Advertisement

Tag: ತೇಜಸ್ವಿನಿ ಹೆಗಡೆ

ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ…: ತೇಜಸ್ವಿನಿ ಹೆಗಡೆ ಬರಹ

ಮಾತಿನ ನಡುವೆ ವಿಮಲಕ್ಕ ಅಜ್ಜಿಯ ಬಳಿ “ಸರಸು, ಮಕ್ಕನೂ ಅವ್ರಿದ್ದೇ ಪ್ರಪಂಚದಲ್ಲಿ ಮುಳ್ಗಿದ್ದೋ. ಯಾರಿಗೂ ನಾನು ಬೇಡಾಗೋಯ್ದೆ ಅನ್ನಿಸ್ತು. ಬೇರೆಯವ್ಕೆ ನಾ ಇಷ್ಟ ಇದ್ನೋ ಇಲ್ಯೋ ಗೊತ್ತಿಲ್ಯೆ. ನಾ ಮೊದ್ಲಿಂದ್ಲೂ ಆ ದೇವ್ರಿಗೆ ಮಾತ್ರ ಪ್ರೀತಿ. ಅವಂಗೆ ನನ್ನ ಮೇಲೆ ರಾಶಿ ಮುತವರ್ಜಿ ಕಾಣ್ತು. ಅದ್ಕೇ ಯನ್ನ ಕಷ್ಟಕ್ಕೆ ಕೊನೆನೇ ಇಲ್ಲೆ ನೋಡು… ಇದೇ ನನ್ನ ಭಾಗ್ಯ ಅಂದ್ಕತ್ತಿ ಬಿಡು… ಎಲ್ಲ ನನ್ನ ಹಣೆಬಹರ, ಕರ್ಮ” ಎಂದು ಕಣ್ಣೀರಾಗಿದ್ದಳು. ನನಗೆ ಆಗ ಅರ್ಥವೇ ಆಗಿರಲಿಲ್ಲ. ಆದರೆ ಆ ಮಾತು ಮಾತ್ರ ಅದು ಹೇಗೋ ನನ್ನೊಳಗೆ ಇಳಿದು ಬಿಟ್ಟಿತ್ತು.
ತೇಜಸ್ವಿನಿ ಹೆಗಡೆ ಬರಹ ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಕತೆ

ಗಂಡನಿಂದ ಒದಗಿರುವ ವಿಪತ್ತನ್ನು ತಿಳಿದ ಪಾರ್ವತಮ್ಮ, ಚಿಂತೆಯಲ್ಲಿ ತಮ್ಮ ಆಪ್ತರೊಂದಿಗೆ ಗುಟ್ಟನ್ನು ರಟ್ಟಾಗಿಸಿದ್ದು ದೊಡ್ಡ ಪ್ರಮಾದವಾಗಿ ಬಿಟ್ಟಿತ್ತು. ಅದು ಹೇಗೋ ಈ ಕಳುವಿನ ವಿಷಯ ಬೀಗರ ಕಿವಿಗೂ ಬಿದ್ದು, ಸ್ಫೋಟವಾಗಿ, ಹುಡುಗನ ಹೆತ್ತವರು ಈಗ ಮದುವೆಗೆ ನಿರಾಕರಿಸತೊಡಗಿದ್ದರು. ರಾಮಭಟ್ಟರು ಇನ್ನಿಲ್ಲದಂತೇ ಬೇಡಿಕೊಳ್ಳುತ್ತಿದ್ದರೂ, ಕೊನೆಗೆ ನೆಂಟರಿಷ್ಟರು ದಬಾಯಿಸಿದರೂ, ಹಠದಿಂದ ಒಪ್ಪದ ಬೀಗರು, ವಾಗ್ದಾನ ಶಾಸ್ತ್ರಕ್ಕಾಗಿ ಅಲ್ಲೇ ಕುಳಿತಿದ್ದ ಹುಡುಗಿಯ ಕಡೆ ಕಣ್ಣೆತ್ತಿಯೂ ನೋಡದೇ ಹೊರ ನಡೆದುಬಿಟ್ಟರು.
ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ತೇಜಸ್ವಿನಿ ಹೆಗಡೆ ಬರೆದ ಕತೆ “ಮರಕತ”

Read More

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ ಹೇಗೆ ತಮ್ಮ ಸ್ವಾರ್ಥಕ್ಕಾಗಿ ಹೋರಾಟದ ಹೆಸರಲ್ಲಿ ಗದ್ದುಗೆಯನ್ನು ಹೇಗೆ ಹಿಡಿದರು ಎಂಬೆಲ್ಲ ಆಲೋಚನೆ ಮೂಡಿಸುತ್ತ ಸಾಗುತ್ತದೆ. ಈ ರಾಜಕೀಯ ಎನ್ನುವ ಉಸುಕಿನ ಕ್ಷೇತ್ರವು ಒಮ್ಮೆ ಒಳಹೊಕ್ಕವರನ್ನು ತನ್ನ ಕಬಂಧ ಬಾಹುವಿನ ಮೂಲಕ, ಲಾಲಸೆಗಳ ಜಾಲದಿಂದ ಹೇಗೆ ಪಥದಿಂದ ವಿಮುಖವಾಗಿಸುತ್ತದೆ ಎನ್ನುವುದು ತಿಳಿಯದ್ದೇನಲ್ಲ.
ಲತಾ ಗುತ್ತಿ ಕಾದಂಬರಿ “ಚದುರಂಗ” ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಹಿಂದಣ ಹೆಜ್ಜೆಯ ಅರಿವಿನ ಹಣತೆಯಲ್ಲಿ…: ತೇಜಸ್ವಿನಿ ಹೆಗಡೆ ಬರಹ

ಆಗಿಹೋದ ದುರಂತಗಳು, ದೌರ್ಜನ್ಯಗಳು ಒಂದು ಎಚ್ಚರಿಕೆಯ ಗಂಟೆಯಾಗಬೇಕು. ಮಾನವೀಯತೆಯ ಮಹತ್ವವನ್ನು, ವಿಶಾಲ ಮನೋಭಾವದ ಸೌಂದರ್ಯವನ್ನು, ಮಹತ್ವವನ್ನು, ಜೀವನಧರ್ಮವನ್ನು ವರ್ತಮಾನಕ್ಕೆ ಮಾತ್ರವಲ್ಲ ಭವಿಷ್ಯಕ್ಕೂ ಒಂದು ಪಾಠವನ್ನು ಕೊಡುವಂತಿರಬೇಕು. ಇತಿಹಾಸದ ಅಧ್ಯಯನವು ನಮ್ಮ ಅರಿವಿನ ಹೆಚ್ಚಳಿಕೆ ಮತ್ತು ಪಾಠಕ್ಕೆ ಮಾಪನವಾಗಬೇಕೇ ಹೊರತು ನಾವಿಲ್ಲದಿದ್ದ ಕಾಲಘಟ್ಟದಲ್ಲಿ ಯಾರೋ ದಾಖಲಿಸಿರುವ ವಿಷಯಗಳಿಂದ ಉದ್ರಿಕ್ತರಾಗಿ, ಭಾವೋದ್ವೇಗವನ್ನು ಹೊಂದಿ ಶೋಕ ಸಾಗರದಲ್ಲಿ ಮುಳುಗಿಯೋ, ದ್ವೇಷದ ಉರಿಯಲ್ಲಿ ಬೆಂದೋ ಅಂಧತ್ವವನ್ನು ಹೊಂದಿದರೆ ಮತ್ತೆ ಅದೇ ಇತಿಹಾಸ ಮರುಕಳಿಸುವ ಸಾಧ್ಯತೆಯೇ ಹೆಚ್ಚು!
ನವೀನ್‌ ಗಂಗೋತ್ರಿ ಕಥಾಸಂಕಲನ “ಕಥಾಗತ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

Read More

ಬದುಕಿನ ಪಾಠ ಕಲಿಸುವ ಜೋತಯ್ಯನ ಕತೆ…

ಇಲ್ಲಿರುವ ಕಥೆಗಳ ಕಥಾವಸ್ತು ಬಹುತೇಕ ಮನುಷ್ಯರ ಕಷ್ಟ ಸುಖ ನೋವು ನಲಿವಿನದೇ ಆಗಿದ್ದರೂ, ಕಥೆಗಳ ಮೂಲಕ ಹೊರಬರುವ ವ್ಯಾಕುಲತೆ ಸ್ಪಂದನೆ ಲೇಖಕರಿಗೆ ಇರುವ ಬದುಕಿನ ಅನುಭವಗಳಿಂದಲೇ ಮೂಡಿರಬಹುದು, ಹಾಗಾಗಿ ಅವುಗಳು ಗಟ್ಟಿ ಕಥೆಗಳಾಗಿ ರೂಪುಗೊಂಡಿವೆ. ಇನ್ನು ನಿರೂಪಣೆಗೆ ಬಂದರೆ ಬಹುಶಃ ಮಾಸ್ತಿಯವರಂತೆ ಲೇಖಕಿಯು ಕವಯಿತ್ರಿಯೂ ಆಗಿರುವುದರಿಂದ ಇರಬೇಕು ಕಥೆಗಳನ್ನು ನಿರೂಪಿಸುವುದಕ್ಕೆ ಬಳಸುವ ಉಪಮೆಗಳು ಸಂದರ್ಭೋಚಿತವಾಗಿದ್ದು ಇವುಗಳಿಂದ ಹೊರಹೊಮ್ಮುವ ಭಾವನೆಗಳು ನೇರವಾಗಿ ಓದುಗರನ್ನು ತಟ್ಟುತ್ತವೆ.
ತೇಜಸ್ವಿನಿ ಹೆಗಡೆ ಕಥಾ ಸಂಕಲನ “ಜೋತಯ್ಯನ ಬಿದಿರು ಬುಟ್ಟಿ”ಯ ಕುರಿತು ಸಿಂಧು ಜಗನ್ನಾಥ್‌ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ