೆ, ನಾಟಕದ ಪಾತ್ರ ಮಾಡುವುದರ ಜತೆಗೆ ನಾಟಕದೊಳಗಿರುವ ರಂಗಸ್ಥಳದಲ್ಲಿ ಅಭಿನಯ ಮಾಡಬೇಕಾಗುತ್ತದೆ. ಅಂದರೆ ನಾವು ನೋಡುತ್ತಿರುವ ಪಾತ್ರ ಗೋಹರ್‌ ಬಾಯಿ. ಗೋಹರ್‌ ಬಾಯಿ ನಾಟಕದೊಳಗೆ ಮಾಡಿದ ಪಾತ್ರ ಗೂಢಾಚಾರಿಣಿಯದು. ಗೂಢಾಚಾರಿಣಿಯ ಪಾತ್ರ ಮಾಡಿದ ಗೋಹರ್‌ ಬಾಯಿ ಪಾತ್ರಧಾರಿ, ಅದು ಮುಗಿದ ಮೇಲೆ ಮತ್ತೆ ಗೋಹರ್‌ ಆಗಬೇಕು. ಆಗ ಅಲ್ಲಿನ ಅಭಿನಯಗಳೆರಡೂ ಬೇರೆಯಾಗಬೇಕಾಗುತ್ತದೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ನಾಟಕರಂಗದ ತಮಾಷೆ ಪ್ರಸಂಗಗಳು: ಚಿತ್ರಾ ವೆಂಕಟರಾಜು ಸರಣಿ

ಬರುವಾಗ ಸುಳ್ಯ, ಪುತ್ತೂರಿನ ಸಮೀಪ ಬೆಳಗಿನ ಜಾವ ಸುಮಾರು ೪ ಗಂಟೆಗೆ ಮೂತ್ರವಿಸರ್ಜನೆಗಾಗಿ ಗಾಡಿ ನಿಲ್ಲಿಸಿದರು. ನಂತರ ಹೊರಟು ಇನ್ನೇನು ಮೈಸೂರು ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಸಂಪೂರ್ಣ ಎ‍ಚ್ಚರವಾಯಿತು. ಇದ್ದಕ್ಕಿದ್ದಂತೆ ಯಾರೋ ‘ರಾಜಪ್ಪ ಎಲ್ಲಿ’ ಅಂತ ಕೇಳಿದರು. ಟೆಂಪೋ ಎಲ್ಲಾ ಹುಡುಕಿದರೂ ರಾಜಪ್ಪ ಇಲ್ಲ. ಎಲ್ಲಿ ಬಿಟ್ಟು ಬಂದ್ವಿ ಗೊತ್ತಿಲ್ಲ. ಅವರು ಪಾಪ ಒಂದು ಪಟಾಪಟಿ ಲುಂಗಿ ಬನಿಯನ್ ಮತ್ತು ಟವೆಲ್ ಸುತ್ತಿಕೊಂಡು ಇಳಿದವರು ವಾಪಸ್ ಬರುವ ಹೊತ್ತಿಗೆ ಟೆಂಪೋ ಹೊರಟಾಗಿತ್ತು. ಕಾಲಲ್ಲಿ ಚಪ್ಪಲಿಯೂ ಇಲ್ಲದಂತೆ ಯಾರದ್ದೋ ಸಹಾಯ ಕೇಳಿ ಕೊನೆಗೆ ಚಾಮರಾಜನಗರದಲ್ಲಿ ಕಾಣಿಸಿಕೊಂಡರು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ರಂಗದ ಮೇಲಿನ  ದೃಶ್ಯಕಾವ್ಯ  ‘ಚಿತ್ರಾಂಗದಾ’: ಚಿತ್ರಾ ವೆಂಕಟರಾಜು ಸರಣಿ

ಕೊನೆಗೂ ಯಾಕೆ ಈ ನಾಟಕವನ್ನು ಮಾಡಬೇಕು, ಯಾಕೆ ಈ ನಾಟಕವನ್ನು ನೋಡಬೇಕು ಎನ್ನುವುದು ಪ್ರತಿಯೊಬ್ಬ ಕಲಾವಿದನ, ಪ್ರೇಕ್ಷಕನ ಮೂಲಭೂತ ಪ್ರಶ್ನೆ. ಇಲ್ಲಿ ಇದು ಚಿತ್ರಾಂಗದಾ ಮತ್ತು ಅರ್ಜುನನ ಕತೆಯಾದರೂ ಅದರ ನೆಪದಲ್ಲಿ ನಡೆಯುವುದು ಗಂಡು ಹೆಣ್ಣು ಮತ್ತು ಅವರಿಬ್ಬರ ಸಂಬಂಧದ ಸಂಕೀರ್ಣತೆಯ ಬಗ್ಗೆ. ಹೆಣ್ಣಾದರೂ ಗಂಡಿನಂತೆ ವನದಲ್ಲಿರುವ ಚಿತ್ರಾಂಗದೆ ಅರ್ಜುನನನ್ನು ನೋಡಿದ್ದೆ ಮತ್ತೆ ‘ಹೆಣ್ತನ’ ಕ್ಕೆ ಹಾತೊರೆಯುತ್ತಾಳೆ. ಅವಳೊಳಗಿನ ಹೆಣ್ಣನ್ನು ನೋಡಿದ ಅರ್ಜುನ ತನ್ನ ಬ್ರಹ್ಮಚರ್ಯದ ನಿಯಮವನ್ನು ಮುರಿಯುತ್ತಾನೆ.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿಯಲ್ಲಿ ‘ಚಿತ್ರಾಂಗದಾ’ ನಾಟಕದ ಕುರಿತ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ