Advertisement

Tag: ಡಾ.ಶ್ರೀಪಾದ ಭಟ್

ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಪುರಾಣ ಕತೆಯನ್ನು ವರ್ತಮಾನಕ್ಕೆಳೆಯುವ, ಕಥೆಯ ಮೈ ಕೆಡದಂತೆ ಅದನ್ನು ಹದವಾಗಿ ಬೆಸೆಯುವ ಕುಶಲತೆ ವೆಂಕಟೇಶಮೂರ್ತಿಯವರಿಗಿದೆ. ಅವರ ಪುರಾಣ ಪಾತ್ರಗಳು ವರ್ತಮಾನದ ವ್ಯಕ್ತಿಗಳಂತೆ ಆಡುವರಾದರೂ ಔಚಿತ್ಯದ ವಿವೇಕದಲ್ಲಿಯೇ ಅದನ್ನು ನಿಭಾಯಿಸುವ ಶಕ್ತಿ ಅವರ ಬರಹಕ್ಕಿದೆ. ಹೀಗಾಗಿಯೇ ವಸ್ತು ಜಗತ್ತಿನ ಕುರಿತು ಆಡುವ ಮಾತುಗಳೂ ಶುಷ್ಕವಾಗದೇ, ನಿತ್ಯಜೀವನದ ಕೃಪಣತೆಯ ಸೋಕಿಲ್ಲದಂತೆ ಚಿತ್ತಾಕರ್ಷಕವೂ ಚಿತ್ರವತ್ತಾಗಿಯೂ ಮೂಡುತ್ತದೆ.
ಎಚ್.ಎಸ್. ವೆಂಕಟೇಶಮೂರ್ತಿಯವರೊಂದಿಗಿನ ರಂಗ ಸಂಬಂಧದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ತಾಕಲಾಟಗಳ ಮೌನದಲ್ಲಿ ಮೂಡಿದ ವಸಂತ: ನಾರಾಯಣ ಯಾಜಿ ಬರಹ

ಚರ್ಚಿನಲ್ಲಿ ಹಾಡಿದ ಮಗಳು ರೈಲಿನ ಟಿಕೆಟ್ಟಿಗೆ ಹಣ ಕೂಡಿಟ್ಟಿದ್ದನ್ನು ತಿಳಿದಾಗ ಅದನ್ನು ದೆವ್ವವೆನ್ನುವಂತೆ ದೂರ ಎಸೆಯುವ ಅಸಹಾಯಕತೆ ಮತ್ತು ಉಮ್ಮಳಿಸುವ ದುಃಖ, ಕೋಪಬಂದರೂ ಅಜ್ಜನ ಭಾವನೆಯನ್ನು ಅರ್ಥಮಾಡಿಕೊಂಡು ಮೊಮ್ಮಗಳು ಒಳಗೊಳಗೇ ಅನುಭವಿಸುವ ತುಮುಲ ಇವೆಲ್ಲವನ್ನೂ ರಂಗದಲ್ಲಿ ತೆರೆದಿಡುವ ನಾಟಕದ ಕೊನೆಯಲ್ಲಿ ಮೊಮ್ಮಗಳು ಅಜ್ಜನನ್ನು ಒಪ್ಪಿಸಿ ಹೊರಟು ಹೋಗುವಾಗ ಮಗುವಿನ ಪ್ರತಿಭೆ ಕಾಡ ಬೆಳದಿಂಗಳಾಗಲಿಲ್ಲವಲ್ಲ ಎನ್ನುವ ನಿಟ್ಟಿಸಿರು, ಅಜ್ಜನ ಪಾಡು ಎಂಥದೋ ಎನ್ನುವ ನೋವು ಎರಡೂ ಕಾಡುತ್ತದೆ.
ಡಾ. ಶ್ರೀಪಾದ ಭಟ್ ನಿರ್ದೇಶನದ “ಮೌನ ಕಣಿವೆಯ ಹಾಡು” ನಾಟಕದ ಕುರಿತು ನಾರಾಯಣ ಯಾಜಿ ಬರಹ

Read More

‘ದಿ ಫೈಯರ್’….: ಡಾ. ಶ್ರೀಪಾದ ಭಟ್‌ ಬರಹ

ವಸಾಹತುಶಾಹಿಯ ದೌರ್ಜನ್ಯಕ್ಕೆ ತೀವ್ರ ಬಲಿಯಾಗಿ ಅದರಿಂದ ಹೊರಬಂದು ಸ್ವತಂತ್ರ ವ್ಯಕ್ತಿತ್ವಕ್ಕಾಗಿ ನಡೆಸಿದ ಪ್ರಯತ್ನದ ಭಾಗವಾಗಿ ಇಂತಹ ಬರಹಗಳನ್ನು ನಾವು ಮುಖಾಮುಖಿಯಾಗುವುದು ಸಾಂಸ್ಕೃತಿಕ ಸ್ವರೂಪದಲ್ಲಿ ವಸಾಹತುಶಾಹಿಗೆ ಎದುರಾಗುವ ಒಂದು ಬಗೆ ಎಂದೇ ಈ ಪ್ರಯತ್ನವನ್ನು ನೋಡಬಹುದಾಗಿದೆ. ನಮ್ಮ ಸಂಸ್ಕೃತಿ, ಜೀವನ ವಿಧಾನಗಳನ್ನು ಸಂರಕ್ಷಿಸಿಕೊಳ್ಳುವ ಹೋರಾಟದ ನೆಲೆ ಭಾರತಕ್ಕೂ, ಲ್ಯಾಟಿನ್ ಅಮೇರಿಕಕ್ಕೂ ಒಂದೇ ಆಗಿದೆ ಎಂಬುದನ್ನು ತಜ್ಞರು ಈಗಾಗಲೇ ತಿಳಿಸಿಯಾಗಿದೆ.
ಸಂತೋಷ ಪಟ್ಲ ನಿರ್ದೇಶನದ ‘ದಿ ಫೈಯರ್’ ರಂಗ ಪ್ರಯೋಗದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ಕನಕದಾಸರು ಕಟ್ಟಿದ ‘ಕಲ್ಯಾಣ’

ಗುಣ ಕರ್ಮಕ್ಕೆ ಅನುಸಾರಿಯಾಗಿ ವರ್ಣ ಸೃಷ್ಟಿಯಾಗಿದೆ ಅನ್ನುತ್ತದೆ ಭಗವದ್ಗೀತೆ. ಆದರೆ ಇಲ್ಲಿ ಗುಣ ಕರ್ಮ ಹುಟ್ಟುವ ಮೊದಲೇ ನಿಶ್ಚಯವಾಗಿರುತ್ತದೆ, ಎಂಬುದನ್ನು ಕಾಣಿಸಿಕೊಟ್ಟ ವಚನ ಚಳುವಳಿ ಇದಕ್ಕೊಂದು ಹೊಸ ಭಾಷ್ಯ ಬರೆಯಿತು. ‘ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ’ ಎನ್ನುತ್ತ ಜಾತಿ ಸಾಂಸ್ಥಿಕತೆಗೆ ಪ್ರತಿಭಟನೆ ತೋರಿತು. ‘ಉಳ್ಳವರು ಶಿವಾಲಯ ಮಾಡುವರು’ ಎನ್ನುತ್ತ ಸಾಂಸ್ಕೃತಿಕ ರೂಪದ ಪ್ರತಿಭಟನೆಯನ್ನೂ ರೂಪಿಸಿತು. ‘ಕೊಲುವವನೆ ಮಾದಿಗ’ ಎನ್ನುತ್ತ ಪಂಪನಕಾಲದ ಕುಲದ ಮರು ವ್ಯಾಖ್ಯಾನವನ್ನು ಮುಂದುವರಿಸಿತು.
ಕನಕ ಜಯಂತಿಯಂದು ಡಾ. ಶ್ರೀಪಾದ ಭಟ್ ಬರಹ

Read More

ಕನಕ ಕನಸಿದ ‘ಕಲ್ಯಾಣ’: ಉದಾರಚರಿತದ ರೂಪಕ

ಕುರುಬ ಸಮುದಾಯದ’ಕನಕ’, ಕನಕದಾಸರಾಗಿದ್ದುದರ ಬಗ್ಗೆ ಅನೇಕ ಕಥನಗಳಿವೆ. ಆದರೆ ಈ ಹಾದಿಯಲ್ಲಿ ಕನಕರು ಕುಲದ ಕಾರಣಕ್ಕಾಗಿ ಎದುರಿಸಬೇಕಾಗಿ ಬಂದ ಸಂಕಟಗಳನ್ನು ನಾವು ಗಮನಿಸಬೇಕು. ಶ್ರೀನಿವಾಸ ಶೆಟ್ಟಿ, ಪುರಂದರ ದಾಸರಾಗಲು ಇರುವ ಅವಕಾಶ ಕನಕನಾಯಕ ಕನಕದಾಸರಾಗೋದಕ್ಕೆ ಇರಲಿಲ್ಲ. ಅವರು ತಮ್ಮ ಹುಟ್ಟಿನ ಸೂತಕದ ಕಾರಣಕ್ಕಾಗಿ ಮತ್ತೆ ಮತ್ತೆ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಬೇಕಾಯ್ತು.

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ