Advertisement

Tag: ಡಾ. ಎ. ರಘುರಾಂ

ಮಾತು ಹೆಪ್ಪುಗಟ್ಟಿ ಕಾವ್ಯವಾದ ಬಗೆ: ಡಾ.ಎ.ರಘುರಾಂ ಬರಹ

ಮಂಜುನಾಥ್ ಪಾಳ್ಯ ಅವರ ಎಲ್ಲ ಕವಿತೆಗಳನ್ನು ಓದಿದಾಗ ಅಲ್ಲಿನ ಭಾಷೆ, ವಸ್ತು, ನಿರ್ವಹಣೆಯ ಬಗ್ಗೆ ನೋಡಬೇಕು. ವಸ್ತು ಸಾಮಾಜಿಕವೇ ಆದರೂ ಕೂಡ ನಿರ್ವಹಣೆಯ ಸಂದರ್ಭದಲ್ಲಿ ಅದು ಭಿನ್ನ ಪಾತಳಿಗಳನ್ನು ಕಾಣುತ್ತದೆ. ಕವಿ ಪ್ರತಿಭಟಿಸುವಲ್ಲಿ ಕಾವ್ಯ ಬಂಡಾಯದ ಚಾಟಿ ಬೀಸುತ್ತದೆ. ಮೌನವಾಗಿ ಪ್ರೇಮಕ್ಕೆ ಮರುಳಾದಾಗ ಅಲ್ಲಿನ ಭಾಷೆ ತೀರ ಕೋಮಲವಾಗಿಬಿಡುತ್ತದೆ. ಭ್ರಷ್ಠತೆ, ಅತ್ಯಾಚಾರ, ಶೋಷಣೆ ವಿಚಾರಗಳು ಬಂದರೆ ಭಾಷೆ ಸ್ವಲ್ಪ ಒರಟಾಗಿಬಿಡುತ್ತದೆ. ಕಾವ್ಯ ಹೀಗೆ ಭಿನ್ನ ಪಾತಳಿಗೆ ಒಳಗಾಗುವುದು ಕವಿಯ ಸಂವೇದನಾಶೀಲ ಗುಣವನ್ನು ತೋರುತ್ತದೆ.
ಡಾ. ಮಂಜುನಾಥ ಪಾಳ್ಯ ಬರೆದ ‘ಹೆಪ್ಪುಗಟ್ಟಿದ ಮಾತುಗಳು’ ಕವನ ಸಂಕಲನದ ಕುರಿತು ಡಾ. ಎ. ರಘುರಾಂ ಬರಹ

Read More

ಲೋಕಾಂತ ಕವಿಯ ಏಕಾಂತ ಬದುಕಿನ ಅನಾವರಣ: ಡಾ. ಎ. ರಘುರಾಂ ಬರಹ

ಲೆಕ್ಕದಲ್ಲಿ ತಾನು ಅಷ್ಟೊಂದು ಪಂಡಿತನಲ್ಲ ಎನ್ನುವ ಕಾರಣಕ್ಕೆ ತಿಂಗಳಿಗೆ ಮೂವತ್ತೈದು ರೂಪಾಯಿ ಸಂಬಳದ ಪವರ್‌ಹೌಸ್‌ನ ನೌಕರಿಯನ್ನು ಬಿಟ್ಟು ಇಪ್ಪತ್ತೊಂದು ರೂಪಾಯಿಯ ಶಿಕ್ಷಕ ವೃತ್ತಿಯನ್ನು ಆಯ್ಕೆಮಾಡಿಕೊಳ್ಳುತ್ತಾರೆ. ಲೆಕ್ಕ ಬರದೇ ಇರುವ ಕಾರಣದಿಂದ ಈ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುತ್ತಾರೆಯೇ ಹೊರತು ಶಿಕ್ಷಕ ವೃತ್ತಿಯ ಕಾರಣದಿಂದಲ್ಲ. ಒಮ್ಮೆ ಮಗಳು ‘ಗಣಿತ ಕಲಿಸುವುದನ್ನು ಹೇಗೆ ನಿಭಾಯಿಸಿದೆ? ಗಣಿತ ನಿನಗೆ ಬರುವುದೇ ಇಲ್ಲವಲ್ಲ’ ಎಂದು ಕೇಳಿದ್ದಕ್ಕೆ ‘ವಿದ್ಯಾರ್ಥಿಗಳಿಗೆ ನಾನು, ನೀವು ಇಬ್ಬರೂ ಕೂಡಿಯೇ ಗಣಿತವನ್ನು ಬಗೆಹರಿಸಿಕೊಳ್ಳೋಣ..’ ಎಂದು ಹೇಳಿದೆ ಎಂದು ಗಹಗಹಿಸಿ ನಕ್ಕನು.
ತಮ್ಮ ತಂದೆ ಶಾಂತರಸರೊಂದಿಗಿನ ಒಡನಾಟದ ಕುರಿತು ಎಚ್.ಎಸ್.‌ ಮುಕ್ತಾಯಕ್ಕ ಬರೆದ “ಅಪ್ಪ ನಾನು ಕಂಡಂತೆ” ಕೃತಿಯ ಕುರಿತು ಡಾ. ಎ. ರಘುರಾಂ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ