Advertisement

Tag: ಡಾ.ವಿನತೆ ಶರ್ಮ

ಅಣಬೆ ಅಡುಗೆ, ಅಪರಾಧದ ಕತೆ: ಡಾ. ವಿನತೆ ಶರ್ಮಾ ಅಂಕಣ

ನ್ಯಾಯಾಲಯವು ಈ ಕೇಸ್ ಗೆಂದು ಈ ವರ್ಷ ಲಾಟ್ರೋಬ್ ವ್ಯಾಲಿ ಪ್ರದೇಶದ ಸುಮಾರು ಹದಿನೈದು ಸಾವಿರ ಜನರನ್ನು ಸಂಪರ್ಕಿಸಿ ಜ್ಯೂರಿಗಳಾಗುತ್ತೀರಾ ಎಂದು ಕೇಳಿತ್ತು. ಜ್ಯೂರಿಗಳಾಗುವುದಕ್ಕೆ ಒಪ್ಪಿಕೊಂಡರೆ ಅವರು ಸುಮಾರು ನಾಲ್ಕು ತಿಂಗಳ ಕಾಲ ಕೌಂಟಿ ಮತ್ತು ರಾಜ್ಯದ ಸುಪ್ರೀಂ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಸಮಯವನ್ನು ಕೊಡಬೇಕಿತ್ತು. ಅದಲ್ಲದೆ, ಕೇಸ್ ನಡೆಯುವುದನ್ನು ನಿಯಮಿತವಾಗಿ ಗಮನವಿಟ್ಟು ನೋಡಿ, ತಮ್ಮ ತಂಡದಲ್ಲಿ ಚರ್ಚಿಸಿ ವಾರದಿಂದ ವಾರಕ್ಕೆ ಮುನ್ನಡೆಯುವುದಿತ್ತು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸತ್ಯ-ಮಿಥ್ಯಗಳ ಲೋಕವಿದು!: ಡಾ. ವಿನತೆ ಶರ್ಮಾ ಅಂಕಣ

ವಿಮಾನ ಡಿಕ್ಕಿ ಹೊಡೆದ ಆಸ್ಪತ್ರೆ, ಮೆಡಿಕಲ್ ಕಾಲೇಜು ಹಾಸ್ಟೆಲ್‌ನಲ್ಲಿದ್ದ ಕೆಲವರು ಏನಾಗುತ್ತಿದೆ ಎಂದು ಕೇಳುತ್ತಾ ಆ ಪ್ರಶ್ನೆಗೊಂದು ಕೊನೆ ಚುಕ್ಕೆ ಇಡದೆಯೆ ಹೋಗಿದ್ದಾರೆ. ರೆಸ್ಟ್ ಇನ್ ಪೀಸ್. ಆತ್ಮಕ್ಕೆ ಶಾಂತಿ ಸಿಗಲಿ. ಕಣ್ಣೀರು, ದಿಗ್ಭ್ರಮೆ, ಪುಂಖಾನುಪುಂಖ ಪ್ರಶ್ನೆಗಳು, ಎಲ್ಲರೂ ಹುಡುಕುತ್ತಿರುವ ಉತ್ತರಗಳ ಸಾಗರ ಅಪ್ಪಳಿಸಿದೆ. ಅದ್ಯಾವುದೊ ಕರುಣಾಳು ಬೆಳಕು ಒಬ್ಬನೇ ಒಬ್ಬ ಪ್ರಯಾಣಿಕನನ್ನು ಕೈಹಿಡಿದು ನಡೆಸಿ ಕಾಪಾಡಿದೆ. ಅವನ ಕಥೆ ಅಪನಂಬಿಕೆಗಳ ಲೋಕದಲ್ಲಿ ಉಳಿದ ಒಂದೇ ಒಂದು ಹುಲ್ಲುಕಡ್ಡಿ ಸತ್ಯವಾಗಿದೆ. ಇದೇನಿದು ಮಿಥ್ಯ-ಸತ್ಯಗಳ ಲೋಕವಿದು!
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ತಬ್ಬಿಬ್ಬಿನ ಚಳಿ, ರಾಜಕೀಯ, ಸುಧಾರಣೆ: ಡಾ. ವಿನತೆ ಶರ್ಮ ಅಂಕಣ

ಹೀಗೆಲ್ಲಾ ಚಳಿಯೆನ್ನುವುದು ಮನುಷ್ಯರಿಗೆ ಅನಿಸಿದರೆ ಇನ್ನು ಹೂ, ಹಣ್ಣು, ದುಂಬಿ, ಚಿಟ್ಟೆ ಹಕ್ಕಿಗಳಿಗೆ ಏನನ್ನಿಸಬಹುದು? ನಮ್ಮನೆಯಲ್ಲಿ ತರಾವರಿ ಹೂಗಳು ನಲಿದಾಡುತ್ತಿವೆ. ಇವುಗಳಲ್ಲಿ ಕೆಲವು ಬೇಸಿಗೆಯಲ್ಲಿ ಆ ಬಿರುಬಿಸಿಲಿನ ತಾಪಕ್ಕೆ ಮುದುಡಿ ಅದೆಲ್ಲೂ ಅಡಗಿರುತ್ತವೆ. ಸ್ವಲ್ಪ ಬಿಸಿಲು ಕಡಿಮೆಯಾಗಿ ತಂಪು ಬಂತೆಂದರೆ ಇವಕ್ಕೆ ಬಲು ಖುಷಿ. ಹಾ ನಾವಿದ್ದೀವಿ ಎನ್ನುತ್ತಾ ಗಿಡಗಳ, ಬಳ್ಳಿಗಳ, ಮರಗಳ ಮುಡಿಯೇರುತ್ತವೆ. ಇನ್ನೂ ಕೆಲವು ಹೂ, ಹಣ್ಣುಗಳಿಗೆ ತಬ್ಬಿಬ್ಬು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಆಸ್ಟ್ರೇಲಿಯಾ ಗ್ರೇಟ್ ಎಂದ ಚುನಾವಣೆ ಫಲಿತಾಂಶ: ಡಾ. ವಿನತೆ ಶರ್ಮ ಅಂಕಣ

ಅದೆಷ್ಟೋ ಆಸ್ಟ್ರೇಲಿಯನ್ನರಿಗೆ ಮೇ ಮೂರರ ಶನಿವಾರ ರಾತ್ರಿ ಜಾಗರಣೆ ಆಯ್ತೆಂದು ಕಾಣುತ್ತದೆ. ಚುನಾವಣಾ ಫಲಿತಾಂಶದ ಮುಖ್ಯ ಅಂಶಗಳು ಗೊತ್ತಾಗಿತ್ತು. ಲೇಬರ್ ಪಕ್ಷ ಮುನ್ನಡೆ ಸಾಧಿಸಿತ್ತು. ವಿಜಯೋತ್ಸಾಹದ ಮುಖ ಹೊತ್ತು ಬೀಗುತ್ತಾ ಪ್ರಧಾನಿ ಆಲ್ಬಾನೀಸಿ ಮಾಧ್ಯಮಗಳ ಮುಂದೆ ಎದೆಯುಬ್ಬಿಸಿಕೊಂಡು ನಿಂತು ಆಸ್ಟ್ರೇಲಿಯನ್ನರಿಗೆ ಧನ್ಯವಾದ ಹೇಳಿದರು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ನಾಯಕತ್ವದ ನಿರ್ಣಾಯಕ ದಿನವಿಂದು: ಡಾ. ವಿನತೆ ಶರ್ಮ ಅಂಕಣ

ಇಂಡಿಪೆಂಡೆಂಟ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಎಲೀ ಸ್ಮಿತ್ ಹೇಳಿದ್ದು ‘ನಮ್ಮ ಜೀವನ ಗುಣಮಟ್ಟ ನಿರ್ಧಾರವನ್ನು ವಾಪಸ್ ಪಡೆಯೋಣ, ಅದು ನಮ್ಮ ಹಕ್ಕು’ ಎಂದು. ಪರಿಸರವಿಜ್ಞಾನಿಯಾಗಿ ಕೆಲಸ ಮಾಡುತ್ತಿರುವ ಈಕೆ ಜನಸಮುದಾಯದಲ್ಲಿ ಬೆರೆತು ಜನಾಭಿಪ್ರಾಯವನ್ನು ಅರಿತು ಸಮುದಾಯ ಅವಶ್ಯಕತೆಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದಾರೆ. ಪ್ರತಿದಿನ ಆಹಾರ ಪದಾರ್ಥಗಳ ಬೆಲೆ ಕಡಿಮೆ ಮಾಡುವುದು, ಸಣ್ಣಪುಟ್ಟ ವ್ಯಾಪಾರ ಸಂಸ್ಥೆಗಳಿಗೆ ಪ್ರೋತ್ಸಾಹ, ವಸತಿ ವೆಚ್ಚದಲ್ಲಿ ರಿಯಾಯ್ತಿ, ರಸ್ತೆಗಳನ್ನು ಉತ್ತಮ ಪಡಿಸುವುದು, ಇತ್ಯಾದಿ ಈಕೆಯ ಗುರಿಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ