Advertisement

Tag: ಡಾ. ನಾ. ಮೊಗಸಾಲೆ

ಸಹಜಪ್ರಕೃತಿ ದರ್ಶನದ ಕವಿತೆಗಳು: ಡಾ. ಬಿ. ಜನಾರ್ದನ ಭಟ್ ಬರಹ

ನಮ್ಮ ಕಾಲದ ದೊಡ್ಡ ದೊಡ್ಡ ಕವಿಗಳೆಲ್ಲ ಹೀಗೆ ನೇರವಾಗಿ ಧರ್ಮಬೋಧನೆ ಅಲ್ಲದಿದ್ದರೂ ಒಂದಲ್ಲ ಒಂದು ಜೀವನ ದರ್ಶನವನ್ನು – ಜೀವನ ಧರ್ಮವನ್ನು – ತಮ್ಮ ಕಾವ್ಯದ ಮೂಲಕ ಜನರಿಗೆ ನೀಡಿದವರೇ ಆಗಿದ್ದಾರೆ. ಮೊಗಸಾಲೆಯವರ ಕಾವ್ಯ ಯಾನವನ್ನೇ ಗಮನಿಸಿದರೆ ಅವರು ಪ್ರಾರಂಭದಲ್ಲಿ ನವ್ಯ ಸಾಹಿತ್ಯದ ಪ್ರೇರಣೆಯಿಂದ ಬರೆಯುತ್ತಿದ್ದರು. ನವ್ಯ ಸಾಹಿತ್ಯಕ್ಕೆ ಅಸ್ತಿತ್ವವಾದದ ಹಿನ್ನೆಲೆ ಇತ್ತು. ಆಮೇಲೆ ಮೊಗಸಾಲೆಯವರನ್ನು ಅಲ್ಲಮಪ್ರಭು ಪ್ರಭಾವಿಸಿದ. ಅಲ್ಲಮನ ಹೊಸ ರೂಪಕಗಳು, ಹೊಸತನವುಳ್ಳ ವಿಚಾರಗಳು ಅವರನ್ನು ಸೆಳೆದವು.
ಡಾ. ನಾ ಮೊಗಸಾಲೆಯವರ ಹೊಸ ಕವನ ಸಂಕಲನ “ಹೇ ರಾಮ್”‌ ಕುರಿತು ಡಾ. ಜನಾರ್ಧನ ಭಟ್‌ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ.ನಾ.ಮೊಗಸಾಲೆ ಕತೆ

ದಾಸಣ್ಣಚಾರ್ಯರ ಮುಖ ಪೇಲವವಾಯ್ತು. ‘ಛೆ!’ ಎಂದರು. ಆಮೇಲೆ ಮೆತ್ತಗೆ ‘ಇವಳಿಗೆ ಏನಾದರೂ ಈ ವಿಷಯ ತಿಳಿದರೆ, ಬೆಂಕಿ ಇಟ್ಟಾಳು ನನ್ನ ತಲೆಗೆ. ಆಕೆಗೆ ದನಕರು ಅಂದರೆ ದೇವರು. ಗಬ್ಬ ನಿಲ್ಲದಿದ್ದರೆ ಬೇಡ, ಹಟ್ಟಿಯಲ್ಲೇ ಇರಲಿ ಎಂದು ಆಕೆ ಅಮೇರಿಕೆಯಲ್ಲಿರುವಾಗಲೇ ಹೇಳಿದ್ದಳು. ಆದರೆ, ನನಗೆ ಗಬ್ಬ ನಿಲ್ಲದ ಮೇಲೆ ಸಾಕುವುದು ವ್ಯರ್ಥ ಎಂಬ ಭಾವನೆ ಬಂತು.
“ನಾನು ಮೆಚ್ಚಿದ ನನ್ನ ಕತೆ”ಯ ಸರಣಿಯಲ್ಲಿ ಡಾ. ನಾ. ಮೊಗಸಾಲೆ ಬರೆದ ಕತೆ “ನುಗ್ಗೆಗಿಡ”

Read More

ಸಮೃದ್ಧ ಜೀವನಾನುಭವವೇ ಸಾಹಿತ್ಯದ ಜೀವ: ನಾ. ಮೊಗಸಾಲೆ

ತಲೆಮಾರು ಎನ್ನುವುದು ಮುಂದುವರಿಯುತ್ತಾ ಹೋದ ಹಾಗೆ ಕೌಶಲ್ಯ ಎನ್ನುವುದು ಹಿಂದಿಗಿಂತ ಹೆಚ್ಚು ಶಕ್ತ ಅಥವಾ ಹೆಚ್ಚೋ ಎಂಬಂತೆ ಮುಂದುವರಿಯುವುದು ನಮ್ಮ ಅನುಭವ ಅಥವಾ ಪ್ರಕೃತಿ ನಿಯಮ. ಪ್ರತಿಭೆ, ಕೌಶಲ್ಯ, ಮತ್ತು ಚಿಂತನೆಗಳಲ್ಲಿ ನಾವು ನಮ್ಮ ಹಿರಿಯರಿಗಿಂತ ಮುಂದುವರಿದಿದ್ದೇವೆ ಎನ್ನುವುದನ್ನು ನಾನೂ ನೀವೂ ಒಪ್ಪಿಕೊಳ್ಳುವುದಾದರೆ ನಮ್ಮ ಮುಂದಿನ ಪೀಳಿಗೆಯೂ ಖಂಡಿತ ನಮಗಿಂತ ಮುಂದಿರುತ್ತದೆ ಎನ್ನುವುದನ್ನು ಒಪ್ಪಬೇಕು.
ಡಾ. ನಾ. ಮೊಗಸಾಲೆಯವರೊಟ್ಟಿಗೆ ನಡೆಸಿದ ಮಾತುಕತೆಯನ್ನು ಹಂಚಿಕೊಂಡಿದ್ದಾರೆ ಡಾ. ಸುಭಾಷ್ ಪಟ್ಟಾಜೆ

Read More

ಇದು ಆಗುವುದೂ ಇಲ್ಲ, ಹೋಗುವುದೂ ಅಲ್ಲ…

ಹಾಗೆ ಆಡುವಾಗ ಅವನಲ್ಲಿ ಅಮ್ಮನಿಗೆ ತಾನು ಸುಳ್ಳು ಹೇಳುತ್ತಿದ್ದೇನೆ ಎಂಬ ಪಾಪಪ್ರಜ್ಞೆ ಇತ್ತು. ಅವನು ಆ ದಿನ ಮಧ್ಯಾಹ್ನ ಗೋವಿಂದಾಚಾರ್ಯರಲ್ಲಿ ಊಟ ಮುಗಿಸಿ ಒಂದರ್ಧ ಗಂಟೆ ಹರಟೆ ಹೊಡೆಯುತ್ತಾ ಕುಳಿತಾಗ ‘ಭಾವ, ನಾನು ಮಧ್ಯಾಹ್ನವೇ ಮನೆಗೆ ಊಟಕ್ಕೆ ಹೋಗಬೇಕಿತ್ತು. ಇನ್ನು ತಡಮಾಡಿದರೆ ಅಪ್ಪ ಅಮ್ಮನ ಮಾತು ಕೇಳುವುದು ಕಷ್ಟ’ ಎಂದು ಸುಮಾರು ಎರಡೂವರೆ ಗಂಟೆಯ ಸುಮಾರಿಗೇ ಗೋವಿಂದಾಚಾರ್ಯರ ಮನೆಯಿಂದ ಹೊರಟಿದ್ದ. ಹಾಗೆ ಹೊರಟವನು ನೇರವಾಗಿ ಮನೆಗೆ ಹೋಗದೆ ಮೇರಿಯ ಮನೆಗೆ ಹೋಗಿದ್ದ.
ಡಾ. ನಾ. ಮೊಗಸಾಲೆಯವರ “ಇದ್ದೂ ಇಲ್ಲದ್ದು” ಹೊಸ ಕಾದಂಬರಿಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ: ಅಗೋಚರ

“ಮರಗಿಡಗಳ ಚಿಗುರು ಚಿಗುರಲಿಕೆ ಕಾತರಿಸಿ
ನಳನಳಿಸಲು ಕಾಯುತ್ತಿತ್ತು ಹಗಲ
ಕಾಯಿ ಮಾಗಲು, ಮಾಗಿದವು ತೊಟ್ಟು ಕಳಚಲು
ತವತವಕಿಸುವಂತಿತ್ತು ತೆರೆದು ಮನವ”- ಡಾ.ನಾ.ಮೊಗಸಾಲೆ ಬರೆದ ಈ ದಿನದ ಕವಿತೆ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ