Advertisement

Tag: ಡಾ. ಚಂದ್ರಮತಿ ಸೋಂದಾ

ನಮ್ಮನೆಯ ಅಷ್ಟೈಶ್ವರ್ಯ: ಚಂದ್ರಮತಿ ಸೋಂದಾ ಸರಣಿ

ಹೊಸ ಬಡಾವಣೆಗೆ ವಾಸಕ್ಕೆ ಬಂದವರಿಗೆ ಯಾವ್ಯಾವ ಬಗೆಯಲ್ಲಿ ಇಲಿ ಕಾಟಕೊಡುತ್ತದೆ ಅನ್ನೋ ವೈವಿಧ್ಯಗಳ ಪರಿಚಯ ಮಾಮೂಲು. ನಮ್ಮೂರುಗಳಲ್ಲಾದರೆ ಒಂದು ಬೆಕ್ಕು ಸಾಕಿದರೆ ಆಯಿತು. ಇಲಿಕಾಟ ತಪ್ಪಿತು ಅಂತನೇ ಅರ್ಥ. ಆದರೆ ನಗರದಲ್ಲಿ ಬೆಕ್ಕು ಸಾಕೋದು ಅಂದರೆ ಸಂನ್ಯಾಸಿ ಸಂಸಾರದಂತೆ.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಸಾಕ್ಷರತೆಯ ರೂಪವಾಗಿ ಅಕ್ಷರ: ಚಂದ್ರಮತಿ ಸೋಂದಾ ಸರಣಿ

ಶಾಲೆಯ ಪಠ್ಯದ ಭಾಗವಾಗಿ ಪತ್ರಲೇಖನ ಇರುತ್ತಿತ್ತು. ಮಕ್ಕಳ ಪತ್ರಕ್ಕಾಗಿ ಹೆತ್ತವರು, ಹೆತ್ತವರ ಪತ್ರಕ್ಕಾಗಿ ಮಕ್ಕಳು ಕಾಯುತ್ತಿದ್ದರು. ಹಬ್ಬ ಅಥವಾ ವಿಶೇಷ ಸಂದರ್ಭಗಳ್ಲಿ ಶುಭಾಶಯ ಅಥವಾ ಹಾರೈಕೆಯ ಪತ್ರಗಳಿಗೆ ಹೆಚ್ಚಿನ ಮಾನ್ಯತೆ ಇತ್ತು. ಕಳಿಸುವವರು ಮತ್ತು ಪಡೆಯುವವರ ನಡುವೆ ಇದೊಂದು ಸ್ನೇಹಸೇತುವಾಗಿತ್ತು. ಈಗಿನಂತೆ ದೂರವಾಣಿಯ ಸಂಪರ್ಕ ಇಲ್ಲದಿದ್ದುದರಿಂದ ಪತ್ರವೇ ಸರ್ವಸ್ವವಾಗಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಸೀರೆ ಎನ್ನುವ ಬೆರಗು: ಚಂದ್ರಮತಿ ಸೋಂದಾ ಸರಣಿ

ಜಗಳಕ್ಕೂ ಸೀರೆಗೂ ಏನು ಸಂಬಂಧ? ಸೀರೆಯ ಪ್ರಸ್ತಾಪ ಯಾಕಾಗಿ ಆಗುತ್ತದೆ? ಅವರಿಬ್ಬರ ಜಗಳಕ್ಕೆ ಮಾತ್ರ ಸೀರೆಯ ಪ್ರಸ್ತಾಪ ಸೀಮಿತವಲ್ಲ. ಕೆಲವೊಮ್ಮೆ ರಾಜಕಾರಣಿಗಳೂ ಹೀಗೆ ʻನಾನೇನು ಸೀರೆಯುಟ್ಟಿಲ್ಲʼ ಎಂದು ಹೇಳುವುದಿದೆ. ಹಾಗಾದರೆ ಸೀರೆ ಉಡುವುದು ಅವಮಾನವೇ? ಸೀರೆಗೂ ಪೌರುಷಕ್ಕೂ ಪರಸ್ಪರ ವಿರೋಧವೇ?
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿನೈದನೆಯ ಕಂತಿನಲ್ಲಿ ಸೀರೆಯ ಕುರಿತ ಬರಹ ನಿಮ್ಮ ಓದಿಗೆ

Read More

ಊರೆಂಬ ಹರಿಗೋಲು: ಚಂದ್ರಮತಿ ಸೋಂದಾ ಸರಣಿ

ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆಗಳಂದು ನಮಗೆಲ್ಲ ಸಂಭ್ರಮವೋ ಸಂಭ್ರಮ. ಹಿಂದಿನ ದಿನವೇ ನಮ್ಮ ಮೇಷ್ಟ್ರು ಯಾರ‍್ಯಾರಿಗೆ ಏನೇನು ಕೆಲಸ ಎಂದು ತಿಳಿಸುತ್ತಿದ್ದರು. ಸ್ವಲ್ಪ ದೊಡ್ಡ ಮಕ್ಕಳು ಹಿಂದಿನ ಸಂಜೆಯೇ ತಮ್ಮನೆಯ ಹಿತ್ತಲಿನಲ್ಲಿರುವ ಮಾವಿನ ಗಿಡದಿಂದ ಮಾವಿನ ಸೊಪ್ಪನ್ನು ತಂದು ಅದನ್ನು ದಾರದಲ್ಲಿ ಪೋಣಿಸಿ ಶಾಲೆಯ ಬಾಗಿಲಿಗೆ ಕಟ್ಟುತ್ತಿದ್ದರು. ಹೆಚ್ಚಾಗಿ ಇದು ಗಂಡುಮಕ್ಕಳ ಕೆಲಸವಾಗಿತ್ತು. ಆಗ ನಮಗೆ ಸಮವಸ್ತ್ರದ ಕಟ್ಟುಪಾಡಿರಲಿಲ್ಲ. ಹಾಗಾಗಿ ನಮ್ಮ ಬಳಿ ಇರುವ ಒಳ್ಳೆಯ ಬಟ್ಟೆಯನ್ನು ಧರಿಸಿ, ಎಂಟುಗಂಟೆಗೆ ನಾವು ಶಾಲೆಯಲ್ಲಿರುತ್ತಿದ್ದೆವು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಮಲಗು ಮಲಗೆನ್ನ ಮಗುವೆ…: ಚಂದ್ರಮತಿ ಸೋಂದಾ ಸರಣಿ

ನನಗೆ ಈಗಲೂ ನೆನಪಿದೆ, ನನ್ನ ತಮ್ಮಂದಿರನ್ನು, ಅಕ್ಕನ ಮಕ್ಕಳನ್ನು ತೊಟ್ಟಿಲಲ್ಲಿ ಮಲಗಿಸಿ ತೂಗುವಂತೆ ಅಮ್ಮ ಹೇಳುತ್ತಿದ್ದಳು. ಸುಮ್ಮನೆ ತೂಗಿದರೆ ಮಕ್ಕಳು ಅಳುತ್ತಿದ್ದವು. ಲಾಲಿಪದ ಹೇಳಿದರೆ ಸಾಕು ಕೆಲವೇ ಹೊತ್ತಿನಲ್ಲಿ ಅವು ಮಲಗುತ್ತಿದ್ದವು. ಆಗೆಲ್ಲ ನಾವು ದೊಡ್ಡವರು ಹೇಳುತ್ತಿದ್ದ ಜೋಗುಳ, ಲಾಲಿಪದಗಳನ್ನು ಕೇಳಿ ಕಲಿಯುತ್ತಿದ್ದೆವು. ʻಅಳದಿರು ತಮ್ಮಯ್ಯ ಅಳಿರ ಕಣ್ಣಿಗೆ ನಿದ್ದೆ ಬೆಳಗಾದರೆ ಬಕ್ಕು ನಿನ ಮಾವ ತಮ್ಮಯ್ನ ಮಡಿಲಿಗೆ ತಕ್ಕು ಕಡಲೆಯʼ ಅಂತಲೋ ನಮ್ಮದೇ ಆದ ರಾಗದಲ್ಲಿ ಹಾಡುವುದಿತ್ತು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹದಿಮೂರನೆಯ ಕಂತಿನಲ್ಲಿ ಲಾಲಿಹಾಡುಗಳ ಕುರಿತ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ