Advertisement

Tag: ಡಾ. ಎಲ್.ಜಿ. ಮೀರಾ

ಮಕ್ಕಳನ್ನು ಬೆಳೆಸುವ `ಕಲೆ’- ಎಂದಾದರೂ ಸಿದ್ಧಿಸೀತೇ?: ಎಲ್.ಜಿ.ಮೀರಾ ಅಂಕಣ

ಬೆಳಿಗ್ಗೆ ಏಳುವ ಸಮಯದಿಂದ ಹಿಡಿದು ರಾತ್ರಿ ಮಲಗುವ ಸಮಯದ ತನಕ ಪ್ರತಿಯೊಂದೂ ಅಂದರೆ ಇಂಚಿಂಚು ಜೀವನವೂ ನಿರ್ಬಂಧಮಯವಾದ ಜೀವನಶೈಲಿ ಇರುವ ಸನ್ನಿವೇಶ ಇದು. ಮಕ್ಕಳನ್ನು ಅದರಲ್ಲೂ ವಿಜ್ಞಾನ ಶಿಕ್ಷಣ ಆರಿಸಿಕೊಂಡವರಿಗೆ ಜಂಗಮವಾಣಿಯನ್ನು ಮುಟ್ಟಲೂ ಬಿಡದ, ಯಾವುದೇ ಸಾಂಸ್ಕೃತಿಕ ಚಟುವಟಿಕೆಗಳಿಗೆ ತೊಡಗಿಸದ ಮನೆಗಳಿವೆ, ವಿದ್ಯಾರ್ಥಿನಿಲಯಗಳಿವೆ! ಈ ವ್ಯವಸ್ಥೆಗೆ ಕೆಲವು ಮಕ್ಕಳು ಹೇಗೋ ಹೊಂದಿಕೊಂಡರೆ ಇನ್ನು ಕೆಲವರು ಆ `ಸೆರೆಮನೆ’ಯಿಂದ ಓಡಿ ಹೋಗಿಬಿಡುವುದು, ಅಥವಾ ದಿಕ್ಕು ಕಾಣದೆ ಆತ್ಮಹತ್ಯೆ ಮಾಡಿಕೊಳ್ಳುವುದು ಇಂತಹ ಅತಿರೇಕದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನೇಳನೆಯ ಬರಹ

Read More

ಸ್ತ್ರೀ ಅಸ್ಮಿತೆಯ ವಿಭಿನ್ನ ನೆಲೆಗಳು: ಡಾ. ಎಲ್.ಜಿ. ಮೀರಾ ಅಂಕಣ

ಸ್ತ್ರೀತ್ವವನ್ನು, ಅದರಿಂದ ಹೊಮ್ಮುವ ಅರಿವನ್ನು ತಾತ್ವಿಕವಾಗಿ ನಿರ್ವಚಿಸುವುದು ಒಂದು ಬಗೆಯಾದರೆ, ಪ್ರಸ್ತುತ ಬದುಕನ್ನು ಕಾಣುವ-ಕಟ್ಟುವ ಕ್ರಮವೊಂದನ್ನು ಅದು ನೀಡುವುದೇ ಎಂದು ಅನ್ವಯಕ್ರಮದಿಂದ ನೋಡುವುದು ಇನ್ನೊಂದು ಬಗೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಸ್ತ್ರೀಯ ಅಸ್ಮಿತೆಯು ಎದುರಿಸುತ್ತಿರುವ ಸವಾಲುಗಳನ್ನು ಚೇತನಾ ಗುರುತಿಸಿದ್ದಾರೆ ……. ಮಹಿಳೆಯರು ತಮ್ಮನ್ನು ಸ್ವಯಂ ಸಂಘಟಿಸಿಕೊಳ್ಳಲು ತಮ್ಮ ಅಸ್ಮಿತೆಯ ಮೂಲ ಸ್ವರೂಪ ಹಾಗೂ ಶಕ್ತಿ ಸಾಧ್ಯತೆಗಳನ್ನು ಅರಿಯುವುದು ಮೊದಲ ಹೆಜ್ಜೆ. ಇದು ಸಾಮಾಜಿಕ ಚಲನೆಗೂ ಪ್ರೇರಣೆಯಾಗುವ ಸಂಗತಿ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿನಾರನೆಯ ಬರಹ

Read More

ಹೆಣ್ಣಿನ ಉಡುಪು ಎಂಬ ಯುದ್ಧಭೂಮಿ: ಡಾ.ಎಲ್.ಜಿ.ಮೀರಾ

ನಾವು ಹೆಂಗಸರು ಹಲವು ಬಗೆಯಲ್ಲಿ ಸೃಷ್ಟಿಯಾಗಿರುತ್ತೇವೆ, ಅಲ್ಲದೆ ವಯಸ್ಸು, ಕಾಲ, ಸಂದರ್ಭ ಬದಲಾದಂತೆ ನಮ್ಮ ಆಯ್ಕೆಗಳು ಬದಲಾಗುತ್ತಿರುತ್ತವೆ. ನಮ್ಮಲ್ಲಿ ಅಲಂಕಾರದ ಗಾಢ ಅಭಿರುಚಿ ಇರುವವರು ಇದ್ದಂತೆ ಅದರ ಬಗ್ಗೆ ಅಷ್ಟೇನೂ ಆಸಕ್ತಿ ಇಲ್ಲದವರೂ ಇರುತ್ತೇವೆ. ನಮಗೆ ಬೇಸರ ತರಿಸುವ ವಿಷಯ ಏನೆಂದರೆ ನಮ್ಮ ಒಳಗಿನ ಗುಣ, ಜೀವನದೃಷ್ಟಿ, ಚಿಂತನೆ ಇವುಗಳಿಗೆ ಪ್ರಾಮುಖ್ಯ ಕೊಡದೆ ಕೇವಲ ಸೀರೆ, ಒಡವೆ, ಮುಖಬಣ್ಣಗಳಿಂದ ನಮ್ಮನ್ನು ಅಳೆದುಬಿಡುವ ಸಮಾಜದ ಧೋರಣೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಮನೆವಾಳ್ತೆ ಎಂಬ ಹೊನ್ನ ಸಂಕೋಲೆ: ಎಲ್.ಜಿ.ಮೀರಾ ಅಂಕಣ

ಅವಳ ಗಂಡನ ಮನೆಯವರು, ಸೊಸೆ ತಮ್ಮ ಮನೆಯನ್ನು ಬಿಟ್ಟು ಹೋದದ್ದು ದೊಡ್ಡ ವಿಷಯವೇನಲ್ಲ ಎಂಬಂತೆ ಇನ್ನೊಂದು ಹುಡುಗಿಯನ್ನು ಸೊಸೆಯಾಗಿ ತಂದುಕೊಳ್ಳುತ್ತಾರೆ! ಸಿನಿಮಾ ಕೊನೆಯಾಗುವ ಹೊತ್ತಿನಲ್ಲಿ ಈ ಹೊಸಹುಡುಗಿಯ ಮೂಕದುಡಿಮೆ ಪ್ರಾರಂಭವಾಗಿರುತ್ತದೆ! ಅಲ್ಲಿಗೆ `ಒಬ್ಬ ಸೊಸೆಯ `ಪ್ರತಿಭಟನೆ’ಯಿಂದ ಅಸೂಕ್ಷ್ಮ, ಪುರಾತನ, ಹಾಗೂ ಕೋಣನ ಚರ್ಮದ ಗಂಡಾಳಿಕೆಯ ವ್ಯವಸ್ಥೆಗೆ ಏನೂ ಪರಿಣಾಮವಾಗುವುದಿಲ್ಲ, ಅದರ ಕೂದಲು ಸಹ ಕೊಂಕುವುದಿಲ್ಲ, ಅದು ಮಾಡಿಟ್ಟಿರುವ `ಮನೆ’ಗಳಲ್ಲಿ ಮನೆವಾಳ್ತೆ ದುಡಿತ ಮಾಡಲು ಒಬ್ಬ ಮೂಗಬಸವಿ ಹೋದರೆ ಇನ್ನೊಬ್ಬ ಮೂಗಬಸವಿ ಬರುತ್ತಾಳೆ, ಮೂಗಬಸವಿಯರಿಗೇನೂ ಕೊರತೆ ಇಲ್ಲ ನಮ್ಮ ಸಮಾಜದಲ್ಲಿ’ ಎಂಬ ನಿರ್ದಯಿ ಸಂದೇಶ ಸಿಗುತ್ತದೆ ನೋಡುಗರಿಗೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ತಂತಿ ಮೇಲೆ ನಡೆದು ಮುಳ್ಳು ತೆಗೆದವರು: ಎಲ್.ಜಿ.ಮೀರಾ ಅಂಕಣ

ಮಾರನೆಯ ದಿನ ಬೆಳಿಗ್ಗೆ ಮಹೇಶ್ ನಾಯ್ಡು ಬಂದಾಗ ಅವನನ್ನು ಕಾಲೇಜಿನ ಮೈದಾನದ ದೂರದ ಒಂದು ಕಲ್ಲುಬೆಂಚಿಗೆ ಕರೆದುಕೊಂಡು ಹೋಗಿ ಆತ ಮಾಡಿದ ತಪ್ಪು ಕೆಲಸದ ಬಗ್ಗೆ ಮತ್ತು ಇದು ಇಡೀ ಕಾಲೇಜಿಗೆ ಗೊತ್ತಾದರೆ ತಾನು ಯಾವ ಪರಿಸ್ಥಿತಿಯಲ್ಲಿರಬಹುದು ಎಂದು ಊಹಿಸುವಂತೆ ಅವನಿಗೆ ಹೇಳಿದರು. ಮೊದಮೊದಲು ತಾನು ಏನೂ ತಪ್ಪು ಮಾಡಿಲ್ಲ ಎಂದು ವಾದಿಸಿದ ಆತ ನಂತರ ಕಾಂತಿ ಮೇಡಂರ ಗಂಭೀರ ಮುಖ ಮತ್ತು ತೂಕವಾದ ಮಾತುಗಳ ಮುಂದೆ ನಿರುತ್ತರನಾದ, ಮತ್ತು ತಾನು ಆ ಪದ ಬಳಸಿದ್ದು ತಪ್ಪು ಎಂದು ಒಪ್ಪಿಕೊಂಡ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಹದಿಮೂರನೆಯ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ