Advertisement

Tag: ಡಾ. ವಿಶ್ವನಾಥ ನೇರಳಕಟ್ಟೆ

ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಲೈಟ್ಸ್…ಕ್ಯಾಮರಾ…ಆ್ಯಕ್ಷನ್ ಎಂದು ನಿರ್ದೇಶಕರು ಹೇಳಿದಾಗ ನಿರ್ಮಲಾಳ ಎದೆ ಧಸಕ್ಕೆಂದಿತು. ಮೆಲ್ಲಮೆಲ್ಲನೆ ಹೆಜ್ಜೆಯಿಡುತ್ತಾ ಬಂದ ಕೃಷ್ಣ ಕೈಯ್ಯನ್ನು ಚಾಚಿ ಬೆಣ್ಣೆ ಗಡಿಗೆ ತೆಗೆದುಕೊಂಡವನು ಪುಟುಪುಟು ಓಡಿದ. ಹೆಜ್ಜೆಯಿಡುತ್ತಾ ಬಂದದ್ದು… ಕೈಚಾಚಿದ್ದು… ಓಡಿದ್ದು… ಇದು ನಿರ್ಮಲಾಳ ಮನಸ್ಸಿನಲ್ಲಿ ಗಿರಕಿ ಹೊಡೆಯತೊಡಗಿತ್ತು. ಅವಳು ಈಗ ಬಾಗಿಲ ಮರೆಯಿಂದ ಬೆಣ್ಣೆ ಗಡಿಗೆಯಿದ್ದ ಕಂಬದಾಚೆಗೆ ಹೋಗಬೇಕಿತ್ತು. ಆದರೆ ಅವಳು ಚಲನೆಯಿಲ್ಲದೆ ನಿಂತಿದ್ದಳು.
ಡಾ. ವಿಶ್ವನಾಥ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಲೈಟ್ಸ್… ಕ್ಯಾಮರಾ… ಆ್ಯಕ್ಷನ್” ನಿಮ್ಮ ಓದಿಗೆ

Read More

ವ್ಯಕ್ತಮಧ್ಯದ ಬಿಂದುವೊಂದರಲ್ಲಿ ನಿಂತು…: ಡಾ. ವಿಶ್ವನಾಥ ಎನ್ ನೇರಳಕಟ್ಟೆ

ಮೇ ತಿಂಗಳ ಹದಿನೇಳನೇ ತಾರೀಖು ನನ್ನ ಬಹುಕಾಲದ ಕನಸು ನನಸಾದ ದಿನ. ಪಿಎಚ್.ಡಿ. ವಿದ್ಯಾರ್ಥಿ ಎಂದೆನಿಸಿಕೊಂಡು ಅದಾಗಲೇ ಏಳು ವರ್ಷ ಕಳೆದಿತ್ತು. ಮಹಾಪ್ರಬಂಧ ಸಿದ್ಧಪಡಿಸಿ, ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿ ವರ್ಷ ಒಂದಾಗಿತ್ತು. ನನ್ನ ಸಂಶೋಧನೆಗೆ ಅರ್ಥಪೂರ್ಣ ಮುಕ್ತಾಯವೊಂದು ದೊರಕುವುದಿಲ್ಲವೋ ಏನೋ ಎಂಬ ಆತಂಕ ಹೃದಯವನ್ನೊತ್ತಿ ನಿಂತಿತ್ತು. ಆ ಕ್ಷಣದಲ್ಲಿಯೇ ಮುಕ್ತ ಮೌಖಿಕ ಪರೀಕ್ಷೆಗೆ ಕರೆಬಂದದ್ದು. ಮೇ ಹದಿನೇಳರಂದು ನಾನು ಮೌಖಿಕ ಪರೀಕ್ಷೆಯನ್ನು ಎದುರಿಸಬೇಕಿತ್ತು. ಅದಕ್ಕೂ ಎರಡು ದಿನ ಮೊದಲು ಅಮ್ಮನ ಆರೋಗ್ಯ ಹದಗೆಟ್ಟು ಬೆಳ್ಳಂಬೆಳಗ್ಗೆಯೇ ಆಸ್ಪತ್ರೆ ಸೇರಿಕೊಳ್ಳುವಂತಾಯಿತು. ಒಂದು ವಾರ ಆಸ್ಪತ್ರೆಯಲ್ಲಿಯೇ ಇರದೆ ಬೇರೆ ದಾರಿಯಿರಲಿಲ್ಲ.
ಹೊಸ ವರ್ಷಕ್ಕೆ ಹಳೆಯ ನೆನಕೆಗಳೊಂದಿಗೆ ಡಾ. ವಿಶ್ವನಾಥ ನೇರಳಕಟ್ಟೆ ಬರಹ

Read More

ಕಥೆಯ ದುಃಖಾಂತ ಮನದಲ್ಲಿ ಅನಂತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಯುರ್ವೇದ ವೈದ್ಯಪದ್ಧತಿಯಲ್ಲಿ ವಿರೇಚನ ಎನ್ನುವ ಚಿಕಿತ್ಸೆ ಇದೆ. ದೇಹದೊಳಗಿನ ಕಲ್ಮಶಗಳನ್ನು ಭೇದಿಯ ರೂಪದಲ್ಲಿ ಹೊರಹಾಕುವ ಮೂಲಕ ಶರೀರವನ್ನು ಪರಿಶುದ್ಧಗೊಳಿಸುವ ಪ್ರಕ್ರಿಯೆಯಿದು. ಕಾವ್ಯಮೀಮಾಂಸೆಯಲ್ಲಿ ಬರುವ ‘ಕೆಥಾರ್ಸಿಸ್’ ಎನ್ನುವ ಪರಿಕಲ್ಪನೆಯೂ ಇದೇ ಪ್ರಕ್ರಿಯೆಯನ್ನು ಆಧರಿಸಿದೆ.
ಡಾ. ವಿಶ್ವನಾಥ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ